nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026
    Facebook Twitter Instagram
    ಟ್ರೆಂಡಿಂಗ್
    • ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?
    • ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ
    • ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!
    • ಅದೃಷ್ಟ ಒಲಿದು ಬಂದಾಗ
    • ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!
    • ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!
    • ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ
    • ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನ.1ರಂದು ನಾಡಧ್ವಜ ಹಾರಿಸದೆ ಅವಮಾನ: ಮಧುಗಿರಿ ಅಬಕಾರಿ ಡಿವೈಎಸ್ಪಿ ವಿರುದ್ಧ ಕ್ರಮಕ್ಕೆ ಕಾಳಜಿ ಫೌಂಡೇಶನ್, ಕರ್ನಾಟಕ ರಣಧೀರರ ವೇದಿಕೆ ಆಗ್ರಹ
    ತುಮಕೂರು November 6, 2024

    ನ.1ರಂದು ನಾಡಧ್ವಜ ಹಾರಿಸದೆ ಅವಮಾನ: ಮಧುಗಿರಿ ಅಬಕಾರಿ ಡಿವೈಎಸ್ಪಿ ವಿರುದ್ಧ ಕ್ರಮಕ್ಕೆ ಕಾಳಜಿ ಫೌಂಡೇಶನ್, ಕರ್ನಾಟಕ ರಣಧೀರರ ವೇದಿಕೆ ಆಗ್ರಹ

    By adminNovember 6, 2024No Comments3 Mins Read

    ತುಮಕೂರು : ಜಿಲ್ಲೆಯ ಮಧುಗಿರಿಯ ವಲಯ ಅಬಕಾರಿ ಇಲಾಖೆಯ ಕಚೇರಿಯಲ್ಲಿ ನವೆಂಬರ್ ಒಂದರಂದು ಕನ್ನಡ ರಾಜ್ಯೋತ್ಸವ ದಿನದಂದು ನಾಡ ಧ್ವಜವನ್ನು ಹಾರಿಸದೆ, ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಮಾಡದೆ ಇರುವುದನ್ನು ಖಂಡಿಸಿ ಸ್ಥಳೀಯ ಕನ್ನಡಪರ ಸಂಘಟನೆಗಳು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕಚೇರಿಗೆ ಮುತ್ತಿಗೆ ಹಾಕಿ ಮಧುಗಿರಿ ವಲಯದ ಡಿವೈಎಸ್ಪಿ ಚಂದ್ರಪ್ಪಗೆ ಗೇರಾವ್ ಹಾಕಿದ್ದ ಘಟನೆ ನಡೆದಿತ್ತು.

    ಕನ್ನಡ ರಾಜ್ಯೋತ್ಸವವು ಕರ್ನಾಟಕದ ನೆಲ ಜಲ ಭಾಷೆ ಸಂಸ್ಕೃತಿ ಪರಂಪರೆಯ ಪ್ರತೀಕ ನಾಡಿನ ಗೌರವ ಸ್ವಾಭಿಮಾನದ ಸಂಕೇತ. ನಮ್ಮ ನಾಡು ನುಡಿಯನ್ನ ರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಯುವ ಪೀಳಿಗೆಗೆ ನಮ್ಮ ನಾಡಿನ ಇತಿಹಾಸ ಸಂಸ್ಕೃತಿ ಮತ್ತು ಕಲೆಯ ಬಗ್ಗೆ ಜಾಗೃತಿ ಮೂಡಿಸುವುದು ನಮ್ಮ ಜವಾಬ್ದಾರಿಯಾಗಿರುತ್ತದೆ. ರಾಜ್ಯ ಸರ್ಕಾರದ ಸೂಚನೆಯಂತೆ ಈ ಬಾರಿ ವಿಶೇಷವಾಗಿ ಕನ್ನಡ ರಾಜ್ಯೋತ್ಸವವನ್ನು ಸರ್ಕಾರಿ ಕಚೇರಿ, ಖಾಸಗಿ ಸಂಸ್ಥೆಗಳಲ್ಲಿ, ಐಟಿ ಬಿಟಿ ಕಂಪನಿಗಳಲ್ಲಿ, ವ್ಯಾಪಾರ ಸಂಸ್ಥೆಗಳಲ್ಲಿಯೂ ಸಹ ತಪ್ಪದೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಿ ನಮ್ಮ ಹೆಮ್ಮೆಯ ನಾಡಧ್ವಜವನ್ನು ಧ್ವಜಾರೋಹಣ ಮಾಡಿ ನಾಡ ಧ್ವಜಕ್ಕೆ ಗೌರವವನ್ನು ಸಲ್ಲಿಸಬೇಕೆಂದು ಸರ್ಕಾರವು ಆದೇಶವನ್ನು ನೀಡಿದ್ದರು. ಸಹ ಮಧುಗಿರಿ ವಲಯ ಅಬಕಾರಿ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಮಾಡದೆ ನಾಡ ಧ್ವಜವನ್ನು ಧ್ವಜಾರೋಹಣ ಮಾಡದೆ ಸರ್ಕಾರದ ಆದೇಶವನ್ನು ಗಾಳಿಗೆ ತೂರಿದ್ದ ಘಟನೆ ನಡೆದಿತ್ತು.


    Provided by
    Provided by

    ಕನ್ನಡಪರ ಹೋರಾಟಗಾರರು ಈ ವಿಚಾರ ತಿಳಿದ ತಕ್ಷಣ ಮಧುಗಿರಿ ವಲಯ ಅಬಕಾರಿ ಕಚೇರಿಗೆ ತೆರಳಿ ಡಿವೈಎಸ್ಪಿ ಚಂದ್ರಪ್ಪಗೆ ತಿಳುವಳಿಕೆ ನೀಡುವ ಕಾರ್ಯ ಮಾಡಿದ್ದರು. ಮತ್ತು ಮೇಲಾಧಿಕಾರಿಗಳ ಗಮನಕ್ಕೆ ಈ ವಿಚಾರವನ್ನು ತಂದಿದ್ದರು. ಆದರೆ ಬೇಜವಾಬ್ದಾರಿ ತನದಿಂದ ಕನ್ನಡಪರ ಹೋರಾಟಗಾರರಿಗೆ ಉತ್ತರ ನೀಡಿದ್ದು ಕಂಡುಬಂದಿತ್ತು. ಅಬಕಾರಿ ಡಿವೈಎಸ್ಪಿ ಚಂದ್ರಪ್ಪ ನಡೆದುಕೊಂಡ ರೀತಿಯನ್ನು ಕನ್ನಡಪರ ಹೋರಾಟಗಾರರು ತೀವ್ರವಾಗಿ ಖಂಡಿಸಿದ್ದರು. ಕೆಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಕೂಡ ಆಗಿದ್ದವು.

    ಕನ್ನಡಪರ ಹೋರಾಟಗಾರರು ಅಧಿಕಾರಿಗಳ ಗಮನ ಸೆಳೆಯಲು ಮುಂದಾದಾಗ ಡಿವೈಎಸ್ಪಿ ಚಂದ್ರಪ್ಪ  ಅಬಕಾರಿ ಇನ್ಸ್ಪೆಕ್ಟರ್ ಮೇಲೆ ಇನ್ಸ್ಪೆಕ್ಟರ್ ರವರು ಡಿವೈಎಸ್ಪಿರವರ ಮೇಲೆ ಹಾಕಿ, ಧ್ವಜವನ್ನು ಹಾರಿಸುವ ವಿಷಯದಲ್ಲಿ ಪಲಾಯನ ಮಾಡುವ ಕೆಲಸ ಮಾಡಿದ್ದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಹೋರಾಟಗಾರರು ಕಿಡಿಕಾರಿದ್ದರು.

     ನೆಲ ಒರೆಸುವ ಕಡ್ಡಿಗೆ ನಾಡ ಧ್ವಜ ಸಿಕ್ಕಿಸಿ ಅಪಮಾನ:

    ಕಚೇರಿಯ ನೆಲ ಒರೆಸುವ ಮಾಪ್ ಕಡ್ಡಿಗೆ ನಾಡ ಧ್ವಜವನ್ನು ಸಿಕ್ಕಿಸಿ ನಾಡಧ್ವಜಕ್ಕೆ ಅವಮಾನ ಮಾಡಿರುವ ಘಟನೆಯೂ ಸಹ ಕಚೇರಿಯಲ್ಲಿ ನಡೆದಿತ್ತು. ಕನ್ನಡಪರ ಹೋರಾಟಗಾರರು ಇದರ ವಿರುದ್ಧ ಧ್ವನಿ ಎತ್ತಿದಾಗ ಅಬಕಾರಿ ಡಿವೈಎಸ್ಪಿ ಚಂದ್ರಪ್ಪ ಉತ್ತರ ಕೊಡದೆ ಪಲಾಯನ ಮಾಡಲು ಮುಂದಾಗಿದ್ದು ನಾಚಿಕೆಗೇಡಿನ ಸಂಗತಿಯಾಗಿತ್ತು.

    ಕಾಳಜಿ ಫೌಂಡೇಶನ್ ವತಿಯಿಂದ ಅಬಕಾರಿ ಉಪ ಆಯುಕ್ತರಿಗೆ ದೂರು:

    ಕನ್ನಡಿಗರ ತೆರಿಗೆ ಹಣದಲ್ಲಿ ಸಂಬಳ ಪಡೆಯುತ್ತಿರುವ ಸರ್ಕಾರಿ ಅಧಿಕಾರಿಗಳೇ ಇಂತಹ ತಪ್ಪುಗಳನ್ನು ಮಾಡಿದರೆ ಹೇಗೆ ಕನ್ನಡದ ವಿರೋಧಿಯಾಗಿ ನಡೆದುಕೊಂಡ ಅಬಕಾರಿ ಡಿವೈಎಸ್ಪಿ ಚಂದ್ರಪ್ಪ ಮತ್ತು ಇನ್ಸ್ಪೆಕ್ಟರ್ ರಾಮ್ ಮೂರ್ತಿ ರವರನ್ನು ತಕ್ಷಣ ಅಮಾನತ್ತು ಮಾಡಬೇಕೆಂದು ಕಾಳಜಿ ಫೌಂಡೇಶನ್ ತುಮಕೂರು ಮತ್ತು ಕರ್ನಾಟಕ ರಣಧೀರರ ವೇದಿಕೆ ಕಾರ್ಯಕರ್ತರು ಜಿಲ್ಲಾ ಅಬಕಾರಿ ಉಪ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.


     

    ನಾಡಿನ ನೆಲ ಜಲ ಭಾಷೆಯ ಸಂಸ್ಕೃತಿ, ಪರಂಪರೆ ಸ್ವಾಭಿಮಾನವನ್ನು ಸಾರುವ ಕನ್ನಡ ರಾಜ್ಯೋತ್ಸವದ ಹಬ್ಬವನ್ನು ಆಚರಣೆ ಮಾಡುವಲ್ಲಿ ಉದ್ದಟತನ ಮತ್ತು ನಿರ್ಲಕ್ಷತೆ ತೋರಿದ ಮಧುಗಿರಿ ವಲಯ ಅಬಕಾರಿ ಇಲಾಖೆಯ ಡಿವೈಎಸ್ಪಿ ಚಂದ್ರಪ್ಪ ಮತ್ತು ಇನ್ಸ್ಪೆಕ್ಟರ್ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಂಡು ಸೇವೆಯಿಂದ ಅವರನ್ನು ವಜಾಗೊಳಿಸಿ ಸಮಗ್ರ ತನಿಖೆ ನಡೆಸಬೇಕು.

    –ಮಂಜುಸ್ವಾಮಿ ಎಂ.ಎನ್., ಅಧ್ಯಕ್ಷರು, ಕರ್ನಾಟಕ ರಣಧೀರರ ವೇದಿಕೆ.


    ಸರ್ಕಾರಿ ಕೆಲಸ ದೇವರ ಕೆಲಸವೆಂದು ಪರಿಗಣಿಸಿ ಸರ್ಕಾರಿ ನೌಕರರು ನಿಷ್ಠಾವಂತರಾಗಿ ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು ಆದರೆ ಸರ್ಕಾರದ ಆದೇಶಗಳನ್ನು ಗಾಳಿಗೆ ತೂರಿ ಕೆಡಿಪಿ ಸಭೆಗೆ ಗೈರು ಹಾಜರಾಗಿ ಸಹಕಾರ ಸಚಿವ ಕೆ.ಎನ್. ರಾಜಣ್ಣರವರಿಂದ ಛೀಮಾರಿ ಹಾಕಿಸಿಕೊಂಡು. ಸ್ವತಃ ಸಹಕಾರ ಸಚಿವ ಕೆ.ಎನ್. ರಾಜಣ್ಣರವರೇ ಅಬಕಾರಿ ಡಿವೈಎಸ್ಪಿ ಚಂದ್ರಪ್ಪರವನ್ನು ಅಮಾನತ್ತು ಮಾಡಬೇಕೆಂದು ಅಬಕಾರಿ ಸಚಿವರಿಗೆ ಮತ್ತು ಸರ್ಕಾರಕ್ಕೆ ಪತ್ರ ಬರೆದಿದ್ದರು . ಸರ್ಕಾರ ಇಲ್ಲಿಯವರೆಗೂ ಕ್ರಮ ಕೈಗೊಂಡಿಲ್ಲ ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆ ಮಾಡುವಲ್ಲಿ ನಿರ್ಲಕ್ಷ್ಯ ತೋರಿದ ಕನ್ನಡಿಗರ ವಿರೋಧಿ ಅಬಕಾರಿ ಡಿವೈಎಸ್ಪಿ ಚಂದ್ರಪ್ಪರವನ್ನು ಇಲಾಖೆ ತಕ್ಷಣವೇ ಅಮಾನತು ಮಾಡಬೇಕು.

    –ಜಿ.ಎಲ್.ನಟರಾಜು ಅಧ್ಯಕ್ಷರು, ಕಾಳಜಿ ಫೌಂಡೇಶನ್, ತುಮಕೂರು.


    ಈ ಸಂದರ್ಭದಲ್ಲಿ ಕಾಳಜಿ ಫೌಂಡೇಶನ್ ಅಧ್ಯಕ್ಷರಾದ ಜಿ.ಎಲ್.ನಟರಾಜ್, ಉಪಾಧ್ಯಕ್ಷ ರಫೀಕ್ ಪಾಷಾ, ಕಾರ್ಯದರ್ಶಿ ಮುನಿಲಕ್ಷ್ಮಯ್ಯ ಸಂಘಟನಾ ಕಾರ್ಯದರ್ಶಿ ಮಧುಗಿರಿ ಮಹೇಶ್, ಕಾನೂನು ಸಲಹೆಗಾರರಾದ ಶಿವಕುಮಾರ್ ಮೇಷ್ಟ್ರು ಮನೆ, ಎಂ.ಎಸ್. ಗಣೇಶ್, ಮೋಹನ್ ಎಸ್.ಎಲ್. ಪದ್ಮನಾಭ ಮತ್ತು ಕರ್ನಾಟಕ ರಣಧೀರರ ವೇದಿಕೆಯ ಮಂಜುಸ್ವಾಮಿ ಎಂ.ಎನ್., ಮುತ್ತುರಾಜು, ಸತೀಶ್, ನಾಗೇಶ್, ಸುರೇಶ್ ಮತ್ತು ಕಾರ್ಯಕರ್ತರು ಮಧುಗಿರಿ ವಲಯ ಅಬಕಾರಿ ಡಿವೈಎಸ್ಪಿ ಮತ್ತು ಇನ್ಸ್ಪೆಕ್ಟರ್ ವಿರುದ್ಧ ಜಿಲ್ಲಾ ಅಬಕಾರಿ ಉಪ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!

    February 14, 2026

    ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ

    February 14, 2026

    ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?

    February 13, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾಸನ: ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದ ಬಳಿ ಮದುವೆ ಸಮಾರಂಭಕ್ಕೆ ಬಂದಿದ್ದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ತುಮಕೂರು ಜಿಲ್ಲೆಯ…

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!

    February 14, 2026

    ಅದೃಷ್ಟ ಒಲಿದು ಬಂದಾಗ

    February 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.