nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ

    April 14, 2026

    ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ

    April 14, 2026

    ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್

    April 14, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ
    • ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ
    • ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್
    • ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ಕೊರತೆ: ಬಡ ರೋಗಿಗಳ ಪರದಾಟ
    • “ನಾನ್ ನಾಳೆ ಇರ್ತೀನೋ ಇಲ್ವೋ ಗೊತ್ತಿಲ್ಲ”: ಬಾಯ್ ಫ್ರೆಂಡ್ ಸಾವಿನ ಬಗ್ಗೆ ಬಿಗ್ ಬಾಸ್ ಸೋನು ಗೌಡ ಕಣ್ಣೀರು!
    • ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು
    • ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು
    • ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 10 ವರ್ಷದ ಬಾಲಕ, ಕಾರ್ಮಿಕನಿಂದ ಮಲ ಬಾಚಿಸಿದ ಕೆಎಸ್ ಆರ್ ಟಿಸಿ ಅಧಿಕಾರಿಗಳು: ಗೃಹ ಸಚಿವರ ಸ್ವಕ್ಷೇತ್ರದಲ್ಲಿ ಹೇಯ ಘಟನೆ
    ಕೊರಟಗೆರೆ November 7, 2024

    10 ವರ್ಷದ ಬಾಲಕ, ಕಾರ್ಮಿಕನಿಂದ ಮಲ ಬಾಚಿಸಿದ ಕೆಎಸ್ ಆರ್ ಟಿಸಿ ಅಧಿಕಾರಿಗಳು: ಗೃಹ ಸಚಿವರ ಸ್ವಕ್ಷೇತ್ರದಲ್ಲಿ ಹೇಯ ಘಟನೆ

    By adminNovember 7, 2024No Comments2 Mins Read
    ksrtc

    ಕೊರಟಗೆರೆ: ಕೆಎಸ್ ಆರ್ಟಿಸಿ ಬಸ್ ನಿಲ್ದಾಣದಲ್ಲಿನ  ಶೌಚದಗುಂಡಿಯಿಂದ ತುಂಬಿ ಹರಿಯುತ್ತಿದ್ದ ಮಲವನ್ನು ದಲಿತರಿಂದ ಸ್ವಚ್ಚಗೊಳಿಸಿರುವ ಅಮಾನವೀಯ ಘಟನೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ವಕ್ಷೇತ್ರ ಕೊರಟಗೆರೆಯಲ್ಲಿ ನಡೆದಿದೆ.

    ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದ ಹೃದಯಭಾಗದಲ್ಲಿರುವ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ನಾಗರಿಕ ‌ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ನಿಲ್ದಾಣದ ಒಳಗಿರುವ ಸಾರ್ವಜನಿಕ ಶೌಚಾಲಯದ ಪಿಟ್ ತುಂಬಿ ಹರಿಯುತ್ತಿದ್ದನ್ನ ದಲಿತರಿಂದ ಸ್ವಚ್ಚಗೊಳಿಸುವ ಕೆಲಸ ಮಾಡಿಸಲಾಗಿದೆ. ತುಮಕೂರು ಮೂಲದ ಪರಿಶಿಷ್ಟ ಜಾತಿಗೆ ಸೇರಿದ 10 ವರ್ಷದ ಬಾಲಕಾರ್ಮಿಕ ಹಾಗೂ ಓರ್ವ ವ್ಯಕ್ತಿ ನಿಲ್ದಾಣದಲ್ಲಿ ಮಲವನ್ನ ಸ್ವಚ್ಚಗೊಳಿಸುತ್ತಿದ್ದ ದೃಶ್ಯ ಮಾಧ್ಯಮದ ಕ್ಯಾಮೆರಾದಲ್ಲಿ ಸೆರೆಯಾಗಿದೆ.


    Provided by
    Provided by

    ದಲಿತರಿಂದ ಮಲ ಸ್ವಚ್ಚಗೊಳಿಸುವ ಕೆಲಸ ಮಾಡಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಸಿಬ್ಬಂದಿ ಮಾಧ್ಯಮದವರನ್ನ ಕಂಡ ಕೂಡಲೇ ಅಲ್ಲಿಂದ ಪರಾರಿಯಾಗಿದ್ದಾನೆ. ಮಾಧ್ಯಮದವರು ಬಾಲಕನನ್ನ ಮಾತನಾಡಿಸಿದ ವೇಳೆ, ಶೌಚಾಲಯದ ನಿರ್ವಹಣೆ ಮಾಡುತ್ತಿದ್ದ ಕುಮಾರಣ್ಣ ಎಂಬುವರು ನಮಗೆ ಈ ಕೆಲಸ ಮಾಡುವಂತೆ ಹೇಳಿದ್ದಾರೆ, ನಾನು ಪರಿಶಿಷ್ಟ ಜಾತಿಗೆ  ಸೇರಿದ್ದು ತನಗೆ 10 ವರ್ಷ ವಯಸ್ಸು ಎಂದು ಬಾಲಕ ಹೇಳಿಕೊಂಡಿದ್ದಾನೆ.

    ಮಾಧ್ಯಮದವರ ಜೊತೆಗೆ ಮಾತನಾಡುತ್ತಿದ್ದ ಬಾಲಕನಿಗೆ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಸಿಬ್ಬಂದಿ ದೂರದಿಂದಲೇ ಕೈಸನ್ನೆ ಮಾಡಿ ಮಾತನಾಡದಂತೆ ಗದರಿಸುತ್ತಾನೆ. ಕೂಡಲೇ ಬಾಲಕ ತಾವು ಕೆಲಸ ಮಾಡಲು ಬಳಸುತ್ತಿದ್ದ ಗುದ್ದಲಿ, ಬಾಣಲಿ ತೆಗೆದುಕೊಂಡು ಅಸಹಾಯಕತೆಯಿಂದ ಅಲ್ಲಿಂದ ಶೌಚಾಲಯದ ಕಡೆ ತೆರಳಿದ್ದು ಸಿಬ್ಬಂದಿಯ ದೌರ್ಜನ್ಯಕ್ಕೆ ಸಾಕ್ಷಿಯಾಯಿತು.

    ಪಟ್ಟಣ ಪಂಚಾಯ್ತಿಯಲ್ಲಿ ಇರುವ ಸೆಪ್ಟಿಕ್ ಟ್ಯಾಂಕ್ ಯಂತ್ರದ ಮೂಲಕ ತುಂಬಿದ ಶೌಚಗುಂಡಿಯನ್ನ ಸ್ವಚ್ಛಗೊಳಿಸದೇ ನಿಲ್ದಾಣದ ಸಿಬ್ಬಂದಿ ನಿರ್ಲಕ್ಷ್ಯ ಮಾಡಿದ್ದಾರೆ. ಶೌಚಗುಂಡಿ ತುಂಬಿ ನಿಲ್ದಾಣದ ಫ್ಲಾಟ್ ಫಾರಂಗೆ ಹರಿಯತೊಡಗಿದೆ. ಇದು ನಿಲ್ದಾಣದಲ್ಲಿ ದುರ್ನಾತ ಆವರಿಸಿ ಪ್ರಯಾಣಿಕರು ಮೂಗು ಮುಚ್ಚಿಕೊಂಡು ಒಡಾಡುವಂತ ಪರಿಸ್ಥಿತಿ ಉಂಟುಮಾಡಿದೆ. ಈ ನಿಲ್ದಾಣಕ್ಕೆ ಬರುವ ಅದೆಷ್ಟು ಜನ ಪ್ರಯಾಣಿಕರು ರೋಗ ರುಜಿನಗಳಿಗೆ ತುತ್ತಾಗಿದ್ದರೋ ದೇವರೆ ಬಲ್ಲ. ಇಂತಹ ಸ್ಥಿತಿಯಲ್ಲಿ ಬಡವರು ದಲಿತರ ಅಸಹಾಯಕತೆಯನ್ನ ದುರ್ಬಳಕೆ ಮಾಡಿಕೊಂಡು ಅವರಿಂದ ಬರಿಗೈಯಲ್ಲಿ ಸ್ವಚ್ಚತೆ ಮಾಡಿಸಿರುವುದು ನಿಜಕ್ಕೂ ಖಂಡನಾರ್ಹವಾಗಿದೆ.

    ಬಸ್ ನಿಲ್ದಾಣದೊಳಗೆ ನೂರಾರು ಪ್ರಯಾಣಿಕರ ಸಮ್ಮುಖದಲ್ಲೆ ಸುಡುವ ಬಿಸಿಲಿನಲ್ಲಿ ಬರಿ ಮೈಯಲ್ಲಿದ್ದ ಆ ದಲಿತ ಬಾಲಕ ಮಲವನ್ನ ಬಾಚುತ್ತಿದ್ದದ್ದು ಮಾತ್ರ ಇಡೀ ಮನುಕುಲವನ್ನೆ ಪ್ರಶ್ನಿಸಿದೆ. ಬಾಲಕ ಹಾಗೂ ವ್ಯಕ್ತಿ ಇಬ್ಬರಿಂದ ಬರಿ ಕೈಗಳಲ್ಲಿ ನಿಲ್ದಾಣದಿಂದ ಬೇರೆಡೆಗೆ ಮಲ ಎತ್ತುವ ಕೆಲಸ ಮಾಡಿಸುವ ಮೂಲಕ ಮಾನವ ಹಕ್ಕು ಉಲ್ಲಂಘನೆ, ಹಾಗೂ ಮಲ ಹೊರುವ ಪದ್ದತಿ ನಿಷೇಧ ಕಾನೂನು ಉಲ್ಲಂಘನೆ ಮಾಡಲಾಗಿದೆ.

    ಮಾನವನಿಂದ ಮಲ ಹೊರುವ ಪದ್ದತಿ ನಿಷೇಧ ಹಾಗೂ ಬಾಲಕಾರ್ಮಿಕ ಪದ್ದತಿ ನಿಷೇಧ ಕಠಿಣ ಕಾನೂನುಗಳು ಜಾರಿಯಲ್ಲಿದ್ದರೂ ಅಧಿಕಾರಿಗಳ ಸಮ್ಮುಖದಲ್ಲೆ ಉಲ್ಲಂಘನೆಯಾಗಿರುವುದು ನಿಜಕ್ಕೂ ದುರಂತ. ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ಸ್ವಕ್ಷೇತ್ರದಲ್ಲಿರುವ ಬಸ್ ನಿಲ್ದಾಣದಲ್ಲಿ, ಸಾರ್ವಜನಿಕ ಸ್ಥಳದಲ್ಲಿ ಅಧಿಕಾರಿ, ಸಿಬ್ಬಂದಿಗಳು ನಿರ್ಭೀತಿಯಿಂದ ದಲಿತರ ಕೈಯಲ್ಲಿ ಇಂತಹ ಅನಿಷ್ಟದ ಕೆಲಸ ಮಾಡಿಸಿರುವುದು ಸಚಿವರ ಕಾರ್ಯದಕ್ಷತೆಯನ್ನೇ ಅಣಕಿಸುವಂತೆ ಮಾಡಿದೆ.

    ಇಂತಹ ಘಟನೆ ರಾಜ್ಯದ ಯಾವುದೇ ಗ್ರಾಮಗಳಲ್ಲೂ ಸಂಭವಿಸಬಾರದು.ಈ ಘಟನೆ ನಾಗರೀಕ ಸಮಾಜದ ತಲೆ ತಗ್ಗಿಸುವಂತಾಗಿದೆ. ಸ್ವಾತಂತ್ರ್ಯ ಬಂದು ದಶಕಗಳೇ ಕಳೆದರೂ ಮಲ ಹೊರುವ ಪದ್ದತಿ ಜಾತಿ ಪದ್ದತಿ ಜೀವಂತವಾಗಿರುವುದಕ್ಕೆ ಘಟನೆಯೇ ಸಾಕ್ಷಿ. ಸಾಮಾಜಿಕ ಹೋರಾಟಗಾರನಾದ ನಾನು ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಹಾಗೂ ಸರ್ಕಾರಕ್ಕೆ ಎಚ್ಚರಿಸುತ್ತಿದ್ದೇನೆ. ಮಾನ್ಯ ಸಮಾಜ ಕಲ್ಯಾಣ ಇಲಾಖೆ ಸಚಿವರೂ ಇಂತಹ ಘಟನೆಗಳಿಗೆ ತಾರ್ಕಿಕ ಅಂತ್ಯ ಕಾಣಲು ಇನ್ನೂ ವಿಶೇಷ ಕಾನೂನು ತರುವುದು ಅನಿವಾರ್ಯವಾಗಿದೆ .

    –ಜೆಟ್ಟಿ ಅಗ್ರಹಾರ ನಾಗರಾಜು, ಸಾಮಾಜಿಕ ಹೋರಾಟಗಾರ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ

    April 14, 2026

    ಚಿಕ್ಕಮಗಳೂರು: ಜಿಲ್ಲೆಯ ಹೆಬ್ಬಳ್ಳಿ ಗ್ರಾಮದಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಸೀರೆಯ ಜೋಕಾಲಿ ಆಕಸ್ಮಿಕವಾಗಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ಉಸಿರುಗಟ್ಟಿ…

    ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ

    April 14, 2026

    ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್

    April 14, 2026

    ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ಕೊರತೆ: ಬಡ ರೋಗಿಗಳ ಪರದಾಟ

    April 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.