ತಿಪಟೂರು: ನಗರ ಸತ್ಯ ಗಣಪತಿ ಆಸ್ಥಾನ ಮಂಟಪದಲ್ಲಿ ನವಂಬರ್ 14ರಂದು ಇನ್ನರ್ ವೀಲ್ ಕ್ಲಬ್ ವತಿಯಿಂದ ತಾಲೂಕು ಪ್ರೌಢಶಾಲೆ ಮಟ್ಟದ ಜನಪದ ನೃತ್ಯ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಕ್ಲಬ್ ನ ಅಧ್ಯಕ್ಷೆ ಸುಮಿತ್ರ ಹೇಳಿದರು.
ಈ ಕಾರ್ಯಕ್ರಮವನ್ನು ಅಂದು ಬೆಳಿಗ್ಗೆ ಬೆಳಗ್ಗೆ 10:30 ಕ್ಕೆ ಶಾಸಕ ಕೆ.ಷಡಕ್ಷರಿ ಅವರು ಉದ್ಘಾಟಿಸುವರು ಡಾ. ಶ್ರೀಧರ್ ಬಿಜೆಪಿ ಮುಖಂಡರಾದ ಲೋಕೇಶ್ವರ್ ನಗರಸಭಾಧ್ಯಕ್ಷ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಮಕ್ಕಳಲ್ಲಿ ಜನಪದ ಕಲೆ ಮತ್ತು ನೃತ್ಯದಲ್ಲಿ ಆಸಕ್ತಿ ಮೂಡಿಸುವ ಸಲುವಾಗಿ ಜನಪದ ನೃತ್ಯ ಸ್ಪರ್ಧೆ ಆಯೋಜಿಸಲಾಗಿದ್ದು, ತಾಲೂಕಿನ ಸುಮಾರು 20 ಶಾಲೆಗಳು 130ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಲಿದ್ದಾರೆ. ಆದರೆ ಸಿನಿಮಾ ಹಾಡು ಗಳಿಗೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದರು.
ಪ್ರಥಮ ಸ್ಥಾನ ಪಡೆದ ಮಕ್ಕಳಿಗೆ 5,000 ದ್ವಿತೀಯ ಬಹುಮಾನ 3,000 ಮೂರನೇ ಬಹುಮಾನ 25 ಸಮಾಧಾನಕರ ಬಹುಮಾನ ನೀಡಲಾಗುವುದು ಎಂದು ತಿಳಿಸಿದರು. ಈ ಸಂಸ್ಥೆಯ ಎಡಿಟರ್ ರೇಖಾ ಸುಜಾತ, ಮಾಜಿ ಅಧ್ಯಕ್ಷ ಭಾಗೃಮೂರ್ತಿ ಇನ್ನಿತರರು ಉಪಸ್ಥಿತರಿದ್ದರು
ವರದಿ: ಆನಂದ್ ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q