ಪಾವಗಡ: ಸರ್ಕಾರಿ ಪ್ರೌಢಶಾಲೆ ಅರಸೀಕೆರೆಯಲ್ಲಿ ಭಾರತ ರತ್ನ ಜವಾಹರ ಲಾಲ್ ನೆಹರು ರವರ 135 ನೇ ಜನ್ಮದಿನಾಚರಣೆಯನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಿಸಿದರು.
ಈ ಸಂದರ್ಭದಲ್ಲಿ ನೆಹರೂ ಅವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಲಾಯಿತು. ದಲ್ಲಿ ಶಾಲಾ ಸಂಸತ್ತಿನ ಎಲ್ಲಾ ಪ್ರತಿನಿಧಿಗಳನ್ನು ಸಭೆಯಲ್ಲಿ ಕೂರಿಸಿ ಅವರುಗಳಿಂದಲೇ ವಿನೂತನವಾಗಿ ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.
ಮಕ್ಕಳ ದಿನಾಚರಣೆ ಪ್ರಯುಕ್ತ ಜವಾಹರಲಾಲ್ ನೆಹರೂ ಬಗ್ಗೆ ಭಾಷಣ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಗಳನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದ ಹಿಂದಿನ ದಿನ ಶಿಕ್ಷಕರುಗಳಿಂದ ವಿದ್ಯಾರ್ಥಿಗಳಿಗೆ ಕೆಲವು ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು ಅದರಲ್ಲಿ ಪ್ರಮುಖವಾಗಿ ಮ್ಯೂಜಿಕಲ್ ಚೇರ್, ನದಿ–ದಡ ಎಂಬ ಸ್ಪರ್ಧೆಗಳನ್ನು ಆಯೋಜಿಸುವುದರ ಮೂಲಕ ಸಾರ್ಥಕವಾದ ಮಕ್ಕಳ ದಿನಾಚರಣೆಯನ್ನು ಆಚರಿಸಿ ಬಹುಮಾನಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ರೇಣುಕರಾಜ್ .ಜಿ.ಹೆಚ್., ಮಕ್ಕಳ ದಿನಾಚರಣೆಯ ಮಹತ್ವ, ಹಿನ್ನೆಲೆ ಮತ್ತು ವಿದ್ಯಾರ್ಥಿಗಳಿಗೆ ಉತ್ತಮ ಪ್ರಜೆಗಳಾಗಿ ರೂಪುಗೊಂಡು ತಂದೆ ತಾಯಿಗಳಿಗೆ ಕೀರ್ತಿಯನ್ನು ತನ್ನಿ ಎಂಬ ಕಿವಿ ಮಾತನ್ನು ಹೇಳಿದರು.
ಕಾರ್ಯಕ್ರಮವನ್ನು ವಿದ್ಯಾರ್ಥಿಗಳಿಂದಲೇ ನಡೆಸಲಾಯಿತು ಪೂರ್ಣಿಮಾ ನಿರೂಪಿಸಿದರು,ಶೋಭಿತಾ ಸ್ವಾಗತಿಸಿದರು, ಸುಶ್ಮಿತಾ ವಂದನಾರ್ಪಣೆ ಮಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರಾದ ರಾಮಚಂದ್ರಪ್ಪ ಕೆ.ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಗುರುರಾಜ್, ಸಹಶಿಕ್ಷಕರಾದ ರೇಣುಕರಾಜ್ ಜಿ.ಹೆಚ್, ಹನುಮೇಶ್ ಎನ್., ಕುಮಾರ್ ಎಸ್ , ಶಿಕ್ಷಕಿಯರಾದ ವಿಮಲಾ ಆರ್., ರಶ್ಮೀ ಸಿ.ಎಸ್., ಶ್ರೀಲಕ್ಷ್ಮೀ ಮತ್ತು ವಿದ್ಯಾರ್ಥಿ ಗಳು ಹಾಜರಿದ್ದು ಒಟ್ಟಿನಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296