nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ | ಕೆ.ಟಿ.ಹಳ್ಳಿ ಗ್ರಾಮದಲ್ಲಿ ಕೆಂಪೇಗೌಡರ ಪುತ್ಥಳಿ ಅನಾವರಣ

    October 4, 2025

    ತಿಮ್ಮಾಪುರದಲ್ಲಿ ಶ್ರೀ ಬಾಲಾಜಿ ಮಠ ಪ್ರತಿಷ್ಠಾಪನೆ:  ನಾದಾಬ್ರಹ್ಮ ಯೋಗದಿಂದ ಆರೋಗ್ಯ ಕ್ಷೇಮದ ಸಂದೇಶ

    October 4, 2025

    ವೈ.ಎನ್.ಹೊಸಕೋಟೆ | ಕಸ್ತೂರಿ ತಿಲಕ ವಂಶಜರ ಜಂಬೂಸವಾರಿ

    October 4, 2025
    Facebook Twitter Instagram
    ಟ್ರೆಂಡಿಂಗ್
    • ಪಾವಗಡ | ಕೆ.ಟಿ.ಹಳ್ಳಿ ಗ್ರಾಮದಲ್ಲಿ ಕೆಂಪೇಗೌಡರ ಪುತ್ಥಳಿ ಅನಾವರಣ
    • ತಿಮ್ಮಾಪುರದಲ್ಲಿ ಶ್ರೀ ಬಾಲಾಜಿ ಮಠ ಪ್ರತಿಷ್ಠಾಪನೆ:  ನಾದಾಬ್ರಹ್ಮ ಯೋಗದಿಂದ ಆರೋಗ್ಯ ಕ್ಷೇಮದ ಸಂದೇಶ
    • ವೈ.ಎನ್.ಹೊಸಕೋಟೆ | ಕಸ್ತೂರಿ ತಿಲಕ ವಂಶಜರ ಜಂಬೂಸವಾರಿ
    • ತುಮಕೂರು | ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿಗೆ ಮುಸ್ಲಿಂ ಎಂಬ ಕಾರಣಕ್ಕೆ ಅವಮಾನ!
    • ಪಾವಗಡ ತಾಲುಕಿನಾದ್ಯಂತ ಸಂಭ್ರಮದ ವಿಜಯದಶಮಿ ಹಬ್ಬ
    • ತುರ್ತು ಪರಿಸ್ಥಿತಿಯಲ್ಲಿ ಸ್ವಯಂ ಸೇವಕರ ಬಲಿದಾನ ಮರೆಯಬಾರದು: ಆರ್ ಎಸ್ ಎಸ್ ಮುಖಂಡ ಉಮೇಶ್‌
    • ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರಿಯವರ ಸರಳತೆ ಮತ್ತು ಶಿಸ್ತನ್ನು ಅನುಸರಿಸಿ: ಶಾಸಕ ಕೆ.ಷಡಕ್ಷರಿ
    • ಮನೆಗೆ ಬಂದ ಶಾಸಕ ಡಾ.ರಂಗನಾಥ್ ಗೆ ವಿಶೇಷ ಭೋಜನ ಬಡಿಸಿದ ದಲಿತ ಮಹಿಳೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನ.24ರಂದು ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟ: ಗೃಹ ಸಚಿವರಿಂದ ಕ್ರೀಡಾ ಜ್ಯೋತಿ ಮೆರವಣಿಗೆಗೆ ಚಾಲನೆ
    ತುಮಕೂರು November 21, 2024

    ನ.24ರಂದು ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟ: ಗೃಹ ಸಚಿವರಿಂದ ಕ್ರೀಡಾ ಜ್ಯೋತಿ ಮೆರವಣಿಗೆಗೆ ಚಾಲನೆ

    By adminNovember 21, 2024No Comments2 Mins Read
    g parameshwar (2)

    ತುಮಕೂರು: ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಾ ನಗರ ಪಾಲಿಕೆ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ನವೆಂಬರ್ 24ರಂದು ನಡೆಯಲಿರುವ ನಗರದ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟದ ಅಂಗವಾಗಿ ಹಮ್ಮಿಕೊಂಡಿರುವ ಕ್ರೀಡಾಜ್ಯೋತಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಚಾಲನೆ ನೀಡಿದರು.

    ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿಂದು ಕ್ರೀಡಾಜ್ಯೋತಿ ಮೆರವಣಿಗೆಗೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು ಶಾಂತಿಯ ಸಂದೇಶ ಸಾರುವ ಸಲುವಾಗಿ ಜಿಲ್ಲೆಯಾದ್ಯಂತ ಕ್ರೀಡಾಜ್ಯೋತಿ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಕ್ರೀಡಾಜ್ಯೋತಿಯು ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲೂ ಸಂಚರಿಸಿ ಸಮಾಜದಲ್ಲಿ ಶಾಂತಿ ಮತ್ತು ಸಹೋದರತ್ವ ಭಾವನೆಯಿಂದ ಬಾಳಬೇಕೆಂಬ ಸಂದೇಶ ಸಾರಲಿದೆ. ಪ್ರತಿಯೊಬ್ಬ ಪತ್ರಕರ್ತರಲ್ಲೂ ಕ್ರೀಡಾ ಮನೋಭಾವನೆ ಮೂಡಬೇಕು ಎಂದು ತಿಳಿಸಿದರು.


    Provided by
    Provided by
    Provided by

    ನಾನೂ ಒಬ್ಬ ಕ್ರೀಡಾಪಟುವಾಗಿ ಕ್ರೀಡಾಜ್ಯೋತಿ ಮೆರವಣಿಗೆಗೆ ಚಾಲನೆ ನೀಡಿರುವುದು ಸಂತೋಷ ತಂದಿದೆ. ರಾಜ್ಯಮಟ್ಟದ ಪತ್ರಕರ್ತರ ಕ್ರೀಡಾಕೂಟ ಯಶಸ್ವಿಯಾಗಿ ನಡೆಯಲಿ ಎಂದು ಹಾರೈಸಿದರು.

    ಇದೇ ಸಂದರ್ಭದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ತುಮಕೂರು ಬೆಂಗಳೂರಿನಂತೆ ಬಹಳ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ಮುಂದಿನ ದಿನಗಳಲ್ಲಿ ತುಮಕೂರು ಬೆಂಗಳೂರಿನ ಒಂದು ಭಾಗವಾಗಬೇಕೆಂಬ ಆಸೆ ಇದ್ದು, ಡಿಸೆಂಬರ್ 2ರಂದು ಮುಖ್ಯಮಂತ್ರಿಗಳು ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲೆಯ ಮಧುಗಿರಿ–ಕೊರಟಗೆರೆ ಭಾಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

    ಕ್ರೀಡಾಜ್ಯೋತಿಯು ನವೆಂಬರ್ 21 ರಿಂದ 23ರವರೆಗೆ ಜಿಲ್ಲಾದ್ಯಂತ ಎಲ್ಲ ತಾಲೂಕುಗಳಲ್ಲೂ ಸಂಚರಿಸಲಿದ್ದು, 21ರ ಗುರುವಾರ ತುಮಕೂರಿನಿಂದ ಹೊರಟು ಕುಣಿಗಲ್ ಪಟ್ಟಣ, ಯಡಿಯೂರು, ಮಾಯಸಂದ್ರ ಮೂಲಕ ಮಧ್ಯಾಹ್ನ ನೊಣವಿನಕೆರೆ, ತಿಪಟೂರು ನಗರ ತಲುಪಲಿದೆ. ತಿಪಟೂರಿನಿಂದ ಕಾರ್ಯಾಕ್ರಮ ಮುಗಿಸಿ ಸಂಜೆ ಹೊರಟು ಕೆ.ಬಿ.ಕ್ರಾಸ್ ಮೂಲಕ ಗುಬ್ಬಿ ಪಟ್ಟಣಕ್ಕೆ ಕ್ರೀಡಾ ಜ್ಯೋತಿ ಆಗಮಿಸಿ ಪ್ರವಾಸಿ ಮಂದಿರದಲ್ಲಿ ತಂಗಲಿದೆ.

    ಮರುದಿನ ಕ್ರೀಡಾ ಜ್ಯೋತಿಯು ನವೆಂಬರ್ 22ರ ಬೆಳಿಗ್ಗೆ ಗುಬ್ಬಿ, ಕೆ.ಬಿ. ಕ್ರಾಸ್ ಮೂಲಕ ಚಿಕ್ಕನಾಯಕನಹಳ್ಳಿ ತಾಲೂಕಿಗೆ ಮಧ್ಯಾಹ್ನ ತಲುಪಿ ನಂತರ ಸಂಜೆ ಶಿರಾ ನಗರ, ಮಧುಗಿರಿ ಮೂಲಕ ಪಾವಗಡ ಪಟ್ಟಣ ತಲುಪಿ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಹೂಡಲಿದೆ.

    ನವೆಂಬರ್ 23 ಶನಿವಾರ ಪಾವಗಡ ಪಟ್ಟಣದಲ್ಲಿ ಸಂಚರಿಸಿ ಮಿಡಿಗೇಶಿ ತಲುಪಲಿದೆ. ಮಿಡಿಗೇಶಿಯಿಂದ ಮಧುಗಿರಿ ಪಟ್ಟಣಕ್ಕೆ ತಲುಪಿ ಮಧ್ಯಾಹ್ನ ಹೊರಟು ಕೊರಟಗೆರೆ ಪಟ್ಟಣಕ್ಕೆ ತಲುಪಲಿದ್ದು, ಕ್ರೀಡಾಜ್ಯೋತಿಯು ಕೊರಟಗೆರೆಯಿಂದ ತುಮಕೂರು ತಲುಪಲಿದೆ ಎಂದು ಅಧ್ಯಕ್ಷ ಚಿ.ನಿ.ಪುರುಷೋತ್ತಮ್ ಮಾಹಿತಿ ನೀಡಿದರು.

    ಈ ಸಂದರ್ಭದಲ್ಲಿ ಶಾಸಕ ಜ್ಯೋತಿಗಣೇಶ್, ಸಚಿವ ಪರಮೇಶ್ವರ್ ಅವರ ಧರ್ಮಪತ್ನಿ ಕನ್ನಿಕಾ ಪರಮೇಶ್ವರ್, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ, ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ., ಪಾಲಿಕೆ ಆಯುಕ್ತ ಬಿ.ವಿ. ಆಶ್ವಿಜ, ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ವೆಂಕಟೇಶ್ವರಲು, ಹಿರಿಯ ಪತ್ರಕರ್ತರಾದ ಎಸ್.ನಾಗಣ್ಣ, ಕೆಯುಡಬ್ಲೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರಧಾನ ಕಾರ್ಯದರ್ಶಿ ರಘುರಾಮ್, ಕ್ರೀಡಾಕೂಟದ ಪ್ರಚಾರ ಸಮಿತಿ ಅಧ್ಯಕ್ಷ ರಂಗರಾಜು, ಟಿ.ಎನ್. ಮಧುಕರ್, ಶಾಂತರಾಜು, ಡಿ.ಎಂ.ಸತೀಶ್, ಕ್ರೀಡಾ ಸಮಿತಿ ಸಂಚಾಲಕ ಸತೀಶ್ ಹಾರೋಗೆರೆ, ಯಶಸ್, ಹರೀಶ್ ಆಚಾರ್ಯ ಸೇರಿದಂತೆ ಜಿಲ್ಲೆಯ ಪತ್ರಕರ್ತರು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ತುಮಕೂರು | ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿಗೆ ಮುಸ್ಲಿಂ ಎಂಬ ಕಾರಣಕ್ಕೆ ಅವಮಾನ!

    October 4, 2025

    ತುರ್ತು ಪರಿಸ್ಥಿತಿಯಲ್ಲಿ ಸ್ವಯಂ ಸೇವಕರ ಬಲಿದಾನ ಮರೆಯಬಾರದು: ಆರ್ ಎಸ್ ಎಸ್ ಮುಖಂಡ ಉಮೇಶ್‌

    October 3, 2025

    ತುಮಕೂರು ದಸರಾ: ಜಂಬೂ ಸವಾರಿಗೆ ಸಾಕ್ಷಿಯಾದ ಸಾವಿರಾರು ಜನರು

    October 3, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ | ಕೆ.ಟಿ.ಹಳ್ಳಿ ಗ್ರಾಮದಲ್ಲಿ ಕೆಂಪೇಗೌಡರ ಪುತ್ಥಳಿ ಅನಾವರಣ

    October 4, 2025

    ಪಾವಗಡ: ಶತ ಶತಮಾನಗಳಿಂದ ನಾಡಿನ ಜನರಿಗೆ ಅನ್ನ ನೀಡುವ ಒಕ್ಕಲಿಗ ಸಮುದಾಯ ಸಮಾಜದ ಒಳಿತಿಗಾಗಿ ಶ್ರಮಿಸುತ್ತಿದೆ ಎಂದು ಆದಿಚುಂಚನಗಿರಿ ಸಂಸ್ಥಾನದ…

    ತಿಮ್ಮಾಪುರದಲ್ಲಿ ಶ್ರೀ ಬಾಲಾಜಿ ಮಠ ಪ್ರತಿಷ್ಠಾಪನೆ:  ನಾದಾಬ್ರಹ್ಮ ಯೋಗದಿಂದ ಆರೋಗ್ಯ ಕ್ಷೇಮದ ಸಂದೇಶ

    October 4, 2025

    ವೈ.ಎನ್.ಹೊಸಕೋಟೆ | ಕಸ್ತೂರಿ ತಿಲಕ ವಂಶಜರ ಜಂಬೂಸವಾರಿ

    October 4, 2025

    ತುಮಕೂರು | ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿಗೆ ಮುಸ್ಲಿಂ ಎಂಬ ಕಾರಣಕ್ಕೆ ಅವಮಾನ!

    October 4, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.