nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ

    September 19, 2025

    ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ

    September 19, 2025

    ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್

    September 19, 2025
    Facebook Twitter Instagram
    ಟ್ರೆಂಡಿಂಗ್
    • ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ
    • ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ
    • ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್
    • ಮನೆ ಬಾಗಿಲಿನಲ್ಲಿ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಮಹಿಳೆ
    • ಭೂಕಂಪನದ ಅನುಭವ: ಬೆಚ್ಚಿಬಿದ್ದ ವಿಜಯಪುರ ಜಿಲ್ಲೆ ಜನ
    • ರಾಹುಲ್‌ ಗಾಂಧಿ ಅವರಿಗೆ ಕಾಮನ್‌ ಸೆನ್ಸ್‌ ಇಲ್ಲ: ಆರ್.ಅಶೋಕ್ ವಾಗ್ದಾಳಿ
    • ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ
    • ಮೈಸೂರು ದಸರಾ: ಪ್ರತಿಭಟನೆ, ಗೊಂದಲ ನಡೆಯದಂತೆ ಕಟ್ಟೆಚ್ಚರ ವಹಿಸಲು ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜೀಯಿಲ್ಲ
    ರಾಜ್ಯ ಸುದ್ದಿ January 22, 2022

    ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜೀಯಿಲ್ಲ

    By adminJanuary 22, 2022No Comments2 Mins Read
    raitha

    ಬೆಂಗಳೂರು : ರೈತರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ವಿಮಾ ಪರಿಹಾರ ಕಂಪೆನಿಗಳ ವಿಷಯದಲ್ಲಾಗಲೀ ಬೇರೆ ಯಾವುದೇ ವಿಚಾರದಲ್ಲಾಗಲೀ ಯಾರಿಂದಲೂ ಯಾವುದೇ ರೀತಿಯ ರಾಜೀಯೂ ಇಲ್ಲ ಮುಲಾಜೂ ಇಲ್ಲ.ರೈತರ ಕಾಳಜಿಯೇ ಮುಖ್ಯವಾದ ಗುರಿಯಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ್ ಖೂಬಾ ಸ್ಪಷ್ಟಪಡಿಸಿದ್ದಾರೆ.

    ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಕರ್ನಾಟಕ ರಾಜ್ಯದ ಕೃಷಿ ಸಚಿವರು ಇಲಾಖಾಧಿಕಾರಿಗಳೊಂದಿಗೆ ಪ್ರಧಾನ್ ಮಂತ್ರಿ ಫಸಲ್ ಬಿಮಾ ಯೋಜನೆ ಸೇರಿದಂತೆ ಮತ್ತಿತ್ತರ ವಿಚಾರಗಳ ಬಗ್ಗೆ ಕೇಂದ್ರ ಸಚಿವರು ಅವಲೋಕನಾ ಸಭೆ ನಡೆಸಿ,ಸರ್ಕಾರಿ ಇನ್ಸೂರೆನ್ಸ್ ಕಂಪೆನಿಗಳು ಸರಿಯಾದ ಸಮಯಕ್ಕೆ ರೈತರಿಗೆ ಬೆಳೆ ವಿಮೆ ಪರಿಹಾರ ನೀಡಬೇಕೆಂಬ ನಿಟ್ಟಿನಲ್ಲಿ ಚರ್ಚಿಸಿದರು.
    ಅವಲೋಕನಾ ಸಭೆಯಲ್ಲಿ ಸರ್ಕಾರಿ ವಿಮಾ ಕಂಪೆನಿಗಗಳಿಂದ ಸರಿಯಾದ ಸಮಯಕ್ಕೆ ಸರಿಯಾಗಿ ರೈತರಿಗೆ ಬೆಳೆ ವಿಮೆ ನೀಡಲು ಸಾಧ್ಯವಾಗುತ್ತದೆ ಎಂದ ಮೇಲೆ ಖಾಸಗಿ ವಿಮಾ ಕಂಪೆನಿಗಳಿಗೆ ಸರಿಯಾಗಿ ರೈತರಿಗೆ ವಿಮೆ ಪಾವತಿಸಲು ಸಾಧ್ಯವಾಗದೇ ಇರುವುದನ್ನು ಗಮನಿಸಿದ ಸಚಿವದ್ವಯರು ಸಭೆಯಲ್ಲಿ ಖಾಸಗಿ ವಿಮಾ ಕಂಪೆನಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.


    Provided by
    Provided by
    Provided by

    ಕೇವಲ ಅಂಕಿಅಂಶಗಳಿಂದ ಕಾಗದದ ಮೇಲಿನ ಅಂಕಿಸಂಖ್ಯೆಗಳಿಂದ ರೈತರಿಗೆ ನ್ಯಾಯ ಒದಗಿಸಲು ಸಾಧ್ಯವಿಲ್ಲ. ಸರ್ಕಾರಿ ವಿಮಾ ಕಂಪೆನಿಗಳು ಸರಿಯಾಗಿ ನ್ಯಾಯ ಒದಗಿಸುತ್ತಿವೆ. ಖಾಸಗಿ ಕಂಪೆನಿಗಳು ಕೇವಲ ಅಂಕಿಸಂಖ್ಯೆಗಳನ್ನು ಮಾತ್ರ ಅಧಿಕಾರಿಗಳಿಗೆ ತೋರಿಸುತ್ತಿವೆ.ಈ ಹಿಂದೆಯೇ ರೈತ ಸಂಪರ್ಕ ಕೇಂದ್ರಗಳಲ್ಲಿ ವಿಮಾ ಕಂಪೆನಿಗಳು ಕಚೇರಿಗಳನ್ನು ತೆರೆಯಬೇಕೆಂದು ಸೂಚಿಸಲಾಗಿತ್ತು.ಆದರೆ ಅದು ಬರೀ ಸೂಚನೆಯಾಗಿಯಷ್ಟೇ ಉಳಿದಿದ್ದು,ಕಾರ್ಯಗತವಾಗಿಲ್ಲ ಎಂಬುದನ್ನು ಸಭೆಯಲ್ಲಿ ಕಮಿಷನರ್ ಗಮನಕ್ಕೆ ತಂದ ಕೃಷಿ ಸಚಿವ ಬಿ.ಸಿ.ಪಾಟೀಲ್, ಈ ಬಗ್ಗೆ ಕೃಷಿ ಕೇಂದ್ರ ಇಲಾಖೆಯ ಪ್ರಮುಖರು ಗಮನ ಹರಿಸಿ ಹದಿನೈದು ದಿನದೊಳಗೆ ಎಲ್ಲಾ ವಿಮಾ ಕಂಪೆನಿಗಳಿಗೆ ತಾಕೀತು ಮಾಡುವಂತೆ ಹೇಳಿದರು.ರೈತರ ಪರವಾಗಿ ಅಧಿಕಾರಿಗಳು ಇರಬೇಕು.ಜಿಲ್ಲೆಯ ಕೃಷಿ ಅಧಿಕಾರಿಗಳಲ್ಲಿ ಪರಸ್ಪರ ಸಮನ್ವಯತೆ ಇರಬೇಕು. ವಿಮಾ ಇಲಾಖೆಯಲ್ಲಿ ಬೆಳೆ ವಿಮೆಗೆ ನೋಂದಣಿಯಾಗಿರುವ ಜಿಲ್ಲಾವಾರು ಪ್ರದೇಶ, ಬೆಳೆಗಳ ಬಗ್ಗೆ ರೈತರ ಮಾಹಿತಿ ಪಡೆದು ಸಾಂಖ್ಯಿಕ ಇಲಾಖೆಯ ಅಂಕಿಅಂಶಗಳ ಜೊತೆ ಪರಿಶೀಲನೆ ಮಾಡಿ ಒಂದು ವಾರದೊಳಗೆ ವರದಿ ಮಾಹಿತಿ ನೀಡಬೇಕು ಎಂದು ಆಯುಕ್ತರಿಗೆ ಭಗವಂತ್ ಖೂಬಾ ಸೂಚಿಸಿದರು.

    ಈ ಸಂದರ್ಭದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಕೇಂದ್ರ ಸಚಿವ ಭಗವಂತ್ ಖೂಬಾಗೆ “ಬೆಲೆ
    ಭದ್ರತೆ” ಬಗ್ಗೆ ಮನವಿ ಸಲ್ಲಿಸಿದರು. ಸದ್ಯ ರಾಜ್ಯದಲ್ಲಿ 6.12 ಲಕ್ಷ ಟನ್ ವಿವಿಧ ಗ್ರೇಡ್ ಗಳ ರಸಗೊಬ್ಬರ ದಾಸ್ತಾನಿದ್ದು,2022 ರ ಮುಂಗಾರಿಗೆ 26.5 ಲಕ್ಷ ಟನ್ ಬೇಡಿಕೆಯಿರುವುದಾಗಿ ಅಂದಾಜಿಸಲಾಗಿದೆ. ಅಗತ್ಯವಿರುವ ರಸಗೊಬ್ಬರದ ಸರಬರಾಜು ಹಾಗೂ 3ಲಕ್ಷ ಟನ್ ವಿವಿಧ ರಸಗೊ ಬ್ಬರಗಳನ್ನು ಕಾಪು ದಾಸ್ತಾನಾಗಿ ಶೇಕರಣೆ ಮಾಡಲು ನಿರ್ಧರಿಸಲಾಗಿರುವುದರಿಂದ ಮುಂದಿನ ದಿನಗಳಲ್ಲಿ ಆಗಬಹುದಾದ ಬೆಲೆ ಏರಿಳಿತಕ್ಕೆ ರಕ್ಷಣೆ ನೀಡಲು ಮನವಿ ಪತ್ರದಲ್ಲಿ ಹೇಳಲಾಗಿದೆ.

    ವರದಿ: ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ರಾಹುಲ್‌ ಗಾಂಧಿ ಅವರಿಗೆ ಕಾಮನ್‌ ಸೆನ್ಸ್‌ ಇಲ್ಲ: ಆರ್.ಅಶೋಕ್ ವಾಗ್ದಾಳಿ

    September 19, 2025

    ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ

    September 18, 2025

    ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ

    September 17, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ

    September 19, 2025

    ತುಮಕೂರು: ಕೇಂದ್ರ ಸರ್ಕಾರ ಸರಕು ಹಾಗೂ ಸೇವಾ ತೆರಿಗೆ (ಜಿಎಸ್‌ ಟಿ) ದರ ಪರಿಷ್ಕರಣೆ ಮಾಡುವ ಮೂಲಕ ಜನಸಾಮಾನ್ಯರ ಮೇಲಿನ…

    ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ

    September 19, 2025

    ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್

    September 19, 2025

    ಮನೆ ಬಾಗಿಲಿನಲ್ಲಿ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಮಹಿಳೆ

    September 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.