nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?
    • ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ
    • ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ
    • ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜಿನ ಭಜನೆ –ಧರ್ಮ ಕಾರ್ಯಗಳಿಗೆ ಮಂಗಳೂರು ವಲಯ ಮಾದರಿ: ಅನಿತಾ ಸುರೇಂದ್ರ ಕುಮಾರ್
    ಜಿಲ್ಲಾ ಸುದ್ದಿ November 25, 2024

    ಜಿನ ಭಜನೆ –ಧರ್ಮ ಕಾರ್ಯಗಳಿಗೆ ಮಂಗಳೂರು ವಲಯ ಮಾದರಿ: ಅನಿತಾ ಸುರೇಂದ್ರ ಕುಮಾರ್

    By adminNovember 25, 2024No Comments4 Mins Read
    jina

    ಬೆಳ್ತಂಗಡಿ:   ಭರತ ಖಂಡದ ಜೈನ ಪರಂಪರೆಯಲ್ಲಿ ಕಲೆ ಸಾಹಿತ್ಯ ಸಂಸ್ಕೃತಿ ಸಂಸ್ಕಾರ ದಿನ ಭಜನೆಗಳಂತಹ ಧರ್ಮ ಕಾರ್ಯದಲ್ಲಿ ಮಂಗಳೂರು ವಲಯ ಸಮಾಜಕ್ಕೆ ಮಾದರಿಯಾಗಿದೆ ಎಂದು ಭಾರತೀಯ ಜೈನ್ ಮಿಲನ್  ರಾಷ್ಟ್ರೀಯ ಉಪಾಧ್ಯಕ್ಷೇ ,ತ್ಯಾಗಿಸೇವಾ ಸಮಿತಿಯ ಅಧ್ಯಕ್ಷರಾದ  ಅನಿತಾ ಸುರೇಂದ್ರ ಕುಮಾರ್ ಸಂತಸ ವ್ಯಕ್ತಪಡಿಸಿದರು

    ಅವರಿಂದು ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಭವನದಲ್ಲಿ ನಡೆದ ಭಾರತೀಯ ಜೈನ್  ಮಿಲನ  ಮಂಗಳೂರು ವಲಯ ಮಟ್ಟದ  ಜಿನಭಜನ ಕಾರ್ಯಕ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.


    Provided by
    Provided by

    ದಕ್ಷಿಣ ಕನ್ನಡ ಜಿಲ್ಲೆ ಜೈನ್ ಮಿಲನ್ ವತಿಯಿಂದ ನಡೆಯುತ್ತಿರುವ ಕಾರ್ಯಕ್ರಮಗಳು ಪಂಚ ಕಲ್ಯಾಣಗಳು ಬಸದಿಗಳ  ಜೀರ್ಣೋದ್ದಾರ, ಧಾರ್ಮಿಕ ಕಾರ್ಯಕ್ರಮಗಳು ಸಂತಸ ತಂದಿದೆ. ಇದರಿಂದ ಸಂಸ್ಕಾರ  ಉಳಿಯುತ್ತದೆ ಹಾಗೂ  ಬೆಳೆಯುತ್ತದೆ, ಜಿನ ಭಜನೆಯಿಂದ ಸಮಾಜದಲ್ಲಿ ಬಸದಿಗಳ ಸ್ವಚ್ಛತೆ , ಸ್ವಾಧ್ಯಾಯದಿಂದ ಧಾರ್ಮಿಕ ಕಾರ್ಯಕ್ರಮಗಳು ಹೆಚ್ಚುತ್ತಿದ್ದು, ಮಹಿಳಾ ವಿಭಾಗ ಸಮಾಜಕ್ಕೆ ಮಾದರಿಯಾಗಿದೆ ಎಂದರು.

    ಭಜನೆ ನೆನಪಿಗೆ ಸುಲಭವಾದದ್ದು, ಮನಸ್ಸಿಗೆ ಮುದ  ನೀಡಲಿದೆ, ಈ ಹಿಂದೆ ಬಸದಿ ಎನ್ನುವುದು ಮನೆಯಲ್ಲಿತ್ತು ಈಗ ಎಲ್ಲೆಡೆ  ಇದ್ದು ,ಇದರಿಂದ ಏಕಾಗ್ರತೆ ಉಂಟಾಗಿ ಕರ್ಮಗಳು ನಿರ್ಜರವಾಗುತ್ತವೆ. ಮಾನವನ ಸಾಮಾನ್ಯ ಜೀವನ ಮನಸ್ಸಿನ  ಕ್ಷೋಬೆಯಿಂದ ದೂರ ಉಳಿಯುತ್ತದೆ ,ದೇವಸ್ಥಾನ ಭಜನೆ, ಪೂಜೆಗಳು ,ಜೀವನಕ್ಕೆ ಶೋಭೆ ತರಲಿವೆ ಇದರಿಂದ ಮನಸ್ಸಿನಲ್ಲಿ ಶಾಂತಿ ನೆಮ್ಮದಿ ದೊರೆತು ಸಮಾಜದಲ್ಲಿ ಶಾಂತಿ ನೆಲೆಸುತ್ತದೆ ಎಂದರು.

    ಜಿನ ಭಜನೆಗೆ  ಹೆಗಡೆ ದಂಪತಿಗಳು ಹೊಸ ರೂಪ ನೀಡಿದರು, ಇದರಿಂದ ಶಿಸ್ತು ಬದ್ಧ ಜೀವನ, ತಿಳುವಳಿಕೆ ಹೊಸ ರೂಪಗೊಂಡು, ಕೆಟ್ಟ ಚಟಗಳು ದೂರವಾಗಿವೆ.  ಈ ಹಿಂದೆ ಸಿನಿಮಾ ರಂಗಕ್ಕೆ   ಜೋತು ಬಿದ್ದ ಜನ ಈಗ  ಜಿನ ಭಜನೆಗೆ ಹೊತ್ತು ನೀಡುತ್ತಿರುವುದರ ಬಗ್ಗೆ ಸಂತಸ ವ್ಯಕ್ತಪಡಿಸಿದರು.

    ಜಿನ ಭಜನೆ ಎಂದು ಹೆಚ್ಚು ಪ್ರಭಾವ ಬೀರುತ್ತಿದ್ದು  ಯುಗಳ ಮುನಿಗಳ ಕಾರ್ಯ ಹಾಗೂ  ಜಿನಭಜನೆಗೆ ದಿ.ಯಶೋವರ್ಮಾ ರವರ ಸೇವೆ ಸ್ಮರಿಸಿದ್ದರು.

    ನಮ್ಮ ಜೀವನ ಜಾರೊ ಬಂಡೆ ಇದ್ದಂತೆ ಮೋಕ್ಷ ಎಂಬ ಸ್ಥಾನಕ್ಕೆ ಹಲವಾರು ಎಡರು -ತೊಡರುಗಳಿವೆ ಎಲ್ಲವನ್ನು ನಿಭಾಯಿಸಿಕೊಂಡು ಸಾಗಿದಾಗ ಯಶಸ್ಸು ಸಾಧ್ಯ ಎಂದ  ಅವರು, ಮನಸ್ಸು ಶುದ್ಧಿ ಇಲ್ಲದವರಿಗೆ ಶ್ರೀಗಂಧದ  ಸುಹಾಸನೆ ಫಲ ನೀಡಲಾರದು ಎಂದರು.

    ಭಾರತೀಯ  ಜೈನ್ ಮಿಲನ್  ವಲಯ –8  ಅಧ್ಯಕ್ಷ  ಕೆ. ಯುವರಾಜ್ ಭಂಡಾರಿ ಮಾತನಾಡಿ, ಈ ಹಿಂದೆ  ಮಿಲನ್ ಗಳು ಆರೋಗ್ಯ -ಸೇವಾ ವಲಯಕ್ಕೆ ಸೀಮಿತವಾಗಿತ್ತು ಇದರ ಕೇಂದ್ರ ಕಛೇರಿ ಬೆಂಗಳೂರು ಆಗಿತ್ತು, ಈಗ ಎಲ್ಲಾ ವಲಯಗಳಿಗೆ ಆದ್ಯತೆ ನೀಡಿದೆ  ಅಧಿಕಾರ ಮೈಸೂರಿಗೆ ನೀಡಿದೆ, ಎಲ್ಲೆಡೆ  ಜಿನ ಭಜನೆ ಯಶಸ್ವಿಯಾಗಿ ನಡೆಯುತ್ತಿದ್ದು, ಎಲ್ಲದಕ್ಕೂ ದೂರ ದೃಷ್ಟಿ, ಸಹಕಾರ ಮುಖ್ಯವಾಗಿದೆ .ಅನಿತಾ ಸುರೇಂದ್ರ ಕುಮಾರ್ ರವರ ದೂರ ದೃಷ್ಟಿ ಸಹಕಾರದಿಂದ  ಜಿನಭಜನೆ ಯಶಸ್ಸು ಕಂಡಿದೆ ಎಂದರು.

    ಜೈನ್ ಮಿಲನ  7 ವಿಭಾಗಗಳಲ್ಲಿ ಮಂಗಳೂರು ವಿಭಾಗ ವಿಶೇಷವಾದದ್ದು,  ಅದರದೇ ಆದ ಸಾಹಿತ್ಯ   ಜಿನಭಜನೆ ರಚನೆ,  ರಾಗ ಸಂಯೋಜನೆ ಬಗ್ಗೆ ಸಂತಸ ವ್ಯಕ್ತಪಡಿಸಿದರು .

    ತೀರ್ಪುಗಾರರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು ಜಿನಭಜನೆಯಿಂದ ಸಮಾಜ ಕಟ್ಟಲು ಸಾಧ್ಯ ಎಲ್ಲದಕ್ಕೂ ಒಗ್ಗಟ್ಟು ಅಗತ್ಯ, ಹೊಸ ಸಂಘಗಳ ಹುಟ್ಟಿಗಿಂತ ,ಹಳೇ ಸಂಘಗಳ ಪುನಶ್ಚೇತನ ಅಗತ್ಯ ಎಂದರು.

    ಕಾರ್ಯಕ್ರಮದ ಸಂಯೋಜಕೀ ಸೋನಿಯೋ ಯಶೋವರ್ಮ ಮಾತನಾಡಿ, ಜಿನಭಜನೆಯಿಂದ ಧರ್ಮ ಸಂಘಟನೆಗಳು ಪ್ರಭಾವನೆಯಾಗಲಿದೆ ಸಂಸ್ಕಾರ ಸಿಗಲಿದೆ, ಸ್ಪರ್ಧೆ ಪ್ರತಿಷ್ಠೆಗಿಂತ ಧರ್ಮ ಸಂಘಟನೆ ಅಗತ್ಯ ,ಇದು ಅನಿತಾ ರವರ ಪರಿಕಲ್ಪನೆಯಾಗಿದ್ದು, ಜಿನ ಭಜನೆ ನಿತ್ಯ ಕಾಯಕವಾಗಬೇಕು, ಯುವಜನತೆ ಈ ಬಗ್ಗೆ ಗಂಭೀರವಾಗಿ ಚಿಂತನೆ ಅಗತ್ಯ ಎಂದು ಅವರು,     “”ಮನಿ ಭಜನೆಗಿಂತ ಮನ ಭಜನೆ ಅಗತ್ಯ”.  ಎಂದು ಅವರು ,ಭಜನೆಯಿಂದ ಸಂಸ್ಕಾರವಂತ ಜೀವನದ ದೃಷ್ಟಿಕೋನಗಳು ಬದಲಾಗಲಿವೆ. ರೋಗನಿರೋಧಕ ಗಳಿಗೆ ಚೈತನ್ಯ  ಬರಲು ಸಾಧ್ಯ ಎಂದವರು, ಬೆಳ್ತಂಗಡಿ ಜೈನ್ ಮಿಲನ ಕಾರ್ಯವನ್ನು  ಪ್ರಶಂಸಿಸಿದರು.

    ಕಾರ್ಯಕ್ರಮದಲ್ಲಿ   ಡಾ. ಹೇಮಾವತಿ ವಿ. ಹೆಗಡೆ.  , ಡಿ. ಹರ್ಷೇಂದ್ರ ಹೆಗಡೆ  ಕುಲದೀಪ್ .ಎಂ . ಚೌಟ, ಮಂಜುಳಾ ಅಭಯ ಚಂದ್ರ  ಜೈನ  ,ಪ್ರಸನ್ನ ಕುಮಾರ್,  ಪುಷ್ಪರಾಜ್ ಜೈನ,   ಸುದರ್ಶನ್,    ರತ್ನಾಕರ್ ಜೈನ್   ಪ್ರವೀಣ್ ಕುಮಾರ್ ಇಂದ್ರ,  ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಯ  ಯುವರಾಜ್ ಜೈನ್, ಸುಮಂತ್ ಕುಮಾರ್ ಜೈನ್ ,ಸತೀಶ್ ಚಂದ್ರ ಜೈನ್, ತೀರ್ಥ ಕುಮಾರ್  ಜೈನ್, ಶ್ವೇತಾ ಜೈನ್ , ಶಾಂತಿ ಶ್ರೀ ಜೈನ ಮಹಿಳಾ ಸಂಘದ ತ್ರಿಶಾಲ ಉದಯ್ ಕುಮಾರ್ ಮಲ್ಲ,    ಶಶಿಕಲಾ ಹೆಗಡೆ ,ಸುಕುಮಾರ ಬಲ್ಲಾಳ,  ಶಶಿಕಿರಣ್ ಜೈನ ,ಜಯರಾಜ್ ಕಂಬಳಿ,ಮಂಗಳೂರು ವಿಭಾಗ ಮಟ್ಟದ ಅಧ್ಯಕ್ಷ ಸೋಮಶೇಖರ್ ಶೆಟ್ಟಿ,  ಬಂಟ್ವಾಳ ವಿಭಾಗದ ಎಮ್ .ಸುಭಾಷ್ ಚಂದ್ರ ಜೈನ್, ಬೆಳ್ತಂಗಡಿ  ಧೀಮತಿ ಮಹಿಳಾ ಸಮಾಜದ ಅಧ್ಯಕ್ಷ ರಜತಾ .ಪಿ .ಶೆಟ್ಟಿ ,ಕಾರ್ಯದರ್ಶಿ ದಿವ್ಯ,  ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಮಾಜಿ ಅಧ್ಯಕ್ಷರಾದ ಕೇಸರಿ ರತ್ನ ರಾಜಯ್ಯ, ಶ್ವೇತಾ ಜೈನ.   ಜಿತೇಂದ್ರ  ಜೈನ್ ,ರತನ್ ಕುಮಾರ್ ಜೈನ್, ಪ್ರಸನ್ನ.ಆರ್.ಹೆಗಡೆ, ಕಾರ್ಕಳ ಜೈನ್ ಮಿಲನ್ ಅಧ್ಯಕ್ಷ ವಿ .ಅಶೋಕ್ ಕುಮಾರ್ ಜೈನ್ ,ವಿ. ಆದಿರಾಜ್, ರಾಜಶ್ರೀ ಹೆಗಡೆ, ನಿರೀಕ್ಷಾ ಹೊಸ್ಮಾರ್, ರೇಖಾ ಸಂತೋಷ್, ಉದಯ್ ಕುಮಾರ್ ಕಂಬಳಿ, ದಿನೇಶ್ ಕುಮಾರ್,  ಮೂಡುಬಿದರೆ ಪುಷ್ಪರಾಜು ಜೈನ್, ರಾಕೇಶ್ ಜೈನ್, ಮಹಾವೀರ್ ,ಸಿದ್ಧಾಂತ ಕೀರ್ತಿ, ಪ್ರಮೋದ್ ಕುಮಾರ್, ಜಿತೇಂದ್ರ ಜೈನ್, ರತನ್ ಕುಮಾರ್ , ಪ್ರಸನ್ನ ಕುಮಾರ್,   ಮಂಗಳೂರು ವಿಭಾಗದ ಜೈನ್ ಮಿಲನ್ ತಂಡಗಳು ಶ್ರಾವಕ ಶ್ರಾವಕಿಯರು ವಿವಿಧ ಜೈನ ಸಂಘಟನೆಗಳು ಭಾಗವಹಿಸಿದ್ದವು. ಕಾರ್ಯಕ್ರಮದಲ್ಲಿ ಒಟ್ಟು 45 ತಂಡಗಳು ಭಾಗವಹಿಸಿದ್ದವು.

    ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಏಳಿಗೆಗೆ ಶ್ರಮಿಸಿದ ಬೆಳ್ತಂಗಡಿ  ಜೈನ್ ಮಿಲನ್ ಅಧ್ಯಕ್ಷ ನವೀನ್ ಕುಮಾರ್ ಜೈನ್,  ಕಾರ್ಯದರ್ಶಿ ಸಂಪತ್ ಕುಮಾರ್ ಹಾಗೂ  ಕೋಶಾಧಿಕಾರಿ ಲಿಖಿತ್ ಕುಮಾರ್ ರವರನ್ನು ಸನ್ಮಾನಿಸಲಾಯಿತು. ನವೀನ್ ಕುಮಾರ್ ಸ್ವಾಗತಿಸಿ ,ಪ್ರಾಸ್ತಾವಿಕ ನುಡಿಗಳ ನಾಡಿದರು.  ಸಂಪತ್ ಕುಮಾರ್ ವಂದಿಸಿದರು .

    ಜಿನ ಭಜನಾ ಸ್ಪರ್ಧೆ ಫಲಿತಾಂಶ:

    ಕಿರಿಯ ವಿಭಾಗದಲ್ಲಿ ತೀರ್ಪುಗಾರರಾಗಿ

    ಕಾವ್ಯ ನಿಶ್ಚಯ ಬೆಂಗಳೂರು ,

    ಭಾರತಿ ಛಬ್ಬಿಸ್ ಶಿಗ್ಗಾವಿ

    ,ಚಿನ್ಮಯ್ ಭಟ್.

     

    ಕಿರಿಯರ ವಿಭಾಗದಲ್ಲಿ ವಿಜೇತ ತಂಡಗಳು:

    ಕ್ರಮವಾಗಿ

    ಸೌಮ್ಯಕ್ ತಂಡ ಬಂಟ್ವಾಳ.

    ಕನಕ ಮಂಜರಿ  ಹೊಸ್ಮರು.

    ಚಾರು ತಂಡ ಮೂಡುಬಿದರೆ

    ಸಮಾಧಾನಕರ  ಬಹುಮಾನ

    ಸಪ್ತಸ್ವರ ತಂಡ .

    ಆದಿನಾಥ ತಂಡ .

    ಹರ್ಷಿಧ ತಂಡ

     

    ಹಿರಿಯರ ವಿಭಾಗದಲ್ಲಿ ತೀರ್ಪುಗಾರರು:

    ನವೀನ್ ಜಾಂಬಳೆ .

    ನಿಶ್ಚಯ್ ಮಂಡ್ಯ .

    ಉಷಾ ಹೆಬ್ಬಾರ್.

     

    ಹಿರಿಯರ ವಿಭಾಗದಲ್ಲಿ  ವಿಜೇತ ತಂಡಗಳು:

    ಬ್ರಾಹ್ಮೀ  ತಂಡ ಮೂಡಬಿದರೆ

    ಪರಶು ಶ್ರೀ ಭಜನಾ ತಂಡ ಪುತ್ತೂರು

    ವಿಧಿಶ ತಂಡ

    ಸಮಾಧಾನಕರ ಬಹುಮಾನ ತಂಡಗಳು:

    ಅನಂತ ಶ್ರೀ ಭಜನಾ ತಂಡ ಭಜಗೋಳಿ

    ಬಾಹುಬಲಿ ಭಜನಾ ತಂಡ.

    ಶುಕ್ಲಾ ಭಜನಾ ತಂಡ .

    ರತ್ನಾ ತ್ರಯ ಭಜನಾ ತಂಡ .

    ಮಹಾಕವಿ ರತ್ನಾಕರ ವರ್ಣಿ ತಂಡ ಮೂಡಬಿದರೆ.

    ವಿಶೇಷ ಬಹುಮಾನವನ್ನು ಸುವರ್ಣ ತಂಡವಾಗಿ ಮೂಡುಬಿದ್ರೆಯ” ದವಳ “ತಂಡವು ಆಯ್ಕೆಯಾಗಿದೆ.

    ವರದಿ: ಜೆ. ರಂಗನಾಥ- ತುಮಕೂರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಪಿಡಿಓಗೆ 7 ವರ್ಷ ಜೈಲು ಶಿಕ್ಷೆ: ಸುಳ್ಳು ಸಾಕ್ಷಿ ನುಡಿದ ರೈತನ ವಿರುದ್ಧವೂ ಕೇಸ್!

    April 16, 2026

    ಬೆಂಗಳೂರು: ಹೆತ್ತ ತಾಯಿಯನ್ನೇ ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಂದ ಪಾಪಿ ಮಗ!

    April 16, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ರಾಜ್ಯದಲ್ಲಿ ಮತ್ತೆ ದುಬಾರಿಯಾಗಲಿದೆಯೇ ಮದ್ಯ?

    April 19, 2026

    ಬೆಂಗಳೂರು: ಕರ್ನಾಟಕದ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ನೀಡಲು ಮುಂದಾಗಿದೆ. ಶೀಘ್ರದಲ್ಲೇ ಮದ್ಯದ ಬೆಲೆಯಲ್ಲಿ ಶೇಕಡಾ 20 ರಷ್ಟು…

    ಕೊರಟಗೆರೆ: ಹಳೇ ದ್ವೇಷಕ್ಕೆ ಮನೆ ಮುಂದಿನ ವಾಹನಗಳಿಗೆ ಬೆಂಕಿ ಹಚ್ಚಿದ್ದ ವೈದ್ಯನ ಬಂಧನ

    April 19, 2026

    ಚಿರತೆಯಿಂದ ಅತ್ತೆಯನ್ನು ರಕ್ಷಿಸಿದ ಸೊಸೆ ಸುಜಾತಾಗೆ ‘ಕಿತ್ತೂರು ರಾಣಿ ಚೆನ್ನಮ್ಮ’ ಪ್ರಶಸ್ತಿ

    April 19, 2026

    ಜನಗಣತಿ ಆ್ಯಪ್ ತಲೆನೋವು: ತುಮಕೂರಿನಲ್ಲಿ ಶಿಕ್ಷಕರ ಹೈರಾಣು!

    April 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.