ಪಾವಗಡ: ತಾಲ್ಲೂಕಿನ ಮೀನಕುಂಟನಹಳ್ಳಿ ಯಲ್ಲಿ ಆಯೋಜಿಸಲಾಗಿದ್ದ ನಾಗಲಮಡಿಕೆ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್ ನ್ನು ಸಮಾಜ ಸೇವಕರಾದ ನಾಗೇಂದ್ರ ಕುಮಾರ್ ಉದ್ಘಾಟಿಸಿದರು.
ಪಂದ್ಯಾಟದ ಬಳಿಕ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ಯುವಕರು ಕ್ರೀಡೆ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಕ್ರೀಡೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಸ್ಪೂರ್ತಿದಾಯಕ ಮಾತುಗಳನ್ನಾಡಿದರು.
ಈ ಸಂದರ್ಭದಲ್ಲಿ ಎಂ.ಕೆ. ನಾರಾಯಣಪ್ಪ, ನರಸಿಂಹ ರೆಡ್ಡಿ, ಶಿವಕುಮಾರ್, ಸುಭಾರೆಡ್ಡಿ, ಜಯಸಿಂಹ, ನೇರಳೆ ಕುಂಟೆ ನಾಗೇಂದ್ರಕುಮಾರ್ ಅಭಿಮಾನ ಬಳಗದ ಅಧ್ಯಕ್ಷ ಕಿರಣ್ ರವಿ, ಅಶೋಕ್ ಲಿಖಿತ್ ಬಾಬು ರಾಕೇಶ್ ಮತ್ತಿತರರು ಭಾಗಿಯಾಗಿದ್ದರು.
ವರದಿ: ನಂದೀಶ್ ನಾಯ್ಕ ಪಿ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy