nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ

    June 13, 2026

    ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ

    June 13, 2026

    ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ

    June 13, 2026
    Facebook Twitter Instagram
    ಟ್ರೆಂಡಿಂಗ್
    • ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ
    • ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ
    • ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ
    • ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ
    • ತುಮಕೂರು:  ಜೂ.14ರಂದು  ಆರೋಗ್ಯ, ಕಣ್ಣಿನ ತಪಾಸಣೆ
    • ತುಮಕೂರು: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಕೆಪಿಟಿಸಿಎಲ್ ಗೆ ಬೇಕಾದ ಭೂಮಿ ಖರೀದಿಗೆ ಕ್ರಮ: ಜಿಲ್ಲಾಧಿಕಾರಿ
    • ಹೇಮಾವತಿ ಎಕ್ಸ್‌’ಪ್ರೆಸ್ ಕೆನಾಲ್ ಯೋಜನೆ ಸ್ಥಗಿತಗೊಳಿಸಿ: ಸರ್ಕಾರಕ್ಕೆ ಶಾಸಕ ಜ್ಯೋತಿಗಣೇಶ್ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು: ಆದಿಕರ್ನಾಟಕ ಸಮುದಾಯ ಮುಖಂಡರಿಗೆ ಸೂಕ್ತ ಸ್ಥಾನಮಾನ ಕಲ್ಪಿಸಿಕೊಡಲು ಮನವಿ
    ತುಮಕೂರು November 27, 2024

    ಸರಗೂರು: ಆದಿಕರ್ನಾಟಕ ಸಮುದಾಯ ಮುಖಂಡರಿಗೆ ಸೂಕ್ತ ಸ್ಥಾನಮಾನ ಕಲ್ಪಿಸಿಕೊಡಲು ಮನವಿ

    By adminNovember 27, 2024No Comments2 Mins Read
    adinkarnataka

    ಹೆಚ್.ಡಿ.ಕೋಟೆ: ವಿಧಾನಸಭಾ ಕ್ಷೇತ್ರದ ಪರಿಶಿಷ್ಟ ಜಾತಿಯ ಆದಿಕರ್ನಾಟಕ ಸಮುದಾಯದ ಹಿತಚಿಂತನ ಸಭೆಯನ್ನು ಪಟ್ಟಣದ ಶಾದಿಮಹಲ್ ನಲ್ಲಿ ಕ್ಷೇತ್ರದ ಸಮುದಾಯದ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಮ್ಮುಖದಲ್ಲಿ ಹಮ್ಮಿಕೊಳ್ಳಲಾಗಿತ್ತು.

    ಈ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಡಾ.ಎಸ್.ಮರಿದೇವಯ್ಯ ಮಾತನಾಡಿ, ಹೆಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿಯ ಆದಿಕರ್ನಾಟಕ ಸಮುದಾಯದ ಮುಖಂಡರು ಒಗ್ಗಟ್ಟಿನಿಂದ ಪಕ್ಷದ ಸಂಘಟನೆ ಮಾಡಬೇಕು, ನಮ್ಮ ಸಮಾಜ ಕ್ಷೇತ್ರದಲ್ಲಿ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿದೆ, ಹಾಗೆಯೇ ಸಮುದಾಯವು1952ರಿಂದ 2024ರವರೆಗೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿಕೊಂಡು ಬರುತ್ತಿದ್ದೇವೆ. ಈ ನಿಟ್ಟಿನಲ್ಲಿ ತಾಲ್ಲೂಕಿನಲ್ಲಿ ಎರಡನೇ ಬಾರಿಗೆ ಕಾಂಗ್ರೆಸ್ ಶಾಸಕರನ್ನು ಆಯ್ಕೆ ಮಾಡಲಾಗಿದೆ. ಪ್ರತಿ ಗ್ರಾಮಗಳಲ್ಲೂ ನಮ್ಮ ಸಮಾಜ ಶೇಕಡ 90 ಹೆಚ್ಚು ಮತದಾನವನ್ನು ಮಾಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದೆ ಹಾಗೂ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಶ್ರಮಿಸಿದ್ದೇವೆ, ಸುಮಾರು 72 ವರ್ಷಗಳಿಂದ ಹೆಚ್.ಡಿ.ಕೋಟೆ ತಾಲೂಕಿನ ಆದಿಕರ್ನಾಟಕ ಸಮಾಜಕ್ಕೆ ಕಾಂಗ್ರೆಸ್ ಪಕ್ಷ ಎಂಎಲ್ ಎ ಎಂ ಪಿ ಎಂಎಲ್ಸಿ ಟಿಕೆಟ್ ನೀಡಿರುವುದಿಲ್ಲ, ಹಾಗೆಯೇ ನಿಗಮ ಮಂಡಳಿಯ ಅಧ್ಯಕ್ಷರು ಸಹ ಇಲ್ಲಿವರೆಗೂ ನಮ್ಮ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷದಿಂದ ದೊರಕಿರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.


    Provided by
    Provided by

    ಹಾಗಾಗಿ ನಮ್ಮ ಸಮುದಾಯದ ಎಳ್ಗೆಗಾಗಿ ಬಲಗೈ ಸಮುದಾಯದ ನಮ್ಮ ಮುಖಂಡರಿಗೆ ಸರ್ಕಾರದ ವಿಶೇಷ ಘಟಕ ಯೋಜನೆಗಳ ಮೂಲಕ ಸರ್ಕಾರಿ ಸವಲತ್ತು ಮತ್ತು ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು, ಹಾಗೆಯೇ ಸಮುದಾಯದ ಹಿತ ಚಿಂತನೆಗಾಗಿ ದುಡಿಯುವ ಪ್ರಾಮಾಣಿಕ ವ್ಯಕ್ತಿಗಳಿಗೆ ಸರ್ಕಾರದಲ್ಲಿ ಅಧಿಕಾರ ಮತ್ತು ಸ್ಥಾನಮಾನಗಳನ್ನು ಕಲ್ಪಿಸಿ ಕೊಡಬೇಕೆಂದು ಸಂಸದರು ಹಾಗೂ ಶಾಸಕರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲು ಈ ದಿನ ಸಮುದಾಯದ ಮುಖಂಡರು ಮತ್ತು ಕಾರ್ಯಕರ್ತರ ಸಮ್ಮುಖದಲ್ಲಿ ಈ ಹಿತ ಚಿಂತನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

    ಸಭೆಯಲ್ಲಿ ತಾಲೂಕಿನ ವಿವಿಧ ಗ್ರಾಮಗಳಿಂದ ಬಂದಿದ್ದಂತ 300ಕ್ಕೂ ಹೆಚ್ಚು ಮುಖಂಡರು ಮತ್ತು ಕಾರ್ಯಕರ್ತರು ತಮ್ಮ ಅಭಿಪ್ರಾಯ ಮತ್ತು ಸಲಹೆ ಸೂಚನೆಗಳನ್ನು ಸಭೆಯಲ್ಲಿ ತಿಳಿಸಿದರು.

    ಅನಂತರ ಆದಿಕರ್ನಾಟಕ ಮಹಾಸಭಾ ಅಧ್ಯಕ್ಷ ಹೆಚ್.ಸಿ.ನರಸಿಂಹಮೂರ್ತಿ ಮಾತನಾಡಿ, ತಾಲ್ಲೂಕಿನಲ್ಲಿ ಪರಿಶಿಷ್ಟ ಜಾತಿಯ ಬಲಗೈ ಸಮುದಾಯದ ಒಬ್ಬರಿಗೆ ವಿಧಾನ ಪರಿಷತ್ ಸ್ಥಾನಮಾನ, ರಾಜ್ಯದ ನಿಗಮ ಮಂಡಳಿಗಳಲ್ಲಿ ಸ್ಥಾನಮಾನ, ರಾಜ್ಯಮಟ್ಟದ ನಿರ್ದೇಶಕರ ಸ್ಥಾನಮಾನ ಮತ್ತು ಕೆಪಿಸಿಸಿಯಲ್ಲಿ ಉನ್ನತ ಸ್ಥಾನಮಾನಗಳನ್ನು ಸಮುದಾಯದ ಮುಖಂಡರಿಗೆ ಕಲ್ಪಿಸಿ ಕೊಡುವಂತೆ ಈ ಸಭೆಯಲ್ಲಿ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ನಮ್ಮ ಬೇಡಿಕೆಗಳ ಈಡೇರಿಕೆಗಾಗಿ ಕ್ಷೇತ್ರದ ಶಾಸಕರು, ಸಂಸದರು, ಸಚಿವರು ಮತ್ತು ರಾಜ್ಯದ ಮುಖ್ಯಮಂತ್ರಿಗಳಲ್ಲಿ ನಮ್ಮ ಸಮುದಾಯವು ಒಕ್ಕೊರಲಿನಿಂದ ಮನವಿ ಮಾಡಲಾಗುವುದೆಂದು ತಿಳಿಸಿದರು.

    ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಭಾಗ್ಯಲಕ್ಷ್ಮಿ ಅವರು ಮಾತನಾಡಿ, ತಾಲ್ಲೂಕಿನಲ್ಲಿ ನಮ್ಮ ಬಲಗೈ ಸಮುದಾಯವು ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿದೆ ಆದರೆ ಅಧಿಕಾರ ಸ್ಥಾನಮಾನ ಪಡೆಯುವಲ್ಲಿ ಬಹಳ ವಿರಳವಾಗಿದೆ, ಹಾಗಾಗಿ ಸಮುದಾಯದ ಬಂಧುಗಳು ಮತ್ತು ಮುಖಂಡರು ತಮ್ಮ ಸ್ವಾರ್ಥ ಚಿಂತನೆಗಳನ್ನು ಬಿಟ್ಟು ಸಮುದಾಯದ ಏಳಿಗೆಗಾಗಿ ಅಧಿಕಾರ ಮತ್ತು ಸ್ಥಾನಮಾನಗಳನ್ನು ಪಡೆಯಲು ಸಮುದಾಯವು ಒಗ್ಗೂಡಬೇಕಾಗಿದೆ ಎಂದರು.

    ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಹೆಚ್.ಸಿ.ಮಂಜುನಾಥ್ ಮಾತನಾಡಿ, ಕಾಂಗ್ರೆಸ್ ಪಕ್ಷವು ತಾಲೂಕಿನಲ್ಲಿ ನಮ್ಮ ಸಮುದಾಯವನ್ನು ಕಡೆಗಣಿಸಕೂಡದು, ನಾವೆಲ್ಲರೂ ಕೂಡ ಒಗ್ಗಟ್ಟಿನಿಂದ ಸೂಕ್ತ ಸ್ಥಾನಮಾನಗಳನ್ನು ಕೇಳುವ ಉದ್ದೇಶದಿಂದ ಈ ಒಂದು ಸಭೆಯಲ್ಲಿ ಭಾಗವಹಿಸಿದ್ದೇವೆ, ಕಾಂಗ್ರೆಸ್ ಪಕ್ಷದಲ್ಲಿರುವ ನಮ್ಮ ಸಮುದಾಯದ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನಗಳನ್ನು ಕೂಡಲೇ ಕಲ್ಪಿಸಿ ಕೊಡಬೇಕೆಂದು ನಾವೆಲ್ಲರೂ ಸಂಸದರು, ಸಚಿವರು ಹಾಗೂ ಶಾಸಕರನ್ನು ಒತ್ತಾಯಿಸಬೇಕೆಂದು ಮನವಿ ಮಾಡಿದರು.

    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಹೆಚ್.ಸಿ.ಮಂಜುನಾಥ್, ಭಾಗ್ಯಲಕ್ಷ್ಮಿ ನಿಂಗರಾಜು, ಪುರಸಭೆ ಸದಸ್ಯ ನರಸಿಂಹಮೂರ್ತಿ, ಸಂಶೋಧಕರ ಸಂಘದ ರಾಜ್ಯಾಧ್ಯಕ್ಷ ಡಾ.ಮರಿದೇವಯ್ಯ, ಅಕ್ರಮ ಸಕ್ರಮ ಸಮಿತಿ ಸದಸ್ಯ ಬಾಲಯ್ಯ, ಸಮುದಾಯದ ಮುಖಂಡರಾದ ಸರಗೂರು ಶಿವಣ್ಣ, ಚಾ.ನಂಜುಂಡಮೂರ್ತಿ, ಭಾನುಮತಿ, ಎಪಿಎಂಸಿ ಸಿದ್ದರಾಜು, ಬೆಟ್ಟಯ್ಯ, ಮದ್ದುಮಲ್ಲಯ್ಯ, ಹೈಕೋರ್ಟಿಗೆ ಮಲ್ಲೇಶ್, ಸಿದ್ದರಾಜು ಹೂವಿನಕೋಳ, ವನಸಿರಿ ಶಂಕರ್, ಲಾಯರ್ ಶಿವರಾಜು, ಲೋಕೇಶ್, ಶಿವಲಿಂಗಯ್ಯ, ಕಾಳಸ್ವಾಮಿ, ಮಲಾರ ಶಿವಣ್ಣ, ಚೆನ್ನೀಪುರ ನಾಗರಾಜ್, ಕೆಂಪರಾಜು, ಮಾನವಿಯಕ್ಕರ್, ಪ್ರಕಾಶ್ ಹಾದನೂರು, ಮುಂತಾದ ಮುಖಂಡರು ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ

    June 13, 2026

    ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ

    June 13, 2026

    ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ

    June 13, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ

    June 13, 2026

    ಕೊರಟಗೆರೆ: ವಿಧಾನಸಭಾ ಕ್ಷೇತ್ರದ ಮತದಾರರ ಆಶೀರ್ವಾದದಿಂದ 2ನೇ ಬಾರಿಗೆ ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಡಾ.ಜಿ.ಪರಮೇಶ್ವರ ರವರಿಗೆ ಕ್ಷೇತ್ರದ ಜನರಿಂದ…

    ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ

    June 13, 2026

    ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ

    June 13, 2026

    ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ

    June 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.