nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ

    June 13, 2026

    ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ

    June 13, 2026

    ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ

    June 13, 2026
    Facebook Twitter Instagram
    ಟ್ರೆಂಡಿಂಗ್
    • ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ
    • ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ
    • ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ
    • ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ
    • ತುಮಕೂರು:  ಜೂ.14ರಂದು  ಆರೋಗ್ಯ, ಕಣ್ಣಿನ ತಪಾಸಣೆ
    • ತುಮಕೂರು: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಕೆಪಿಟಿಸಿಎಲ್ ಗೆ ಬೇಕಾದ ಭೂಮಿ ಖರೀದಿಗೆ ಕ್ರಮ: ಜಿಲ್ಲಾಧಿಕಾರಿ
    • ಹೇಮಾವತಿ ಎಕ್ಸ್‌’ಪ್ರೆಸ್ ಕೆನಾಲ್ ಯೋಜನೆ ಸ್ಥಗಿತಗೊಳಿಸಿ: ಸರ್ಕಾರಕ್ಕೆ ಶಾಸಕ ಜ್ಯೋತಿಗಣೇಶ್ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಾಷಾ ಸ್ವಾಯತ್ತತೆಗೆ ಅಂಬೇಡ್ಕರ್‌ ಕೊಡುಗೆ ಅಪಾರ: ಮಂಜುನಾಥ್‌ ಹೆತ್ತೇನಹಳ್ಳಿ
    ತುಮಕೂರು December 2, 2024

    ಭಾಷಾ ಸ್ವಾಯತ್ತತೆಗೆ ಅಂಬೇಡ್ಕರ್‌ ಕೊಡುಗೆ ಅಪಾರ: ಮಂಜುನಾಥ್‌ ಹೆತ್ತೇನಹಳ್ಳಿ

    By adminDecember 2, 2024No Comments2 Mins Read
    kannadarajyothsava

    ಹೆಬ್ಬೂರು: ಕನ್ನಡಕ್ಕೂ ಮತ್ತು ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ ಗೆ ಒಂದು ನಂಟಿದೆ ಎಂದು ಮುಖಂಡರು ಹಾಗೂ ತುಮಕೂರು ವಿವಿ ಸಿಂಡಿಕೇಟ್ ಮಾಜಿ ಸದಸ್ಯರಾದ ಮಂಜುನಾಥ್ ಹೆತ್ತೇನಹಳ್ಳಿ ತಿಳಿಸಿದರು.

    ಹೋಬಳಿಯ ಅಂಬೇಡ್ಕರ್ ಆಟೋ ಚಾಲಕರ ಸಂಘದಿಂದ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾಷಾವಾರು ಪ್ರಾಂತ್ಯಗಳ ಸ್ವಾಯತ್ತತೆ ಬಗ್ಗೆ ಅಂದು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಸಂವಿಧಾನ ಸಭೆಯಲ್ಲಿ ಮಾತನಾಡಿದ್ದರು. ಇಲ್ಲದಿದ್ದರೆ ಇಂತಹ ಹೆಮ್ಮೆಯ ಕರುನಾಡನ್ನು ಕಟ್ಟಿಕೊಳ್ಳಲು ನಮಗೆ ಸಾಧ್ಯವಿರಲಿಲ್ಲ ಎಂದು ಅಭಿಪ್ರಾಯಪಟ್ಟರು.


    Provided by
    Provided by

    ಭಾರತ ಆಚಾರ, ವಿಚಾರ ಹಾಗೂ ಭಾಷೆಗಳಲ್ಲಿ ವೈವಿಧ್ಯತೆಯನ್ನು ಹೊಂದಿರುವ ದೇಶವೆಂದು ಅಂಬೇಡ್ಕರ್ ಅವರಿಗೆ ತಿಳಿದಿತ್ತು. ಇಂತಹ ವೈವಿಧ್ಯಮಯ ದೇಶ ಸಂವಿಧಾನದ ಮೂಲಕ ಮಾತ್ರವೇ ಏಕತೆ ಸಾಧಿಸಲು ಸಾಧ್ಯ ಎಂದು ಅವರಿಗೆ ತಿಳಿದಿತ್ತು ಎಂದು ಹೇಳಿದರು.

    ನಮ್ಮ ದೇಶವನ್ನು ಹೊರತು ಪಡಿಸಿ ಇಡೀ ಪ್ರಪಂಚ ಬಾಬಾ ಸಾಹೇಬರನ್ನು ನೋಡಿದ್ದು ಜ್ಞಾನದ ದೃಷ್ಟಿಯಿಂದ ಮಾತ್ರ. ಬಾಬಾ ಸಾಹೇಬರ ವಿವೇಚನೆಗೆ ಬರದಂತಹ ಯಾವ ವಿಷಯಗಳೂ ಈ ಪ್ರಪಂಚದಲ್ಲಿ ಇಲ್ಲ. ವರ್ಷದ 365 ದಿನಗಳು ಹಾಗೂ ದಿನದ 24 ಗಂಟೆಯೂ ಒಬ್ಬ ವ್ಯಕ್ತಿ ಬಗ್ಗೆ ನಿರಂತರ ಸಂಶೋಧನೆಗಳು ನಡೆಯುತ್ತಿದ್ದರೆ ಅದು ಡಾ.ಬಾಬಾ ಸಾಹೇಬ್ ಅವರ ಬಗ್ಗೆ ಮಾತ್ರ. ಇತಿಹಾಸ, ಅರ್ಥಶಾಸ್ತ್ರ, ಕಾನೂನುಶಾಸ್ತ್ರ ಹೀಗೆ ಎಲ್ಲ ವಿಷಯಗಳನ್ನು ಅಧ್ಯಯನ ಮಾಡಬೇಕೆಂದರೆ ಅಂಬೇಡ್ಕರ್ ಅವರನ್ನು ಓದಬೇಕು ಎಂದು ಸಲಹೆ ನೀಡಿದರು.

    ಕನ್ನಡ ಎಂಬ ಭಾಷೆಯೇ ಸುಂದರ. ನಮ್ಮ ಭಾಷೆಗೆ 2 ಸಾವಿರ ವರ್ಷಗಳ ಇತಿಹಾಸವಿದೆ. ಈಗ ಕನ್ನಡದ ಕುರಿತಾಗಿ ದೊರೆತಿರುವ ತಾಳುಗುಂದ ಶಾಸನವು ಹಲ್ಮಿಡಿ ಶಾಸನಕ್ಕೂ ಹಿಂದಿನ ಇನ್ನೂರು ವರ್ಷದ ಇತಿಹಾಸವನ್ನು ಹೇಳಲಿದೆ ಎಂದು ಭಾವಿಸುತ್ತೇನೆ. ಕನ್ನಡಕ್ಕೆ 8 ಜ್ಞಾನಪೀಠ ಪ್ರಶಸ್ತಿಗಳು ದೊರೆತಿವೆ ಎಂಬುದು ಕನ್ನಡ ಭಾಷೆಯ ಶ್ರೀಮಂತಿಕೆಯನ್ನು ಸಾರುತ್ತದೆ. ಮೂರನೇ ಶಾಸ್ತ್ರೀಯ ಸ್ಥಾನಮಾನವನ್ನೂ ಪಡೆದಿರುವ ಭಾಷೆ ಎಂದರೆ ಅದು ಕನ್ನಡ ಎಂದು ಹೇಳಲು ನನಗೆ ಹೆಮ್ಮೆ ಎನಿಸುತ್ತದೆ ಎಂದು ಹರ್ಷ ವ್ಯಕ್ತಪಡಿಸಿದರು.

    ಕನ್ನಡ ಎಂದರೆ ರೋಮಾಂಚನ. ಕವಿ ಪುಂಗವರ ಪ್ರಕಾರ ಬಹುತೇಕ ದಕ್ಷಿಣ ಭಾರತನ್ನು ಕನ್ನಡ ನಾಡು ಎಂದು ಕರೆಯಲಾಗುತ್ತಿತ್ತು. ಆಲೂರು ವೆಂಕಟರಾಯರ ನೇತೃತ್ವದಲ್ಲಿ ಕನ್ನಡದ ಏಕೀಕರಣ ಶುರುವಾಯಿತು. ಅವರೊಂದಿಗೆ ಹಲವಾರು ಮಹನೀಯರು ತಮ್ಮ ತನು, ಮನ, ಧನ ಅರ್ಪಿಸಿ ನಮಗೆ ಸುಂದರವಾದ ಕನ್ನಡ ದೇಶವನ್ನು ಕಟ್ಟಿಕೊಟ್ಟಿದ್ದಾರೆ ಎಂದು ಇತಿಹಾಸ ನೆನಪಿಸಿಕೊಂಡರು.

    ಈ ಸಂದರ್ಭದಲ್ಲಿ ಕರ್ನಾಟಕ ಕೃಷಿಕ್ ಸಮಾಜ ಕಾರ್ಯಾಧ್ಯಕ್ಷರು, ಚಿಕ್ಕಣ್ಣ ಸ್ವಾಮಿ ಧರ್ಮದರ್ಶಿಗಳು ಪೂಜ್ಯ ಪಾಪಣ್ಣ, ಕೆಂಪಮ್ಮ ದೇವಿಯ ಪ್ರಧಾನ ಅರ್ಚಕ ಹಾಗೂ ತಾಪಂ ಮಜಿ ಸದಸ್ಯರಾದ, ಕೆಂಪ ಹನುಮಣ್ಣ, ಮುಖಂಡರಾದ ಕೆ.ಬಿ.ರಾಜಣ್ಣ, ರಂಗಣ್ಣ, ಕೃಷ್ಣ, ದೇವರಾಜ್, ಶಂಕರ್, ಚಿಕ್ಕಣ್ಣ, ನರಸಪ್ಪ ಹಾಗೂ ಆಟೋ ಚಾಲಕರ ಸಂಘದ ಅಧ್ಯಕ್ಷರಾದ ಗಿರೀಶ್ ಹಾಗೂ ಮಲ್ಲೇಶ್, ಪದಾಧಿಕಾರಿಗಳು ವೇದಿಕೆಯಲ್ಲಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ

    June 13, 2026

    ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ

    June 13, 2026

    ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ

    June 13, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ

    June 13, 2026

    ಕೊರಟಗೆರೆ: ವಿಧಾನಸಭಾ ಕ್ಷೇತ್ರದ ಮತದಾರರ ಆಶೀರ್ವಾದದಿಂದ 2ನೇ ಬಾರಿಗೆ ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಡಾ.ಜಿ.ಪರಮೇಶ್ವರ ರವರಿಗೆ ಕ್ಷೇತ್ರದ ಜನರಿಂದ…

    ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ

    June 13, 2026

    ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ

    June 13, 2026

    ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ

    June 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.