nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ

    August 7, 2026

    ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ

    August 7, 2026

    ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ

    August 7, 2026
    Facebook Twitter Instagram
    ಟ್ರೆಂಡಿಂಗ್
    • ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ
    • ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ
    • ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
    • ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
    • ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
    • ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
    • ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
    • ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಿ.6ರಂದು ಸ್ವಸ್ತಿಶ್ರೀ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ನಿಷಿಧಿ ಮಂಟಪ ಲೋಕಾರ್ಪಣೆ
    ತುಮಕೂರು December 2, 2024

    ಡಿ.6ರಂದು ಸ್ವಸ್ತಿಶ್ರೀ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ನಿಷಿಧಿ ಮಂಟಪ ಲೋಕಾರ್ಪಣೆ

    By adminDecember 2, 2024No Comments3 Mins Read
    sharavana belagola

    ಶ್ರವಣಬೆಳಗೊಳ: ಶ್ರೀ ದಿಗಂಬರ ಜೈನ ಮಹಾಸಂಸ್ಥಾನ ಮಠದ ಹಿಂದಿನ ಪೀಠಾಧ್ಯಕ್ಷರಾಗಿದ್ದ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ನಿಷಿಧಿ ಮಂಟಪ ಲೋಕಾರ್ಪಣೆ ಸಮಾರಂಭವು ಡಿ.06 ರಂದು ನೆರವೇರಲಿದೆ ಎಂದು ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿಪಂಡಿತಚಾರ್ಯವರ್ಯ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳು ತಿಳಿಸಿದರು.

    ಪಟ್ಟಣದ ಶ್ರೀ ಕಾನಜಿಸ್ವಾಮಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾಧ್ಯಮದವರಿಗೆ ಮಾಹಿತಿ ನೀಡಿದರು.

    ಶ್ರೀಕ್ಷೇತ್ರ ಶ್ರವಣಬೆಳಗೊಳದ ಅಭಿವೃದ್ಧಿಯ ಹರಿಕಾರ, ಧವಲತ್ರಯ ಗ್ರಂಥಗಳ ಅನುವಾದ ಪ್ರಕಾಶನ ಪ್ರವರ್ತಕರು, ಪ್ರಾಕೃತ ಭಾಷಾ ಪ್ರಸಾರಕರು, ಜನಕಲ್ಯಾಣ ಚಿಂತಕರು, ಚಂದ್ರಗಿರಿ ಮಹೋತ್ಸವ ಪ್ರವರ್ತಕರು, ಕ್ಷೇತ್ರದಲ್ಲಿನ 40 ಬಸದಿಗಳ ಜೀರ್ಣೋದ್ಧಾರ ಮಾಡಿಸಿದ ತೀರ್ಥ ಸಂರಕ್ಷಕರು, ಪಂಥ ರಹಿತ ಸಂತ, ಪರಮಶ್ರುತಭಕ್ತ, ಶಿಕ್ಷಣ ಪ್ರೇಮಿ, ಉತ್ತರ ಮತ್ತು ದಕ್ಷಿಣ ಭಾರತದ ಜೈನ ಸಮಾಜದ ಸೇತುವೆಯಾಗಿದ್ದ ಪ್ರಾತಃಸ್ಮರಣೀಯ ಪರಮಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರು ಐದು ದಶಕಗಳ ಕಾಲ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕವಾಗಿ ಶ್ರೀಕ್ಷೇತ್ರ ಶ್ರವಣಬೆಳಗೊಳವನ್ನು ವಿಶ್ವಮನ್ನಣೆಗೊಳಿಸಿರುತ್ತಾರೆ.

    ಶ್ರೀಕ್ಷೇತ್ರ ಶ್ರವಣಬೆಳಗೊಳವು ತ್ಯಾಗ, ಮೈತ್ರಿ ಹಾಗೂ ಅಹಿಂಸೆಯ ಕ್ಷೇತ್ರವಾದ್ದು, ಸುಮಾರು 2300 ವರ್ಷಗಳ ಪೂರ್ವದಿಂದಲೂ ಜೈನ ಶ್ರಮಣರು ಆತ್ಮಕಲ್ಯಾಣ ಬಯಸಿ ಬಂದು ಶ್ರೀಕ್ಷೇತ್ರದಲ್ಲಿ ಮರಣದ ಮಹಾನವಮಿಯನ್ನು ಕಂಡಿದ್ದಾರೆ. ಶ್ರೀಕ್ಷೇತ್ರವು ಅಂತಿಮ ಶ್ರುತಕೇವಲಿಗಳೆನಿಸಿದ ಆಚಾರ್ಯಶ್ರೀ ಭದ್ರಬಾಹು ಸ್ವಾಮಿಗಳಿಂದ ಹಿಡಿದೂ ಪ.ಪೂ. ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮಿಗಳವರೆಗೂ ಎಲ್ಲಾ ಪೂಜ್ಯರುಗಳಿಂದ ಪರಮ ಪಾವಿತ್ರ್ಯವನ್ನು  ಹೊಂದಿದೆ. ಗಂಗರ ಸೇನಾಧಿಪತಿ ಚಾವುಂಡರಾಯನಿಂದ ಸ್ಥಾಪಿತವಾದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯು ಜಗತ್ತಿಗೆ ಶಾಂತಿಯ ಸಂಕೇತವಾಗಿದೆ. ಗಂಗ ವಂಶದ ರಾಜರಿಂದ ಒಳಗೊಂಡು ಮೈಸೂರು ಅರಸರವರೆಗೂ ರಾಜಮನ್ನಣೆಯನ್ನು ಪಡೆದು ಬೆಳೆದು ಬಂದ ಕ್ಷೇತ್ರವಾಗಿದೆ.

    ಅದೇ ಪರಂಪರೆಯಲ್ಲಿ ಕ್ರಿ.ಶ. 1970 ರಿಂದ 2023ರವರೆಗೆ ಶ್ರವಣಬೆಳಗೊಳ ದಕ್ಷಿಣಾಚಾರ್ಯ ಪೀಠದ ಪೀಠಾಧಿಪತಿಗಳಾಗಿ ಸಮಸ್ತ ಭಕ್ತ ಜನಗಳಿಗೆ ಗುರುಗಳಾಗಿದ್ದು, ಧರ್ಮದ ಪ್ರಭಾವನೆಗೈದು 2023ರ ಮಾ.23ರಂದು ಸಮಾಧಿ ಮರಣ ಹೊಂದಿದ ಮಹಾಸ್ವಾಮಿಗಳವರ ಅಂತ್ಯಕ್ರಿಯೆಯು  ಶ್ರೀಮಠದ ಪರಂಪರೆಯಂತೆ ಭಟ್ಟಾರಕ ಸ್ವಾಮಿಗಳವರ ಸಮಾಧಿ ಬೆಟ್ಟದಲ್ಲಿ ನೆರವೇರಿದ್ದು, ಆ ಸ್ಥಳದಲ್ಲಿ ಶಿಲಾಮಯ ನಿಷಿಧಿ ಮಂಟಪವನ್ನು ನಿರ್ಮಾಣ ಮಾಡಲಾಗಿದೆ.

    ಪೂಜ್ಯರ ಶ್ರೀಚರಣ ಪಾದುಕೆಗಳ ಪ್ರತಿಷ್ಠಾಪನೆಯೊಂದಿಗೆ ಸ್ಮರಣ ಶಾಸನ ಹಾಗೂ ನಿಷಿಧಿಮಂಟಪದ ಲೋಕಾರ್ಪಣೆಯು ಡಿ.6ರ ಶುಕ್ರವಾರ ಬೆಳಗ್ಗೆ ಗಂಟೆಗೆ  ಸಮಸ್ತ ಜೈನ ಮಠಗಳ ಸ್ವಸ್ತಿಶ್ರೀ ಭಟ್ಟಾರಕ ಸ್ವಾಮಿಗಳವರು ಹಾಗೂ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮಿಗಳವರು, ಶ್ರೀ ಪೇಜಾವರ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರು, ಶ್ರೀ ಸಿದ್ಧಗಂಗಾ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳವರು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಹಾಸನ ಶಾಖಾ ಮಠದ ಪರಮಪೂಜ್ಯ ಶ್ರೀ ಶ್ರೀ ಶಂಭುನಾಥ ಮಹಾಸ್ವಾಮಿಗಳವರು ದಿವ್ಯಸಾನಿಧ್ಯದೊಂದಿಗೆ, ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ. ವೀರೇಂದ್ರ ಹೆಗ್ಗಡೆಯವರ ಘನ ಉಪಸ್ಥಿತಿಯಲ್ಲಿ ಹಾಗೂ ಪರಮಪೂಜ್ಯ ಚಾರುಶ್ರೀಗಳವರಿಗೆ ಅತ್ಯಾಪ್ತರಾಗಿದ್ದ ಮುಖ್ಯಮಂತ್ರಿಗಳಾದ  ಸಿದ್ದರಾಮಯ್ಯನವರು ಲೋಕಾರ್ಪಣೆ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ ಎಂದರು.

    ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡರು, ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ವೀರಪ್ಪಮೊಯ್ಲಿ, ಸಚಿವರಾದ ಡಿ.ಸುಧಾಕರ್, ಕೆ.ಎನ್.ರಾಜಣ್ಣ ಶಾಸಕರಾದ ಸಿ.ಎನ್.ಬಾಲಕೃಷ್ಣ ಹೆಚ್‍.ಡಿ.ರೇವಣ್ಣ, ಅಭಯ್ ಪಾಟೀಲ್, ಅಭಯ್ ಚಂದ್ರ ಜೈನ್, ಮಾಜಿ ಶಾಸಕ ಸಂಜಯ್ ಪಾಟೀಲ್, ವಿಧಾನಪರಿಷತ್ ಮಾಜಿ ಸದಸ್ಯ ಎಂ.ಎ.ಗೋಪಾಲಸ್ವಾಮಿ,  ಗ್ರಾಮ ಪಂಚಾಯಿತಿ ಅಧ್ಯಕ್ಷ ಅಬ್ದುಲ್ ಪಾಷಾ ಭಾಗವಹಿಸಲಿದ್ದಾರೆ.

    ಸಹಸ್ರಾರು ಗುರುಭಕ್ತರ ಸಮ್ಮುಖದಲ್ಲಿ ಶ್ರೀ ಚರಣ ಪಾದುಕ ಸ್ಥಾಪನೆ, ಚರಣಾಭಿಷೇಕ, ಪುಷ್ಪವೃಷ್ಠಿ, ವಿನಯಾಂಜಲಿ ಹಾಗೂ ಶ್ರೀ ಅವರ ಜೀವನ ಚರಿತ್ರೆ ಒಳಗೊಂಡಿರುವ ಶಿಲಾ ಲೇಖಾ ಅನಾವರಣ ವಿವಿಧ ಧಾರ್ಮಿಕ ವಿಧಿ-ವಿಧಾನಗಳು ಮತ್ತು ಸಭಾ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ. ಸುಮಾರು ಹತ್ತು ಸಾವಿರ ಜನ ಭಕ್ತರು ಸೇರುವ ನಿರೀಕ್ಷೆ ಇದ್ದು  ಭಕ್ತಾದಿಗಳೆಲ್ಲರಿಗೂ ಮಾವಿನ ಸಸಿ ನೀಡಲಾಗುವುದು ಹಾಗೂ ಭಕ್ತರೆಲ್ಲರಿಗೂ ಊಟ ಉಪಚಾರದ ವ್ಯವಸ್ಥೆ ಮಾಡಲಾಗುವುದು ಎಂದರು.

    ಶ್ರೀಕ್ಷೇತ್ರ ಶ್ರವಣಬೆಳಗೊಳವು ವಿಶ್ವದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿದ್ದು, ಜೈನಕಾಶಿಯೆಂದೇ ಹೆಸರಾಗಿದೆ. ಪರಮಪೂಜ್ಯ ಶ್ರೀ ಸ್ವಾಮೀಜಿಯವರ ಕಲ್ಪನೆಯಂತೆ ಶ್ರೀಕ್ಷೇತ್ರವು ವಿಶ್ವಮಟ್ಟದ ಗಮನಸೆಳೆಯಲು ಧಾರ್ಮಿಕ, ಆಧ್ಯಾತ್ಮಿಕ, ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ಜನಕಲ್ಯಾಣ ಯೋಜನೆಗಳು ಸೇರಿದಂತೆ, ಶ್ರವಣಬೆಳಗೊಳ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ವಿವಿಧ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದ್ದು, ಹಂತಹಂತವಾಗಿ ಕಾರ್ಯರೂಪಕ್ಕೆ ಬರಲಿದೆ. ವಿಂಧ್ಯಗಿರಿ ಮತ್ತು ಚಂದ್ರಗಿರಿಯಲ್ಲಿ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕುಡಿಯುವ ನೀರು, ಪ್ರವಾಸಿ ಮಾಹಿತಿ ಸೇರಿದಂತೆ ಇತರೆ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಅಲ್ಲದೆ ವಿಂಧ್ಯಗಿರಿ ಮಹಾದ್ವಾರದ ಸಮೀಪದಲ್ಲಿ ನಿತ್ಯದಾಸೋಹದ ವ್ಯವಸ್ಥೆ ಮಾಡಲು ಚಿಂತನೆ ನಡೆಸಲಾಗಿದೆ ಹಾಗೂ ವಿಂಧ್ಯಗಿರಿ, ಚಂದ್ರಗಿರಿಯಂತೆ ಸ್ವಾಮೀಜಿಯವರ ನಿಷೇಧಿ ಮಂಟಪದ ಸಣ್ಣ ಬೆಟ್ಟವನ್ನು ಮೂರನೇ ಬೆಟ್ಟವಾಗಿ ಅಭಿವೃದ್ಧಿಗೊಳಿಸಲಾಗುವುದು ಎಂದು ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ:  ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ |  ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ

    August 5, 2026

    ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ

    August 4, 2026

    560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ

    August 4, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ

    August 7, 2026

    ಸರಗೂರು: ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರನ್ನು ರಾಜ್ಯ ಸಚಿವ ಸಂಪುಟದಿಂದ ಕೈಬಿಟ್ಟಿರುವುದನ್ನು ಖಂಡಿಸಿ ಸರಗೂರು ಪಟ್ಟಣದ ಪ್ರವಾಸಿ…

    ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ

    August 7, 2026

    ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ

    August 7, 2026

    ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ

    August 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.