nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು |  ಬೇಗೂರು ಡೇರಿ ಸೂಪರ್ ಸೀಡ್: ಪ್ರತಿಭಟನೆ

    October 4, 2025

    ದೇಶಕ್ಕೆ ಅನ್ನ ನೀಡುವ ರೈತನ ಯಾರು ಕೂಡ ಮರೆಯಬಾರದು: ವೀರಬಸವ ಮಹಾಸ್ವಾಮಿ

    October 4, 2025

    ನಕ್ಷತ್ರಗಳ ಬೆಳಕ ಹೊರತಾಗಿಯೂ ರಾತ್ರಿ ಆಕಾಶ ಕಪ್ಪೇಕೆ ?

    October 4, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು |  ಬೇಗೂರು ಡೇರಿ ಸೂಪರ್ ಸೀಡ್: ಪ್ರತಿಭಟನೆ
    • ದೇಶಕ್ಕೆ ಅನ್ನ ನೀಡುವ ರೈತನ ಯಾರು ಕೂಡ ಮರೆಯಬಾರದು: ವೀರಬಸವ ಮಹಾಸ್ವಾಮಿ
    • ನಕ್ಷತ್ರಗಳ ಬೆಳಕ ಹೊರತಾಗಿಯೂ ರಾತ್ರಿ ಆಕಾಶ ಕಪ್ಪೇಕೆ ?
    • ಜನ ಅಲೆಯುವುದನ್ನು ತಪ್ಪಿಸಲು ಪ್ರಜಾಸೌಧ: ಅನಿಲ್ ಚಿಕ್ಕಮಾದು
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಭವಾನಿ ಮಾತಾ ದೇವಿ ಮೆರವಣಿಗೆ
    • ಪಾವಗಡ | ಕೆ.ಟಿ.ಹಳ್ಳಿ ಗ್ರಾಮದಲ್ಲಿ ಕೆಂಪೇಗೌಡರ ಪುತ್ಥಳಿ ಅನಾವರಣ
    • ತಿಮ್ಮಾಪುರದಲ್ಲಿ ಶ್ರೀ ಬಾಲಾಜಿ ಮಠ ಪ್ರತಿಷ್ಠಾಪನೆ:  ನಾದಾಬ್ರಹ್ಮ ಯೋಗದಿಂದ ಆರೋಗ್ಯ ಕ್ಷೇಮದ ಸಂದೇಶ
    • ವೈ.ಎನ್.ಹೊಸಕೋಟೆ | ಕಸ್ತೂರಿ ತಿಲಕ ವಂಶಜರ ಜಂಬೂಸವಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರತಿ ಮನೆಯಲ್ಲೂ ಅಂಬೇಡ್ಕರ್ ಜನಿಸಬೇಕು : ಜಿಲ್ಲಾಧಿಕಾರಿ ಶುಭ ಕಲ್ಯಾಣ್
    ತುಮಕೂರು December 6, 2024

    ಪ್ರತಿ ಮನೆಯಲ್ಲೂ ಅಂಬೇಡ್ಕರ್ ಜನಿಸಬೇಕು : ಜಿಲ್ಲಾಧಿಕಾರಿ ಶುಭ ಕಲ್ಯಾಣ್

    By adminDecember 6, 2024No Comments2 Mins Read
    shubha kalyan

    ತುಮಕೂರು:  ವಿಶ್ವಕ್ಕೆ ಮಾನವೀಯತೆ ಮತ್ತು ಸಮಾನತೆಯ ಸಂದೇಶ  ಸಾರಿದ ಡಾ.ಬಿ.ಆರ್. ಅಂಬೇಡ್ಕರ್ ಅವರ ಆದರ್ಶ ಗುಣಗಳುಳ್ಳ  ವ್ಯಕ್ತಿಗಳು ಪ್ರತಿ ಮನೆಯಲ್ಲೂ ಜನಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಭಿಪ್ರಾಯ ವ್ಯಕ್ತಪಡಿಸಿದರು.

    ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ  ಸಭಾಂಗಣದಲ್ಲಿಂದು ಜರುಗಿದ  ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅತ್ಯಂತ ಕಡು ಬಡತನದಲ್ಲಿ ಹುಟ್ಟಿ  ಅಸ್ಪೃಶ್ಯತೆ, ಅಸಮಾನತೆ, ಮಹಿಳಾ ಅಸಮಾನತೆ ವಿರುದ್ಧ ಹೋರಾಡಿ ಸಮಸಮಾಜ ನಿರ್ಮಾಣ ಮಾಡಲು ತಮ್ಮ  ಜೀವನವನ್ನೇ  ಸವೆಸಿ ದನಿ ಇಲ್ಲದವರಿಗೆ ದನಿಯಾಗಿದ್ದ ಅಂಬೇಡ್ಕರ್ ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಎಂದು  ತಿಳಿಸಿದರು.


    Provided by
    Provided by
    Provided by

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಮಾತನಾಡಿ, ದಿನ-ದಲಿತರಿಗೆ,  ನೊಂದವರಿಗೆ ಪ್ರತ್ಯಕ್ಷ ದೇವರಾಗಿ ಕಾಣುವ ಮೂಲಕ ಅವರ ಪುಣ್ಯ ಸ್ಮರಣೆಯನ್ನು ಪರಿನಿರ್ವಾಣ ದಿನವೆಂದು ಆಚರಿಸಲಾಗುತ್ತದೆ.  ಏಷ್ಯದ ಉಪ ಖಂಡದಂತಿರುವ ನಮ್ಮ ದೇಶದಲ್ಲಿ ಹಲವು ವೈವಿಧ್ಯತೆಗಳನ್ನು ಏಕೀಕರಣಗೊಳಿಸಿ ಸಂವಿಧಾನದ ಮೂಲಕ ಎಲ್ಲರಿಗೂ ಸಮಾನ ಅವಕಾಶಗಳನ್ನು ನೀಡಿದ್ದಾರೆ.   ತಮ್ಮ  ಅನುಭವದ ರಸಗಟ್ಟಿಯಿಂದ ಸಂವಿಧಾನದಲ್ಲಿ ಮಾನವೀಯ ಮೌಲ್ಯಗಳಿಗೆ  ಒತ್ತು ನೀಡುವ ಮೂಲಕ ಪ್ರತಿ ಭಾರತೀಯ ಪ್ರಜೆಗೆ ಆತ್ಮ ವಿಶ್ವಾಸ ತಂದುಕೊಟ್ಟಿದ್ದಾರೆ.   ಸಾವಿರಾರು ವರ್ಷಗಳಿಂದ ತುಳಿತಕ್ಕೊಳಗಾದ ಮತ್ತು ಸಮಾಜದಿಂದ ಹಿಂದೆ ಉಳಿದುಕೊಂಡಿದ್ದ ಅನೇಕ ಸಮುದಾಯಗಳು ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದಿಂದ ಬದುಕನ್ನು ಕಟ್ಟಿಕೊಂಡಿವೆ ಎಂದು ತಿಳಿಸಿದರು.

    ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ ಮಾತನಾಡಿ, ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದಿಂದ ನಾವೆಲ್ಲರೂ ಸಮಾಜದಲ್ಲಿ ನೆಮ್ಮದಿಯಾಗಿ ಬದುಕುತ್ತಿದ್ದೇವೆ. ಪ್ರತಿಯೊಬ್ಬರಿಗೂ ಸಮಾನ ನ್ಯಾಯವನ್ನು ಒದಗಿಸುವುದು, ಎಲ್ಲರಿಗೂ ನ್ಯಾಯವನ್ನು ದೊರಕಿಸಿಕೊಡುವುದೇ ಸಂವಿಧಾನದ ಆಶಯವಾಗಿದೆ ಎಂದು ತಿಳಿಸಿದರು.

    ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಮಾತನಾಡಿ ತಲಾ ತಲಾಂತರದಿಂದ ಬಂದ ಅನಿಷ್ಟ ಪದ್ಧತಿಗಳನ್ನು ಸಮಾಜದಿಂದ  ಕಿತ್ತೊಗೆಯಲು ಇಡೀ ವ್ಯವಸ್ಥೆಯನ್ನೇ ಎದುರು ಹಾಕಿಕೊಳ್ಳುವ ಮೂಲಕ ಮನುಷ್ಯರನ್ನು ಮನುಷ್ಯರನ್ನಾಗಿ ಕಾಣುವಂತೆ ಮಾಡಿದವರು ಡಾ.ಬಿ.ಆರ್.ಅಂಬೇಡ್ಕರ್  ಭಾರತದ ಧಾರ್ಮಿಕ ವ್ಯವಸ್ಥೆ, ಜಾತಿ ವ್ಯವಸ್ಥೆ ಮತ್ತು ಪುರುಷ ಪ್ರಧಾನ ವ್ಯವಸ್ಥೆಯಿಂದ ಸ್ವತಂತ್ರವಾಗಿ ಉಸಿರಾಡಲು ಸಹ ಆಗದ ಸ್ಥಿತಿಯಲ್ಲಿ ಸಿಲುಕಿದ್ದ  ಜನರನ್ನು ಸಂಕೋಲೆಯಿಂದ ಬಿಡಿಸಿದ ಅವರ ಮಾನವೀಯತೆಯ  ವಿಚಾರಧಾರೆಗಳು ಪ್ರಪಂಚಕ್ಕೆ ಪಸರಿಸಿವೆ. ಸಂವಿಧಾನದ ಮೂಲಕ ಸರ್ವರಿಗೂ ಸಮಬಾಳು ಸಮಪಾಲು ಎಂಬ ನ್ಯಾಯವನ್ನು ಒದಗಿಸಿದ ಅವರನ್ನು ಒಂದು ಜಾತಿ, ಧರ್ಮಕ್ಕೆ ಸೀಮಿತಗೊಳಿಸದೆ, ಅವರ ವಿಚಾರಧಾರೆಗಳನ್ನು ಅರಿತು ಬಾಳಬೇಕು ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ನಾರಾಯಣಸ್ವಾಮಿ,  ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಭೂ ದಾಖಲೆಗಳ ಇಲಾಖೆ ಉಪನಿರ್ದೇಶಕ ನಿರಂಜನ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯಕ್ರಮ ನಿರೂಪಣಾಧಿಕಾರಿ ದಿನೇಶ್, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ದಲಿತ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು |  ಬೇಗೂರು ಡೇರಿ ಸೂಪರ್ ಸೀಡ್: ಪ್ರತಿಭಟನೆ

    October 4, 2025

    ತುಮಕೂರು | ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿಗೆ ಮುಸ್ಲಿಂ ಎಂಬ ಕಾರಣಕ್ಕೆ ಅವಮಾನ!

    October 4, 2025

    ತುರ್ತು ಪರಿಸ್ಥಿತಿಯಲ್ಲಿ ಸ್ವಯಂ ಸೇವಕರ ಬಲಿದಾನ ಮರೆಯಬಾರದು: ಆರ್ ಎಸ್ ಎಸ್ ಮುಖಂಡ ಉಮೇಶ್‌

    October 3, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು |  ಬೇಗೂರು ಡೇರಿ ಸೂಪರ್ ಸೀಡ್: ಪ್ರತಿಭಟನೆ

    October 4, 2025

    ತುಮಕೂರು: ಸಕಾರಣವಿಲ್ಲದೆ ಡೇರಿ ಆಡಳಿತ ಮಂಡಳಿ ವಜಾ ಮಾಡಿರುವುದನ್ನು ವಿರೋಧಿಸಿ ಕುಣಿಗಲ್ ತಾಲ್ಲೂಕು ಬೇಗೂರು ಹಾಲು ಉತ್ಪಾದಕರ ಸಹಕಾರ ಸಂಘದ…

    ದೇಶಕ್ಕೆ ಅನ್ನ ನೀಡುವ ರೈತನ ಯಾರು ಕೂಡ ಮರೆಯಬಾರದು: ವೀರಬಸವ ಮಹಾಸ್ವಾಮಿ

    October 4, 2025

    ನಕ್ಷತ್ರಗಳ ಬೆಳಕ ಹೊರತಾಗಿಯೂ ರಾತ್ರಿ ಆಕಾಶ ಕಪ್ಪೇಕೆ ?

    October 4, 2025

    ಜನ ಅಲೆಯುವುದನ್ನು ತಪ್ಪಿಸಲು ಪ್ರಜಾಸೌಧ: ಅನಿಲ್ ಚಿಕ್ಕಮಾದು

    October 4, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.