nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಮಲನಗರ, ತೋರಣ ಗ್ರಾಮದ ಸಂಪರ್ಕ ರಸ್ತೆ ದುರಸ್ತಿಗೆ ಹರಿದೇವ ಸಂಗನಾಳ ಆಗ್ರಹ

    September 18, 2025

    ಬೀದರ್ ನಲ್ಲಿ ತಲೆಕೆಳಗಾಗಿ ಹಾರಿದ ರಾಷ್ಟ್ರಧ್ವಜ

    September 18, 2025

    ವಿಶ್ವಕರ್ಮ ಸಮಾಜವು ಸಂಘಟಿತರಾದಾಗ ಯೋಜನೆಗಳ ಸದ್ಬಳಕೆಗೆ ಸಹಕಾರಿ: ತಹಶೀಲ್ದಾರ್ ಮೋಹನಕುಮಾರಿ ಸಲಹೆ

    September 18, 2025
    Facebook Twitter Instagram
    ಟ್ರೆಂಡಿಂಗ್
    • ಕಮಲನಗರ, ತೋರಣ ಗ್ರಾಮದ ಸಂಪರ್ಕ ರಸ್ತೆ ದುರಸ್ತಿಗೆ ಹರಿದೇವ ಸಂಗನಾಳ ಆಗ್ರಹ
    • ಬೀದರ್ ನಲ್ಲಿ ತಲೆಕೆಳಗಾಗಿ ಹಾರಿದ ರಾಷ್ಟ್ರಧ್ವಜ
    • ವಿಶ್ವಕರ್ಮ ಸಮಾಜವು ಸಂಘಟಿತರಾದಾಗ ಯೋಜನೆಗಳ ಸದ್ಬಳಕೆಗೆ ಸಹಕಾರಿ: ತಹಶೀಲ್ದಾರ್ ಮೋಹನಕುಮಾರಿ ಸಲಹೆ
    • ಎಂ.ಎನ್.ಭೀಮರಾಜ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ
    • ದನಗಳ ಅವಶೇಷ ಅರಣ್ಯ ಭೂಮಿಯಲ್ಲಿ ಎಸೆದ ಆರೋಪ: ಇಬ್ಬರ ಬಂಧನ
    • ಡಿಸೆಂಬರ್ 31 ರ ಮುನ್ನ ಹೊಸ ಚಿಕ್ಕೋಡಿ ಜಿಲ್ಲೆ ರಚನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
    • ತುಮಕೂರು: ಸಮೀಕ್ಷೆಯಿಂದ ಕೈ ಬಿಡಲು ಆಶಾ ಕಾರ್ಯಕರ್ತೆಯರಿಂದ ಆಗ್ರಹ
    • ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರಿನಲ್ಲಿ ಮಳೆಯಿಂದಾಗುವ ಹಾನಿ ತಡೆಗಟ್ಟಲು 5000 ಕೋಟಿ ರೂ. ಗಳ ಶಾಶ್ವತ ಯೋಜನೆ: ಸಚಿವ ಕೃಷ್ಣ ಭೈರೇಗೌಡ
    ರಾಜ್ಯ ಸುದ್ದಿ December 13, 2024

    ಬೆಂಗಳೂರಿನಲ್ಲಿ ಮಳೆಯಿಂದಾಗುವ ಹಾನಿ ತಡೆಗಟ್ಟಲು 5000 ಕೋಟಿ ರೂ. ಗಳ ಶಾಶ್ವತ ಯೋಜನೆ: ಸಚಿವ ಕೃಷ್ಣ ಭೈರೇಗೌಡ

    By adminDecember 13, 2024No Comments2 Mins Read
    krishne byre gowda

    ಬೆಳಗಾವಿ ಸುವರ್ಣಸೌಧ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶಗಳಲ್ಲಿ ಅತಿಹೆಚ್ಚು ಮಳೆಯಿಂದ ಪ್ರವಾಹ ರೀತಿಯಲ್ಲಿ ಉಂಟಾಗುವ ಅತಿವೃಷ್ಟಿಯ ಹಾನಿಯನ್ನು ತಡೆಗಟ್ಟಲು ಒಟ್ಟು 5,000 ಕೋಟಿ ರೂ. ಗಳ ಶಾಶ್ವತ ಯೋಜನೆಯನ್ನು ರೂಪಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದರು.

    ಪ್ರಸಕ್ತ ವರ್ಷ ರಾಜ್ಯದಲ್ಲಿ ಅಧಿಕ ಮಳೆಯಿಂದ ಉಂಟಾದ ಹಾನಿ ಕುರಿತಂತೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ಸರ್ಕಾರದ ಪರವಾಗಿ ಹೇಳಿಕೆ ನೀಡಿದರು.
    ಬೆಂಗಳೂರು ವ್ಯಾಪ್ತಿಯಲ್ಲಿ ಅತಿಹೆಚ್ಚು ಮಳೆ ಸುರಿದಾಗ ಪದೇ ಪದೇ ಹಾನಿಗೊಳಗಾಗುವ ಪ್ರದೇಶಗಳನ್ನು ಗುರುತಿಸಲಾಗಿದೆ. ಮಳೆ ಸುರಿದಂತಹ ಸಂದರ್ಭದಲ್ಲಿ ನೀರು ಸರಾಗವಾಗಿ ಹರಿಯುವಂತೆ ರಾಜಕಾಲುವೆ ಹಾಗೂ ವಸತಿ ಪ್ರದೇಶದಲ್ಲಿನ ಕಾಲುವೆಗಳನ್ನು ಪರಿಪಕ್ವವಾಗಿ ಸುಧಾರಿಸಲು ಕ್ರಮ ವಹಿಸಲಾಗಿದೆ. ಈ ವ್ಯಾಪ್ತಿಯಲ್ಲಿ 856 ಕಿ.ಮೀ. ರಾಜಕಾಲುವೆಗಳಿದ್ದು, ರಾಜಕಾಲುವೆ ಇಲ್ಲದ ಕಡೆ 200 ಕಿ.ಮೀ. ಕಿರು ಕಾಲುವೆಗಳು ಸೇರಿದಂತೆ ಒಟ್ಟು 1100 ಕಿ.ಮೀ. ಕಾಲುವೆಗಳಲ್ಲಿ ಹೆಚ್ಚಿನ ಮಳೆ ನೀರು ಸರಾಗವಾಗಿ ಹರಿಯುವಂತೆ ಮಾಡಲು ಶಾಶ್ವತ ಯೋಜನೆಯನ್ನು ರೂಪಿಸಲಾಗಿದೆ. ಈಗಾಗಲೆ 700 ಕಿ.ಮೀ. ಅಭಿವೃದ್ಧಿಪಡಿಸಲಾಗಿದ್ದು ಇನ್ನೂ 300 ಕಿ.ಮೀ. ರಾಜಕಾಲುವೆಯನ್ನು ಬರುವ ಒಂದು ವರ್ಷದ ಅವಧಿಯಲ್ಲಿ ಅಭಿವೃದ್ಧಿಪಡಿಸಲಾಗುವುದು, ಇದಕ್ಕಾಗಿ ಡಿಸಾಸ್ಟರ್ ಮಿಟಿಗೇಶನ್ ಫಂಡ್ ನಡಿ 240 ಕೋಟಿ ರೂ. ಒದಗಿಸಲಾಗುತ್ತಿದೆ ಎಂದರು.


    Provided by
    Provided by
    Provided by

    ರಾಜಕಾಲುವೆಗಳ ಅಭಿವೃದ್ದಿಗೆ 3 ಸಾವಿರ ಕೋಟಿ:

    ಬೆಂಗಳೂರಿನಲ್ಲಿ ಮಳೆ ಬಂದಾಗ ಪ್ರವಾಹ ತಡೆಗಟ್ಟುವ ನಿಟ್ಟಿನಲ್ಲಿ 5 ಸಾವಿರ ಕೋಟಿ ರೂ.ವೆಚ್ಚದಲ್ಲಿ ಶಾಶ್ವತ ಪರಿಹಾರ ಕ್ರಮಗಳನ್ನು ಸರಕಾರ ಕೈಗೊಳ್ಳುತ್ತಿದೆ.
    ಬೃಹತ್ ಬೆಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮಳೆಯಿಂದಾಗುವ ಹಾನಿ ತಡೆಗಟ್ಟಲು ಒಂದು ಬಾರಿಯ ಶಾಶ್ವತ ಕಾಮಗಾರಿ ಕೈಗೊಳ್ಳಲು ವಿಶ್ವಬ್ಯಾಂಕ್ ನೆರವು ಪಡೆಯುವ ನಿಟ್ಟಿನಲ್ಲಿ ಈಗಾಗಲೆ 10 ಸುತ್ತಿನ ಸಭೆಗಳನ್ನು ನಡೆಸಲಾಗಿದೆ.

    ವಿಶ್ವಬ್ಯಾಂಕ್ನಿAದ 3000 ಕೋಟಿ ರೂ. ಸಾಲ ಪಡೆದು, ಬಿಬಿಎಂಪಿ ಮೂಲಕ 2000 ಕೋಟಿ ರೂ. ವೆಚ್ಚದಲ್ಲಿ ಎಲ್ಲ ರಾಜಕಾಲುವೆಗಳನ್ನು ಅಭಿವೃದ್ಧಿಪಡಿಸಲು ಯೋಜಿಸಲಾಗಿದೆ.
    ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಯಾಗಿರುವ 110 ಹಳ್ಳಿಗಳಲ್ಲಿ ಒಳಚರಂಡಿ ವ್ಯವಸ್ಥೆ ಇರದ ಕಡೆ ಒಳಚರಂಡಿ ವ್ಯವಸ್ಥೆಯನ್ನು ಸಮರ್ಪಕವಾಗಿ ರೂಪಿಸಿ ಸದರಿ ಒಳಚರಂಡಿ ನೀರು ನೇರವಾಗಿ ಸೀವೆಜ್ ಟ್ರೀಟ್ಮೆಂಟ್ ವಾಟರ್ ಲೈನ್ಗೆ ಸೇರ್ಪಡೆಯಾಗುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದ್ದು, ಈ ಕಾರ್ಯಕ್ಕೆ ಬೆಂಗಳೂರು ಜಲಮಂಡಳಿಗೆ 01 ಸಾವಿರ ಕೋಟಿ ರೂ.ಗಳನ್ನು ಒದಗಿಸಲಾಗುತ್ತಿದೆ. ಇನ್ನಿತರೆ ಕಾಮಗಾರಿಗಳಿಗಾಗಿ 02 ಸಾವಿರ ಕೋಟಿ ರೂ. ಗಳನ್ನು ವೆಚ್ಚ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವರು ವಿವರಿಸಿದರು.
    ಇನ್ನುಳಿದ 2,000 ಕೋಟಿ ರೂ. ಗಳನ್ನು ರಾಜ್ಯ ಸರ್ಕಾರ ಭರಿಸಲು ನಿರ್ಧರಿಸಲಾಗಿದೆ.

    ಬೆಂಗಳೂರಿನಲ್ಲಿ ಮಳೆಯಿಂದ ಪದೇ ಪದೇ ಹಾನಿಗೀಡಾಗುವ ಪ್ರಮುಖ ರಸ್ತೆಗಳನ್ನು ಗುರುತಿಸಲಾಗಿದ್ದು, ಇಂತಹ ರಸ್ತೆಗಳನ್ನು ದುರಸ್ತಿಪಡಿಸಿ, ಡಾಂಬರೀಕರಣಗೊಳಿಸಲು 695 ಕೋಟಿ ರೂ. ಗಳ ಯೋಜನೆ ರೂಪಿಸಿ, ಸಚಿವ ಸಂಪುಟದ ಅನುಮೋದನೆ ಪಡೆದು ಈಗಾಗಲೆ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಒಟ್ಟಾರೆ ಬೆಂಗಳೂರಿನಲ್ಲಿ ಅತಿಯಾದ ಮಳೆಯಾದಾಗ ಹಾನಿಯಾಗುವುದನ್ನು ತಡೆಗಟ್ಟಲು ಸರ್ಕಾರ ಶಾಶ್ವತವಾದ ಯೋಜನೆಗಳನ್ನು ರೂಪಿಸಿದ್ದು, ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಸಚಿವ ಕೃಷ್ಣ ಭೈರೇಗೌಡ ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ

    September 17, 2025

    ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ

    September 17, 2025

    ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

    September 17, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕಮಲನಗರ, ತೋರಣ ಗ್ರಾಮದ ಸಂಪರ್ಕ ರಸ್ತೆ ದುರಸ್ತಿಗೆ ಹರಿದೇವ ಸಂಗನಾಳ ಆಗ್ರಹ

    September 18, 2025

    ಬೀದರ್: ಜಿಲ್ಲೆಯ ಕಮಲನಗರ ಹಾಗೂ ತೋರಣ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವಂತಹ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಅಧಿಕಾರಿಗಳು ದುರಸ್ತಿಗೆ ಮುಂದಾಗಬೇಕು ಎಂದು…

    ಬೀದರ್ ನಲ್ಲಿ ತಲೆಕೆಳಗಾಗಿ ಹಾರಿದ ರಾಷ್ಟ್ರಧ್ವಜ

    September 18, 2025

    ವಿಶ್ವಕರ್ಮ ಸಮಾಜವು ಸಂಘಟಿತರಾದಾಗ ಯೋಜನೆಗಳ ಸದ್ಬಳಕೆಗೆ ಸಹಕಾರಿ: ತಹಶೀಲ್ದಾರ್ ಮೋಹನಕುಮಾರಿ ಸಲಹೆ

    September 18, 2025

    ಎಂ.ಎನ್.ಭೀಮರಾಜ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

    September 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.