nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ

    August 7, 2026

    ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ

    August 7, 2026

    ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ

    August 7, 2026
    Facebook Twitter Instagram
    ಟ್ರೆಂಡಿಂಗ್
    • ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ
    • ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ
    • ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ
    • ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ
    • ರಸ್ತೆ ಗುಂಡಿ ತಪ್ಪಿಸಲು ಹೋಗಿ ಲಾರಿ ಡಿಕ್ಕಿ: ನವವಿವಾಹಿತೆ ದಾರುಣ ಸಾವು, ಸಾರ್ವಜನಿಕರ ತೀವ್ರ ಆಕ್ರೋಶ
    • ಸರಗೂರು: ಸಾಧಕ ಪ್ರಸನ್ನ ಕುಮಾರ್ ಅವರಿಗೆ ‘ಪಟ್ಟಣದ ಸ್ನೇಹಿತರು’ ಬಳಗದಿಂದ ಸನ್ಮಾನ
    • ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
    • ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕರ್ನಾಟಕ ರಾಜ್ಯದ ಕುರಿತು ಕನ್ನಡಿಗರಲ್ಲಿ ಸ್ವೀಕೃತ ಕಲ್ಪನೆಯಿದೆ: ಪ್ರೊ.ರಾಜೇಂದ್ರಚೆನ್ನಿ
    ತುಮಕೂರು December 14, 2024

    ಕರ್ನಾಟಕ ರಾಜ್ಯದ ಕುರಿತು ಕನ್ನಡಿಗರಲ್ಲಿ ಸ್ವೀಕೃತ ಕಲ್ಪನೆಯಿದೆ: ಪ್ರೊ.ರಾಜೇಂದ್ರಚೆನ್ನಿ

    By adminDecember 14, 2024No Comments2 Mins Read
    shishunala sharifa

    ತುಮಕೂರು: ಕರ್ನಾಟಕರಾಜ್ಯದಕುರಿತುಕನ್ನಡಿಗರಲ್ಲಿ ಸ್ವೀಕೃತ ಕಲ್ಪನೆಯಿದೆ. ಕವಿರಾಜ ಮಾರ್ಗದಲ್ಲಿ ಕನ್ನಡ ರಾಜ್ಯದ ಕುರಿತು, ಕನ್ನಡಿಗರ ಬಗ್ಗೆ ಉಲ್ಲೇಖವಿದ್ದರೂ ಕರ್ನಾಟಕ ಏಕೀಕರಣದ ನಂತರವೇ ಕನ್ನಡ ಸಮುದಾಯಗಳು ಒಂದೇ ಸೂರಿನಡಿ ನೆಲೆಕಂಡಿದ್ದುಎಂದು ಲೇಖಕ ಪ್ರೊ.ರಾಜೇಂದ್ರಚೆನ್ನಿ ತಿಳಿಸಿದರು.

    ತುಮಕೂರು ವಿಶ್ವವಿದ್ಯಾನಿಲಯಸಂತ ಶಿಶುನಾಳ ಶರೀಫಅಧ್ಯಯನ ಪೀಠವು ಶುಕ್ರವಾರ ಆಯೋಜಿಸಿದ್ದ ‘ಸ್ಟೇಟ್ ಮ್ಯಾಟರ್ಸ್: ಕನ್ನಡ ಸಬ್–ನ್ಯಾಷನಲಿಸಂಅಂಡ್ ಸ್ಟೇಟ್ಫಾರ್ಮೆಷನ್’ ಪುಸ್ತಕದಕುರಿತು ಮಾತನಾಡಿದರು.

    ಕರ್ನಾಟಕ ಏಕೀಕರಣಕ್ಕೂ ಮುನ್ನಕನ್ನಡ ಮಾತನಾಡುವ ಸಮುದಾಯಗಳು 30 ತುಂಡುಗಳಾಗಿದ್ದವು. ಸಮುದಾಯಗಳನ್ನು ತುಂಡರಿಸಿ ಬ್ರಿಟಿಷ್ ಸರ್ಕಾರ ಆಡಳಿತ ನಡೆಸುತ್ತಿತ್ತು. ಈ ನಡೆಯಿಂದ ಕನ್ನಡಿಗರು ಒಗ್ಗೂಡಿ ಬಾಳಲು ಸಾಧ್ಯವಾಗಿರಲಿಲ್ಲ. ಏಕೀಕರಣದ ಏಕರೂಪ ಚಳುವಳಿ ವಿರೋಧಾಭಾಸದ ವೈರುಧ್ಯಗಳಿಂದ ಕೂಡಿ ಕರ್ನಾಟಕ ರಾಜ್ಯವಾಯಿತು ಎಂದು ತಿಳಿಸಿದರು.

    ಒಕ್ಕಲಿಗರ ಪ್ರಾಬಲ್ಯ ಹೊಂದಿದ್ದಅಂದಿನ ಮೈಸೂರು ರಾಜ್ಯ ಏಕೀಕರಣವನ್ನು ವಿರೋಧಿಸಿತು. ಮೇಲ್ಜಾತಿಯವರ, ದಲಿತರ, ಇತರೆ ಸಮುದಾಯಗಳ ಭಾಗವಹಿಸುವಿಕೆ ಅನುಸಂಧಾನ ಮಾರ್ಗವನ್ನುಕಂಡಿತು. ಆಧುನಿಕ ಮುದ್ರಣ ಯಂತ್ರಗಳ ಸಹಾಯದಿಂದ ಬ್ರಿಟಿಷರು ಧಾರ್ಮಿಕ ವಲಯದಿಂದ ಪುಸ್ತಕಗಳನ್ನು ಜಾತ್ಯತೀತ ವಲಯಕ್ಕೆ ತಂದರು. ಕ್ರಿಶ್ಚಿಯನ್ ಮಿಷನರಿಗಳಲ್ಲಿ ಕನ್ನಡದ ಅರಿವನ್ನು ಮೂಡಿಸುವ ಕಾರ್ಯಗಳು ಚುರುಕುಗೊಂಡವು ಎಂದು ತಿಳಿಸಿದರು.

    ಕ್ರಿಶ್ಚಿಯನ್ ಮಿಷನರಿಗಳಲ್ಲಿ ಮತಾಂತರದ ಹೊರತಾಗಿಕನ್ನಡ ಭಾಷೆಯನ್ನು ಬೆಳೆಸುವ ಅರಿವಿನ ಕೆಲಸ ಪ್ರವೃತ್ತಿಯಾಯಿತು. ಆಲೂರು ವೆಂಕಟರಾವ್ ಅವರಿಗೆ ಕನ್ನಡ ಭಾಷೆಯ ಮೇಲಿದ್ದ ಉದಾರ ಮನೋಭಾವ, ಮಾಸ್ತಿ ವೆಂಕಟೇಶ ಅಯ್ಯಂಗಾರ್ ಅವರಿಗಿದ್ದ ಪ್ರಾಯೋಗಿಕ ಮನಸ್ಥಿತಿ, ಕುವೆಂಪು ಅವರ ಭಾಷಾ ಪ್ರಬುದ್ಧತೆ ಕನ್ನಡವನ್ನು ಶಿಖರಕ್ಕೇರಿಸಿತು ಎಂದರು.

    ಲೇಖಕ ಪ್ರೊ.ಚಂದನ್ ಗೌಡ ಪುಸ್ತಕದ ಕುರಿತು ಮಾತನಾಡಿ, ರಾಜ್ಯ ಮತ್ತು ಭಾಷೆಯ ಅಸ್ಮಿತೆ ಕುರಿತು ಗಂಭೀರವಾಗಿ ವಿಚಾರ ಮಾಡಬೇಕಿದೆ. ಬ್ರಿಟಿಷರು ತೊರೆದ ಪ್ರಾಂತ್ಯಗಳನ್ನು ಒಗ್ಗೂಡಿಸಿ ರಾಷ್ಟ್ರ ಮಾಡುವುದರಲ್ಲಿಎಷ್ಟರ ಮಟ್ಟಿಗೆ ಸಫಲರಾದೆವು ಎಂಬುದು ಪ್ರಶ್ನಾರ್ಥಕ. ರಾಜಕೀಯದಿಂದ ಸಮುದಾಯಗಳಲ್ಲಿ ಸಮಾನತೆ ಮಾಯವಾಗಿದೆ ಎಂದರು.

    ಕುವೆಂಪು ಅವರ ‘ಎಲ್ಲಾದರು ಇರು; ಎಂತಾದರು ಇರು; ಎಂದೆಂದಿಗು ನೀ ಕನ್ನಡವಾಗಿರು’, ‘ವಿಶ್ವಮಾನವ’ ಸಂದೇಶ ಈಗಿನ ಕಾಲಕ್ಕೆ ಎಷ್ಟು ಪ್ರಸ್ತುತವೆಂದು ಆಲೋಚಿಸುವ ಸಂದರ್ಭವಾಗಿದೆ. ಕನ್ನಡದ ರಾಷ್ಟ್ರೀಯತೆಯನ್ನು ಚಾರಿತ್ರಿಕವಾಗಿ ತೊರಿಸುವ ಅಧ್ಯಯನಗಳಿಗೆ ಕೊರತೆಯಿದೆ. ಕರ್ನಾಟಕ ರಾಜ್ಯ ಪೂರ್ವ ಸಿದ್ಧತೆಯಾಗಿರಲಿಲ್ಲವೆಂಬ ಸತ್ಯ ಈಗಲಾದರೂ ಅರಿಯಬೇಕಿದೆ ಎಂದು ತಿಳಿಸಿದರು.

    ಪ್ರಾಸ್ತಾವಿಕ ನುಡಿಗಳನ್ನಾಡಿದ ಸಂತ ಶಿಶುನಾಳ ಶರೀಫ ಅಧ್ಯಯನ ಪೀಠದ ನಿರ್ದೇಶಕ ಪ್ರೊ.ಎನ್.ಎಸ್. ಗುಂಡೂರ, ಅಧ್ಯಯನ ಪೀಠಗಳು ಕಾರ್ಯಪ್ರವೃತ್ತರಾಗಬೇಕು. ಅಧ್ಯಯನಶೀಲ ಚರ್ಚೆಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಬೇಕು. ಸಾಮಾಜಿಕ, ಸಾಂಸ್ಕೃತಿಕ, ಸಾಹಿತ್ಯದ ಕುರಿತು ವಿಚಾರ ಸಂಕಿರಣಗಳಾಗಬೇಕು. ಕನ್ನಡದ ಬೌದ್ಧಿಕ ಲೋಕಕ್ಕೆ ಅಧ್ಯಯನದ ಕೊರತೆಯಿದೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ:  ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ |  ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ

    August 5, 2026

    ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ

    August 4, 2026

    560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ

    August 4, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ

    August 7, 2026

    ಸರಗೂರು: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ…

    ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ

    August 7, 2026

    ಡಾ.ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ: ಸರಗೂರಿನಲ್ಲಿ ಅಧಿಕರ್ನಾಟಕ ಮಹಾಸಭಾ ಸಭೆ

    August 7, 2026

    ಸರಗೂರು: ಎಸ್.ಸಿ. ಮಹದೇವಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದಕ್ಕೆ ಆಕ್ರೋಶ — ಪ್ರತಿಭಟನೆಯ ಎಚ್ಚರಿಕೆ

    August 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.