nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ

    June 7, 2026

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ

    June 7, 2026
    Facebook Twitter Instagram
    ಟ್ರೆಂಡಿಂಗ್
    • ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
    • ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ
    • ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
    • ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
    • ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
    • ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
    • 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
    • ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೆಚ್ಚಿನ ಬಡ್ಡಿಯಾಸೆ ತೋರಿಸಿ ಬಡವರನ್ನು ವಂಚಿಸುವವರ ಸಂರಕ್ಷಣೆಗೆ ಕಾನೂನು : ವಿಧೇಯಕ ಅಂಗೀಕಾರ
    ರಾಜ್ಯ ಸುದ್ದಿ December 17, 2024

    ಹೆಚ್ಚಿನ ಬಡ್ಡಿಯಾಸೆ ತೋರಿಸಿ ಬಡವರನ್ನು ವಂಚಿಸುವವರ ಸಂರಕ್ಷಣೆಗೆ ಕಾನೂನು : ವಿಧೇಯಕ ಅಂಗೀಕಾರ

    By adminDecember 17, 2024No Comments2 Mins Read
    vidhana sabha

    ಬೆಳಗಾವಿ ಸುವರ್ಣಸೌಧ: ಬಡವರನ್ನು ಅತಿ ಹೆಚ್ಚಿನ ಬಡ್ಡಿ ನೀಡುವ ಆಸೆಯೊಡ್ಡಿ, ಠೇವಣಿ ಪಡೆದು, ನಂತರ ವಂಚಿಸುವ ಯತ್ನವನ್ನು ತಡೆಗಟ್ಟುವುದು ಹಾಗೂ ವಂಚಕರನ್ನು ಕಠಿಣವಾಗಿ ಶಿಕ್ಷಿಸುವ ನಿಟ್ಟಿನಲ್ಲಿ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ.

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ವಿಧಾನಸಭೆಯಲ್ಲಿ ಸೋಮವಾರ 2024 ನೇ ಸಾಲಿನ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ವಿಧೇಯಕವನ್ನು ಮಂಡಿಸಿದರು. ಬಡವರು, ಮಧ್ಯವರ್ಗದವರು, ಮತ್ತಿತರರು ಹಣಕಾಸು ವ್ಯವಹಾರಗಳಲ್ಲಿ ಆಸೆಗೆ ಬಲಿಯಾಗಿ ವಂಚನೆಗೆ ಒಳಗಾಗುವುದನ್ನು ತಡೆಗಟ್ಟಲು ಹಾಗೂ ವಂಚಕರನ್ನು ಶಿಕ್ಷಿಸುವ ನಿಟ್ಟಿನಲ್ಲಿ ವಿಧೇಯಕ ತರಲಾಗುತ್ತಿದೆ. ಈ ದಿಸೆಯಲ್ಲಿ ಆಯಾ ವಿಭಾಗದ ಉಪವಿಭಾಗಾಧಿಕಾರಿಗಳು ಸ್ವಯಂ ಪ್ರೇರಣೆಯಿಂದ ಪ್ರಕರಣ ದಾಖಲಿಸಿಕೊಂಡು, ಕಾನೂನು ಕ್ರಮ ಕೈಗೊಳ್ಳಲು ಹೆಚ್ಚಿನ ಅಧಿಕಾರ ನೀಡಲಾಗುತ್ತಿದೆ ಎಂದರು.


    Provided by
    Provided by

    ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಮಾತನಾಡಿ, 2003–04 ರಲ್ಲಿ ವಿನಿವಿಂಕ್ ಶಾಸ್ತ್ರಿ ಕೋಟ್ಯಾಂತರ ರೂ. ಗಳ ಠೇವಣಿ ಸಂಗ್ರಹಿಸಿ, ಜನರು ವಂಚನೆಗೊಳಗಾದಂತಹ ಪ್ರಕರಣದಲ್ಲಿ ಅನೇಕ ಅಮಾಯಕರು ಠೇವಣಿದಾರರು ವಂಚನೆಗೊಳಗಾಗಿದ್ದರು. ಹೀಗಾಗಿ 2004 ರಲ್ಲಿಯೇ ಇದರ ತಡೆಗೆ ಕಾನೂನನ್ನು ಜಾರಿಗೆ ತರಲಾಗಿತ್ತು. ಆದರೆ ಪಿರಮಿಡ್ ಸ್ಕೀಂ, ಸ್ಪಾಂಜ್ ಸ್ಕೀಮ್ ಮುಂತಾದ ವಂಚನೆ ಪ್ರಕರಣಗಳು ಕಾಲ ಬದಲಾದ ಹಾಗೆ ವಂಚನೆ ಸ್ವರೂಪ ಹಾಗೂ ವಂಚನೆಯ ವಿಧಾನ ಬದಲಾಗುತ್ತಿದ್ದು, ಕಾನೂನಿನಲ್ಲಿನ ಲೋಪಗಳನ್ನು ಸರಿಪಡಿಸಿ, ವಂಚಕರನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಕಾನೂನಿನಲ್ಲಿಯೂ ತಿದ್ದುಪಡಿ ತರಲಾಗುತ್ತಿದೆ. ಐಎಂಎಎ ನಂತಹ ಪ್ರಕರಣಗಳಲ್ಲಿ ವಂಚಕರನ್ನು ಹಿಡಿದು, ಪ್ರಕರಣಗಳು ಸೆಟಲ್ಮೆಂಟ್ ಆಗ್ತಾ ಇದೆಯೇ ಹೊರತು, ಬಾಧಿತರಿಗೆ ಸಮರ್ಪಕ ನ್ಯಾಯ ಒದಗಿವುದು ಕಷ್ಟಸಾಧ್ಯವಾಗಿದೆ. ಹೀಗಾಗಿ ಬಾಧಿತರಿಗೆ ಇನ್ನಷ್ಟು ಅನುಕೂಲ ತರಲು, ವಂಚನೆ ಪ್ರಕರಣಗಳಲ್ಲಿನ ಅನುಷ್ಠಾನಾಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡಿ, ನಷ್ಟಕ್ಕೆ ಒಳಗಾದ ಠೇವಣಿದಾರರಿಗೆ ಹಣ ವಾಪಸ್ ಕೊಡಿಸಲು ತಿದ್ದುಪಡಿ ತರಬೇಕಿದೆ. ಹೌಸಿಂಗ್ ಲೋನ್ಸ್, ಗೋಲ್ಡ್ ಲೋನ್ಸ್ ಮುಂತಾದ ಹೆಸರಿನಲ್ಲಿ ಕೆಲವೆಡೆ ವಂಚನೆ ನಡೆಯುವುದು ಕೂಡ ಗಮನಕ್ಕೆ ಬಂದಿದೆ. ಹೀಗಾಗಿ ಬಡವರು ವಂಚನೆಗೆ ಒಳಗಾಗುವುದನ್ನು ತಡೆಯಲು ಸಕ್ಷಮ ಪ್ರಾಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುವುದು, ಠೇವಣಿಗಳ ಹೊಣೆ ನಿರ್ಧರಣೆ, ಹಣಕಾಸು ಸಂಸ್ಥೆಯಿAದ ವಂಚನೆಯ ಉದ್ದೇಶವನ್ನು ತಪ್ಪಿಸುವುದು, ವಿಶೇಷ ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಸುವುದು, ವಶ ಪಡೆದ ಸ್ವತ್ತುಗಳ ನಗದು ಪರಿವರ್ತನೆ ಮತ್ತು ಠೇವಣಿದಾರರಿಗೆ ಹಣ ಸಂದಾಯಕ್ಕೆ ವಿಶೇಷ ನ್ಯಾಯಾಲಯಕ್ಕೆ ಅಧಿಕಾರಿ ನೀಡುವುದು, ವಂಚಕರ ಸ್ವತ್ತಿನ ಜಪ್ತಿ ಮುಂತಾದ ವಿಷಯಗಳಿಗೆ ಸಂಬಂಧಿಸಿದಂತೆ ವಿಧೇಯಕದಲ್ಲಿ ವಿಶೇಷ ಒತ್ತು ನೀಡಲಾಗಿದೆ ಎಂದರು.

    ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಮಾತನಾಡಿ, ಠೇವಣಿದಾರರ ಸಂರಕ್ಷಣೆಗಾಗಿ ಮಂಡಿಸಲಾಗಿರುವ ತಿದ್ದುಪಡಿ ವಿಧೇಯಕವನ್ನು ಸ್ವಾಗತಿಸುತ್ತೇವೆ. ವಂಚನೆ ಪ್ರಕರಣದಲ್ಲಿ ವಶಕ್ಕೆ ಪಡೆದ ಸಲಕರಣೆಗಳು, ಸ್ವತ್ತು, ಉಪಕರಣಗಳನ್ನು ವಿಲೇವಾರಿ ಮಾಡುವ ವಿಧಾನ ಸರಳೀಕರಣ ಆಗಬೇಕು. ಈ ರೀತಿ ವಂಚಿಸುವವರ ಮೇಲೆ ಗೂಡಾ ಕಾಯ್ದೆ ಹಾಕಬೇಕು ಎಂದರು. ಶಾಸಕರುಗಳಾದ ಅಶ್ವತ್ಥ ನಾರಾಯಣ, ಆರಗ ಜ್ಞಾನೇಂದ್ರ, ಸಿದ್ದು ಸವದಿ, ನರೇಂದ್ರಸ್ವಾಮಿ ಅವರು ಕೂಡ ದನಿಗೂಡಿಸಿ, ಕೆಲವು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಹಣ ಸಂಗ್ರಹಣೆ ಹೆಸರಿನಲ್ಲಿ ನಡೆಯುವ ವಂಚನೆಗಳನ್ನು ತಡೆಗಟ್ಟಬೇಕು, ಕಾನೂನು ಇನ್ನಷ್ಟು ಬಲಪಡಿಸಿ ವಂಚನೆ ತಡೆಗಟ್ಟಬೇಕು ಎಂದು ಮನವಿ ಮಾಡಿದರು. ಮುಂದಿನ ದಿನಗಳಲ್ಲಿ ಇನ್ನಷ್ಟು ತಿದ್ದುಪಡಿ ತಂದು ಕಾನೂನು ಬಿಗಿಗೊಳಿಸಲಾಗುವುದು ಎಂದು ಸಚಿವ ಕೃಷ್ಣ ಭೈರೇಗೌಡ ಭರವಸೆ ನೀಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     

    admin
    • Website

    Related Posts

    ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್

    June 7, 2026

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!

    June 5, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ

    June 7, 2026

    ಸಿರಾ: ಸಿರಾ ಕ್ಷೇತ್ರದ ಶಾಸಕರಾದ ಟಿ.ಬಿ. ಜಯಚಂದ್ರ ಅವರು ನುರಿತ ರಾಜಕೀಯ ಮುತ್ಸದ್ದಿಯಷ್ಟೇ ಅಲ್ಲದೆ ಕಳೆದ 50 ವರ್ಷಗಳ ರಾಜಕೀಯ…

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ

    June 7, 2026

    ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ

    June 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.