ನವದೆಹಲಿ : ದೆಹಲಿಯ ಸರ್ಕಾರಿ ಕಚೇರಿಗಳಲ್ಲಿ ರಾಜಕಾರಣಿಗಳ ಫೋಟೋಗಳ ಬದಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಭಗತ್ ಸಿಂಗ್ ಅವರ ಫೋಟೋಗಳನ್ನು ಮಾತ್ರ ಅಳವಡಿಸಲಾಗುವುದು ಎಂದು ಸಿಎಂ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.
ದೆಹಲಿಯಲ್ಲಿ ನಡೆದ ಕಾರ್ಯಕ್ರಮಯೊಂದರಲ್ಲಿ ಮಾತನಾಡಿದ ಅರವಿಂದ ಕೇಜ್ರಿವಾಲ್, ಇನ್ಮುಂದೆ ದೆಹಲಿಯ ಸರ್ಕಾರಿ ಕಚೇರಿಗಳಲ್ಲಿ ಯಾವುದೇ ಮುಖ್ಯಮಂತ್ರಿ ಅಥವಾ ರಾಜಕಾರಣಿಗಳ ಫೋಟೋಗಳನ್ನು ಹಾಕುವುದಿಲ್ಲ. ಬದಲಿಗೆ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಫೋಟೋಗಳು ಮಾತ್ರ ಅಳವಡಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ನಾನು ಅಂಬೇಡ್ಕರ್ ಮತ್ತು ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರಿಂದ ಸ್ಫೂರ್ತಿ ಪಡೆದಿದ್ದೇನೆ. ಅಂಬೇಡ್ಕರರು ಭಾರತ ಸಂವಿಧಾನ ಶಿಲ್ಪಿ ಮತ್ತು ಮೊದಲ ಕಾನೂನು ಮಂತ್ರಿ ಎಂಬುದು ನಮಗೆಲ್ಲ ತಿಳಿದಿದೆ. ಬಡವರಾಗಲಿ ಅಥವಾ ಶ್ರೀಮಂತರಾಗಿರಲಿ ಎಲ್ಲಾ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು ಎಂಬುದು ಅವರ ಕನಸಾಗಿತ್ತು. ಆ ಕನಸನ್ನು ನಮ್ಮ ಸರ್ಕಾರದಲ್ಲಿ ನನಸು ಮಾಡಲಾಗುವುದು ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.
ವರದಿ :ಆಂಟೋನಿ ಬೇಗೂರು