nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಸದಿಂದ ವಿದ್ಯುತ್‌ ಉತ್ಪಾದಿಸುವ ಘಟಕ ನಿರ್ಮಾಣ: ಡಾ.ಜಿ.ಪರಮೇಶ್ವರ್

    November 8, 2025

    ಚಿಕ್ಕನಾಯಕನಹಳ್ಳಿ: ತುಳುನಾಡಿನ ಪಂಜುರ್ಲಿ ದೈವಕ್ಕೆ ಭಕ್ತಿ ಸಮರ್ಪಣೆ

    November 8, 2025

    ಮಧುಗಿರಿ | ಜೀತ ವಿಮುಕ್ತರಿಗೆ ಪುನರ್ ವಸತಿ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ!

    November 8, 2025
    Facebook Twitter Instagram
    ಟ್ರೆಂಡಿಂಗ್
    • ಕಸದಿಂದ ವಿದ್ಯುತ್‌ ಉತ್ಪಾದಿಸುವ ಘಟಕ ನಿರ್ಮಾಣ: ಡಾ.ಜಿ.ಪರಮೇಶ್ವರ್
    • ಚಿಕ್ಕನಾಯಕನಹಳ್ಳಿ: ತುಳುನಾಡಿನ ಪಂಜುರ್ಲಿ ದೈವಕ್ಕೆ ಭಕ್ತಿ ಸಮರ್ಪಣೆ
    • ಮಧುಗಿರಿ | ಜೀತ ವಿಮುಕ್ತರಿಗೆ ಪುನರ್ ವಸತಿ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ!
    • ಕೊರಟಗೆರೆ ಪಟ್ಟಣ ಪಂಚಾಯಿತಿ ‘ಪುರಸಭೆ’ಯಾಗಿ ಮೇಲ್ದರ್ಜೆಗೆ!
    • ಪವಿತ್ರಾ ಗೌಡ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್!
    • ತಿಂಗಳ ಅಂತರದಲ್ಲಿ ಹುಲಿ ದಾಳಿಗೆ ಮೂವರು ಬಲಿ: ಸರ್ಕಾರ ಎಚ್ಚೆತ್ತುಕೊಳ್ಳುವುದು ಯಾವಾಗ?
    • ಬೀದರ್‌ | ಪತ್ರಕರ್ತನ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹಿಸಿ ಗೃಹ ಸಚಿವರಿಗೆ ಮನವಿ
    • ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಡದ ಅರಸ ಅಮೋಘ ವರ್ಷನ ಅಪ್ರಕಟಿತ ಶಾಸನ ಪತ್ತೆ
    ತುಮಕೂರು December 20, 2024

    ಕನ್ನಡದ ಅರಸ ಅಮೋಘ ವರ್ಷನ ಅಪ್ರಕಟಿತ ಶಾಸನ ಪತ್ತೆ

    By adminDecember 20, 2024No Comments1 Min Read
    amoghavarsha

    ತುಮಕೂರು: ರಾಯಚೂರು ಜಿಲ್ಲೆಯ ಮಲಿಯಾಬಾದ್ ಪ್ರದೇಶದಲ್ಲಿ ಕನ್ನಡದ ಅರಸ ಅಮೋಘ ವರ್ಷನ ಪ್ರಮುಖ ಶಿಲಾ ಶಾಸನವೊಂದು ಪತ್ತೆಯಾಗಿದೆ.

    ತುಮಕೂರು ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ.ಎಂ.ಕೊಟ್ರೇಶ್‌ ಅವರು ಕ್ಷೇತ್ರ ಕಾರ್ಯ ಮಾಡುವ ಸಂದರ್ಭದಲ್ಲಿ ಈ ಶಾಸನವು ಪತ್ತೆಯಾಗಿದೆ.


    Provided by
    Provided by

    ಆ ಪ್ರದೇಶದ ಗೋಶಾಲೆಯಲ್ಲಿ ಕೆಲಸ ಮಾಡುವ ರಾಜಸ್ಥಾನದ ಮುರಳಿ ಅವರು ಮಲಿಯಾಬಾದ್‌ ಕೋಟೆಯ ಆವರಣದಲ್ಲಿ ಮುಳ್ಳು ಕಂಟಿಗಳನ್ನು ಸ್ವಚ್ಛಗೊಳಿಸುವಾಗ ಈ ಶಾಸನವು ಕಂಡು ಬಂದಿದೆ. ಸಂಶೋಧನೆಯಿಂದ ಶಾಸನದ ವಿವರಗಳು ಬೆಳಕಿಗೆ ಬಂದಿವೆ ಎಂದು ಪ್ರೊ.ಎಂ.ಕೊಟ್ರೇಶ್ ತಿಳಿಸಿದ್ದಾರೆ.

    ಈ ಶಾಸನವು ರಾಷ್ಟ್ರಕೂಟರ ಅರಸ ಅಮೋಘ ವರ್ಷನ ಆಡಳಿತದ ಅವಧಿಯ ಅಂದರೆ ಸು.ಸಾ.ಶ. 850ರ ಸಂದರ್ಭದ್ದಾಗಿದ್ದು, ಇಪ್ಪತ್ತು ಸಾಲುಗಳನ್ನು ಒಳಗೊಂಡಿದೆ.

    “ಈ ಶಾಸನದಲ್ಲಿ ಬಲ್ಲಾಳೇಶ್ವರಪುರದ ಉಲ್ಲೇಖ ಬರುತ್ತದೆ. ಈ ಬಲ್ಲಾಳೇಶ್ವರಪುರ ಯಾವುದು ಎಂಬುದನ್ನು ಪತ್ತೆ ಹಚ್ಚಬೇಕಾಗಿದೆ. ಪಲ್ಲವಾನ್ವಯ ಎಂಬ ವಿಷಯದ ಪ್ರಸ್ತಾಪವಿದ್ದು ತುಮಕೂರು ಜಿಲ್ಲೆಯ ಸಂಬಂಧವನ್ನು ತೋರಿಸುತ್ತದೆ. ತುಮಕೂರು ಜಿಲ್ಲೆಯ ಅಂಚಿನಲ್ಲಿರುವ ಹೆಂಜೆರು ಅಥವಾ ಹೇಮಾವತಿ ನೊಳಂಬರ ರಾಜಧಾನಿ ಈ ನೊಳಂಬರಿಗೆ ಪಲ್ಲವಾನ್ವಯ ಎಂದು ಕರೆದಿರುವುದು ಈ ಶಾಸನದಲ್ಲಿ ಕಂಡುಬುರುತ್ತದೆ” ಎಂದು ಪ್ರೊ. ಎಂ.ಕೊಟ್ರೇಶ್ ತಿಳಿಸಿದ್ದಾರೆ.

    ಅಮೋಘ ವರ್ಷನ ಆಡಳಿತದ ಅವಧಿಯಲ್ಲಿ ರಾಯಚೂರನ್ನು ಎಡದೊರೆ ನಾಡು, ಎರೆನಾಡು ಸಿರೇಯ ನಾಡೆಂದು ಕರೆಯಲಾಗಿದೆ. ಶಾಸನದಲ್ಲಿ ಮುಳುಗುಂದ ನಾಡಿನ ಉಲ್ಲೇಖವಿದ್ದು, ಯಾವುದೀ ಮುಳುಗುಂದ ಎನ್ನುವುದು ಕುತೂಹಲವಾಗಿ ಉಳಿದಿದೆ. ಶಾಸನದ ಕುರಿತು ಮತ್ತಷ್ಟು ಸಂಶೋಧನೆ ನಡೆಯಬೇಕಿದ್ದು, ಇನ್ನು ಅನೇಕ ಕುತೂಹಲ ಸಂಗತಿಗಳು ಬೆಳಕಿಗೆ ಬರಲಿವೆ ಎಂದು ಪ್ರೊ.ಎಂ.ಕೊಟ್ರೇಶ್‌ ಮಾಹಿತಿ ಹಂಚಿಕೊಂಡಿದ್ದಾರೆ.

    ಸಂಶೋಧನಕಾರ್ಯದಲ್ಲಿ ವಿದ್ಯಾರ್ಥಿ ಶಶಿಕುಮಾರ ನಾಯಕ್ ಹಾಗೂ ತುಮಕೂರು ವಿವಿ ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ.ಶ್ರೀಪಾದ ಕುಲಕರ್ಣಿ ಸಹಕರಿಸಿದ್ದಾರೆ ಎಂದು ತಿಳಿಸಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಕಸದಿಂದ ವಿದ್ಯುತ್‌ ಉತ್ಪಾದಿಸುವ ಘಟಕ ನಿರ್ಮಾಣ: ಡಾ.ಜಿ.ಪರಮೇಶ್ವರ್

    November 8, 2025

    ಕಬ್ಬು ಖರೀದಿ ದರ ಹೆಚ್ಚಳಕ್ಕೆ ಆಗ್ರಹಿಸಿ ರಾಜ್ಯ ರೈತ ಸಂಘದಿಂದ ಪ್ರತಿಭಟನೆ

    November 7, 2025

    ತುಮಕೂರು | ಜಿಲ್ಲಾ ಆಸ್ಪತ್ರೆ ಖಾಸಗೀಕರಣ ವಿರೋಧಿಸಿ ಸಿಪಿಐ ಕಾರ್ಯಕರ್ತರಿಂದ ಪ್ರತಿಭಟನೆ

    November 7, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕಸದಿಂದ ವಿದ್ಯುತ್‌ ಉತ್ಪಾದಿಸುವ ಘಟಕ ನಿರ್ಮಾಣ: ಡಾ.ಜಿ.ಪರಮೇಶ್ವರ್

    November 8, 2025

    ತುಮಕೂರು: ನಗರದಲ್ಲಿ ಸಂಗ್ರಹವಾಗುವ ಕಸದಿಂದ ವಿದ್ಯುತ್‌ ಉತ್ಪಾದಿಸುವ ಘಟಕ ನಿರ್ಮಾಣ ಮಾಡುವ ಚಿಂತನೆ ನಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ…

    ಚಿಕ್ಕನಾಯಕನಹಳ್ಳಿ: ತುಳುನಾಡಿನ ಪಂಜುರ್ಲಿ ದೈವಕ್ಕೆ ಭಕ್ತಿ ಸಮರ್ಪಣೆ

    November 8, 2025

    ಮಧುಗಿರಿ | ಜೀತ ವಿಮುಕ್ತರಿಗೆ ಪುನರ್ ವಸತಿ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ!

    November 8, 2025

    ಕೊರಟಗೆರೆ ಪಟ್ಟಣ ಪಂಚಾಯಿತಿ ‘ಪುರಸಭೆ’ಯಾಗಿ ಮೇಲ್ದರ್ಜೆಗೆ!

    November 8, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.