nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ

    June 7, 2026

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ

    June 7, 2026
    Facebook Twitter Instagram
    ಟ್ರೆಂಡಿಂಗ್
    • ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
    • ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ
    • ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
    • ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
    • ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
    • ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
    • 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
    • ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮೈಸೂರು  ಜೈನ್ ಮಿಲನ್ ಜಿನ ಭಜನೆಗೆ ಹೊಸ ರೂಪ ನೀಡಿದೆ: ಅನಿತಾ ಸುರೇಂದ್ರಕುಮಾರ್
    ರಾಜ್ಯ ಸುದ್ದಿ December 23, 2024

    ಮೈಸೂರು  ಜೈನ್ ಮಿಲನ್ ಜಿನ ಭಜನೆಗೆ ಹೊಸ ರೂಪ ನೀಡಿದೆ: ಅನಿತಾ ಸುರೇಂದ್ರಕುಮಾರ್

    By adminDecember 23, 2024No Comments3 Mins Read
    jina

    ಮೈಸೂರು: ಭಾರತೀಯ ಜೈನ್ ಮಿಲನ್ ನ ಮೈಸೂರು  ಜೈನ್ ಮಿಲನ್  ಜಿನ ಭಜನೆಗೆ ಹೊಸ ರೂಪ ನೀಡಿದ್ದು, ಇದು ಶ್ರವಣಬೆಳಗೊಳದ ಕರ್ಮ ಯೋಗಿ ಚಾರು ಕೀರ್ತಿ ಭಟ್ಟಾರಕ  ಶ್ರೀಗಳವರ ಕೊಡುಗೆ ಇದಾಗಿದೆ ಎಂದು ಭಾರತೀಯ ಜೈನ ಮಿಲನ್ ನ ರಾಶಿಯ ಉಪಾಧ್ಯಕ್ಷರು ಹಾಗೂ ತ್ಯಾಗಿ ಸೇವಾ ಸಮಿತಿಯ ಅಧ್ಯಕ್ಷರಾದ ಶ್ರೀಮತಿ  ಅನಿತಾ ಸುರೇಂದ್ರ ಕುಮಾರ್ ತಿಳಿಸಿದರು.

    ಅವರಿಂದು ಭಾರತೀಯ ಜೈನ್  ಮಿಲನ್ ವಲಯ — 8 ರ ಮೈಸೂರು ವಿಭಾಗ ಮಟ್ಟದ ಜಿನ ಭಜನ ಸ್ಪರ್ಧೆ  ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.


    Provided by
    Provided by

    ನಮ್ಮ  ಜಿನಭಜನೆಗಳು,ಜೈನ ಸಂಸ್ಕಾರ ,ಸಂಸ್ಕೃತಿಯನ್ನು ಉಳಿಸುವಂತಹ ಕೆಲಸ ಮೈಸೂರು ಜೈನ ಮಿಲನ್ ಮಾಡುತ್ತಿದೆ, ಇದಕ್ಕೆ ಶ್ರವಣಬೆಳಗೊಳದ ಕರ್ಮ ಯೋಗಿ ಚಾರು ಕೀರ್ತಿ ಭಟ್ಟಾರಕ ಶ್ರೀ ಗಳವರ ಕೊಡುಗೆ ಅವಿಸ್ಮರಣೆಯ, ಕಳೆದು ಬಾರಿ ಎಲ್ಲಾ ಜೈನ ಮಠಗಳಲ್ಲಿ ಜಿನಭಜನೆಗಳು  ನಡೆದಿದ್ದು, ಎಲ್ಲಾ ಭಟ್ಟಾರಕರು ಸಹಕಾರ ನೀಡಿದ್ದಾರೆ. ಇದರಿಂದ ಜನ ಖುಷಿ ಪಡುತ್ತಿದ್ದಾರೆ ಎಂದರು.  ಬಹುಮಾನಕ್ಕಾಗಿ ಹಾಡುವುದು ಬೇಡ, ಸ್ಪರ್ಧೆಗಾಗಿ ಹಾಡಿ ಎಂದವರು, ಈ ಹಾಡಿನಿಂದ  ಸ್ಪರ್ಧೆ ನೀಡಿ ಪುಣ್ಯ ಸಂಪಾದಿಸಿ ಎಂದರು.

    ಈ ಸ್ಪರ್ಧೆಯಲ್ಲಿ ತೀರ್ಪುಗಾರರ ಮಾತು ಅಂತಿಮವಾಗಿದ್ದು, ಇದರಲ್ಲಿ ಮಧ್ಯ ಪ್ರವೇಶವಿಲ್ಲ ಯಾವುದೇ ಕಲ್ಲಿಗೆ ಪೆಟ್ಟು ನೀಡಿದಾಗ ಅದೊಂದು ಶಿಲ್ಪವಾಗಿ ಹೊಸ ರೂಪ ತಾಳಲಿದೆ ಎಂದವರು , ಮೈಸೂರಿನ ವಿಭಾಗ ಮಟ್ಟದ ಜಿನಸಂಸ್ಕಾರ ಯಶಸ್ಸು ಕಂಡಿದ್ದು ,ಕಳೆದ ಎಂಟು ವರ್ಷಗಳಿಂದ ಬಹಳಷ್ಟು ಬದಲಾವಣೆ ಕಂಡಿದೆ . ನಮ್ಮ ಎಲ್ಲಾ ಕ್ಷೇತ್ರದಲ್ಲಿ   ಜೈನರೇ ಸಿಗುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದವರು.

    “ಸ್ವಯಂ ಭೂ ಸ್ತೋತ್ರ”.  ರೂಪಕದ ತಯಾರಿ ನಡೆದಿದ್ದು ,ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದರು .ಭಜನೆಯಲ್ಲಿ ರತ್ನಾಕರವರ್ಣಿ ಸತಕ ಕೇಳಿದರೆ ಭಜನೆಯ  ಸಾರಾ ತಿಳಿಯಲಿದೆ ಎಂದರು.

    ಭಾರತೀಯ ಜೈನ ಮಿಲನ್  ವಲಯ–8  ಬೆಂಗಳೂರು ವಿಭಾಗದ ಕಾರ್ಯದರ್ಶಿ ವಿಲಾಸ್ ಪಾಸಣ್ಣನವರ್ ಮಾತನಾಡಿ ಬೆಂಗಳೂರಿನ ಚಕ್ರೇಶ್ವರಿ ಮಹಿಳಾ ಸಮಾಜದ ಕಾರ್ಯಕ್ರಮ ಅನಿತಾ ಸುರೇಂದ್ರ ಕುಮಾರ್ ರವರಿಗೆ  ಪ್ರೇರಣೆಯಾಗಿ ಹೊಸ ತಿರುವ ನೀಡಿತು, ಯುವತಿಯರನ್ನ ಒಂದುಗೂಡಿಸಿ ಚಿಂತನೆ ಮಾಡಿ ಜಿನಭಜನೆಗೆ ಹೊಸ ರೂಪ ನೀಡಿದರು, 2016 ರಿಂದ ಈವರೆಗೆ ಒಂಬತ್ತು ಬಾರಿ ಕಾರ್ಯಕ್ರಮ ಮೂಡಿ ಬಂದಿದ್ದು, ರಾಜ್ಯದಾದ್ಯಂತ 350 ತಂಡ  ಗಳು ವಿಭಾಗ ಮಟ್ಟದಲ್ಲಿ ಪಾಲ್ಗೊಳ್ಳುತ್ತಿವೆ, ಈ ಕಾರ್ಯಕ್ರಮ ರಾಜ್ಯದಾದ್ಯಂತ ಸಂಚಲನ ಮೂಡಿಸಿದೆ ಎಂದರು.

    ಭಾರತೀಯ ಜೈನ್ ಮಿಲನ್ ವಲಯ ಎಂಟರ ಅಧ್ಯಕ್ಷರಾದ ಕೆ ಯುವರಾಜ್ ಭoಡಾರಿ ಮಾತನಾಡಿ ಜೈನ್ ಮಿಲನ್ ಹಾಗೂ ಜಿನ ಭಜನ ಸಂಬಂಧ ಉತ್ತಮವಾಗಿದೆ ಅನಿತಮ್ಮನವರ ಮಾರ್ಗದರ್ಶನದಲ್ಲಿ ಸಂಸ್ಕೃತಿ, ಸಂಸ್ಕಾರ ,ಸಂಪ್ರದಾಯಗಳ ಪಾಲನೆಗೆ ಜಿನ ಭಜನ ಕಾರ್ಯಕ್ರಮ ಮಾಡಿದ್ದಾರೆ, ಈಗ ಬಸದಿಗೆ ಬನ್ನಿ ಹೊಸ ಕಾರ್ಯಕ್ರಮ ಪ್ರಾರಂಭವಾಗಿದೆ ಸಮಾಜದ ಏಳಿಗೆ ಉಳಿವಿಗೆ ಈ ಕಾರ್ಯಕ್ರಮ ಮೂಡಿ ಬರುತ್ತಿದ್ದು ಸಂಘಟಿತರಾಗಿ ,ಸಮಾಜ ಬಲಪಡಿಸಬೇಕಿದೆ, ಶ್ರೀ ವೀರೇಂದ್ರ ಹೆಗ್ಗಡೆ ಹಾಗೂ ಶ್ರೀ ಸುರೇಂದ್ರ ಹೆಗಡೆಯವರ ಸಮಾಜದ ಎರಡು ಕಣ್ಣುಗಳಿದ್ದಂತೆ ಎಂದರು.

    ತೀರ್ಪುಗಾರರಾದ ಜ್ಯೋತಿ ನೇಮಿರಾಜ್ ಲಿಂಗನ  ಮುಕ್ಕಿ ಮಾತನಾಡಿ ಅನಿತಮ್ಮನವರ ಚಿಂತನೆ ಸುರೇಂದ್ರ ಕುಮಾರ್ ರವರ ಮಾರ್ಗದರ್ಶನದಿಂದ ಜಿನ ಧರ್ಮದ ,ಜಿನ ಭಜನೆಗಳು ಮನೆಮನೆಗೆ ತಲುಪುತ್ತಿದೆ ,ಇದರಿಂದ ಮಕ್ಕಳು ಸಂಸ್ಕಾರವಂತರಾಗಲು ಸಾಧ್ಯವಾಗಿದ್ದು, ಇದು ಧರ್ಮ  ಪ್ರಭಾವನೆಗೂ ಸಹಕಾರಿಯಾಗಿದೆ ಎಂದರು.

    ಭಾರತೀಯ ಜೈ ನ್ ಮಿಲನ್ ವಲಯ — 8ರ ಗೌರವ ಅಧ್ಯಕ್ಷರಾದ ಶೀಲಾ ಅನಂತರಾಜು , ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಮಾಜಿ ಕಾರ್ಯಾಧ್ಯಕ್ಷ ರಾದ ಪದ್ಮಿನಿ ಪದ್ಮರಾಜ್,  ಮೈಸೂರಿನ ಜೈನ ಬ್ರಾಹ್ಮಣ ಸಮಾಜದ ಲಕ್ಷ್ಮೀರಮಣ, ರತ್ನತ್ರಯ ಧಾರವಾಹಿಯ ನಾಗೇಂದ್ರ ಕುಮಾರ್,  ಸ್ನೇಹ,  ಸೌಮ್ಯ ಶ್ರೀಧರ್ ಜೈನ, ಹಾಸನದ  ಶರ್ಮಿಳ ಜಿನೇಶ್, ಮೈಸೂರು ವಿಭಾಗದ ಉಪಾಧ್ಯಕ್ಷ ಸಿ.ಎಸ್.ನಾಗರಾಜ್, ಕಾರ್ಯದರ್ಶಿ , ಎಂ. ರತ್ನರಾಜು,  ಭಾರತೀಯ ಜೈನ್ ಮಿಲನ ರಾಷ್ಟ್ರೀಯ ವಿಭಾಗದ  ಉಪಾಧ್ಯಕ್ಷರಾದ ಪ್ರಸನ್ನ ಕುಮಾರ್, ಜಿ.ಬಿ.ಚಂದ್ರಶೇಖರ್, ಇನ್ನಿತರ ಪದಾಧಿಕಾರಿಗಳು, ವಿವಿಧ ಜೈನ ಸಂಘಟನೆಗಳ ಅಧ್ಯಕ್ಷರು ,ಪದಾಧಿಕಾರಿಗಳು, ಉಪಸ್ಥಿತರಿದ್ದರು.

    ಭಾರತೀಯ ಜೈನ ಮಿಲನ್ ವಲಯ –8ರ ಮೈಸೂರು ವಿಭಾಗದ ಉಪಾಧ್ಯಕ್ಷ ಸಿ.ಎಸ್ ನಾಗರಾಜ್ ಸ್ವಾಗತಿಸಿದರು.  ಅರುಣ ಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು.

    ಮೈಸೂರು ವಿಭಾಗದ ನಿರ್ದೇಶಕರುಗಳಾದ ಎಚ್. ಡಿ. ಜಯಂದ್ರ , ಎಸ್.ವಿನೋದ್ ಕುಮಾರ್, ಅರುಣ್ ಪಂಡಿತ್. ಎಲ್ ,ವಿನೋದ್ ಬಾಕ್ಲಿ ವಾಲಾ, ರೂಪ ನಾಗರಾಜ್ , ಪ್ರಮೋದ್ ಕುಮಾರ್, ಎಸ್.ಎಸ್ .ಸೋಮಪ್ರಭ ,ಸಂಚಾಲಕರಾದ ಪದ್ಮ ಧನ್ಯ ಕುಮಾರ್,  ಜಯಲಲಿತ ಅನಿಲ್, ಪುಷ್ಪ ರಾಜೇಂದ್ರ, ವಾಗಿಶ್ವರಿ ಪ್ರಕಾಶ್, ಅಂಜನ ಸುದರ್ಶನ್, ವಾಣಿ ರತ್ನಾಕರ್, ಸುಮ ಸುನಿಲ್, ಮಹಾವೀರ್ ಸುದರ್ಶನ್, ಮಹೀಂದ್ರ ,ಜಿನೇಂದ್ರ ಪ್ರಕಾಶ್ ಸೇರಿದಂತೆ ಜೈನ್ ಮಿಲನ್ ಮೈಸೂರು , ಗಂಗೋತ್ರಿ ಜೈನ್ ಮಿಲನ್ ಮೈಸೂರು, ಮೈತ್ರಿ ಜೈನ್ ಮಿಲನ್ ಮೈಸೂರು. ವರ್ಧಮಾನ್ ಜೈನ್ ಮಿಲನ್ ಮೈಸೂರು. ಮಹಾವೀರ್ ಜೈನ್ ಮಿಲನ್ ಮೈಸೂರು, ಪ್ಯಾಲೇಸ್ ಸಿಟಿ ಜೈನ್ ಮಿಲನ್ ಮೈಸೂರು, ಸಂಯುಕ್ತ ಜೈನ್ ಮಿಲನ್ ಮೈಸೂರು, ಕಡಕೋಳ ಜೈನ್ ಮಿಲನ್ , ತ್ರಿಲೋಕ್ ಜೈನ್ ಮಿಲನ್ ಹಾಸನ, ರತ್ನತ್ರೆಯ ಜೈನ್ ಮಿಲನ್ ವೈನಾಡು ಕೇರಳ,  ದಿಗಂಬರ ಜೈನ ಸಮಾಜ ಮೈಸೂರು, ಪದ್ಮಶ್ರೀ ಮಹಿಳಾ ಜೈನ ಸಮಾಜ ಮೈಸೂರು, ಜೈನ್ ಬ್ರಾಹ್ಮಣ ಸಮಾಜ ಮೈಸೂರು , ಶಾಂತಿನಾಥ ಸೇವಾ ಸಮಿತಿ ಮೈಸೂರು ಸೇರಿದ್ದಂತೆ ಜೈನ ಸಂಘಟನೆಗಳ ಪದಾಧಿಕಾರಿಗಳು ಜೈನಮಿಲನ್ನು ಅಧ್ಯಕ್ಷರು , ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು, ವಿಭಾಗದ ಎಲ್ಲ ನಿರ್ದೇಶಕರುಗಳು, ಸಂಚಾಲಕರುಗಳು ಮತ್ತು ಜೈ ನ್ ಮಿಲನ್ ಗಳ ಅಧ್ಯಕ್ಷರು ,ಕಾರ್ಯದರ್ಶಿಗಳು ,ಪದಾಧಿಕಾರಿಗಳು, ಸರ್ವ ಸದಸ್ಯರುಗಳು ಸೇರಿದಂತೆ  ಶ್ರಾವಕ- ಶ್ರಾವಕಿಯರು ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್

    June 7, 2026

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    ಖಾತೆ ಹಂಚಿಕೆ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ; ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದ ಡಿಕೆಶಿ!

    June 5, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ

    June 7, 2026

    ಸಿರಾ: ಸಿರಾ ಕ್ಷೇತ್ರದ ಶಾಸಕರಾದ ಟಿ.ಬಿ. ಜಯಚಂದ್ರ ಅವರು ನುರಿತ ರಾಜಕೀಯ ಮುತ್ಸದ್ದಿಯಷ್ಟೇ ಅಲ್ಲದೆ ಕಳೆದ 50 ವರ್ಷಗಳ ರಾಜಕೀಯ…

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ

    June 7, 2026

    ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ

    June 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.