ಕೊರಟಗೆರೆ: ರಾಷ್ಟ್ರೀಯ ಹಬ್ಬವಾದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಡಿಸಿಎಂ ಜಿ.ಪರಮೇಶ್ವರ್ ಅವರ ಹೆಸರು ಹೇಳದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕಾಂಗ್ರೆಸ್ ಮುಖಂಡ ಹಾಗೂ ಜಿ.ಪರಮೇಶ್ವರ್ ಬೆಂಬಲಿಗ ಬಟ್ಟೆ ಬಿಚ್ಚಿ ಪ್ರತಿಭಟಿಸಲು ಯತ್ನಿಸಿದ ಘಟನೆ ನಡೆದಿದೆ.
ಗಣರಾಜ್ಯೋತ್ಸವ ಆಚರಣೆ ವೇಳೆ ಕೊರಟಗೆರೆ ಪಟ್ಟಣದ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಈ ಘಟನೆ ನಡೆದಿದ್ದು, ಕೊರಟಗೆರೆ ತಹಶೀಲ್ದಾರ್ ನಾಹೀದಾ ಜಮ್ ಜಮ್ ಮತ್ತು ಶಿಕ್ಷಣಾಧಿಕಾರಿ ಸುಧಾಕರ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಮುಖಂಡರಾದ ಚಿಕ್ಕರಂಗಯ್ಯ ಮತ್ತು ನಾಗೇಶ್ ಸೇರಿದಂತೆ ಇತರೇ ಮುಖಂಡರುಕಾರ್ಯಕ್ರಮಕ್ಕೆ ಅಡ್ಡಿಪಡಿಸಿದರು.
ಏಕವಚನದಲ್ಲೇ ಅಧಿಕಾರಿಗಳನ್ನು ಕಾಂಗ್ರೆಸ್ ಮುಖಂಡ ಚಿಕ್ಕರಂಗಯ್ಯ ತರಾಟೆಗೆತ್ತಿಕೊಂಡರು. ಈ ವೇಳೆ ಪೊಲೀಸ್ ಮತ್ತು ಕಂದಾಯ ಇಲಾಖೆ ಅಧಿಕಾರಿ ವರ್ಗ ಮೌನಕ್ಕೆ ಶರಣಾದರು.
ಇನ್ನೂ ಕಾರ್ಯಕ್ರಮ ನಿರೂಪಣೆ ಮಾಡುತ್ತಿದ್ದ ಶಿಕ್ಷಣಾಧಿಕಾರಿ ಸುಧಾಕರ್ ಗೆ ವೇದಿಕೆಯಿಂದ ಇಳಿಯುವಂತೆ ಎಚ್ಚರಿಕೆ ನೀಡಿದರು. ಅನಾರೋಗ್ಯ ಕಾರಣ ಗಣರಾಜ್ಯೋತ್ಸವಕ್ಕೆ ಶಾಸಕ ಡಾ.ಜಿ.ಪರಮೇಶ್ವರ್ ಗೈರಾಗಿದ್ದರು. ಅವರಿಗೆ ಕಾರ್ಯಕ್ರಮಕ್ಕೆ ಸ್ವಾಗತ ಕೋರಿದ ವೇಳೆ ಕೇವಲ ಶಾಸಕರು ಎಂದು ಮಾತ್ರವೇ ಹೇಳಲಾಗಿದೆ. ಅವರನ್ನು ಮಾಜಿ ಉಪ ಮುಖ್ಯಮಂತ್ರಿಗಳು ಎಂದು ಪರಂ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದರು.
ಚಿಕ್ಕರಂಗಯ್ಯ, ನಾಗೇಶ್ ಎಂಬ ಬೆಂಬಲಿಗರಿಂದ ಕಾರ್ಯಕ್ರಮದಲ್ಲಿ ಕೂಗಾಟ ನಡೆಯಿತು. ಈ ನಡುವೆ ಬಟ್ಟೆ ಬಿಚ್ಚಿ ಧರಣಿಗೆ ಯತ್ನಿಸಿದರು. ಇದರಿಂದಾಗಿ ಸ್ಥಳದಲ್ಲಿ ಕೆಲಕಾಲ ಗೊಂದಲ ಸೃಷ್ಟಿಯಾಯಿತು.
ವರದಿ : ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy