ಪಾವಗಡ: ತಾಲೂಕಿನ ಜನರಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸಲು 2,352 ಕೋಟಿ ರೂಪಾಯಿ ವೆಚ್ಚದ ತುಂಗಭದ್ರಾ ಕುಡಿಯುವ ನೀರಿನ ಯೋಜನೆ ಉದ್ಘಾಟನೆಗೆ ಸಿದ್ಧವಾಗಿದೆ. ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ ಎಂದು ಪಾವಗಡ ಶಾಸಕ ಎಚ್.ವಿ. ವೆಂಕಟೇಶ್ ತಿಳಿಸಿದ್ದಾರೆ.
ಶುಕ್ರವಾರ ಪಾವಗಡ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಪ್ರಸ್ತುತ ನಡೆಯುತ್ತಿರುವ ಎಲ್ಲಾ ಕಾಮಗಾರಿಗಳನ್ನು ಪರಿಪೂರ್ಣಗೊಳಿಸಿ ಬಡಜನರಿಗೆ 183 ಎಕರೆ ಜಮೀನನ್ನು ಗುರುತಿಸಿ ನಿವೇಶನ ವಿತರಣೆ ಮಾಡಲಾಗುವುದು ಎಂದರು.
ತಾಲೂಕಿನಲ್ಲಿ ಬೈಪಾಸ್ ರಸ್ತೆ, ನಗರ ಅಭಿವೃದ್ಧಿ, ಹಾಗೂ ಐದು ಎಕರೆ ಜಮೀನು ಮಾರ್ಗಸೂಚಿ ಮೂಲಕ 500 ನಿವೇಶನಗಳ ಹಕ್ಕು ಪತ್ರ ವಿತರಣೆ ಕಾರ್ಯವನ್ನು ಮುಖ್ಯಮಂತ್ರಿಗಳ ಹಸ್ತದಿಂದ ನೆರವೇರಿಸಲಾಗುವುದು. ಅಲ್ಲದೆ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಶಿಥಿಲ ಕಟ್ಟಡವನ್ನು ಶೀತಲಗೊಳಿಸಿ ನೂತನ ಸಭಾಂಗಣ ನಿರ್ಮಾಣದ ಯೋಜನೆ ಕೈಗೆತ್ತಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಗೂ ನಗದು ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜು ಪ್ರಾಂಶುಪಾಲ ರಾಮಕೃಷ್ಣಪ್ಪ, “ಕಾಲೇಜಿನ ಇತಿಹಾಸವು ಮೈಸೂರು ಒಡೆಯರ್ ಕಾಲದಿಂದ ಆರಂಭವಾಗಿದೆ. ನೂತನ ನೀರಿನ ಘಟಕ ಸ್ಥಾಪನೆ ಮತ್ತು ಸಭಾಂಗಣ ನಿರ್ಮಾಣವು ಸ್ಥಳೀಯ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಲಿದೆ” ಎಂದರು.
ಈ ವೇಳೆ ಪುರಸಭಾ ಅಧ್ಯಕ್ಷ ಪಿ.ಎಚ್.ರಾಜೇಶ್, ಸದಸ್ಯರಾದ ಕಲ್ಪವೃಕ್ಷ ರವಿ, ಸಿಡಿಸಿ ಉಪಾಧ್ಯಕ್ಷ ಬೋರಣ್ಣ , ಸದಸ್ಯರಾದ ಪ್ರಭಾಕರ್, ಹನುಮೇಶ್, ಶಬಾನ, ರಿಜ್ಮಾನುಲ್ಲ, ಹನುಮಂತರಾಯಪ್ಪ, ಹಾಗೂ ಕಾಲೇಜಿನ ಉಪನ್ಯಾಸಕರಾದ ದೊಡ್ಡಯ್ಯ, ಕರಿಯಣ್ಣ, ಡಾ.ರಘುವೀರ್, ಬೊಮ್ಮಣ್ಣ, ವಿದ್ಯಾರ್ಥಿಗಳು ಇತರ ಉಪನ್ಯಾಸಕರು ಹಾಜರಿದ್ದರು.
ವರದಿ : ನಂದೀಶ್ ನಾಯ್ಕ ಪಿ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx