nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್

    April 16, 2026

    ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ

    April 16, 2026

    ತುಮಕೂರು ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘ: ನಾಮಪತ್ರ ಸಲ್ಲಿಸಿದವರೆಲ್ಲ ಅವಿರೋಧ ಆಯ್ಕೆ

    April 16, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್
    • ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ
    • ತುಮಕೂರು ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘ: ನಾಮಪತ್ರ ಸಲ್ಲಿಸಿದವರೆಲ್ಲ ಅವಿರೋಧ ಆಯ್ಕೆ
    • ಅಸ್ಪೃಶ್ಯತೆ, ಮರ್ಯಾದೆಗೇಡು ಹತ್ಯೆ ಅಮಾನವೀಯ: ರಾಜಶೇಖರ್ ಕೆ.
    • ಒಳ ಮೀಸಲಾತಿ ವಿಚಾರದಲ್ಲಿ ಸಣ್ಣ ವ್ಯತ್ಯಾಸಕ್ಕೆ ಜಗಳ ಅನಾವಶ್ಯಕ: ಡಿ.ಕೆ.ಶಿವಕುಮಾರ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    • ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ಮಾರ್ಟ್ ಸಿಟಿಯಿಂದ ಅಸಾಧಾರಣ ಸಾಧನೆ : IIMB ವರದಿಯಲ್ಲಿ ಉಲ್ಲೇಖ
    ತುಮಕೂರು January 8, 2025

    ಸ್ಮಾರ್ಟ್ ಸಿಟಿಯಿಂದ ಅಸಾಧಾರಣ ಸಾಧನೆ : IIMB ವರದಿಯಲ್ಲಿ ಉಲ್ಲೇಖ

    By adminJanuary 8, 2025No Comments2 Mins Read
    smartcity

    ತುಮಕೂರು: ತುಮಕೂರು ನಗರದಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಮಹಿಳೆಯರ ಸುರಕ್ಷತೆ, ಶಿಕ್ಷಣ ಮತ್ತು ಮೊಬೈಲ್ ತಂತ್ರಜ್ಞಾನದಲ್ಲಿ ಸಾಧಿಸಿರುವ ಅಸಾಧಾರಣ ಸಾಧನೆಗಳನ್ನು ಇತ್ತೀಚಿನ ಬೆಂಗಳೂರಿನ ಇಂಡಿಯನ್ ಇನ್ಸಿಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್(IIMB) ತನ್ನ ವರದಿಯಲ್ಲಿ ಪ್ರಮುಖವಾದ 3 ನವೀನ ವಿಧಾನಗಳ ಅಳವಡಿಕೆ ಕುರಿತು ದಾಖಲಿಸಿದೆ.

    ಅಭಿವೃದ್ಧಿ ಹೊಂದುತ್ತಿರುವ ನಗರಗಳಲ್ಲಿ ಅಳವಡಿಸಿಕೊಳ್ಳುತ್ತಿರುವ ನೂತನ ಉಪಕ್ರಮಗಳನ್ನು ದಾಖಲಿಸುವ ಮತ್ತು ಅವುಗಳ ಬಗ್ಗೆ ಅಧ್ಯಯನ ನಡೆಸುವ ಸಲುವಾಗಿ 2022ರಲ್ಲಿ ಪ್ರಾರಂಭಿಸಿರುವ ‘SAAR'(Smart Cities &Academic Research) ಸಂಶೋಧನಾ ಅಧ್ಯಯನದಲ್ಲಿ ಈ ಅಂಶಗಳನ್ನು ಗುರುತಿಸಲಾಗಿದೆ.


    Provided by
    Provided by

    ಮಹಿಳಾ ಸುರಕ್ಷತೆ:

    ಸ್ಮಾರ್ಟ್ ಸಿಟಿ ಯೋಜನೆಯಡಿ ತುಮಕೂರಿನ ಇಂಟಿಗ್ರೇಟೆಡ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್(ICCC) ಮೂಲಕ ಮಹಿಳೆಯರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ 70 ಆಯಕಟ್ಟಿನ ಸ್ಥಳಗಳಲ್ಲಿ 400ಕ್ಕೂ ಹೆಚ್ಚು ಅಅಖಿಗಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಅಲ್ಲದೆ 24/7 ಮೇಲ್ವಿಚಾರಣೆ ಮತ್ತು ಘಟನೆಗಳಿಗೆ ತ್ವರಿತ ಪ್ರತಿಕ್ರಿಯೆ, ಸಾರ್ವಜನಿಕ ಪ್ರಕಟಣೆ ವ್ಯವಸ್ಥೆಗಳೊಂದಿಗೆ 41 ತುರ್ತು ಕರೆ ಬಾಕ್ಸ್ ಗಳ ಸ್ಥಾಪಿಸುವ ಮೂಲಕ ಮಹಿಳಾ ಸುರಕ್ಷತೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸಲಾಗಿದೆ. ಪರಿಣಾಮಕಾರಿ ಕಣ್ಗಾವಲು ವ್ಯವಸ್ಥೆಯಿಂದ ಮಹಿಳೆಯರ ವಿರುದ್ಧದ ಅಪರಾಧಗಳು, ನಿರ್ಧಿಷ್ಟವಾಗಿ ಚೈನ್–ಸ್ನ್ಯಾಚಿಂಗ್ ಮತ್ತು ಆಕ್ರಮಣಗಳ ಸಂಖ್ಯೆ ಕಡಿಮೆಯಾಗಿರುವ ಬಗ್ಗೆ ವರದಿಯಲ್ಲಿ ದಾಖಲಿಸಲಾಗಿದೆ. ವರದಿಯನ್ನು ವೆಬ್ ಲಿಂಕ್ https://www.iimb.ac.in/node/13673 ನಿಂದ ಡೌನ್ ಲೋಡ್ ಮಾಡಬಹುದು.

    ಶೈಕ್ಷಣಿಕ ಸುಧಾರಣೆ :

    ತುಮಕೂರಿನ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡ ಶಿಕ್ಷಣ ಉಪಕ್ರಮಗಳು ಕಲಿಕೆಯ ಪರಿಸರದಲ್ಲಿ ಕ್ರಾಂತಿಯನ್ನುಂಟು ಮಾಡಿದೆ. ಈ ಯೋಜನೆಯಡಿ 17 ಸರ್ಕಾರಿ ಶಾಲೆಗಳು ಮತ್ತು 2 ಪಿಯು ಕಾಲೇಜುಗಳಲ್ಲಿ ಅಳವಡಿಸಲಾಗಿರುವ ಸ್ಮಾರ್ಟ್ ಕ್ಲಾಸ್ ರೂಮ್, ಐಸಿಟಿ ಲ್ಯಾಬ್ ಮತ್ತು ಲ್ಯಾಂಗ್ವೇಜ್ ಲ್ಯಾಬ್ಗಳು ಸೇರಿದಂತೆ ಡಿಜಿಟಲ್ ಕಲಿಕಾ ಸಾಧನೆಗಳಿಂದ ಶೇ.22ರಷ್ಟು ದಾಖಲಾತಿಯನ್ನು ಹೆಚ್ಚಿಸುವುದರೊಂದಿಗೆ ಶೈಕ್ಷಣಿಕ ಫಲಿತಾಂಶಗಳ ಸುಧಾರಣೆಯಾಗಿದೆ.

    ಸ್ಪರ್ಧಾತ್ಮಕ ಪರೀಕ್ಷೆಯ ತಯಾರಿ ಮತ್ತು ಇಂಟರ್ನೆಟ್ ಸೌಲಭ್ಯಗಳೊಂದಿಗೆ ಸಕ್ರಿಯಗೊಳಿಸಲಾದ 20 ಡೆಸ್ಕ್ಟಾಪ್ ವ್ಯವಸ್ಥೆಗಳಲ್ಲಿ ಸಾಮಾನ್ಯ ಕಲಿಕೆ ಮತ್ತು ಅಂಧರಿಗಾಗಿ ಉಚಿತವಾಗಿ ಲಭ್ಯವಿರುವ ಬ್ರೆöÊಲ್ ಲೈಬ್ರರಿಯೊಂದಿಗೆ ತುಮಕೂರು ಡಿಜಿಟಲ್ ಶಿಕ್ಷಣದ ಕೇಂದ್ರವಾಗಿ ಡಿಜಿಟಲ್ ಗ್ರಂಥಾಲಯವನ್ನು ಅನುಷ್ಠಾನಗೊಳಿಸಲಾಗಿದೆ.  ಈ ಡಿಜಿಟಲ್ ಗ್ರಂಥಾಲಯದ ಮಾಹಿತಿಗಾಗಿ ಜಾಲತಾಣ https://www.iimb.ac.in/node/13672 ನಿಂದ ಡೌನ್ ಲೋಡ್ ಮಾಡುವ ಮೂಲಕ ವೀಕ್ಷಿಸಬಹುದು.

    ನಾಗರಿಕ ಸೇವೆಗಳಿಗಾಗಿ ಮೊಬೈಲ್ ಅಪ್ಲಿಕೇಶನ್ ಗಳು:

    ನಗರದ ಆಡಳಿತ ಮತ್ತು ನಾಗರಿಕರ ಅನುಕೂಲತೆಯನ್ನು ಹೆಚ್ಚಿಸಲು ತುಮಕೂರು ಸ್ಮಾರ್ಟ್ ಸಿಟಿ ಮೊಬೈಲ್ ಅಪ್ಲಿಕೇಶನ್(SCMA)ನಡಿ ಒಂದೇ ವೇದಿಕೆಯಲ್ಲಿ ತೆರಿಗೆ ಪಾವತಿ, ಪ್ರಮಾಣಪತ್ರ ನೀಡುವಿಕೆ ಮತ್ತು ಕುಂದು ಕೊರತೆ ಪರಿಹಾರ ಸೇರಿದಂತೆ ಸ್ವಯಂಚಾಲಿತ ಪ್ರಕ್ರಿಯೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಸಂಚಾರ ನಿಯಮ ಉಲ್ಲಂಘನೆ ಪತ್ತೆ ಹಚ್ಚಲು ಹಾಗೂ ಭ್ರಷ್ಟಾಚಾರವನ್ನು ಕಡಿಮೆ ಮಾಡಲು ಈ ಮೊಬೈಲ್ ಅಪ್ಲಿಕೇಷನ್ಗಳು ನಗರ ವಾಸಿಗಳಿಗೆ ಸಮಾನ ಅನುಕೂಲವನ್ನು ಕಲ್ಪಿಸಿದೆ. ಮೊಬೈಲ್ ಅಪ್ಲಿಕೇಷನ್ ಗಳ ಮಾಹಿತಿಯನ್ನು ವೆಬ್ಲಿಂಕ್ https://www.iimb.ac.in/node/13691 ನಿಂದ ಡೌನ್ಲೋಡ್ ಮಾಡಬಹುದು.

    ಒಟ್ಟಾರೆ, ಮಹಿಳಾ ಸುರಕ್ಷತೆ, ಶಿಕ್ಷಣ ಮತ್ತು ಮೊಬೈಲ್ ಅಪ್ಲಿಕೇಶನ್ಗಳಲ್ಲಿ ತುಮಕೂರಿನ ಸಾಧನೆಗಳು ಸುರಕ್ಷಿತವಾಗಿದ್ದು, ನಗರಾಭಿವೃದ್ಧಿಗೆ ಮಾನದಂಡವಾಗಿ ತುಮಕೂರು ತಂತ್ರಜ್ಞಾನ-ಚಾಲಿತ ಆಡಳಿತದ ಪರಿವರ್ತಕ ಸಾಮರ್ಥ್ಯಗಳು ನಗರದ ಬೆಳವಣಿಗೆಗೆ ಹಿಡಿದ ಕೈಗನ್ನಡಿಯಾಗಿದೆ.

    ಸ್ಮಾರ್ಟ್ ಸಿಟಿಯ ಈ ಸಾಧನೆಗಳು ಕೇವಲ ಮೈಲಿಗಲ್ಲುಗಳಲ್ಲ. ನಗರದ ಪ್ರಗತಿ ಹಾದಿಯಲ್ಲಿ ವಿಶ್ವಾಸ ತೋರಿರುವ ತುಮಕೂರಿನ ನಾಗರಿಕರಿಗೆ ಸ್ಮಾರ್ಟ್ ಸಿಟಿ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಿಜ ಬಿ.ವಿ. ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

    ಸ್ಮಾರ್ಟ್ ಸಿಟಿ ಯೋಜನೆಯ ಹೆಚ್ಚಿನ ವಿವರಗಳಿಗಾಗಿ ತುಮಕೂರು Iಅಅಅ ಅಥವಾ 0816-2273400 / 155304 / 7304975519(WhatsApp)ನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     

    admin
    • Website

    Related Posts

    ತುಮಕೂರು ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘ: ನಾಮಪತ್ರ ಸಲ್ಲಿಸಿದವರೆಲ್ಲ ಅವಿರೋಧ ಆಯ್ಕೆ

    April 16, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ

    April 15, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಮಹಿಳಾ ಮೀಸಲಾತಿ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್

    April 16, 2026

    ಗುಬ್ಬಿ: ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ನಮ್ಮ ಬೆಂಬಲವಿದೆ. ಆದರೆ ಶೇ.33 ಬದಲು ಶೇ. 50 ನೀಡುವುದು ಒಳ್ಳೆಯದು. ಮಹಿಳೆಯರಿಗೆ…

    ಸಂವಿಧಾನ ಪೀಠಿಕೆಯಲ್ಲಿ ಶಿಕ್ಷಣ ಕ್ಷೇತ್ರವನ್ನು ಸೇರಿಸಲು  ಶಾಸಕ ಸಿ.ಬಿ.ಸುರೇಶ್ ಬಾಬು ಒತ್ತಾಯ

    April 16, 2026

    ತುಮಕೂರು ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘ: ನಾಮಪತ್ರ ಸಲ್ಲಿಸಿದವರೆಲ್ಲ ಅವಿರೋಧ ಆಯ್ಕೆ

    April 16, 2026

    ಅಸ್ಪೃಶ್ಯತೆ, ಮರ್ಯಾದೆಗೇಡು ಹತ್ಯೆ ಅಮಾನವೀಯ: ರಾಜಶೇಖರ್ ಕೆ.

    April 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.