ಪಾವಗಡ: ತಾಲ್ಲೂಕು ನಿಡಗಲ್ಲು ಹೋಬಳಿಯ ವ್ಯಾಪ್ತಿಗೆ ಬರುವ ಸಿ.ಕೆ.ಪುರ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ವತಿಯಿಂದ 73ನೇ ಗಣರಾಜ್ಯೋತ್ಸವವನ್ನು ಕೋವಿಡ್ ನಿಯಮಾನುಸಾರ ಸರಳವಾಗಿ ಆಚರಣೆ ಮಾಡಲಾಯಿತು.
ಮಹಾತ್ಮ ಗಾಂಧೀಜಿ, ಡಾ.ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪರ್ಚನೆ ಮಾಡುವ ಮೂಲಕ ಶಾಲೆಯ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ರಾಮಪ್ಪ ಎ., ಗ್ರಾ.ಪಂ.ಅಧ್ಯಕ್ಷೆ ಲಕ್ಷ್ಮಮ್ಮ ಹಾಗೂ ಸಿ.ಕೆ.ಪುರ ಕೆ.ಇ.ಬಿ.ಇಲಾಖೆಯ ಜೂನಿಯರ್ ಇಂಜಿನಿಯರ್, ರಾಜಶೇಖರ ಇವರುಗಳು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು.
ಸಿ.ಕೆ.ಪುರ.ಸರ್ಕಾರಿ ಶಾಲೆಯ ವಿದ್ಯರ್ಥಿಗಳು ರಾಷ್ಟ್ರ ಗೀತೆಯನ್ನು ಹಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ರಾಷ್ಟ್ರೀಯ ಹಬ್ಬಗಳ ಆಚರಣೆಯ ಮಹತ್ವದ ಬಗ್ಗೆ ಎಸ್. ಡಿ.ಎಂ.ಸಿ. ಅಧ್ಯಕ್ಷರಾದ ರಾಮಪ್ಪ ಮಾತನಾಡಿ, ವಿವಿಧತೆಯಲ್ಲಿ ಏಕತೆಯನ್ನು ಹೊಂದಿದ ರಾಷ್ಟ್ರ ನಮ್ಮದು. ಇಲ್ಲಿ ಹಲವಾರು ರಾಷ್ಟ್ರೀಯ ನಾಯಕರ ಪರಿಶ್ರಮದಿಂದಾಗಿ ನಾವು ಇಂದು ಗಣರಾಜ್ಯ ಪಡೆದು ಸ್ವತಂತ್ರವಾಗಿ ಬದುಕುತ್ತಿದ್ದೇವೆ. ಅದಕ್ಕೆ ಹಲವಾರು ಸ್ವಾತಂತ್ರ ಹೋರಾಟಗಾರರು ಕಾರಣ ಅದರಲ್ಲಿ ದೇಶದ ಭದ್ರತೆಗೆ ಬುನಾದಿ ಹಾಕಿದ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಮಹಾತ್ಮಾ ಗಾಂಧೀಜಿ ಅವರ ಅಹಿಂಸಾ ತತ್ವಗಳನ್ನ ಅಳವಡಿಸಿಕೊಳ್ಳುವ ಮೂಲಕ ನಾವು ದೇಶದ ಹಿರಿಯ ನಾಗರೀಕರಿಗೆ ನಮ್ಮ ನಾಡು ನುಡಿ ಸಂಸ್ಕೃತಿಗೇ ಗೌರವ ಸಲ್ಲಿಸುತ್ತಾ ನಾವೆಲ್ಲ ಒಂದೇ ಎಂಬ ಭಾವನೆ ಇಟ್ಟುಕೊಂಡು ಮೌಲ್ಯಗಳನ್ನು ರೂಢಿಸಿಕೊಂಡು ಬಾಳಬೇಕು ಎಂದರು.
ಈ ಸಂದರ್ಭದಲ್ಲಿ ಗ್ರಾ.ಪಂ.ಕಾರ್ಯದರ್ಶಿ ಮಂಜುನಾಥ, ಗ್ರಾ.ಪಂ.ಸದಸ್ಯರು ಮಹಾಲಿಂಗಪ್ಪ, ರಾಜಮ್ಮ.ಕಮಲಮ್ಮ, ಮುಖ್ಯ ಶಿಕ್ಷಕರಾದ ವಿಶ್ವೇಶ್ವರಯ್ಯ, ಸಹ ಶಿಕ್ಷಕರು ಶ್ರೀನಿವಾಸ, ಪೃಥ್ವಿರಾಜ್, ಅಖಿಲ ಯಾದವ್, ದೈಹಿಕ ಶಿಕ್ಷಕ ಲಕ್ಷ್ಮೀನಾರಾಯಣ, ಗ್ರಾಮಸ್ಥರಾದ ಈರಣ್ಣ, ವಸಂತ ಹಾಗೂ ಊರಿನ ಅನೇಕ ಗ್ರಾಮಸ್ಥರು ಪಾಲ್ಗೊಂಡಿದ್ದರು.
ವರದಿ: ರಾಮಪ್ಪ ಸಿ.ಕೆ.ಪುರ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy