ಪಾವಗಡ: ತಾಲ್ಲೂಕು ನಿಡಗಲ್ಲು ಹೋಬಳಿ ಚನ್ನಕೇಶವಫುರ ಗ್ರಾ.ಪಂ. ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ದೈಹಿಕ ಶಿಕ್ಷಕರಿಗೆ ಪುನಶ್ಚೇತನ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್ ಡಿ ಎಂ ಸಿ ಅಧ್ಯಕ್ಷರಾದ ರಾಮಪ್ಪ ಹಾಗೂ ದೈಹಿಕ ಶಿಕ್ಷಣ ವಿಷಯ ಪರಿವೀಕ್ಷರಾದ ಚಿದಾನಂದ ಸ್ವಾಮಿ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಚಿದಾನಂದ ಸ್ವಾಮಿ, ಸುಮಾರು ಎರಡು ವರ್ಷಗಳ ಕಾಲ ಶಾಲೆಯ ಮಕ್ಕಳು ವಿವಿಧ ಚಟುವಟಿಕೆಗಳನ್ನು ದೂರ ಇದ್ದರು. ಈಗ ಮಕ್ಕಳು ಶಾಲೆಗೆ ಬರುತ್ತಿದ್ದಾರೆ. ಹೀಗಾಗಿ ಶಿಕ್ಷಕರಿಗೆ ಇದೊಂದು ಸವಾಲಾಗಿದೆ. ವಿದ್ಯಾರ್ಥಿಗಳನ್ನು ಚಟುವಟಿಕೆಯಲ್ಲಿರುವಂತೆ ಮಾಡಬೇಕಿದೆ ಎಂದು ಅವರು ಇದೇ ವೇಳೆ ತಿಳಿಸಿದರು.
ಈ ಸಂದರ್ಭದಲ್ಲಿ ಶಿಕ್ಷಕರ ಸಂಘದ ಅಧ್ಯಕ್ಷ ಹನುಮಂತರಾಯ ಟಿ., ಕರಿಯಣ್ಣ ಕೆ.ಪಿ., ಚಂದ್ರಶೇಖರ ರಾವ್ ಸಂಪನ್ಮೂಲ ವ್ಯಕ್ತಿ ಹರೀಶ್. ನರಸಿಂಹ ಮೂರ್ತಿ, ತಿಮ್ಮನಾಯ್ಕ ರಾಜ್ಯ ಸಂಘದ ಜಿಲ್ಲಾ ಸಂಘದ ತಾಲ್ಲೂಕು ಸಂಘದ ಎಲ್ಲಾ ದೈಹಿಕ ಶಿಕ್ಷಕರು ಭಾಗವಹಿಸಿದ್ದರು.
ವರದಿ: ರಾಮಪ್ಪ ಸಿ.ಕೆ.ಪುರ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy