nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ

    April 19, 2026

    ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ

    April 19, 2026
    Facebook Twitter Instagram
    ಟ್ರೆಂಡಿಂಗ್
    • ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    • ಅವೈಜ್ಞಾನಿಕ ಅಂಡರ್‌ ಪಾಸ್; ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಜಯಂತಿ ಗ್ರಾಮಸ್ಥರಿಂದ ಧರಣಿ
    • ಸಿಂಗಾಪುರ ಗ್ರಾಮಕ್ಕೆ ಸರ್ಕಾರಿ ಬಸ್‌ ಸೌಲಭ್ಯ ಕಲ್ಪಿಸಲು ಮಹಿಳೆಯರ ಆಗ್ರಹ: ಕೆಎಸ್‌ ಆರ್‌ ಟಿಸಿ ಅಧಿಕಾರಿಗೆ ಮನವಿ
    • ಹುಳಿಯಾರಿನ ವಾರದ ತರಕಾರಿ ಸಂತೆ ಸ್ಥಳಾಂತರ: ಏಪ್ರಿಲ್ 23ರಿಂದ ಹೊಸ ವ್ಯವಸ್ಥೆ ಜಾರಿ
    • ಅಪಘಾತ ಸಂಭವಿಸುವ ಜಾಗಗಳನ್ನು ಗುರುತಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಕಾರಾತ್ಮಕ ಚಿಂತನೆ ಬೆಳೆಸಿಕೊಳ್ಳಿ: ವಿದ್ಯಾರ್ಥಿಗಳಿಗೆ ನಟ ಅನಿರುದ್ಧ್ ಕರೆ
    ರಾಜ್ಯ ಸುದ್ದಿ January 17, 2025

    ಸಕಾರಾತ್ಮಕ ಚಿಂತನೆ ಬೆಳೆಸಿಕೊಳ್ಳಿ: ವಿದ್ಯಾರ್ಥಿಗಳಿಗೆ ನಟ ಅನಿರುದ್ಧ್ ಕರೆ

    By adminJanuary 17, 2025No Comments2 Mins Read
    tumakuru vv

    ತುಮಕೂರು:  ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಶುಕ್ರವಾರ ಕಲ್ಪತರು ಉತ್ಸವದ ಸಂಭ್ರಮ; ಹಬ್ಬದ ವಾತಾವರಣ ಮನೆಮಾಡಿತ್ತು. ಸಿನಿಮಾ ತಾರೆಯರಾದ ಅನಿರುದ್ಧ ಜಟ್ಕರ್, ಅನುಷಾ ರಾಯ್ ಹಾಗೂ ದೀಪಿಕಾ ದಾಸ್‍ ಉತ್ಸವದ ಮೆರುಗನ್ನು ಹೆಚ್ಚಿಸಿದರು.

    ಕಲಾತಂಡಗಳ ಮೆರವಣಿಗೆಯಲ್ಲಿ ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಭಾಗವಹಿಸಿ ಸಾಂಪ್ರದಾಯಿಕ ಉಡುಗೆ–ತೊಡುಗೆಗಳೊಂದಿಗೆ ವಿವಿಧ ಕಲಾಪ್ರಕಾರಗಳನ್ನು ಪ್ರತಿನಿಧಿಸಿದರು. ವೀರಗಾಸೆ, ಯಕ್ಷಗಾನ, ಕೋಲಾಟ, ಡೊಳ್ಳು ಕುಣಿತ ಹೀಗೆ 20ಕ್ಕೂ ಹೆಚ್ಚು ವಿದ್ಯಾರ್ಥಿ ಕಲಾತಂಡಗಳು ಭಾಗವಹಿಸಿದವು. ಮೆರವಣಿಗೆ ತುಮಕೂರು ವಿಶ್ವವಿದ್ಯಾನಿಲಯದಿಂದ ಆರಂಭವಾಗಿ ಶಿವಕುಮಾರ ಸ್ವಾಮೀಜಿ ವೃತದ ಮೂಲಕ ಸಾಗಿತು.


    Provided by
    Provided by

    ಚಿತ್ರನಟ ಅನಿರುದ್ಧ ಜಟ್ಕರ್ ಮಾತನಾಡಿ, ನಮ್ಮ ಚಿಂತನೆಗಳು ಯಾವಾಗಲೂ ಸಕಾರಾತ್ಮಕವಾಗಿರಬೇಕು. ವಿದ್ಯೆ ಎಂಬುದು ಶಕ್ತಿಯುತವಾದ ಆಯುಧ. ವಿದ್ಯೆಯನ್ನು ಸಕಾರಾತ್ಮಕವಾದ ಕಾರ್ಯಗಳಿಗೆ ಬಳಸಿಕೊಂಡರೆ ಸಮಾಜದಲ್ಲಿರುವ ಕೊಳಕನ್ನು ತೊಳೆಯಬಹುದು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತನ್ನು ಹೇಳಿದರು.

    ಶಿಕ್ಷಣ ಕೇವಲ ಉದ್ಯೋಗಕ್ಕೆ ಸೀಮಿತವಾಗಬಾರದು. ಸಾಮಾಜಿಕ ಕಾರ್ಯಗಳಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳಬೇಕು ಎಂದರು.

    ನಟಿ ಅನುಷಾ ರಾಯ್ ಮಾತನಾಡಿ, ಯಾರೂ ಕದಿಯಲು ಸಾಧ್ಯವಾಗದ ಎರಡು ವಿಷಯಗಳೆಂದರೆ ವಿದ್ಯೆ ಮತ್ತು ಕಲೆ. ಶಿಕ್ಷಣ ಬದುಕಿಗೆ ಬಹಳ ಮುಖ್ಯವಾದ ಅಂಶ. ವಿದ್ಯಾರ್ಥಿ ಬದುಕು ಜೀವನದ ಒಂದು ದೊಡ್ಡಘಟ್ಟ. ಈ ಹಂತದಲ್ಲಿ ನಿಮ್ಮ ಪ್ರತಿಭೆಗಳನ್ನು ನೀವೇ ಗುರುತಿಸಿಕೊಳ್ಳಬೇಕು ಎಂದರು.

    ಮತ್ತೋರ್ವ ನಟಿ ದೀಪಿಕಾ ದಾಸ್ ಮಾತನಾಡಿ,  ಶಿಕ್ಷಣದ ಜೊತೆಜೊತೆಯಲ್ಲಿ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಭಾಗವಹಿಸಬೇಕು. ಸಾಂಸ್ಕೃತಿಕ ನಗರ ಎಂದೇ ಪ್ರಸಿದ್ಧವಾದ ಈ ನಾಡಿನಲ್ಲಿ ಹುಟ್ಟಿ ಬೆಳೆದಿರುವಂತಹ ಪ್ರತಿಭೆಗಳು ಬಹಳ ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದ್ದಾರೆ ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ಶಿಕ್ಷಣವೆಂಬುದು ಕೇವಲ ಅಕ್ಷರ ಕಲಿಕೆಯಲ್ಲಿ ಮಾತ್ರ ಇರುವುದಿಲ್ಲ. ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿಕೊಳ್ಳಲು ವೇದಿಕೆ ಸೃಷ್ಟಿ ಮಾಡುವುದು ಕೂಡ ಶಿಕ್ಷಣ ಸಂಸ್ಥೆಗಳ ಕರ್ತವ್ಯ ಎಂದರು.

    ಕಾರ್ಯಕ್ರಮದಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವೆ ನಾಹಿದಾ ಜಮ್‍ ಜಮ್, ಪರೀಕ್ಷಾಂಗ ಕುಲಸಚಿವ ಪ್ರೊ.ಪ್ರಸನ್ನಕುಮಾರ್ ಕೆ. ಉಪಸ್ಥಿತರಿದ್ದರು.

    ಸಾಂಸ್ಕೃತಿಕ ಚಟುವಟಿಕೆಗಳ ಘಟಕದ ಸಂಯೋಜಕ ಡಾ. ದೇವರಾಜು ಎಸ್. ಸ್ವಾಗತಿಸಿದರು.  ವಿದ್ಯಾರ್ಥಿಕ್ಷೇಮಪಾಲನಾ ಘಟಕದ ನಿರ್ದೇಶಕ ಪ್ರೊ. ಬಸವರಾಜು ಜಿ. ವಂದಿಸಿದರು. ಸಹ ಪ್ರಾಧ್ಯಾಪಕ ಡಾ.ಸಿಬಂತಿ ಪದ್ಮನಾಭ ಕೆ. ವಿ. ನಿರೂಪಿಸಿದರು. ‘ಕೋರ’ ಹಾಗೂ ‘ಹ್ಯಾಶ್‍ಟ್ಯಾಗ್ ಪಾರುಪಾರ್ವತಿ’ ಚಿತ್ರತಂಡಗಳು ಭಾಗವಹಿಸಿದವು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್‌ ಕಾರು ನೀಡಿದ ಶೋರೂಂ ಸಿಬ್ಬಂದಿ; ಸರಣಿ ಅಪಘಾತ, ಪಾದಚಾರಿಗೆ ಗಂಭೀರ ಗಾಯ

    April 17, 2026

    ರಾಜ್ಯದಲ್ಲಿ ಬರಗಾಲದ ಕರಿನೆರಳು: ಅಧಿಕಾರಕ್ಕಾಗಿ ಸಿಎಂ–ಡಿಸಿಎಂ ಕಚ್ಚಾಟ: ಆರ್. ಅಶೋಕ್ ತೀವ್ರ ವಾಗ್ದಾಳಿ

    April 17, 2026

    ಯೋಗೇಶ್ ಗೌಡ ಹತ್ಯೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ

    April 17, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಏ.20ರಂದು ಶ್ರೀಜಗಜ್ಯೋತಿ ಬಸವೇಶ್ವರರ ಜಯಂತಿ

    April 19, 2026

    ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ಮಹಾನಗರ ಪಾಲಿಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು…

    ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ

    April 19, 2026

    ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ

    April 19, 2026

    ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ

    April 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.