ತುರುವೇಕೆರೆ: ತಾಲೂಕಿನ ಮಾಯಸಂದ್ರ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಾಮಾನ್ಯ ಸೇವಾ ಕೇಂದ್ರವನ್ನು ತುರುವೇಕೆರೆ ಗ್ರಾಮಾಂತರ ಯೋಜನಾಧಿಕಾರಿ ಅನಿತಾ ಶೆಟ್ಟಿ, ಮೇಲ್ವಿಚಾರಕರಾದ ಅಕ್ಷತಾ ರವರ ನೇತೃತ್ವದಲ್ಲಿ, ಹೋಬಳಿಯ ಪ್ರಮುಖ ಮುಖಂಡರ ಜೊತೆಗೆ ಉದ್ಘಾಟಿಸಿದರು.
ಕಾರ್ಯಕ್ರಮವನ್ನು ಜ್ಯೋತಿ ಬೆಳಗುವ ಮೂಲಕಉದ್ಘಾಟಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಅನಿತಾ ಶೆಟ್ಟಿ, ಡಾ.ವೀರೇಂದ್ರ ಹೆಗಡೆಯವರ ಆಶಯದಂತೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಈಗಾಗಲೇ ಹಲವಾರು ಸೇವೆಗಳನ್ನು ಗ್ರಾಮೀಣ ಪ್ರದೇಶದಲ್ಲಿ ನೀಡುತಿದ್ದು, ತಾಲೂಕಿನಲ್ಲಿ ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು, ಗ್ರಾಮೀಣ ಮಟ್ಟದಲ್ಲಿ ಸಂಘಟನೆ ಮಾಡಿ ಹಲವಾರು ಗುಂಪುಗಳನ್ನು ಮಾಡಿ ಮಹಿಳಾ ಸ್ವಾವಲಂಬನೆಗೆ ಒತ್ತು ನೀಡಿ ಬಡ ಕುಟುಂಬಗಳ ಅಭಿವೃದ್ಧಿಗೆ ಕಡಿಮೆ ಬಡ್ಡಿ ದರದಲ್ಲಿ ಬ್ಯಾಂಕ್ ಮೂಲಕ ಸಾಲ ಕೊಡಿಸಿ ಅಭಿವೃದ್ಧಿಯತ್ತ ಕೊಂಡೊಯ್ಯುವ ಕೆಲಸ ಮಾಡುತ್ತಿದ್ದೆ. ಈಗ ಅದರ ಸಾಲಿಗೆ ಸಾಮಾನ್ಯ ಸೇವಾ ಕೇಂದ್ರವನ್ನು ನೀಡುವುದರ ಮೂಲಕ ಸರ್ಕಾರದ ಹಲವಾರು ಯೋಜನೆಗಳ ಸೇವೆಗಳನ್ನು ಸ್ಥಳೀಯ ಮಟ್ಟದಲ್ಲಿ ನೀಡಿ ಗ್ರಾಮೀಣ ಭಾಗದ ಜನರು ಕಛೇರಿ ಗಳಿಗೆ ಅಲೆದಾಡುವುದನ್ನು ತಪ್ಪಿಸುವ ಸಲುವಾಗಿ ಸಂಸ್ಥೆಯು ಸಮಾಜಸೇವೆ ಕಾರ್ಯಕ್ಕೆ ಮುಂದಾಗಿದ್ದಾರೆ. ಸ್ಥಳೀಯರು ಕೇಂದ್ರ ಸರ್ಕಾರ ಯೋಜನೆಯ ಈ ಶ್ರಮ ಕಾರ್ಡನ್ನು ಸ್ಥಳೀಯರು ಉಚಿತವಾಗಿ ನೊಂದಾಯಿಸಿಕೊಳ್ಳಿ. ಸ್ಥಳೀಯ ಗ್ರಾಮಸ್ಥರು ಹಾಗೂ ಅಕ್ಕ ಪಕ್ಕ ಗ್ರಾಮಸ್ಥರು ಈ ಸೇವೆಯನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಗ್ರಾ.ಪಂ. ಉಪಾಧ್ಯಕ್ಷ ಭಾರತಿ ಲಕ್ಷ್ಮಣ್. ಸದಸ್ಯರಾದ ಖದೀರ್ ಪಾಷಾ. ಮುಂತಾದ ಸದಸ್ಯರುಗಳು ಗ್ರಾಮದ ಹಿರಿಯ ಮುಖಂಡರು ಗ್ರಾಮಸ್ಥರು, ಕೃಷಿ ಮೇಲ್ವಿಚಾರಕರಾದ ನೋಡಲ್ ಅಧಿಕಾರಿ ಮಧು, ಸೇವಾಕೇಂದ್ರದ ನಿರ್ವಾಹಕ ಅರುಣ್, ಸೇವಾ ಪ್ರತಿನಿಧಿ ಚಂದ್ರಕಲಾ, ಚೈತ್ರ , ಸುಧಾ, ಜಯಲಕ್ಷ್ಮಿ , ತಬಸುಮ್, ಯಶವಂತ್, ಸೇರಿದಂತೆ ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು ಕಾರ್ಯಕರ್ತರು ಮುಂತಾದವರು ಉಪಸ್ಥಿತರಿದ್ದರು.
ವರದಿ: ಸಚಿನ್ ಮಾಯಸಂದ್ರ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy