ತುಮಕೂರು: ನಮ್ಮ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ ನಂತರ ಹರಿದು ಹಂಚಿಹೋಗಿದ್ದ ರಾಜ್ಯಗಳನ್ನು ಒಂದುಗೂಡಿಸಿದ್ದು ಒಂದು ದೊಡ್ಡ ಸಾಧನೆ ಎಂದು ಉಮೇರಾ ಬೇಗಂ ತಿಳಿಸಿದರು.
ನಗರದ ಹೊರವಲಯದ ಗೂಳೂರು ಸಮೀಪದ ವರಿನ್ ಅಂತರಾಷ್ಟ್ರೀಯ ವಸತಿ ಶಾಲೆಯಲ್ಲಿ ನಡೆದ 73ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಅವರು, ನಮ್ಮ ಭಾರತ ದೇಶದಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಸಾರುವ ವಿವಿಧ ಧರ್ಮ, ಜಾತಿ ಮತ್ತು ನಾನಾ ಭಾಷೆಗಳನ್ನಾಡುವ ಜನರಿದ್ದಾರೆ. ಸಾವಿರಾರು ವರ್ಷಗಳಿಂದ ಶೋಷಣೆಗೆ ಒಳಗಾಗಿ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಮತ್ತು ರಾಜಕೀಯ ಸಂವಿಧಾನಾತ್ಮಕವಾಗಿ ಕೆಲವು ಸವಲತ್ತುಗಳನ್ನು ನೀಡುವ ಉದ್ದೇಶದಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರು ಅದ್ಭುತವಾದ ಸಂವಿಧಾನವನ್ನು ನಮಗೆ ನೀಡಿದ್ದಾರೆ ಎಂದರು.
ಡಾ.ಬಿ.ಆರ್.ಅಂಬೇಡ್ಕರ್ ಅವರು ಕೇವಲ ಕೆಲವರಿಗೆ ಮಾತ್ರ ಮೀಸಲಾತಿಯ ಸೌಲಭ್ಯವನ್ನು ಕೊಡದೆ ಎಲ್ಲಾ ವರ್ಗದ ಎಲ್ಲಾ ಜಾತಿಯವರಿಗೆ ಮೀಸಲಾತಿಯ ಸೌಲಭ್ಯವನ್ನು ನೀಡಿದ್ದಾರೆ. ವಿಧವೆಯರಿಗೆ, ಮಹಿಳೆಯರಿಗೆ, ಕಾರ್ಮಿಕರಿಗೆ, ಅಲ್ಪಸಂಖ್ಯಾತರುಗಳಿಗೆ ಮೀಸಲಾತಿ ಸೌಲಭ್ಯವನ್ನು ನೀಡಲಾಗಿದೆ. ಇಂತಹ ಸಂವಿಧಾನವನ್ನು ನಾವೆಲ್ಲರೂ ಗೌರವಿಸಬೇಕು. ಆದರೆ ಇತ್ತೀಚೆಗೆ ಕೆಲವು ತಿಳಿಗೇಡಿಗಳು ಸಂವಿಧಾನಕ್ಕೆ ಅಗೌರವ ಸಲ್ಲಿಸುತ್ತಿದ್ದಾರೆ. ಪಂಚಾಂಗ ಶ್ರೇಷ್ಠ ಎನ್ನುತ್ತಿದ್ದಾರೆ. ಆದರೆ ರಾಮಾಯಣ ಮಹಾಭಾರತ ಭಗವದ್ಗೀತೆ ಗಳಿಗಿಂತ ನಮ್ಮ ದೇಶದ ಸಂವಿಧಾನ ಸರ್ವಶ್ರೇಷ್ಠ ಎಂದು ಉಮೇರಾ ಬೇಗಂ ಮಕ್ಕಳಿಗೆ ಸಂವಿಧಾನದ ಬಗ್ಗೆ ತಿಳಿಸಿ ಹೇಳಿದರು.
ವರಿನ್ ಶಿಕ್ಷಣ ಸಂಸ್ಥೆಯ ಛೇರ್ಮನ್ ರಾದ ಆರ್. ಕೃಷ್ಣಯ್ಯ ಅವರು ಧ್ವಜಾರೋಹಣ ನೆರವೇರಿಸಿದರು. ವೇದಿಕೆಯಲ್ಲಿ ಛೇರ್ಮನ್ ರಾದ ಆರ್. ಕೃಷ್ಣಯ್ಯ, ಕಾರ್ಯದರ್ಶಿಗಳಾದ ಮಮತಾ ಸುರೇಶ್, ಸಿಇಓ ಕೃಷ್ಣಪ್ಪ, ಕಾಲೇಜಿನ ಪ್ರಾಚಾರ್ಯರಾದ ದಿವ್ಯಶ್ರೀ ಸಿ.ಎಂ. ಸಂಸ್ಥೆಯ ಪ್ರಿನ್ಸಿಪಾಲರಾದ ಸೆಂಥಿಲ್.ಆರ್ ಮುಖ್ಯ ಶಿಕ್ಷಕರಾದ ಶಿವಕುಮಾರ್, ರಮೇಶ್, ಮಂಜುನಾಥ್ ಸೇರಿದಂತೆ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ದಿವ್ಯ ಶ್ರೀ ಸ್ವಾಗತಿಸಿದರು ಹರೀಶ್ ವಂದಿಸಿದರು ದೀಪಶ್ರೀ ಕಾರ್ಯಕ್ರಮ ನಿರೂಪಿಸಿದರು.
ವರದಿ: ಯತೀಶ್ ಕುಮಾರ್, ತುಮಕೂರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy