nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ

    August 9, 2026
    Facebook Twitter Instagram
    ಟ್ರೆಂಡಿಂಗ್
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    • ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ
    • KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
    • ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    • ಸರಗೂರು: ಮಾದರ ಮಹಾಸಭೆಯ ಉದ್ಘಾಟನೆ –ಪ್ರತಿಭಾ ಪುರಸ್ಕಾರ:  ಒಳಮೀಸಲಾತಿ ಜಾರಿಗೆ ಕೆ.ಎಚ್. ಮುನಿಯಪ್ಪ ಪ್ರತಿಪಾದನೆ
    • ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮುಲ್ ಅಧ್ಯಕ್ಷರಾಗಿ ಶಾಸಕ ಹೆಚ್.ವಿ.ವೆಂಕಟೇಶ್ ಆಯ್ಕೆ: ಹೇಗಿತ್ತು ಚುನಾವಣಾ ಸಮರ!?
    ತುಮಕೂರು January 23, 2025

    ತುಮುಲ್ ಅಧ್ಯಕ್ಷರಾಗಿ ಶಾಸಕ ಹೆಚ್.ವಿ.ವೆಂಕಟೇಶ್ ಆಯ್ಕೆ: ಹೇಗಿತ್ತು ಚುನಾವಣಾ ಸಮರ!?

    By adminJanuary 23, 2025No Comments3 Mins Read
    tumul

    ತುಮಕೂರು: ತೀವ್ರ ಕುತೂಹಲ ಮೂಡಿಸಿದ್ದ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ತುಮುಲ್) ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪಾವಗಡ ವಿಧಾನಸಭಾ ಕ್ಷೇತ್ರದ ಶಾಸಕ ಹೆಚ್.ವಿ. ವೆಂಕಟೇಶ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

    ಇದರಿಂದ ಮೊದಲ ಬಾರಿಗೆ ನಾಮನಿರ್ದೇಶಕರಿಗೆ ಶಾಸಕರೊಬ್ಬರು ತುಮುಲ್ ಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ತುಮುಲ್ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಸಕ ವೆಂಕಟೇಶ್ 2 ನಾಮಪತ್ರ ಹಾಗೂ ಎನ್ ಡಿ ಎ ಅಭ್ಯಥಿಯಾಗಿ ಎಸ್.ಆರ್. ಗೌಡ ನಾಮಪತ್ರ ಸಲ್ಲಿಸಿದ್ದರು.

    ಮಧ್ಯಾಹ್ನ 12 ಗಂಟೆಯಾದರೂ ಯಾರು ನಾಮಪತ್ರವನ್ನು ಹಿಂಪಡೆಯದ ಕಾರಣ ಚುನಾವಣಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ಚುನಾವಣೆ ಪ್ರಕ್ರಿಯೆಗೆ ಚಾಲನೆ ನೀಡಿದರು. ನಂತರ ಮತದಾನ ನಡೆದು ಶಾಸಕ ಹೆಚ್.ವಿ.ವೆಂಕಟೇಶ್ ಅವರು 9 ಮತಗಳನ್ನು ಪಡೆದರೆ, ಎಸ್.ಆರ್.ಗೌಡ 5 ಮತಗಳನ್ನು ಪಡೆದ ಹಿನ್ನೆಲೆಯಲ್ಲಿ ಶಾಸಕ ವೆಂಕಟೇಶ್ ಅವರು ತುಮುಲ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಘೋಷಿಸಿದರು.

    ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಗದ್ದುಗೆಗೇರಲು ತೀವ್ರ ಪೈಪೋಟಿ ನಡೆದಿತ್ತು. ಆದರೆ ಇತ್ತೀಚೆಗೆ ನಡೆದ ಅಚ್ಚರಿ ಬೆಳವಣಿಗೆಯಲ್ಲಿ ಪಾವಗಡ ಶಾಸಕ ಹೆಚ್.ವಿ. ವೆಂಕಟೇಶ್ ಅವರನ್ನು ಸರಕಾರ ನಾಮನಿರ್ದೇಶನ ಸದಸ್ಯರಾಗಿ ನೇಮಕ ಮಾಡಿತ್ತು.

    ತುಮುಲ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ಕಾಂಗ್ರೆಸ್ ಪಕ್ಷದ ವತಿಯಿಂದ ನಾಮ ನಿರ್ದೇಶನ ಸದಸ್ಯರಾದ ಶಾಸಕ ಹೆಚ್.ವಿ. ವೆಂಕಟೇಶ್ ಅವರು ಎರಡು ನಾಮಪತ್ರ ಹಾಗೂ ಎನ್ ಡಿ ಎ ಅಭ್ಯಥಿಯಾಗಿ ಸಿರಾ ತಾಲ್ಲೂಕು ನಿರ್ದೇಕರ  ಎಸ್.ಆರ್.ಗೌಡ ಅವರು ನಾಮಪತ್ರ ಸಲ್ಲಿಸಿದ್ದರು. ಇದೇ ಮೊದಲ ಬಾರಿಗೆ ತುಮುಲ್ ಇತಿಹಾಸದಲ್ಲಿ ನಾಮನಿರ್ದೇಶಿತ ಸದಸ್ಯರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

    ತುಮುಲ್ ನಲ್ಲಿ 10 ಮಂದಿ ಚುನಾಯಿತ ನಿರ್ದೇಶಕರಿದ್ದರು,  ನಾಮ ನಿರ್ದೇಶಿತರು ಹಾಗೂ ಅಧಿಕಾರಿಗಳು ಸೇರಿ ಒಟ್ಟು 15 ಮಂದಿ ಮತದಾನ ಮಾಡುವ ಹಕ್ಕು ಹೊಂದಿದ್ದರು. ಈ ಪೈಕಿ ಕಾಂಗ್ರೆಸ್ ಬೆಂಬಲಿತ  ನಿರ್ದೇಶಕ ಐವರು, ಒಬ್ಬರು ಕೆಎಂಎಫ್ ಪ್ರತಿನಿಧಿ, ಒಬ್ಬರು ಸರಕಾರದಿಂದ ನಾಮ ನಿರ್ದೇಶಿತ ಸದಸ್ಯರು , ಜಿಲ್ಲಾ ಸಹಕಾರ ಸಂಘಗಳ ಜಂಟಿ ನಿಬಂಧಕರು, ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕರು, ಎನ್ಡಿಹಡಿಬಿಯ ಒಬ್ಬರು ಮತ ಚಲಾಯಿಸುವ ಹಕ್ಕು ಹೊಂದಿದ್ದರು.

    ಈ ಬಾರಿ ತುಮುಲ್ ಅಧ್ಯಕ್ಷ ಸ್ಥಾನದ ಗದ್ದುಗೆಗೇರಲು ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ರವರ ಪತ್ನಿ ಭಾರತಿದೇವಿ, ಮಧುಗಿರಿಯ ನಿರ್ದೇಶಕ ಹಾಗೂ ಸಹಕಾರ ಸಚಿವ ಕೆ.ಎನ್. ರಾಜಣ್ಣನವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ನಾಗೇಶ್ ಬಾಬು, ಸಿರಾ ನಿರ್ದೇದಶಕ ಎಸ್.ಆರ್. ಗೌಡ, ತಿಪಟೂರು ತಾಲ್ಲೂಕು ಮಾದಿಹಳ್ಳಿ ಪ್ರಕಾಶ್ ಅವರ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಆದರೆ ನಿನ್ನೆಯಿಂದೀಚೆಗೆ ನಡೆದ ಅಚ್ಚರಿ ಬೆಳವಣಿಗೆಯಲ್ಲಿ ಪಾವಗಡ ಶಾಸಕ ಹೆಚ್.ವಿ. ವೆಂಕಟೇಶ್ ಅವರು ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಚುನಾಯಿತ ಸದಸ್ಯರ ಎಲ್ಲ ಕಸರತ್ತುಗಳಿಗೆ ತೆರೆ ಬಿದ್ದಿತು.

    ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಹೆಚ್.ವಿ. ವೆಂಕಟೇಶ್ ಅವರು, ತುಮಕೂರು ಹಾಲು ಒಕ್ಕೂಟದಲ್ಲಿ ಎಲ್ಲ ನಿರ್ದೇಶಕರ ಸಹಕಾರ ಪಡೆದು ಉತ್ತಮವಾಗಿ ಆಡಳಿತ ನಡೆಸುವುದಾಗಿ ತಿಳಿಸಿದರು. ತುಮಕೂರು ಹಾಲು ಒಕ್ಕೂಟದ ಎಲ್ಲ ನಿರ್ದೇಶಕರನ್ನು ಒಗ್ಗೂಡಿಸಿಕೊಂಡು ಉತ್ತಮವಾಗಿ ಕೆಲಸ ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಒಕ್ಕೂಟದಲ್ಲಿ ಅಗತ್ಯ ಇರುವ ಬದಲಾವಣೆ ತರಲು ಶ್ರಮಿಸುವುದಾಗಿ ತಿಳಿಸಿದರು.

    ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಹಕಾರ ಸಚಿವ ಕೆ.ಎನ್. ರಾಜಣ್ಣ ಹಾಗೂ ಪಕ್ಷದ ಎಲ್ಲ ನಾಯಕರ ಆಶೀರ್ವಾದದಿಂದ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ. ನನ್ನ ಆಯ್ಕೆಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.

    ತುಮುಲ್ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಶಾಸಕ ವೆಂಕಟೇಶ್ ಅವರು ಗೆಲುವು ಸಾಧಿಸಿದ್ದರಿಂದ ಪಾವಗಡ ತಾಲ್ಲೂಕಿನಿಂದ ಆಗಮಿಸಿದ್ದ ನೂರಾರು ಕಾಂಗ್ರೆಸ್ ಕಾರ್ಯಕರ್ತ ಹಾಗೂ ಅವರ ಬೆಂಬಲಿಗರು ತುಮುಲ್ ಆಡಳಿತ ಕಚೇರಿ ಮುಂಭಾಗ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.

    ತುಮಕೂರು ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶಾಸಕ ಹೆಚ್.ವಿ. ವೆಂಕಟೇಶ್ ಅವರನ್ನು ಒಕ್ಕೂಟದ ನಿರ್ದೇಶಕರಾದ ಹೆಚ್.ಎ.ನಂಜೇಗೌಡ, ಕೆ.ಪಿ. ಭಾರತಿದೇವಿ, ಬಿ.ಎನ್. ಶಿವಪ್ರಕಾಶ್, ಎಂ.ಕೆ.ಪ್ರಕಾಶ್, ಸಿ.ವಿ. ಮಹಲಿಂಗಯ್ಯ, ಡಿ. ಕೃಷ್ಣಕುಮಾರ್, ಬಿ. ನಾಗೇಶ್ ಬಾಬು, ಸಿದ್ದಗಂಗಯ್ಯ, ಎಸ್.ಆರ್. ಗೌಡ, ಚಂದ್ರಶೇಖರರೆಡ್ಡಿ, ಅಶ್ವತ್ಥ ನಾರಾಯಣ, ಆಡಳಿತಾಧಿಕಾರಿ ಉಮೇಶ್, ವ್ಯವಸ್ಥಾಪಕ ನಿರ್ದೇಶಕ ಶ್ರೀನಿವಾಸ್ ಸೇರಿದಂತೆ ಹಾಲು ಒಕ್ಕೂಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಅಭಿನಂದಿಸಿದರು.

    ಇದಾದ ನಂತರ ನೂತನ ಅಧ್ಯಕ್ಷ ಹೆಚ್.ವಿ. ವೆಂಕಟೇಶ್ ಅವರು ಸಿದ್ಥಾರ್ಥ  ಮೆಡಿಕಲ್ ಕಾಲೇಜಿಗೆ ತೆರಳಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರನ್ನು ಭೇಟಿ ಮಾಡಿ ಪುಷ್ಪಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು.  ಸಚಿವರು ಸಹ ನೂತನ ಅಧ್ಯಕ್ಷ ವೆಂಕಟೇಶ್ ರವರಿಗೆ ಅಭಿನಂದನೆ ಸಲ್ಲಿಸಿದರು. ಈ ವೇಳೆ ಮಾಜಿ ಸಚಿವ ವೆಂಕಟರಮಣಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026

    ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ

    August 8, 2026

    ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ

    August 8, 2026

    Comments are closed.

    Our Picks

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಭ್ರಷ್ಟಾಚಾರ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ರಾಜಕೀಯದಲ್ಲಿ ಮತ್ತೆ ಆರೋಪ-ಪ್ರತ್ಯಾರೋಪಗಳು…

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ

    August 9, 2026

    KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು

    August 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.