nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ

    June 30, 2025

    ರಾಷ್ಟ್ರಮಟ್ಟದಲ್ಲಿ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ: ಟಿ.ಬಿ.ಜಯಚಂದ್ರ

    June 30, 2025

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025
    Facebook Twitter Instagram
    ಟ್ರೆಂಡಿಂಗ್
    • “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ
    • ರಾಷ್ಟ್ರಮಟ್ಟದಲ್ಲಿ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ: ಟಿ.ಬಿ.ಜಯಚಂದ್ರ
    • ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ
    • ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ ಪಿ.ಎಲ್.ಡಿ. ಬ್ಯಾಂಕ್ ನೂತನ ಅಧ್ಯಕ್ಷರಾಗಿ ಎನ್.ಚಿಕ್ಕರಂಗಯ್ಯ ಆಯ್ಕೆ
    ಕೊರಟಗೆರೆ January 23, 2025

    ಕೊರಟಗೆರೆ ಪಿ.ಎಲ್.ಡಿ. ಬ್ಯಾಂಕ್ ನೂತನ ಅಧ್ಯಕ್ಷರಾಗಿ ಎನ್.ಚಿಕ್ಕರಂಗಯ್ಯ ಆಯ್ಕೆ

    By adminJanuary 23, 2025No Comments2 Mins Read
    koratagere

    ವರದಿ:  ಮಂಜುಸ್ವಾಮಿ ಎಂ.ಎನ್.

    ಕೊರಟಗೆರೆ : ತಾಲ್ಲೂಕಿನ ಪಿ ಎಲ್‍ ಡಿ ಬ್ಯಾಂಕ್‍ ನ ನೂತನ ಅಧ್ಯಕ್ಷರಾಗಿ ಮಾಜಿ ಸಚಿವ ದಿವಂಗತ ಚನ್ನಿಗಪ್ಪನವರ ಆಪ್ತ ಶಿಷ್ಯರಾದ ಎನ್.ಚಿಕ್ಕರಂಗಯ್ಯ ಹಾಗೂ ಉಪಾಧ್ಯಕ್ಷರಾಗಿ ಬಿ.ಡಿ.ನಾಗರಾಜಯ್ಯ ಆಯ್ಕೆಯಾಗಿದ್ದಾರೆ.


    Provided by

    ತಾಲ್ಲೂಕಿನ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‍ ನಲ್ಲಿ ಒಟ್ಟು 14 ಸದಸ್ಯರಿದ್ದು ಒಬ್ಬರು ಸರ್ಕಾರದ ನಾಮ ನಿರ್ದೇಶನ ಸದಸ್ಯರಿರುತ್ತಾರೆ.

    ಜನವರಿ 22 ಬುಧವಾರದಂದು ಪಟ್ಟಣದ ಪಿಎಲ್‍ ಡಿ ಬ್ಯಾಂಕ್ ಕಛೇರಿಯಲ್ಲಿ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಎನ್.ಡಿ.ಎ. ಪಕ್ಷದ ಬೆಂಬಲಿತ ಅಭ್ಯರ್ಥಿ ಚಿಕ್ಕರಂಗಯ್ಯ 8 ಮತಗಳನ್ನು ಪಡೆದು ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕೆ.ಎಲ್.ಆನಂದ್ ರವರನ್ನು 1 ಮತಗಳ ಅಂತರದಿಂದ ಸೋಲಿಸಿದರು.

    ಅದೇ ರೀತಿ ಉಪಾದ್ಯಕ್ಷ ಸ್ಥಾನಕ್ಕೆ ಎನ್.ಡಿ.ಎ. ಬೆಂಬಲಿತ ಅಭ್ಯರ್ಥಿ ಬಿ.ಡಿ.ನಾಗರಾಜಯ್ಯ 8 ಮತಗಳನ್ನು ಪಡೆದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕೆಂಚಮ್ಮ ರವರನ್ನು 1 ಮತಗಳ ಅಂತರದಿಂದ ಸೋಲಿಸಿದರು.

    ಕೊರಟಗೆರೆ ಕಾಂಗ್ರೆಸ್ ಗೆ ಆಘಾತ :

    ಪಿ ಎಲ್ ಡಿ ಬ್ಯಾಂಕ್‍ನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ನಾಮ ನಿರ್ದೇಶನ ಅಭ್ಯರ್ಥಿಯು ಸೇರಿ 9 ಜನರಿದ್ದು ಒಟ್ಟು 15 ಸ್ಥಾನಗಳಲ್ಲಿ ಹೆಚ್ಚಿನ ಸ್ಥಾನದಲ್ಲಿದ್ದರು ಆದರೆ ಚುನಾವಣಾ ಸಂಧರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಚಿಕ್ಕರಂಗಯ್ಯ ಮತ್ತು ಬಿ.ಡಿ.ನಾಗರಾಜಯ್ಯ ಎನ್‍ಡಿಎ ಕೂಟ ಸೇರಿ 6 ಮತ್ತು 2 ಮತಗಳನ್ನು ಹೆಚ್ಚಿಗೆ ಮಾಡಿಕೊಂಡು ಬಂಡಾಯ ಬಾವುಟ ಆರಿಸಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರುಗಳಾದರು. ಕಾಂಗ್ರೆಸ್ ಪಕ್ಷದ ಬ್ಲಾಕ್ ಕಾಂಗ್ರೆಸ್ ಹಾಗೂ ಮುಖಂಡರ ಅತಿಯಾದ ಆತ್ಮ ವಿಶ್ವಾಸ ತಳಮಟ್ಟದಲ್ಲಿ ಕೆಲಸ ನಿರ್ವಹಿಸದೇ ಇರುವುದಕ್ಕೆ ಈ ಸೋಲಾಗಿದ್ದು ಇದೇ ಸೋಲು ತುಮಕೂರು ಹಾಲು ಉತ್ಪಾಧಕರ ಸಹಕಾರ ಸಂಘದ ನಿರ್ದೇಶಕರ ಚುನಾವಣೆಯಲ್ಲೂ ಸಹ ಉಂಟಾಗಿದೆ ಎಂದು ಕೆಲವು ಕಾರ್ಯಕರ್ತರು ದೂರಿದ್ದಾರೆ.

     

    ನಮ್ಮ ಮುಖಂಡರ ಒಗ್ಗಟ್ಟು ಮತ್ತು ಶ್ರಮದಿಂದ ಹಾಗೂ ಬ್ಯಾಂಕ್‍ನ ನಿರ್ದೇಶಕರ ಬೆಂಬಲದಿಂದ ನಾವು ಈ ಚುನಾವಣೆಯಲ್ಲಿ ಜಯಗಳಿಸಿದ್ದು ರೈತರಿಗೆ ಹತ್ತಿರವಾದ ಈ ಬ್ಯಾಂಕ್‍ನಿಂದ ಹಲವು ಸೇವೆ ಸಲ್ಲಿಸಲಾಗುವುದು ಎಂದರು.

    —  ಸುಧಾಕರ್ ಲಾಲ್, ಮಾಜಿ ಶಾಸಕ.


    ನಮ್ಮ ಎನ್‍ ಡಿಎ ಮೈತ್ರಿಕೂಟ ಕೊರಟಗೆರೆಯಲ್ಲಿ ನಡೆಯುತ್ತಿರುವ ಹಲವು ಚುನಾವಣೆಗಳಲ್ಲಿ ಜಯಗಳಿಸುತ್ತಿದ್ದು ಮುಂಬರುವ ಎಲ್ಲಾ ಚುನಾವಣೆಯಲ್ಲೂ ಸಹ ನಮ್ಮ ಕಾರ್ಯಕರ್ತರ ಬಲದಿಂದ ಜಯಗಳಿಸುತ್ತೇವೆ ಅದೇ ರೀತಿ ರಾಜ್ಯದಲ್ಲಿ ಮತ್ತು ತುಮಕೂರು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಬಲ ಕ್ಷೀಣಿಸುತ್ತಿದ್ದು ಎನ್‍ಡಿಎ ಬಲ ಹೆಚ್ಚುತ್ತಿದೆ ಎಂದರು.

    —  ಅಂಜಿನಪ್ಪ, ಜೆಡಿಎಸ್ ಜಿಲ್ಲಾಧ್ಯಕ್ಷ.


    ನನ್ನ ಈ ನಿರ್ಧಾರಕ್ಕೆ ಕಾಂಗ್ರೆಸ್ ಪಕ್ಷದ ಕೆಲವು ಮುಖಂಡರುಗಳು ಕಾರಣವಾಗಿದ್ದು ಈ ಹಿಂದೆ ಚೆನ್ನಿಗಪ್ಪನವರ ಕಾಲದಲ್ಲಿ ಸಕ್ರಿಯವಾಗಿ ಜೆಡಿಎಸ್ ನಲ್ಲಿದ್ದೆ ಬದಲಾದ ಕಾಲದಲ್ಲಿ ಕಾಂಗ್ರೆಸ್‍ಗೆ ಬಂದು ಈಗ ಮತ್ತೆ ಜೆ.ಡಿ.ಎಸ್ ಸೇರಿಕೊಂಡಿದ್ದೇನೆ ಮುಂದೆ ಬ್ಯಾಂಕ್‍ನಲ್ಲಿ ಅಧ್ಯಕ್ಷನಾಗಿ ನಿಷ್ಟೆಯಿಂದ ಕೆಲಸ ನಿರ್ವಹಿಸುತ್ತೇನೆ ಎಂದರು.

    —  ಎನ್.ಚಿಕ್ಕರಂಗಯ್ಯ. ನೂತನ ಅಧ್ಯಕ್ಷ.


    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳ ನಿರ್ಲಕ್ಷ ಮತ್ತು ನನಗೆ ಗೌರವ ನೀಡದಿದ್ದಕ್ಕೆ ಮೂಲ ಕಾಂಗ್ರೆಸಿಗನಾದ ನಾನು ಜೆಡಿಎಸ್ ಪಕ್ಷ ಸೇರಿಕೊಂಡಿದ್ದು ಉಪಾಧ್ಯಕ್ಷನಾಗಿ ನನ್ನ ಕೆಲಸ ಮಾಡುತ್ತೇನೆ ಎಂದರು.

    —  ಬಿ.ಡಿ.ನಾಗರಾಜು, ನೂತನ ಉಪಾಧ್ಯಕ್ಷ.


    ಈ ಸಂದರ್ಭದಲ್ಲಿ ತುಮುಲ್ ನಿರ್ದೇಶಕ ಸಿದ್ದಗಂಗಯ್ಯ, ನಿರ್ದೇಶಕರುಗಳಾದ ಲಕ್ಷ್ಮೀನಾರಾಯಣ್,ಪ್ರಕಾಶ್, ಕಾಮಣ್ಣ,ರಂಗಯ್ಯ, ನೇತ್ರಾವತಿ, ರವೀಂದ್ರ ಹಾಗೂ ಮುಖಂಡರುಗಳಾದ ಕಾಮರಾಜು, ಮಾವತ್ತೂರು ಮಂಜುನಾಥ್, ಸಿದ್ದಮಲ್ಲಯ್ಯ, ಅಶ್ವತ್ಥ ನಾರಾಯಣ್‍, ರಾಜು, ಬೋರ್‍ವೆಲ್ ರಮೇಶ್, ಕಾಕಿಮಲ್ಲಣ್ಣ, ಸಿದ್ದರಾಜು, ಅಣ್ಣಪ್ಪ,ವಿನಯ್‍ ಕುಮಾರ್, ದೊಡ್ಡಯ್ಯ, ಮಧುಸೂದನ್ ಸೇರಿದಂತೆ ಇತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ಜಾಗೃತರಾಗಿರಬೇಕು: ತಹಶೀಲ್ದಾರ್ ಮಂಜುನಾಥ್ ಕೆ.

    June 27, 2025

    ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಇದು ಕಾರ್ಯಕರ್ತರ ಪಕ್ಷ: ನಿಖಿಲ್ ಕುಮಾರಸ್ವಾಮಿ

    June 19, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    “ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು”: ವಿಶ್ವ ಪರಿಸರ ದಿನಾಚರಣೆ

    June 30, 2025

    ಸರಗೂರು: ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು. ಗಿಡಮರಗಳನ್ನು ಹೆಚ್ಚು ಬೆಳೆಸುವುದರಿಂದ ಬಿಸಿಲ ಬೇಗೆ ಕಡಿಮೆಯಾಗಿ ಜನರಿಗೆ ಉತ್ತಮ ಆಮ್ಲಜನಕ ದೊರೆಯಲಿದೆ ಎಂದು…

    ರಾಷ್ಟ್ರಮಟ್ಟದಲ್ಲಿ ಬಿಜೆಪಿಯಲ್ಲಿ ಸಾಕಷ್ಟು ಬದಲಾವಣೆ ಸಾಧ್ಯತೆ: ಟಿ.ಬಿ.ಜಯಚಂದ್ರ

    June 30, 2025

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.