nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026
    Facebook Twitter Instagram
    ಟ್ರೆಂಡಿಂಗ್
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    • ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ
    • KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
    • ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಲ್ಲ ಸಮಸ್ಯೆಗಳಿಗೆ ಶಿಕ್ಷಣವೇ ಪರಿಹಾರ: ಪ್ರೊ.ಡಿ.ಎಸ್.ಚೌಹಾಣ್
    ತುಮಕೂರು January 25, 2025

    ಎಲ್ಲ ಸಮಸ್ಯೆಗಳಿಗೆ ಶಿಕ್ಷಣವೇ ಪರಿಹಾರ: ಪ್ರೊ.ಡಿ.ಎಸ್.ಚೌಹಾಣ್

    By adminJanuary 25, 2025No Comments2 Mins Read
    tumakuru vv

    ತುಮಕೂರು: ನೀವು ಇತರರೊಂದಿಗೆ ನಡೆಸುವ ಸಂಹನವು ನಿಮ್ಮ ಜ್ಞಾನವನ್ನು ತಾನಾಗಿಯೇ ಹೆಚ್ಚಿಸುತ್ತದೆ. ಎಲ್ಲ ಸಮಸ್ಯೆಗಳಿಗೆ ಶಿಕ್ಷಣವೇ ಸರಿಯಾದ ಪರಿಹಾರವಾಗಿದೆ ಎಂದು ಮಥುರಾದ ಜಿ.ಎಲ್.ಎ. ವಿಶ್ವವಿದ್ಯಾಲಯದ  ಸಮಕುಲಾಧಿಪತಿ  ಪ್ರೊ. ಡಿ.ಎಸ್. ಚೌಹಾಣ್ ಹೇಳಿದರು.

    ತುಮಕೂರು ವಿಶ್ವವಿದ್ಯಾನಿಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಪೀಠ ಮತ್ತು ಕೌಶಲ್ಯ ಅಭಿವೃದ್ಧಿಕೋಶದ ವತಿಯಿಂದ ಗುರುವಾರ ಆಯೋಜಿಸಿದ್ದ ‘ಸುಭಾಶ್ಚಂದ್ರ ಬೋಸರ ಮೇಲೆ ಸ್ವಾಮಿ ವಿವೇಕಾನಂದರ ಚಿಂತನೆಗಳ ಪ್ರಭಾವ’  ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಸ್ವಾಮಿ ವಿವೇಕಾನಂದ ಅವರು ಬದುಕುಳಿದಿದ್ದು ಕೆಲವೇ ವರ್ಷಗಳು ಆದರೆ ಅವರು ದೇಶಕ್ಕೆ ಕೊಟ್ಟ ಕೊಡುಗೆ ಅಪಾರ. ಅವರು ಅನಂತ ಜ್ಞಾನವೇ ಆಗಿದ್ದರು ಎಂದ ಪ್ರೊ.ಚೌಹಾಣ್, ಸ್ವರ್ಗಆಕಾಶದಲ್ಲಿಲ್ಲ, ಮುಂಬರುವ ಯುವ ಪೀಳಿಗೆಯಲ್ಲಿದೆ ಎಂಬ ವಿವೇಕಾನಂದರ ಮಾತುಗಳನ್ನು ನೆನಪಿಸಿಕೊಂಡರು.

    ಇಡೀ ವಿಶ್ವವೇ ವಿವೇಕಾನಂದರ ವಿಚಾರಗಳನ್ನು ಅಳವಡಿಸಿಕೊಂಡಾಗ ಶಾಂತಿ ಸಹಬಾಳ್ವೆ ನೆಲೆಯೂರುತ್ತದೆ. ನಮ್ಮ ಮಾತೃಭೂಮಿ ಸೇವೆ ಮಾಡಲು ಸಿಗುವ ಯಾವುದೇ ಅವಕಾಶವನ್ನು ಕಳೆದುಕೊಳ್ಳಬೇಡಿ. ಸ್ವಾಮಿ ವಿವೇಕಾನಂದರ ಪ್ರೇರಣೆಯಿಂದ ಸುಭಾಶ್‌ ಚಂದ್ರ ಬೋಸ್‌ತಮಗೆ ದೊರಕಿದ್ದ ಐಸಿಎಸ್ ಹುದ್ದೆಯನ್ನು ತ್ಯಜಿಸಿ ಸ್ವಾತಂತ್ರ‍್ಯ ಚಳುವಳಿಯಲ್ಲಿ ಧುಮುಕಿದರು ಎಂದರು.

    ಬೋಸರಗುರಿ ಅಖಂಡ ಭಾರತವನ್ನು ಒಗ್ಗೂಡಿಸುವದಾಗಿತ್ತು, ತಮ್ಮ ಉಗ್ರ ಹೋರಾಟದ  ಶೈಲಿಯಿಂದ ಬ್ರಿಟಿಷರಲ್ಲಿ ಭಯವನ್ನು ಹುಟ್ಟು ಹಾಕಿದ ಮಹಾನ್ ವ್ಯಕ್ತಿ, ಅವರು ತಮ್ಮ ಸ್ವಾರ್ಥದ ಬಗ್ಗೆ ಎಂದೂ ಯೋಚಿಸದೆ ದೇಶಕ್ಕೋಸ್ಕರ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ದೇಶಪ್ರೇಮಿ ಎಂದರು.

    ಆಂಧ್ರ ವಿಶ್ವವಿದ್ಯಾನಿಲಯದ ರಸಾಯನಶಾಸ್ತ್ರ ಶಾಖೆಯ ನಿವೃತ್ತನಿರ್ದೇಶಕ ಪ್ರೊ.ಜಿ. ಎಸ್. ಮೂರ್ತಿ ಮಾತನಾಡಿ, ಒಂದು ಕಲ್ಲು ಹೇಗೆ ತನ್ನ ಅನಗತ್ಯ ಅಂಶಗಳನ್ನು ಕಳೆದು ಶಿಲೆಯಾಗುವುದೋ ಹಾಗೆಯೇ ಒಬ್ಬ ವ್ಯಕ್ತಿ ಅನಗತ್ಯ ವಿಚಾರಗಳನ್ನು ತೊರೆದು ಉತ್ತಮ ವ್ಯಕ್ತಿ ಆಗಬೇಕು ಎಂದರು.

    ಭಾರತದ ಮೇಲೆ ಪಾಶ್ಚಿಮಾತ್ಯ ಸಂಸ್ಕೃತಿಯ ಹೇರಿಕೆಯಾದರೂ ಕೂಡ ನಮ್ಮ ಸಂಸ್ಕೃತಿ ಇತಿಹಾಸ ಇಂದಿಗೂ ಜೀವಂತವಾಗಿದೆ. ಭಾರತದ ಬಗ್ಗೆ ಪ್ರೀತಿ ಬೆಳಿಸಿಕೊಳ್ಳಬೇಕಾದರೆ  ಕನಿಷ್ಠ ಪಕ್ಷ ಒಬ್ಬ ಸ್ವಾತಂತ್ರ‍್ಯ ಹೋರಾಟಗಾರರ ಆತ್ಮಚರಿತೆಯನ್ನಾದರೂ ಓದಬೇಕು. ನಾವು ಅನುಭವಿಸುತ್ತಿರುವ ಈ ಸ್ವಾತಂತ್ರ ಲಕ್ಷಾಂತರ ಹೋರಾಟಗಾರರ ಬಲಿದಾನದ ಫಲ ಎಂದರು.

    ಅಧ್ಯಕ್ಷೀಯ ಮಾತುಗಳನ್ನಾಡಿದ ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ಹಿಂದಿನ ಶತಮಾನದಲ್ಲಿ ಹುಟ್ಟಿದ ಕೆಲವು ದೇಶಪ್ರೇಮಿಗಳು ದೇಶಕ್ಕೋಸ್ಕರ ಪ್ರಾಣಕೊಟ್ಟರು, ಆದರೆ ಈಗ ಪ್ರಾಣವನ್ನುಅನಗತ್ಯ ಮೂರ್ಖ ವಿಚಾರಗಳಿಗೆ ಕೊಡುತ್ತಿದ್ದಾರೆ ಎಂದರು.

    ಉತ್ತಮ ಜನರೊಂದಿಗೆ ಸೇರಿ ಉತ್ತಮ ಸಮಾಜರೂಪಿಸಬೇಕು, ಮಹನೀಯರನ್ನು ಇಂದಿಗೂ ನೆನಪಿಸಿಕೊಳ್ಳುತ್ತಿರುವುದು ಅವರು ದೇಶಕ್ಕೆ ಕೊಟ್ಟ ಕೊಡುಗೆಗಳಿಂದಾಗಿ. ಭವಿಷ್ಯದ ಭಾರತವು ಯುವಜನತೆಯ ಕೈಯಲ್ಲಿದೆ, ಅದನ್ನುಕಾಪಾಡುವ ಜವಾಬ್ದಾರಿ ನಿಮ್ಮದು ಎಂದು ಹೇಳಿದರು.

    ಕುಲಸಚಿವೆ ನಾಹಿದಾಜಮ್‌ ಜಮ್, ಪರೀಕ್ಷಾಂಗ ಕುಲಸಚಿವ ಪ್ರೊ.ಪ್ರಸನ್ನ ಕುಮಾರ್ ಕೆ., ವಿವೇಕಾನಂದ ಪೀಠದ ಸಂಯೋಜಕ ಡಾ.ಚೇತನ್ ಪ್ರತಾಪ್‌ ಕೆ.ಎನ್. ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026

    ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ

    August 8, 2026

    ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ

    August 8, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಲಖನೌ: ನಕಲಿ ಗುರುತಿನ ಚೀಟಿಗಳನ್ನು (Fake IDs) ಬಳಸಿ ಸುಮಾರು 25ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿ ಕೋಟ್ಯಂತರ ರೂಪಾಯಿ ವಂಚಿಸಿರುವ…

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.