ಪಾವಗಡ: ಕ್ರೀಡೆ ಎಂಬುದು ಮನುಷ್ಯನ ನಡುವೆ ಬಾಂಧವ್ಯ ಬೆಳೆಸುವ ಮೂಲಕ ಉತ್ತಮ ಸಮಾಜದ ನಿರ್ಮಾಣಕ್ಕೆ ಸಹಕಾರಿಯಾಗಲಿ ಎಂದು ಸಮಾಜ ಸೇವಕ ನಾಗೇಂದ್ರ ಕುಮಾರ್ ತಿಳಿಸಿದರು.
ತಾಲ್ಲೂಕಿನ ಸಿ.ಕೆ.ಪುರ ಗ್ರಾ.ಪಂ. ವ್ಯಾಪ್ತಿಯಲ್ಲಿ ಬರುವ ಹರಿಹರಪುರ ಗ್ರಾಮದ ಕ್ರೀಡಾಂಗಣದಲ್ಲಿ ಲಯನ್ಸ್ ಕ್ರಿಕೆಟ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಮಾತನಾಡಿ, ಎರಡು ವರ್ಷದಿಂದ ಕೋವಿಡ್ 19 ಕಾರಣದಿಂದ ಕ್ರೀಡೆಗೆ ತೆರೆಬಿದ್ದಿದ್ದು, ಈಗ ಚಾಲನೆಯಾಗಿದೆ ಹರಿಹರಪುರದ ಮೈದಾನದಲ್ಲಿ ಆಯೋಜಿಸಿದ್ದ ಲಯನ್ಸ್ ಕ್ರಿಕೆಟ್ ಕ್ಲಬ್ ಆಟಗಾರರು ಮತ್ತು ಗ್ರಾಮಸ್ಥರು ಉತ್ತಮ ಸಹಕಾರ ನೀಡಿ, ರಾಜ್ಯಮಟ್ಟದಲ್ಲಿ ವಿಜೃಂಭಿಸಬೇಕು ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷೆ ಲಕ್ಷ್ಮಮ್ಮ ಈರಣ್ಣ, ಗ್ರಾ.ಪಂ. ಸದಸ್ಯರಾದ ದೊಡ್ಡಣ್ಣ, ಗಿರೀಶ್, ವಸಂತ್ , ಗುತ್ತಿಗೆದಾರ ವೆಂಕಟೇಶ್, ಡಾಕ್ಟರ್ ರಮೇಶ್, ಕಲಾವಿದ ಹನುಮಂತ ರಾಯಪ್ಪ, ಬೆರಳಚ್ಚುಗಾರ ರಂಗನಾಥ್, ಓಂಕಾರ ಆರ್ಟ್ಸ್ ನಾಗರಾಜು, ತಿಪ್ಪೇಶ್, ರಾಮೇಗೌಡ, ನಲಿಗಾನಹಳ್ಳಿ ಮಂಜುನಾಥ್ ,ಸೋಲಾರ್ ಅಶ್ವತ್, ಗುತ್ತಿಗೆದಾರ ಹನುಮಂತರಾಯ, ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಕ್ರೀಡಾ ಪ್ರೇಮಿಗಳೆಲ್ಲ ಹಾಜರಿದ್ದರು.
ವರದಿ: ರಾಮಪ್ಪ ಸಿ.ಕೆ.ಪುರ, ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy