ಪಾವಗಡ: ನಿಡಗಲ್ ಹೋಬಳಿ ದೇವರಾಯನ ಕೊಪ್ಪ ಗ್ರಾಮದ ಮುಸ್ಲಿಂ ಜನಾಂಗಕ್ಕೆ ಸೇರಿದ ಒಂದೇ ಕುಟುಂಬದ ಮೂವರು ಮಕ್ಕಳು ಕೆರೆಯಲ್ಲಿ ಮುಳುಗಿ ಅಸುನೀಗಿರುವ ಘಟನೆ ನಡೆದಿದೆ.
ತಾಲೂಕಿನ ದೇವರಾಯನರಪ್ಪ ಗ್ರಾಮದ ಭಾಷಾ ಸಾಬ್ ಎಂಬುವರ ಮೂವರು ಮಕ್ಕಳು ಮೇಕೆ ಮೇಯಿಸಲು ಹೋಗಿದ್ದ ವೇಳೆ ತಮ್ಮ ಪಕ್ಕದ ಗ್ರಾಮವಾದ ಎಸ್.ಆರ್.ಪಾಳ್ಯ ಕೆರೆಯಲ್ಲಿ ಮುಳುಗಿ ಕೊನೆಯುಸಿರೆಳೆದಿದ್ದಾರೆ.
ಶರೀಫ (4ನೇ ತರಗತಿ), ಚಾಂದಬಿ (8ನೇ ತರಗತಿ), ಭಾನವಿ (7ನೇ ತರಗತಿ) ಮೃತರು ಎಂದು ತಿಳಿದು ಬಂದಿದೆ. ಮಕ್ಕಳ ಸಾವಿನ ಹಿನ್ನೆಲೆಯಲ್ಲಿ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.
ಸ್ಥಳಕ್ಕೆ ಅರಸೀಕೆರೆ ಪೊಲೀಸ್ ಠಾಣೆ ಸಿಬ್ಬಂದಿ ಧಾವಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನೂ ಅಸುನೀಗಿದ ವಿದ್ಯಾರ್ಥಿಗಳ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲೆಂದು ವಾಲ್ಮೀಕಿ ಪೀಠಾಧ್ಯಕ್ಷ ಶ್ರೀ ಸಂಜೆ ಕುಮಾರ ಸ್ವಾಮೀಜಿ ಸಂತಾಪ ವ್ಯಕ್ತಪಡಿಸಿದ್ದಾರೆ.
ವರದಿ: ರಾಮಪ್ಪ ಸಿ.ಕೆ.ಪುರ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy