nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್

    August 28, 2026

    ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ

    August 28, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026
    Facebook Twitter Instagram
    ಟ್ರೆಂಡಿಂಗ್
    • ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್
    • ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ
    • ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ
    • 175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ
    • ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ
    • ಬರಪೀಡಿತ ಪ್ರದೇಶ ಘೋಷಣೆ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆಗೆ ಚೇತನ್ ಸೊರಳ್ಳಿ ಅಭಿನಂದನೆ
    • ಹೇಮಾವತಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆ: ರೈತರ ಹಿತ ಹಾಗೂ ನೀರಿನ ಸಮರ್ಪಕ ನಿರ್ವಹಣೆಗೆ ಒತ್ತು
    • ಹಳ್ಳಿಮೈಸೂರು ಆಸ್ಪತ್ರೆ, ಬಸ್ ನಿಲ್ದಾಣಕ್ಕೆ ಸಂಸದ ಶ್ರೇಯಸ್ ಎಂ. ಪಟೇಲ್ ದಿಢೀರ್ ಭೇಟಿ: ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸ್ಥಳದಲ್ಲೇ ಖಡಕ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊರಟಗೆರೆ ಬಿಜೆಪಿ ಮಂಡಲಕ್ಕೆ ನೂತನ ಅಧ್ಯಕ್ಷರಾಗಿ ರುದ್ರೇಶ್ ಆಯ್ಕೆ
    ಕೊರಟಗೆರೆ January 30, 2025

    ಕೊರಟಗೆರೆ ಬಿಜೆಪಿ ಮಂಡಲಕ್ಕೆ ನೂತನ ಅಧ್ಯಕ್ಷರಾಗಿ ರುದ್ರೇಶ್ ಆಯ್ಕೆ

    By adminJanuary 30, 2025No Comments2 Mins Read
    bjp koratagare

    ವರದಿ: ಮಂಜುಸ್ವಾಮಿ ಎಂ.ಎನ್.

    ಕೊರಟಗೆರೆ : ಬಿಜೆಪಿ ಪಕ್ಷ ಸಂಘಟನೆಗೆ ಪ್ರತಿಯೊಬ್ಬ ಕಾರ್ಯಕರ್ತರ ಸಹಕಾರ ಅತ್ಯಗತ್ಯ. ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಬಲಗೊಳ್ಳಿಸುವ ಸಲುವಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ನೂತನ ಕೊರಟಗೆರೆ ಬಿಜೆಪಿ ಪಕ್ಷದ ಮಂಡಲ ಅಧ್ಯಕ್ಷ ಟಿ.ಎನ್.ರುದ್ರೇಶ್ ತಿಳಿಸಿದರು.

    ಪಟ್ಟಣದ ನವೀನ್ ಕಂಫಟ್‍ನಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ನೂತನವಾಗಿ ಕೊರಟಗೆರೆ ಮಂಡಲ ಅಧ್ಯಕ್ಷರಿಗೆ ಅಭಿನಂದನಾ ಸಭೆಯನ್ನ ಉದ್ದೇಶಿಸಿ ಮಾತನಾಡಿದರು.

    ಮಂಡಲ ಅಧ್ಯಕ್ಷ ಎನ್ನವುದು ಒಂದು ಹುದ್ದೆ ಪ್ರೋಟೋಕಾಲ್ ಅಷ್ಟೇ. ನಾನು ಕೂಡ ಒಬ್ಬ ಬೂತ್ ಸದಸ್ಯನಾಗಿ ಕೆಲಸ ಮಾಡುತ್ತೇನೆ. ಇಲ್ಲಿ ಯಾರು ಅಧ್ಯಕ್ಷರಲ್ಲ ಎಲ್ಲರೂ ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿಗಳಂತೆ ಕೆಲಸ ಮಾಡಿ ಮುಂದೆ ಬರುವ ಜಿಪಂ, ತಾ.ಪಂ. ಹಾಗೂ ಗ್ರಾಪಂ ಚುನಾವಣೆಯಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಸ್ಪರ್ಧಿಸಿ ಬಿಜೆಪಿ ಪಕ್ಷವನ್ನ ನಮ್ಮ ಕ್ಷೇತ್ರದಲ್ಲಿ ಸದೃಢಗೊಳಿಸೋಣ ಎಂದು ತಿಳಿಸಿದರು.

    ನನಗೆ ಬಿಜೆಪಿ ಪಕ್ಷದ ಜಿಲ್ಲಾ ಮಟ್ಟದ ಮುಖಂಡು ಹಾಗೂ ಕೊರಟಗೆರೆ ವಿಧಾನಸಭಾದ ಬಿಜೆಪಿ ಅಭ್ಯರ್ಥಿಯಾದ ಹಾಗೂ ನಿವೃತ್ತ ಐಎಎಸ್ ಅಧಿಕಾರಿಯಾದ ಬಿ.ಹೆಚ್. ಅನಿಲ್‍ಕುಮಾರ್ ಅವರು ಸಹಕಾರದಿಂದ ಇವತ್ತು ನಾನು ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ. ಮೂರು ವರ್ಷಕ್ಕೆ ಒಂದು ಸಾರಿ ಯಾರು ಸ್ಥಳೀಯ ಕಾರ್ಯಕರ್ತರಿಗೆ ಸ್ಪಂದಿಸಿ ಸಂಘಟನೆ ಮಾಡುತ್ತಾರೆ ಅವರನ್ನ ಚುನಾವಣೆ ಪ್ರಕ್ರಿಯೆಯಲ್ಲಿ ಆಯ್ಕೆ ಮಾಡುತ್ತಾರೆ. ಎಲ್ಲರೂ ಒಟ್ಟಾಗಿ ಸೇರಿ ಕೆಲಸ ಮಾಡೋಣ, ನನ್ನ ಅಧ್ಯಕ್ಷರಾಗಿ ಆಯ್ಕೆ ಮಾಡಿದ ಎಲ್ಲರಿಗೂ ಧನ್ಯವಾದಗಳನ್ನ ತಿಳಿಸಿದರು.

    ಮಧುಗಿರಿ ಜಿಲ್ಲಾ ಉಪಾಧ್ಯಕ್ಷ ಪವನ್‍ಕುಮಾರ್ ಮಾತನಾಡಿ ಬಿಜೆಪಿ ಪಕ್ಷದ ಕಾರ್ಯಕರ್ತರು ಗಟ್ಟಿಯಾಗಿ ಇದ್ದರೆ ಪಕ್ಷವು ಗಟ್ಟಿಯಾಗಿ ಇರುತ್ತದೆ. ನೂತನ ಅಧ್ಯಕ್ಷರಾದ ರುದ್ರೇಶ್ ಅವರು ಕಾರ್ಯಕರ್ತರನ್ನ ಒಟ್ಟಾಗಿ ಕರೆದುಕೊಂಡು ಹೋಗಿ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಿಕೊಂಡು ಹೋಗಬೇಕಿದೆ. ಮೂಲ ಬಿಜೆಪಿ ಕಾರ್ಯಕರ್ತರನ್ನ ಕಡೆಗಣಿಸದೆ ಪಕ್ಷ ಸಂಘಟನೆ ಮಾಡಿಕೊಂಡು ಹೋಗಬೇಕು. ನೂತನವಾಗಿ ಆಯ್ಕೆಯಾದ ರುದ್ರೇಶ್ ಅವರಿಗೆ ಅಭಿನಂದನೆಗಳು ಎಂದರು,

    ಮಧುಗಿರಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಶಿವಕುಮಾರ ಸ್ವಾಮಿ ಮಾತನಾಡಿ ಬಿಜೆಪಿ ಪಕ್ಷದಲ್ಲಿ ಮಾತ್ರ ತಳ ಮಟ್ಟದ ಕಾರ್ಯಕರ್ತರು ಮಾತ್ರ ಅಧ್ಯಕ್ಷರಾಗಿ ಬರಲು ಸಾಧ್ಯ. ಇನ್ನಯಾವ ಪಕ್ಷಗಳು ಕಾರ್ಯಕರ್ತರನ್ನ ಬೆಳೆಸಲ್ಲ. ಮುಂದಿನ ದಿನಗಲ್ಲಿ ರುದ್ರೇಶ್ ಅವರ ಪದಗ್ರಹಣ ದೊಡ್ಡ ದೊಡ್ಡ ನಾಯಕರನ್ನ ಕರೆಸಿ ಬೃಹತ್ ಕಾರ್ಯಕ್ರಮವನ್ನ ಮಾಡಲು ತಯಾರಿ ಮಾಡಲಾಗುವುದು ಎಂದು ಹೇಳಿದರು.

    ಸಭೆಯಲ್ಲಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ನಾಗರಾಜು, ಜಿಲ್ಲಾ ಕಾರ್ಯದರ್ಶಿ ಅರುಣ್‍ಕುಮಾರ್, ಹಿರಿಯ ಬಿಜೆಪಿ ಮುಖಂಡ ಚಂದ್ರಪ್ಪ, ಸಿ.ಎನ್ ದುರ್ಗಾ ಹೋಬಳಿಯ ಅಧ್ಯಕ್ಷ ಸಿದ್ದನಂಜಪ್ಪ, ಕಸಬಾ ಅಧ್ಯಕ್ಷ ದಯಾನಂದ್, ಮುಖಂಡರಾದ ಮೋಹನ್,  ಮುಕ್ಕಣ್ಣಪ್ಪ, ಕುಮಾರಣ್ಣ, ರಾಜೇಂದ್ರ, ಗುರುದತ್, ರಂಗನಾಥ್, ಅನಂದ್, ಶಿವಕುಮಾರ್, ಮೋಹನ್, ಶ್ರೀಧರ್, ನಂಜುಂಡಪ್ಪ, ಸಿದ್ದನಂಜಪ್ಪ, ಸೇರಿದಂತೆ ಇತರರು ಇದ್ದರು.


    ಕೊರಟಗೆರೆ ಪಟ್ಟಣದಲ್ಲಿ ಬೃಹತ್ ಪದಗ್ರಹಣ ಕಾರ್ಯಕ್ರಮಕ್ಕೆ ರಾಜ್ಯ ಹಾಗೂ ಜಿಲ್ಲೆಯ ಶಾಸಕರು, ಹಾಗೂ ಮುಖಂಡರು ಆಗಮಿಸುವಂತ ಬೃಹತ್ ಕಾರ್ಯಕ್ರಮವನ್ನ ರೂಪಿಸಲಾಗುವುದು. ತಾಲೂಕು ಹಾಗೂ ಜಿಲ್ಲೆಯ ಬಿಜೆಪಿ ಕಾರ್ಯಕರ್ತರ ಸಹಕಾರ ಮುಖ್ಯವಾಗಿದೆ. ಬಿಜೆಪಿ ಪಕ್ಷ ಬಲವರ್ದನೆಗೆ ಎಲ್ಲರೂ ಒಟ್ಟಾಗಿ ಸಂಘಟನೆ ಮಾಡೋಣ.

    —  ರುದ್ರೇಶ. ಕೊರಟಗೆರೆ ಬಿಜೆಪಿ ಮಂಡಲ ನೂತನ ಅಧ್ಯಕ್ಷ.


    ಕೊರಟಗೆರೆ ಬಿಜೆಪಿ ಪಕ್ಷ ಸಂಘಟನೆ ಮಾಡಲು ಶ್ರಮವಹಿಸಿದ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪವನ್‍ಕುಮಾರ್ ಅವರನ್ನ ಮಧುಗಿರಿ ಜಿಲ್ಲೆಯ ಬಿಜೆಪಿ ಅಧ್ಯಕ್ಷರನ್ನಾಗಿ ಘೋಷಣೆ ಮಾಡಬೇಕು. ಇದು ಕೊರಟಗೆರೆ ತಾಲೂಕಿನ ಕಾರ್ಯಕರ್ತರ ಒತ್ತಾಯವಾಗಿದೆ.

    —  ಚಂದ್ರಪ್ಪ, ಹಿರಿಯ ಬಿಜೆಪಿ ಮುಖಂಡರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026

    ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

    August 22, 2026

    Comments are closed.

    Our Picks

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ನೇಪಾಳಕ್ಕೆ ಪ್ರವಾಸ ಹೋಗಿದ್ದ ಶಿವಮೊಗ್ಗದ 6  ಮಂದಿ ಸುರಕ್ಷಿತ; ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ವಾಪಸ್

    August 28, 2026

    ಶಿವಮೊಗ್ಗ: ನೇಪಾಳದಲ್ಲಿ ಉಂಟಾಗಿರುವ ಪ್ರವಾಹ ಹಾಗೂ ಸಂಕಷ್ಟದ ಪರಿಸ್ಥಿತಿಯ ನಡುವೆಯೂ, ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗ ಜಿಲ್ಲೆಯ 6 ಜನ ಕನ್ನಡಿಗರು…

    ವಸತಿ ರಹಿತರಿಗೆ ಗುಡ್‌ ನ್ಯೂಸ್‌: ಪ್ರತಿ ಜಿಲ್ಲೆಯಲ್ಲೂ 50,000 ನಿವೇಶನ; ಡಿಸೆಂಬರ್ ಒಳಗೆ 5 ಲಕ್ಷ ಪ್ಲಾಟ್‌ ಗಳ ವಿತರಣೆಗೆ ಸರ್ಕಾರದ ಸಿದ್ಧತೆ

    August 28, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ: ಆರ್. ಅಶೋಕ್ ಆಗ್ರಹ

    August 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.