nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಎರಡು ವರ್ಷದ ಚಿರತೆ ಸೆರೆ

    November 9, 2025

    ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ಕನಕದಾಸರ ಕೊಡುಗೆ ಅಪಾರ: ಪ.ಪಂ. ಅಧ್ಯಕ್ಷ  ಶಿವಕುಮಾರ್

    November 9, 2025

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಎರಡು ವರ್ಷದ ಚಿರತೆ ಸೆರೆ
    • ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ಕನಕದಾಸರ ಕೊಡುಗೆ ಅಪಾರ: ಪ.ಪಂ. ಅಧ್ಯಕ್ಷ  ಶಿವಕುಮಾರ್
    • ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತೆ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರನ ಬಂಧನ
    • ಬೈಕ್ ಟಾಕ್ಸಿ ಚಾಲಕನಿಂದ ಮಹಿಳೆಗೆ ಲೈಂಗಿಕ ಕಿರುಕುಳ
    • ಕಸದಿಂದ ವಿದ್ಯುತ್‌ ಉತ್ಪಾದಿಸುವ ಘಟಕ ನಿರ್ಮಾಣ: ಡಾ.ಜಿ.ಪರಮೇಶ್ವರ್
    • ಚಿಕ್ಕನಾಯಕನಹಳ್ಳಿ: ತುಳುನಾಡಿನ ಪಂಜುರ್ಲಿ ದೈವಕ್ಕೆ ಭಕ್ತಿ ಸಮರ್ಪಣೆ
    • ಮಧುಗಿರಿ | ಜೀತ ವಿಮುಕ್ತರಿಗೆ ಪುನರ್ ವಸತಿ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಜೆಟ್ ನಲ್ಲಿ ಹೇಳಿಕೊಳ್ಳಬಹುದಾದ ಒಂದೇ ಒಂದು ಯೋಜನೆಯೂ ಸಹ ಇಲ್ಲ: ಸಚಿವ ಹೆಚ್.ಸಿ.ಮಹದೇವಪ್ಪ
    ಜಿಲ್ಲಾ ಸುದ್ದಿ February 1, 2025

    ಬಜೆಟ್ ನಲ್ಲಿ ಹೇಳಿಕೊಳ್ಳಬಹುದಾದ ಒಂದೇ ಒಂದು ಯೋಜನೆಯೂ ಸಹ ಇಲ್ಲ: ಸಚಿವ ಹೆಚ್.ಸಿ.ಮಹದೇವಪ್ಪ

    By adminFebruary 1, 2025No Comments2 Mins Read
    h c mahadevappa

    ಬೆಂಗಳೂರು: ಜನ ಸಾಮಾನ್ಯರ ಪರವಾಗಿ  ಎಂದಿಗೂ ಕೆಲಸ ಮಾಡದೇ ಬರೀ ಕಾರ್ಪೊರೇಟ್ ಉದ್ಯಮಿಗಳ ಪರವಾಗಿ ಕೆಲಸ ಮಾಡುತ್ತಲೇ ಬಂದಿರುವ ಕೇಂದ್ರ ಸರ್ಕಾರವು  ಶ್ರಮಿಕ ವರ್ಗವನ್ನು ವಂಚಿಸುವ ತನ್ನ ಹೀನ ಪ್ರವೃತ್ತಿಯನ್ನು ಮುಂದುವರೆಸಿದೆ ಎಂದು ಸಚಿವ ಹೆಚ್.ಸಿ.ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕೇಂದ್ರ ಬಜೆಟ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಅವರು,  50 ಲಕ್ಷದ 65 ಸಾವಿರ ಕೋಟಿ ಗಾತ್ರದ ಬಜೆಟ್ ನಲ್ಲಿ ಜನಪರವಾಗಿ ಹೇಳಿಕೊಳ್ಳಬಹುದಾದ ಒಂದೇ ಒಂದು ಯೋಜನೆಯೂ ಸಹ ಇಲ್ಲದ ಕೇಂದ್ರದ ಬಜೆಟ್ ಕರ್ನಾಟಕ ವಿರೋಧಿಯಾಗಿದ್ದು ರಾಜ್ಯ ನೀಡುವ ತೆರಿಗೆ ಹಣಕ್ಕೆ ಪ್ರತಿಯಾಗಿ ಅವಮಾನವನ್ನು ನಮಗೆ ಉಡುಗೊರೆಯಾಗಿ ನೀಡಿದೆ,  ಮಧ್ಯಮ ವರ್ಗಕ್ಕೆ 12 ಲಕ್ಷದ ವರೆಗೆ ಆದಾಯ ತೆರಿಗೆ ವಿನಾಯ್ತಿ ಎಂದು ಹೇಳಿ ಆ ಮೂಲಕ ಪ್ರಚಾರ ಪಡೆಯಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರವು ನಿಗದಿ ಪಡಿಸಿರುವ ತೆರಿಗೆ ಮಿತಿಯ slab ನಲ್ಲಿ 8 ರಿಂದ 12 ಲಕ್ಷದವರೆಗಿನ ಆದಾಯ ತೆರಿಗೆಗೆ 10% ತೆರಿಗೆ ಎಂದು ನಮೂದಿಸಿದ್ದು ಜನರನ್ನು ಅಸ್ಪಷ್ಟತೆಗೆ ನೂಕುವ ಕೆಲಸ ಮಾಡಿದೆ ಎಂದು ಆರೋಪಿಸಿದ್ದಾರೆ.


    Provided by
    Provided by

    ಈಗಾಗಲೇ ಇವರ ಹಿಂದಿನ ಘೋಷಣೆಗಳು ಬಹುತೇಕ ಸುಳ್ಳೆಂದು ಸಾಬೀತಾಗಿದ್ದು, ಈ ಗೊಂದಲಗಳೂ ಕೂಡಾ ಕೇಂದ್ರ ಸರ್ಕಾರದ ವಂಚನೆಯ ತಂತ್ರವಾಗಿದೆ ಎಂದು ನಾವು ಊಹಿಸಬಹುದಾಗಿದೆ.  ಹಿಂಬಾಲಕರ ಮೂಲಕ ತನ್ನನ್ನು ವಿಶ್ವಗುರು ಎಂದು ಹೇಳಿಕೊಳ್ಳುವ ಪ್ರಧಾನಿಗಳ ಆಡಳಿತದಲ್ಲಿ ದೇಶದ ಸಾಲವು ಮತ್ತೆ 15.86 ಲಕ್ಷ ಕೋಟಿಗಳಷ್ಟು ಹೆಚ್ಚಾಗಿದ್ದು ಯಾವುದೇ ಯೋಜನೆಗಳಿಲ್ಲದೇ ಯಾರ ಜೇಬು ತುಂಬಿಸಲು ಇವರು ಇಷ್ಟೊಂದು ಸಾಲ ಮಾಡುತ್ತಿದ್ದಾರೆ ಎಂಬುದು ಸದ್ಯದ ಪ್ರಶ್ನೆಯಾಗಿದೆ ಎಂದು ಅವರು ಹೇಳಿದ್ದಾರೆ.

    ಇನ್ನು ಕಾರ್ಪೊರೇಟ್ ತೆರಿಗೆಯ ಪ್ರಮಾಣವು ಯಥಾಸ್ಥಿತಿಯಲ್ಲಿ ಮುಂದುವರೆದಿದ್ದು,  ಸರ್ಕಾರದಿಂದ ಕಾರ್ಪೊರೇಟ್ ಗಳ ಲಕ್ಷಾಂತರ ಕೋಟಿ ಸಾಲ ಮನ್ನಾ ಹೊರತಾಗಿಯೂ ಕಂಪನಿಗಳು ಏಳಿಗೆ ಆಗದೇ ಹಾಗೇ ಉಳಿದಿದ್ದು ಸರ್ಕಾರವು ಖಾಸಗಿಯವರ ಸಾಲವನ್ನು ಜನರ ಮೇಲೆ ಹೊರಿಸುವ ಕೆಲಸ ಮಾಡುತ್ತಿವೆ. ಮುಖ್ಯವಾಗಿ ಬಜೆಟ್ ನಲ್ಲಿ ಎಲ್ಲಿಯೂ ಕೂಡಾ ಉದ್ಯೋಗ ಸೃಷ್ಟಿಯ ಕುರಿತು ಮಾತನಾಡದ ಕೇಂದ್ರ ಸರ್ಕಾರವು ಯುವಕರ ಮೇಲಿನ ತನ್ನ ತಿರಸ್ಕಾರದ ಧೋರಣೆಯನ್ನು ಮುಂದುವರೆಸಿದೆ ಎಂದರು.

    ಅತಿ ಮುಖ್ಯವಾಗಿ ದೇಶದ ಬೆನ್ನೆಲುಬು ಆಗಿರುವ ರೈತರಿಗೆ ಯಾವುದೇ ರೀತಿಯ ಉಪಯುಕ್ತ ಯೋಜನೆಗಳನ್ನು ನೀಡದ ಕೇಂದ್ರ ಸರ್ಕಾರವು ತಾನು ಸದಾ ರೈತ ವಿರೋಧಿ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ ಎಂದು ಟೀಕಿಸಿದರು.

    ಅತಿ ಮುಖ್ಯವಾಗಿ ಕರ್ನಾಟಕದಿಂದ ರಾಜ್ಯ ಸಭಾ ಸದಸ್ಯರಾಗಿ ಆಯ್ಕೆಯಾಗಿ, ಕೇಂದ್ರದಲ್ಲಿ ಹಣಕಾಸು ಸಚಿವೆಯೂ ಆಗಿರುವ ನಿರ್ಮಲಾ ಸೀತಾರಾಮನ್ ಅವರು, ಮೇಕೆದಾಟು, ಕಳಸಾ ಬಂಡೂರಿ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳಿಗೆ ಯಾವುದೇ ಅನುದಾನ ನೀಡದೇ ಹೆಚ್ಚು ತೆರಿಗೆ ಪಾವತಿಸುವ ನಮ್ಮ ರಾಜ್ಯಕ್ಕೆ  ವಂಚನೆ ಮಾಡಿದ್ದು ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದರು.

    ನಮ್ಮ ಸಮಾಜ ಕಲ್ಯಾಣ ಇಲಾಖೆಗೆ ಕೇಂದ್ರದಿಂದ ಬರಬೇಕಿದ್ದ 245 ಕೋಟಿ ರೂಪಾಯಿಗಳ ಪೈಕಿ ಕೇವಲ 58.08 ಕೋಟಿ ರೂಪಾಯಿಗಳಷ್ಟು ಅನುದಾನವು ಬಿಡುಗಡೆ ಆಗಿದ್ದು,  ಉಳಿಕೆ ಹಣವನ್ನು ಬಿಡುಗಡೆ ಮಾಡುವಲ್ಲಿ ಕೇಂದ್ರ ಸರ್ಕಾರವು ವಿಳಂಬ ಮಾಡುತ್ತಿದ್ದು ಇದು ಪರಿಶಿಷ್ಟ ಸಮುದಾಯಗಳ ವಿರೋಧಿ ಧೋರಣೆಗೆ ಹಿಡಿದ ಕನ್ನಡಿ ಆಗಿದ್ದು ಈ ನಿರ್ಲಕ್ಷ್ಯವನ್ನು ನಾನು ಖಂಡಿಸುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ಕನಕದಾಸರ ಕೊಡುಗೆ ಅಪಾರ: ಪ.ಪಂ. ಅಧ್ಯಕ್ಷ  ಶಿವಕುಮಾರ್

    November 9, 2025

    ಅಪ್ರಾಪ್ತೆ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರನ ಬಂಧನ

    November 8, 2025

    ತಿಂಗಳ ಅಂತರದಲ್ಲಿ ಹುಲಿ ದಾಳಿಗೆ ಮೂವರು ಬಲಿ: ಸರ್ಕಾರ ಎಚ್ಚೆತ್ತುಕೊಳ್ಳುವುದು ಯಾವಾಗ?

    November 8, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಎರಡು ವರ್ಷದ ಚಿರತೆ ಸೆರೆ

    November 9, 2025

    ಮಧುಗಿರಿ: ತಾಲ್ಲೂಕು ದೊಡ್ಡೇರಿ ಹೋಬಳಿಯ ಕೃಷ್ಣಸಾಗರ ಗ್ರಾಮದ ಸಣ್ಣ ರಂಗಪ್ಪ ಎಂಬುವರ ಜಮೀನಿನ ಪೊದೆಯಲ್ಲಿ ಅಡಗಿ ಕುಳಿತಿದ್ದ ಎರಡು ವರ್ಷದ…

    ಶೈಕ್ಷಣಿಕ ಮತ್ತು ಸಾಂಸ್ಕೃತಿಕ ರಂಗಕ್ಕೆ ಕನಕದಾಸರ ಕೊಡುಗೆ ಅಪಾರ: ಪ.ಪಂ. ಅಧ್ಯಕ್ಷ  ಶಿವಕುಮಾರ್

    November 9, 2025

    ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಗೆ ತೀರ್ಮಾನ:  ಸಿಎಂ ಸಿದ್ದರಾಮಯ್ಯ

    November 8, 2025

    ಅಪ್ರಾಪ್ತೆ ಜೊತೆ ಲಾಡ್ಜ್ ನಲ್ಲಿ ಸಿಕ್ಕಿಬಿದ್ದ ಬಿಜೆಪಿ ಮುಖಂಡನ ಪುತ್ರನ ಬಂಧನ

    November 8, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.