nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026
    Facebook Twitter Instagram
    ಟ್ರೆಂಡಿಂಗ್
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » “ಇಂಗ್ಲೀಷ್ ಭಾಷಾ ಜ್ಞಾನ ಮಹಾ ಸಾಗರವಿದ್ದಂತೆ ಆಳ ತಿಳಿಯಲು ಸತತ ಪರಿಶ್ರಮಪಡಬೇಕು”
    ಮಧುಗಿರಿ February 2, 2025

    “ಇಂಗ್ಲೀಷ್ ಭಾಷಾ ಜ್ಞಾನ ಮಹಾ ಸಾಗರವಿದ್ದಂತೆ ಆಳ ತಿಳಿಯಲು ಸತತ ಪರಿಶ್ರಮಪಡಬೇಕು”

    By adminFebruary 2, 2025No Comments2 Mins Read
    english

    ಮಧುಗಿರಿ:  ಮುದ್ದೇನೇರಳೆಕೆರೆ ಸರ್ಕಾರಿ ಶಾಲೆಯಲ್ಲಿ ‘ಇಂಗ್ಲಿಷ್ ಫೆಸ್ಟ್’ ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

    ಶಾಲಾ ಮಕ್ಕಳಿಗೆ ಇಂಗ್ಲಿಷ್ ಭಾಷಾ ಜ್ಞಾನಾಭಿವೃದ್ಧಿಗೆ ಹಾಗೂ ಸಂವಹನಕ್ಕಾಗಿ ವಿವಿಧ ಚಟುವಟಿಕೆಗಳನ್ನು ಆಯೋಜಿಸಿದ್ದ ಶಾಲೆಯ ಇಂಗ್ಲಿಷ್ ಭಾಷಾ ಶಿಕ್ಷಕರಾದ ಮಂಜುನಾಥ್, ಇಂಗ್ಲೀಷ್ ಭಾಷಾಜ್ಞಾನ ಮಹಾಸಾಗರವಿದ್ದಂತೆ ಅದರ ಆಳ ತಿಳಿಯಲು, ಭಾಷಾ ಕೌಶಲ್ಯ ಹೆಚ್ಚಿಸಿಕೊಳ್ಳಲು ಸತತವಾಗಿ ಪರಿಶ್ರಮ ಪಡಬೇಕು ಎಂದು ಹೇಳಿದರು.

    ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಇಂಗ್ಲೀಷ್ ಭಾಷಾ ಉಪನ್ಯಾಸಕರಾದ ಮಾರುತಿ ಬಿ.ಎಲ್. ರವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಗು ಹುಟ್ಟಿದ ತಕ್ಷಣ ನಡೆಯುವುದಿಲ್ಲ, ಅದು ಸತತ ಪ್ರಯತ್ನ ಪಟ್ಟು ನಡೆಯಲು ಪ್ರಾರಂಭಿಸುತ್ತದೆ. ಹಾಗೆಯೇ ಶಾಲೆಯಲ್ಲಿ ಮಕ್ಕಳು ಸಹ ಇಂಗ್ಲಿಷ್ ಭಾಷೆ ಸಂವಹನ ನಿರಂತರ ಪ್ರಯತ್ನದಿಂದ ಸಾಧ್ಯವಾಗುತ್ತದೆ. ಪ್ರತಿದಿನ ಶಾಲೆಗಳಲ್ಲಿ ಅಭ್ಯಾಸ ಮಾಡಬೇಕು ಹಾಗೂ ಇತ್ತೀಚಿನ ದಿನಗಳಲ್ಲಿ ಇಂಗ್ಲೀಷ್ ಭಾಷೆ ಮತ್ತು ಕಂಪ್ಯೂಟರ್ ಜ್ಞಾನ ಎಷ್ಟು ಪ್ರಾಮುಖ್ಯವಾಗಿ ಬೇಕು, ಹೊರ ರಾಜ್ಯಗಳಲ್ಲಿ ಉದ್ಯೋಗ ಪಡೆಯಲು ಜೀವನ ನಡೆಸಲು ಇಂಗ್ಲೀಷ್ ಭಾಷೆ ಅತ್ಯಗತ್ಯ ಎಂದು ನುಡಿದರು.

    ಮತ್ತೋರ್ವ ಅತಿಥಿಗಳಾಗಿ ಆಗಮಿಸಿದ್ದ ಸಂಚಲನ ತಂಡದ ತಾಲೂಕು ಸಂಯೋಜಕರಾದ ಸುಚೇಂದ್ರ ಮಾತನಾಡಿ, ಶಾಲೆಯಲ್ಲಿ ಮಕ್ಕಳು ಆದಷ್ಟು ಇಂಗ್ಲಿಷ್ ಭಾಷೆಯಲ್ಲಿ ಮಾತನಾಡಿ, ಪೋಷಕರು ಸಹ ಮಕ್ಕಳಿಗೆ ಇಂಗ್ಲಿಷ್ ನಲ್ಲಿ ಮಾತನಾಡಲು ಪ್ರೇರೇಪಿಸಬೇಕು ಮತ್ತು ಪ್ರೋತ್ಸಾಹಿಸಬೇಕು ಆಗ ಮಾತ್ರ ಭಾಷಾ ಕೌಶಲ್ಯ ಹೆಚ್ಚುತ್ತದೆ ಎಂದರು.

    ಗ್ರಾಮದ ನಿವೃತ್ತ ಮುಖ್ಯ ಶಿಕ್ಷಕರಾದ ಅಶ್ವತಪ್ಪ,  ಇಂಗ್ಲಿಷ್ ಭಾಷೆ ಎನ್ನುವುದು ಬ್ರಿಟಿಷರು ನಮ್ಮ ದೇಶಕ್ಕೆ ಬಿಟ್ಟುಹೋದ ಪರಂಪರೆ ಇಂದು ಅದು ತುಂಬಾ ಪ್ರಭಾವ ಬೀರಿದೆ. ಉನ್ನತವಾದ ಹುದ್ದೆಯನ್ನು ಅಲಂಕರಿಸಲು ಅನಿವಾರ್ಯವಾಗಿದೆ ಎಂದು ನುಡಿದರು.

    ನಾವು ಎಲ್ಲೇ ಹೋದರು ಮಾತನಾಡುವ ಮೊದಲು ಜೈ ಭೀಮ್ ಎನ್ನುತ್ತೇವೆ, ಇದರ ಅರ್ಥ ಜೈ ಎಂದರೆ ಜ್ಞಾನ, ಭೀಮ್ ಎಂದರೆ ಹೊರ ಹಾಕು ಎಂಬುದಾಗಿದೆ ಡಾ.ಬಿ.ಆರ್ ಅಂಬೇಡ್ಕರ್ ರವರು ಸಹ ನಮ್ಮಂತೆ ಬಡ ಕುಟುಂಬದಿಂದ ಬಂದು ಎಲ್ಲಾ ಭಾಷೆಗಳನ್ನು ಕಲಿತು ಮಹಾಜ್ಞಾನಿಯಾದರು ಎಂದು ಗ್ರಾಮದ ಹಾಲಿನ ಡೈರಿ ಕಾರ್ಯದರ್ಶಿ ರಾಜಣ್ಣ ಎಂ.ಎನ್. ಮಕ್ಕಳಿಗೆ ಇಂಗ್ಲಿಷ್ ಕಲಿಯಲು ಸ್ಪೂರ್ತಿ ತುಂಬಿದರು.

    ಗ್ರಾಮ ಪಂಚಾಯಿತಿ ಸದಸ್ಯರಾದ ನಾರಾಯಣಮೂರ್ತಿರವರು ಮಾತೃಭಾಷೆ ಜೊತೆಗೆ ಇಂಗ್ಲಿಷ್ ಭಾಷೆಯನ್ನು ಕಲಿಯಲು ಸೂಚಿಸಿದರು . ಮುಖ್ಯ ಶಿಕ್ಷಕಿ ನರಸಮ್ಮ ಮಕ್ಕಳಿಗೆ ಮನೆಯಲ್ಲೂ ಶಾಲೆಯಲ್ಲೂ ಹೆಚ್ಚು ಹೆಚ್ಚು ಇಂಗ್ಲೀಷ್ ಪದಗಳ ಬಳಕೆ ಮಾಡುವುದರಿಂದ ಭಾಷಾ ಸಂವಹನ ಅಭಿವೃದ್ಧಿಯಾಗುತ್ತದೆ ಎಂದು ತಿಳಿಸಿದರು.

    ಗ್ರಾಮದ ‘ಶ್ರೀ ಲಕ್ಷ್ಮಿ ಲಕ್ಷ್ಮಮ್ಮ ನರಸಿಂಹಯ್ಯ ಚಾರಿಟಬಲ್ ಟ್ರಸ್ಟ್’ ನ ಅಧ್ಯಕ್ಷ ಹಾಗೂ ದಿವಂಗತ ಎನ್. ಗಂಗಪ್ಪನವರ ಸಹೋದರ ಶ್ರೀಲಕ್ಷ್ಮಿ ನರಸಪ್ಪ ಕಾರ್ಯಕ್ರಮದಲ್ಲಿ ಕುಳಿತುಕೊಳ್ಳಲು, ಮಕ್ಕಳಿಗೆ ನೆರಳಿಗೋಸ್ಕರ ಪೆಂಡಾಲ್ ಮತ್ತು ಚೇರ್ ಗಳ ವ್ಯವಸ್ಥೆಯನ್ನು  ಮಾಡಿಸಿದ್ದರು.

    ಇಂಗ್ಲೀಷ್ ಭಾಷಾ ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನಗಳನ್ನು ನೀಡಲು ದಾಸಪ್ಪನ ಪಾಳ್ಯ ಗ್ರಾಮದ ಶ್ರೀ ದೇವದಾಸ್ ರವರು ಕೊಡುಗೆ ನೀಡಿದ್ದರು.

    ಶಾಲಾ ಶಿಕ್ಷಕರಾದ ರೇಖಾ ,ಮಮ್ತಾಜ್ ಬೇಗಂ, ನಾಗಶ್ರೀ ಹಾಗೂ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಲಾವಣ್ಯ ಮತ್ತು ಸದಸ್ಯರು ಪೋಷಕರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಶಾಲಾ ಮಕ್ಕಳೇ ನಿರೂಪಿಸಿ ಸ್ವಾಗತಿಸಿ ವಂದಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಬದುಕು ಉಜ್ವಲವಾಗಲು ಶಿಕ್ಷಣವೇ ಮುಖ್ಯ ಅಸ್ತ್ರ: ಶಾಸಕ ಕೆ.ಎನ್‌. ರಾಜಣ್ಣ ಕರೆ

    July 19, 2026

    ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ

    July 14, 2026

    ಮಧುಗಿರಿ: ಬೀದಿ ನಾಯಿಗಳ ದಾಳಿಗೆ 24 ಕುರಿ ಸಾವು

    July 10, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ತುಮಕೂರು: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಜವಾಬ್ದಾರಿ ಹೊತ್ತು ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ. ರಾಷ್ಟ್ರೀಯ…

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026

    ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ

    July 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.