nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ

    June 7, 2026

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ

    June 7, 2026
    Facebook Twitter Instagram
    ಟ್ರೆಂಡಿಂಗ್
    • ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
    • ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ
    • ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
    • ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
    • ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
    • ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
    • 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
    • ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ್ರವಾಸಿಗರನ್ನು ಕೈಬೀಸಿ ಕರೆಯುವ ವನ ನಂದೀಶ್ವರ ಕ್ಷೇತ್ರ
    ಲೇಖನ February 5, 2025

    ಪ್ರವಾಸಿಗರನ್ನು ಕೈಬೀಸಿ ಕರೆಯುವ ವನ ನಂದೀಶ್ವರ ಕ್ಷೇತ್ರ

    By adminFebruary 5, 2025No Comments2 Mins Read
    vana nandishwara kshethra

    ವರದಿ: ನಂದೀಶ್ ನಾಯ್ಕ ಪಿ.

    ತುಮಕೂರು ಜಿಲ್ಲೆ ಪಾವಗಡ ತಾಲ್ಲೂಕು ವೈ.ಎನ್.ಹೊಸಕೋಟೆ ಹೋಬಳಿಯ ಬಿ.ಹೊಸಹಳ್ಳಿ ಗ್ರಾಮದ ಬೆಟ್ಟಗುಡ್ಡಗಳ ನಡುವೆ ನೆಲೆ ನಿಂತಿರುವ ವನನಂದೀಶ್ವರ ದೇವರ ತಾಣ ಒಂದು ಮನೋಹರ ಕ್ಷೇತ್ರವಾಗಿದೆ.


    Provided by
    Provided by

    ಸುತ್ತಲೂ ಬೆಟ್ಟಗುಡ್ಡಗಳು, ಮಧ್ಯೆ ತಗ್ಗು ಪ್ರದೇಶ, ಎಲ್ಲವನ್ನೂ ಆವರಿಸಿರುವ ನೀಲಗಿರಿ ನೆಡುತೋಪು, ಪಕ್ಕದಲ್ಲೇ ಕಟ್ಟಿರುವ ಕೆರೆ, ಬೆಟ್ಟಗುಡ್ಡಗಳ ನಡುವೆ ಎದ್ದು ಕಾಣುವ ಹಸಿರು ವನರಾಶಿ, ಈ ಸುಂದರ ಪರಿಸರದ ನಡುವೆ ಸುತ್ತಲೂ ಬಿಲ್ವಪತ್ರೆ ಮರಗಳಿಂದ ಆವೃತವಾದ ಪ್ರಶಾಂತ ವಾತಾವರಣದಲ್ಲಿ ನೆಲೆ ನಿಂತಿರುವ ವನನಂದಿ  ಎಲ್ಲರ ಮನಸ್ಸನ್ನು ಸೂಚಿಗಲ್ಲಿನಂತೆ ಮೊದಲ ನೋಟದಲ್ಲೇ ಹಿಡಿದಿಡುತ್ತದೆ.

    ತಾಲ್ಲೂಕು ಕೇಂದ್ರದಿಂದ ಮರಿದಾಸನಹಳ್ಳಿ ಹಳ್ಳಿಗೆ ಬಂದು ವನಂತರವನ್ನು ಸೇರಬಹುದು ಅಥವಾ ಹೋಬಳಿ ಕೇಂದ್ರವಾದ ವೈ.ಎನ್.ಹೊಸಕೋಟೆ ಬಂದು ಬಿ.ಹೊಸಹಳ್ಳಿಯ ಮೂಲಕ ಸೇರಬಹುದಾಗಿದೆ.  ವನಂತರ ಸ್ಥಳವು ಮರಿದಾಸನಹಳ್ಳಿ ಮತ್ತು ಬಿ.ಹೊಸಹಳ್ಳಿ ಮಾರ್ಗಮಧ್ಯೆ ಪಶ್ಚಿಮದಲ್ಲಿ ಇರುವ ಬೆಟ್ಟಗಳ ಸಾಲಿನಲ್ಲಿ ಮುಖ್ಯ ರಸ್ತೆಯಿಂದ  ಸುಮಾರು ಕಾಲಳತೆಯ ದೂರದಲ್ಲಿದೆ.

    ಬಿಲ್ವಪತ್ರೆ ವನದಲ್ಲಿರುವ ವನಂತರ ವನನಂದಿಗೆ ಹರಕೆ ಹೊತ್ತು ಸೋಮವಾರದ  ರಾತ್ರಿ ಪೂಜೆ ಸಲ್ಲಿಸಿ ರಾತ್ರಿ ಪೂರಾ ಶಿವಾರಾಧನೆ ಮಾಡಿದರೆ ಖಂಡಿತವಾಗಿ ಮಳೆಯು ಬಂದೇ ಬರುತ್ತದೆ ಎಂಬುದು ಭಾಗದ ಜನಸಾಮಾನ್ಯರ ಮತ್ತು ರೈತರ ನಂಬಿಕೆ.

    ದೇವಾಲಯದಿಂದ  ಅನತಿ ದೂರದಲ್ಲಿರುವ ಎಂದೂ ಬತ್ತದ ತಲಪೆರಿಕಿ/ ಕಲ್ಯಾಣಿಯಲ್ಲಿ ಮಿಂದು ಬಿಲ್ವಪತ್ರೆ ಮತ್ತು  ಬಸವನ ಪಾದ ಪುಷ್ಪಗಳಿಂದ ಇಲ್ಲಿನ ನಂದಿಶ್ವರನಿಗೆ  ಹರಕೆ ಹೊತ್ತು ಪೂಜೆ ಸಲ್ಲಿಸಿ ಶಿವಾರಾಧನೆ ಮಾಡಿದರೆ ಭಕ್ತರ ಕೋರಿಕೆಗಳು ನೆರವೇರುತ್ತವೆ ಎಂಬುದು ಇಲ್ಲಿನ ಪ್ರತೀತಿ. ತಮ್ಮ ಕೋರಿಕೆಗಳು ನೆರವೇರಿದರೆ ಈ ಸ್ಥಳದಲ್ಲಿ ಭಕ್ತಾದಿಗಳು ಹರಕೆಯ ರೂಪದಲ್ಲಿ ಅನ್ನದಾಸೋಹ ನಡೆಸುತ್ತಾರೆ. ಜೊತೆಗೆ  ಭಕ್ತಾದಿಗಳು ಪ್ರತಿ ಸೋಮವಾರದಂದು ಹಾಗೂ ವಿಶೇಷವಾಗಿ ಶ್ರಾವಣಮಾಸದಲ್ಲಿ ವಿಶಿಷ್ಟ ಪೂಜೆಗಳನ್ನು ಹಮ್ಮಿಕೊಳ್ಳುತ್ತಾರೆ.

    ಇಂತಹ ವಿಶೇಷ ಮಹಿಮೆಯೊಂದಿಗೆ ಪ್ರಾಕೃತಿಕ ಶಕ್ತಿ ಹೊಂದಿರುವ ಈ ಸ್ಥಳವನ್ನು ಸ್ಥಳೀಯ ರೈತರು ಮತ್ತು ಭಕ್ತವೃಂದ ಸೇರಿಕೊಂಡು ಇತ್ತೀಚೆಗೆ ‘ವನಂತರ ನಂದೀಶ್ವರ ಶಿವ ದೇವಾಲಯ ಸೇವಾ ಟ್ರಸ್ಟನ್ನು ಮಾಡಿಕೊಂಡು ತಮ್ಮ ಸ್ವಂತ ಹಣದ ಜೊತೆಗೆ ಭಕ್ತಾಧಿಗಳು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ನೀರಿನ ಸೌಲಭ್ಯ, ರಾತ್ರಿ ಉಳಿದುಕೊಳ್ಳಲು ಒಂದು ಕೊಠಡಿ, ಶುಭಕಾರ್ಯಗಳಿಗೆ ಅನುಕೂಲವಾಗುವಂತೆ ತೆರೆದ ಬೋಜನಾಲಯ, ಸುಂದರ ಉದ್ಯಾನವನ ನಿರ್ಮಾಣಗೊಂಡಿವೆ. ಮಕ್ಕಳು ಆಟವಾಡುವ ಸಲುವಾಗಿ ತಿರುಗಣಿ ಇತ್ಯಾದಿಗಳನ್ನು ನಿರ್ಮಿಸಲಾಗಿದೆ.

    ಈಶ್ವರ ದೇವಾಲಯ ಅಲ್ಪಮಟ್ಟಿನ ಜೀರ್ಣೋದ್ದಾರ ಕಂಡಿದೆ. ದೇವಾಲಯದಲ್ಲಿ ಪಾರ್ವತಿ, ಗಣಪತಿ ಹಾಗೂ ನಾಗರ ಕಲ್ಲುಗಳ ಪ್ರತಿಷ್ಟಾಪನೆ ಮಾಡಲಾಗಿದೆ. ಬಿಲ್ವ ವನದಲ್ಲಿ ವಿವಿಧ ಪವಿತ್ರ ಮರಗಳನ್ನು ನೆಡುತ್ತಿದ್ದಾರೆ. ಬಂದುಹೋಗುವ ಭಕ್ತಾದಿಗಳಿಗೆ ಗುಡ್ಡ ಪ್ರದೇಶದಲ್ಲಿ ಸೂಕ್ತವಾಗಿ ವಾಹನಗಳು ಹೋಗಲು ರಸ್ತೆಯನ್ನು ಮಾಡಲಾಗಿದೆ.

    ವನಂತರ ನಂದಿಯ ಪ್ರತಿಷ್ಟಾಪನೆ ಮತ್ತು ಆರಾಧನೆ ಬಹಳಷ್ಟು ಇತಿಹಾಸವಿದ್ದು, ಅವಲೋಕಿಸಿ ಹೊರತೆಗೆಯುವ ಕಾರ್ಯ ನಡೆಯಬೇಕಿದೆ. ಇಲ್ಲಿನ ಇತಿಹಾಸ ಕಾಲಗರ್ಭದಲ್ಲಿ ಹುದುಗಿದ್ದರೂ ಸ್ಥಳ ಮಹಿಮೆ ಮಾತ್ರ ಅಪಾರವಾಗಿದೆ. ವಿಶೇಷವಾಗಿ ಇದೊಂದು ಸುಂದರವಾದ ರಮ್ಯವಾದ ಧಾರ್ಮಿಕ ಸ್ಥಳದ ಜೊತೆಗೆ ಚಾರಣಪ್ರಿಯರಿಗೆ ಮತ್ತು ಪ್ರಕೃತಿ ಆರಾಧಕರಿಗೆ ಸೂಕ್ತವಾದ ಪ್ರದೇಶ ಎನ್ನಬಹುದು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಮೂರ್ಖರು ಯಾರು? | ರಚನೆ: ವೇಣುಗೋಪಾಲ್, ತುಮಕೂರು

    May 27, 2026

    ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?

    May 25, 2026

    “ರಕ್ಕಿ” ಚಿತ್ರದ ಮೊದಲ ಹಾಡು “ರಗಡೋ ರಕ್ಕಿ” ಬಿಡುಗಡೆ | ನಾಯಕನ ಹೆಸರೆ ಸಿನಿಮಾ ಶೀರ್ಷಿಕೆಯಾಗಿರುವುದು ವಿಶೇಷ

    May 19, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ

    June 7, 2026

    ಸಿರಾ: ಸಿರಾ ಕ್ಷೇತ್ರದ ಶಾಸಕರಾದ ಟಿ.ಬಿ. ಜಯಚಂದ್ರ ಅವರು ನುರಿತ ರಾಜಕೀಯ ಮುತ್ಸದ್ದಿಯಷ್ಟೇ ಅಲ್ಲದೆ ಕಳೆದ 50 ವರ್ಷಗಳ ರಾಜಕೀಯ…

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ

    June 7, 2026

    ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ

    June 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.