nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026
    Facebook Twitter Instagram
    ಟ್ರೆಂಡಿಂಗ್
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    • ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ
    • KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
    • ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನರೇಗಾ ಹಬ್ಬ 2025: ತುಮಕೂರು ಜಿಲ್ಲೆಗೆ 3 ಪ್ರಶಸ್ತಿ
    ತುಮಕೂರು February 5, 2025

    ನರೇಗಾ ಹಬ್ಬ 2025: ತುಮಕೂರು ಜಿಲ್ಲೆಗೆ 3 ಪ್ರಶಸ್ತಿ

    By adminFebruary 5, 2025No Comments2 Mins Read

    ತುಮಕೂರು:  ಮಹಾತ್ಮ ಗಾಂಧಿ ನರೇಗಾ ಯೋಜನೆಯ ಪರಿಣಾಮಕಾರಿ ಅನುಷ್ಠಾನ, ಅತಿ ಹೆಚ್ಚು ಮಾನವ ದಿನಗಳ ಸೃಜನೆ, ಹೆಚ್ಚು ಜನರಿಗೆ ಉದ್ಯೋಗ ನೀಡಿಕೆ, ಶಾಲಾ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಹಾಗೂ ಜಿಲ್ಲೆಯ ವಿನೂತನ ಕಾರ್ಯಕ್ರಮಗಳನ್ನು ಪರಿಗಣಿಸಿ ತುಮಕೂರು ಜಿಲ್ಲಾ ಪಂಚಾಯಿತಿಗೆ 2025ರ ನರೇಗಾ ಪ್ರಶಸ್ತಿ, ಉತ್ತಮ ಗ್ರಾಮ ಪಂಚಾಯತಿ ಪ್ರಶಸ್ತಿ ಹಾಗೂ ಕಾಯಕ ಬಂಧು ಗಂಗಮ್ಮ ಅವರಿಗೆ ಮೇಟ್ ಪ್ರಶಸ್ತಿ ಸೇರಿ 3 ಪ್ರಶಸ್ತಿಗಳು ಲಭಿಸಿವೆ.

    ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ನರೇಗಾ ಹಬ್ಬ–2025ರಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರು ತುಮಕೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಜಿ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಈ ವೇಳೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಅಭಿವೃದ್ಧಿ ಆಯುಕ್ತರು ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಉಮಾಮಹದೇವನ್, ಅಪರ ಮುಖ್ಯ ಕಾರ್ಯದರ್ಶಿ(ಗ್ರಾಮೀಣಾಭಿವೃದ್ಧಿ) ಅಂಜುಮ್ ಪರ್ವೇಜ್, ಗ್ರಾಮೀಣಾಭಿವೃದ್ಧಿ ಆಯುಕ್ತ ಪವನ್ ಕುಮಾರ್ ಮಲಪಾಟಿ ಉಪಸ್ಥಿತರಿದ್ದರು.

    ನರೇಗಾ ಯೋಜನೆಯಡಿ ಜಿಲ್ಲೆಗೆ 2023-24ನೇ ಸಾಲಿಗಾಗಿ 42 ಲಕ್ಷ ಮಾನವ ದಿನಗಳನ್ನು ಸೃಜಿಸುವ ಗುರಿ ನೀಡಲಾಗಿದ್ದು, 63 ಲಕ್ಷ ಮಾನವ ದಿನಗಳನ್ನು ಸೃಜನೆ ಮಾಡುವ ಮೂಲಕ ಜಿಲ್ಲೆಯು ಶೇಕಡ 150ರಷ್ಟು ಸಾಧನೆ ಮಾಡಿದೆ. ಈ ಯೋಜನೆಯಡಿ ಗ್ರಾಮೀಣ ಭಾಗದ ಮೂಲಭೂತ ಸೌಕರ್ಯಗಳಾದ ಶಾಲೆ, ಆಸ್ಪತ್ರೆ, ರಸ್ತೆ, ಚರಂಡಿ ಹಾಗೂ ಗ್ರಾಮ ಪಂಚಾಯಿತಿಗಳಿಗೆ ಆದ್ಯತೆ ಮೇರೆಗೆ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ.

    ಅಲ್ಲದೆ 2023–24ನೇ ಸಾಲಿನಲ್ಲಿ 123 ಕೋಟಿ ರೂ.ವೆಚ್ಚದಲ್ಲಿ 4015 ಶಾಲಾ ಅಭಿವೃದ್ಧಿ, 98 ಕೋಟಿ ರೂ. ವೆಚ್ಚದಲ್ಲಿ 2080 ರಸ್ತೆ ಕಾಮಗಾರಿ, 85 ಕೋಟಿ ರೂ. ವೆಚ್ಚದಲ್ಲಿ 2069 ಚರಂಡಿ ಕಾಮಗಾರಿ, 12 ಕೋಟಿ ರೂ. ವೆಚ್ಚದಲ್ಲಿ ಗ್ರಾಮ ಪಂಚಾಯಿತಿ ಕಟ್ಟಡ, ಅಂಗನವಾಡಿ, ಸಂಜೀವಿನಿ ಭವನ ಕಾಮಗಾರಿಗಳನ್ನು ಅನುಷ್ಠಾನಿಸಲಾಗಿದೆ.

    ಬರದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಮಿಷನ್ 500 ಅಭಿಯಾನವನ್ನು ಹಮ್ಮಿಕೊಂಡು ಜಿಲ್ಲೆಯ ಪ್ರತೀ ಗ್ರಾಮ ಪಂಚಾಯತಿಯ 400 ರಿಂದ 500 ರೈತರನ್ನು ಗುರುತಿಸಿ ಅವರಿಗೆ ವೈಯಕ್ತಿಕ ಕಾಮಗಾರಿಗಳನ್ನು ನೀಡುವ ಅಭಿಯಾನ ಮಾಡಲಾಗಿದೆ. ಈ ಅಭಿಯಾನದಡಿ ಜಿಲ್ಲೆಯಲ್ಲಿ 2023–24ನೇ ಸಾಲಿನಲ್ಲಿ 52,400 ಬದು ಕಾಮಗಾರಿಗಳನ್ನು ರೈತರಿಗೆ ನೀಡಲಾಗಿದೆ.

    ಗ್ರಾಮೀಣ ಜನರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ 1010 ಕೆರೆ ಅಭಿವೃದ್ಧಿ, 1450 ನಾಲಾ ಅಭಿವೃದ್ಧಿ, 15200 ಅರಣ್ಯೀಕರಣದ ಕಾಮಗಾರಿಗಳು ಸೇರಿದಂತೆ ತೋಟಗಾರಿಕೆ, ರೇಷ್ಮೆ ಹಾಗೂ ಕೃಷಿ ಇಲಾಖೆಯಲ್ಲಿಯೂ ಉದ್ಯೋಗವನ್ನು ನೀಡಿರುವುದನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆ.

    ಉಜ್ಜಿನಿಗೆ ಉತ್ತಮ ಗ್ರಾಮ ಪಂಚಾಯಿತಿ ಪ್ರಶಸ್ತಿ:

    ಕುಣಿಗಲ್ ತಾಲೂಕಿನ ಉಜ್ಜಿನಿ ಗ್ರಾಮ ಪಂಚಾಯಿತಿಗೆ 2025ರ ನರೇಗಾ ಹಬ್ಬದಲ್ಲಿ ಉತ್ತಮ ಗ್ರಾಮ ಪಂಚಾಯಿತಿ ಪ್ರಶಸ್ತಿ ದಕ್ಕಿದೆ. 2023-24ನೇ ಸಾಲಿನಲ್ಲಿ 75,000 ಮಾನವ ದಿನಗಳ ಸೃಜನೆ ಮತ್ತು ಸಮುದಾಯ ಆಸ್ತಿಗಳ ಸೃಜನೆಯಲ್ಲಿ ಮುಂಚೂಣಿಯಲ್ಲಿರುವ ಹಿನ್ನೆಲೆಯಲ್ಲಿ ಉಜ್ಜಿನಿ ಗ್ರಾಮ ಪಂಚಾಯಿತಿಗೆ ಈ ಪ್ರಶಸ್ತಿ ಸಿಕ್ಕಿದೆ.

    ಪಾವಗಡ ಗಂಗಮ್ಮಗೆ ಒಲಿದ ಮೇಟ್ ಪ್ರಶಸ್ತಿ :

    ಪಾವಗಡ ತಾಲೂಕಿನ ಸಿಕೆ ಪುರ ಗ್ರಾಮ ಪಂಚಾಯಿತಿಯ ಗಂಗಮ್ಮ ಅವರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 329 ಕುಟುಂಬಗಳಿಗೆ ಉದ್ಯೋಗ ಕೊಡಿಸಿದ್ದು, ಇದರಲ್ಲಿ 246 ಕುಟುಂಬಗಳು 100 ದಿನಗಳ ನರೇಗಾ ಕೂಲಿಯನ್ನು ಮುಗಿಸುವಲ್ಲಿ ಯಶಸ್ವಿಯಾಗಿವೆ. ಈ ಕಾರಣದಿಂದ ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಪಡಿಸುವ ನಿಟ್ಟಿನಲ್ಲಿ ಸಾಧನೆ ಮಾಡಿದ ಗಂಗಮ್ಮನವರಿಗೆ ಮೇಟ್(ಕಾಯಕ ಬಂಧು) ಪ್ರಶಸ್ತಿ ಲಭಿಸಿದೆ.

    ಪ್ರಶಸ್ತಿ ಸ್ವೀಕರಿಸುವ ವೇಳೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಜಿ., ಉಪ ಕಾರ್ಯದರ್ಶಿ ಅಭಿವೃದ್ಧಿ ಸಂಜೀವಪ್ಪ ಕೆ.ಪಿ. ಸೇರಿದಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ನರೇಗಾ ತಾಂತ್ರಿಕ ಸಿಬ್ಬಂದಿ ಭಾಗಿಯಾಗಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಹಳ್ಳಿಯ ವಿದ್ಯಾರ್ಥಿಗಳು ಉನ್ನತ ಹುದ್ದೆಗೇರುವುದೇ ಎಂ.ಎಸ್.ಎ. ಟ್ರಸ್ಟ್‌ನ ಮುಖ್ಯ ಉದ್ದೇಶ: ಶಿವರಾಮ ಶೆಟ್ಟಿ

    August 8, 2026

    ಆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ

    August 8, 2026

    ಶಿಕ್ಷಣ ನಿಮ್ಮ ಬದುಕಿಗೆ ಭದ್ರ ಬುನಾದಿ: ಶ್ರೀ ಸಿದ್ಧಲಿಂಗ ಮಹಾಸ್ವಾಮಿ

    August 8, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಲಖನೌ: ನಕಲಿ ಗುರುತಿನ ಚೀಟಿಗಳನ್ನು (Fake IDs) ಬಳಸಿ ಸುಮಾರು 25ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿ ಕೋಟ್ಯಂತರ ರೂಪಾಯಿ ವಂಚಿಸಿರುವ…

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.