nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ: ಬೀದರ್ ಪೊಲೀಸರಿಂದ ದಾಳಿ

    October 6, 2025

    ಸಮೀಕ್ಷೆಯಿಂದ ಹೊರಗುಳಿದಿದ್ದರೆ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಿ: ತಹಶೀಲ್ದಾರ್ ಕುಂ.ಞ.ಅಹಮದ್

    October 6, 2025

    ಖ್ಯಾತ ಸಾಹಿತಿ ಪ್ರೊ.ಮೊಗಳ್ಳಿ ಗಣೇಶ್ ನಿಧನ!

    October 5, 2025
    Facebook Twitter Instagram
    ಟ್ರೆಂಡಿಂಗ್
    • ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ: ಬೀದರ್ ಪೊಲೀಸರಿಂದ ದಾಳಿ
    • ಸಮೀಕ್ಷೆಯಿಂದ ಹೊರಗುಳಿದಿದ್ದರೆ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಿ: ತಹಶೀಲ್ದಾರ್ ಕುಂ.ಞ.ಅಹಮದ್
    • ಖ್ಯಾತ ಸಾಹಿತಿ ಪ್ರೊ.ಮೊಗಳ್ಳಿ ಗಣೇಶ್ ನಿಧನ!
    • ಸರ್ವೇ ವೇಳೆ ಕುರಿ, ಕೋಳಿ, ಚಿನ್ನ, ವಾಚ್ ಎಷ್ಟಿವೆ ಅಂತ ಕೇಳ್ಬೇಡಿ: ಸರ್ವೇದಾರರಿಗೆ ಡಿ.ಕೆ.ಶಿವಕುಮಾರ್ ಸಲಹೆ
    • ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ನಾಮಕರಣಕ್ಕೆ ಕೇಂದ್ರಕ್ಕೆ ಶಿಫಾರಸು ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ
    • ರಾಜ್ಯದಲ್ಲಿ ಉತ್ತರ ಪ್ರದೇಶ ಮಾದರಿಯ ಆಡಳಿತ ಬರಬೇಕು: ಯತ್ನಾಳ್
    • ತುಮಕೂರು: ರಾಗಿ ಖರೀದಿ ನೋಂದಣಿ ಆರಂಭ
    • ಶೆಡ್, ದನದ ಕೊಟ್ಟಿಗೆಗೆ ಸ್ಟಿಕ್ಕರ್ ಹಾಕಿದ್ದಾರೆ: ಬೆಸ್ಕಾಂ ಸಿಬ್ಬಂದಿ ಯಡವಟ್ಟಿಗೆ ಸಮೀಕ್ಷೆದಾರರು ಕಂಗಾಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನರೇಗಾ ಹಬ್ಬ 2025: ತುಮಕೂರು ಜಿಲ್ಲೆಗೆ 3 ಪ್ರಶಸ್ತಿ
    ತುಮಕೂರು February 5, 2025

    ನರೇಗಾ ಹಬ್ಬ 2025: ತುಮಕೂರು ಜಿಲ್ಲೆಗೆ 3 ಪ್ರಶಸ್ತಿ

    By adminFebruary 5, 2025No Comments2 Mins Read

    ತುಮಕೂರು:  ಮಹಾತ್ಮ ಗಾಂಧಿ ನರೇಗಾ ಯೋಜನೆಯ ಪರಿಣಾಮಕಾರಿ ಅನುಷ್ಠಾನ, ಅತಿ ಹೆಚ್ಚು ಮಾನವ ದಿನಗಳ ಸೃಜನೆ, ಹೆಚ್ಚು ಜನರಿಗೆ ಉದ್ಯೋಗ ನೀಡಿಕೆ, ಶಾಲಾ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಹಾಗೂ ಜಿಲ್ಲೆಯ ವಿನೂತನ ಕಾರ್ಯಕ್ರಮಗಳನ್ನು ಪರಿಗಣಿಸಿ ತುಮಕೂರು ಜಿಲ್ಲಾ ಪಂಚಾಯಿತಿಗೆ 2025ರ ನರೇಗಾ ಪ್ರಶಸ್ತಿ, ಉತ್ತಮ ಗ್ರಾಮ ಪಂಚಾಯತಿ ಪ್ರಶಸ್ತಿ ಹಾಗೂ ಕಾಯಕ ಬಂಧು ಗಂಗಮ್ಮ ಅವರಿಗೆ ಮೇಟ್ ಪ್ರಶಸ್ತಿ ಸೇರಿ 3 ಪ್ರಶಸ್ತಿಗಳು ಲಭಿಸಿವೆ.

    ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ನರೇಗಾ ಹಬ್ಬ–2025ರಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರು ತುಮಕೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಜಿ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಈ ವೇಳೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಅಭಿವೃದ್ಧಿ ಆಯುಕ್ತರು ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಉಮಾಮಹದೇವನ್, ಅಪರ ಮುಖ್ಯ ಕಾರ್ಯದರ್ಶಿ(ಗ್ರಾಮೀಣಾಭಿವೃದ್ಧಿ) ಅಂಜುಮ್ ಪರ್ವೇಜ್, ಗ್ರಾಮೀಣಾಭಿವೃದ್ಧಿ ಆಯುಕ್ತ ಪವನ್ ಕುಮಾರ್ ಮಲಪಾಟಿ ಉಪಸ್ಥಿತರಿದ್ದರು.


    Provided by
    Provided by
    Provided by

    ನರೇಗಾ ಯೋಜನೆಯಡಿ ಜಿಲ್ಲೆಗೆ 2023-24ನೇ ಸಾಲಿಗಾಗಿ 42 ಲಕ್ಷ ಮಾನವ ದಿನಗಳನ್ನು ಸೃಜಿಸುವ ಗುರಿ ನೀಡಲಾಗಿದ್ದು, 63 ಲಕ್ಷ ಮಾನವ ದಿನಗಳನ್ನು ಸೃಜನೆ ಮಾಡುವ ಮೂಲಕ ಜಿಲ್ಲೆಯು ಶೇಕಡ 150ರಷ್ಟು ಸಾಧನೆ ಮಾಡಿದೆ. ಈ ಯೋಜನೆಯಡಿ ಗ್ರಾಮೀಣ ಭಾಗದ ಮೂಲಭೂತ ಸೌಕರ್ಯಗಳಾದ ಶಾಲೆ, ಆಸ್ಪತ್ರೆ, ರಸ್ತೆ, ಚರಂಡಿ ಹಾಗೂ ಗ್ರಾಮ ಪಂಚಾಯಿತಿಗಳಿಗೆ ಆದ್ಯತೆ ಮೇರೆಗೆ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ.

    ಅಲ್ಲದೆ 2023–24ನೇ ಸಾಲಿನಲ್ಲಿ 123 ಕೋಟಿ ರೂ.ವೆಚ್ಚದಲ್ಲಿ 4015 ಶಾಲಾ ಅಭಿವೃದ್ಧಿ, 98 ಕೋಟಿ ರೂ. ವೆಚ್ಚದಲ್ಲಿ 2080 ರಸ್ತೆ ಕಾಮಗಾರಿ, 85 ಕೋಟಿ ರೂ. ವೆಚ್ಚದಲ್ಲಿ 2069 ಚರಂಡಿ ಕಾಮಗಾರಿ, 12 ಕೋಟಿ ರೂ. ವೆಚ್ಚದಲ್ಲಿ ಗ್ರಾಮ ಪಂಚಾಯಿತಿ ಕಟ್ಟಡ, ಅಂಗನವಾಡಿ, ಸಂಜೀವಿನಿ ಭವನ ಕಾಮಗಾರಿಗಳನ್ನು ಅನುಷ್ಠಾನಿಸಲಾಗಿದೆ.

    ಬರದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಮಿಷನ್ 500 ಅಭಿಯಾನವನ್ನು ಹಮ್ಮಿಕೊಂಡು ಜಿಲ್ಲೆಯ ಪ್ರತೀ ಗ್ರಾಮ ಪಂಚಾಯತಿಯ 400 ರಿಂದ 500 ರೈತರನ್ನು ಗುರುತಿಸಿ ಅವರಿಗೆ ವೈಯಕ್ತಿಕ ಕಾಮಗಾರಿಗಳನ್ನು ನೀಡುವ ಅಭಿಯಾನ ಮಾಡಲಾಗಿದೆ. ಈ ಅಭಿಯಾನದಡಿ ಜಿಲ್ಲೆಯಲ್ಲಿ 2023–24ನೇ ಸಾಲಿನಲ್ಲಿ 52,400 ಬದು ಕಾಮಗಾರಿಗಳನ್ನು ರೈತರಿಗೆ ನೀಡಲಾಗಿದೆ.

    ಗ್ರಾಮೀಣ ಜನರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ 1010 ಕೆರೆ ಅಭಿವೃದ್ಧಿ, 1450 ನಾಲಾ ಅಭಿವೃದ್ಧಿ, 15200 ಅರಣ್ಯೀಕರಣದ ಕಾಮಗಾರಿಗಳು ಸೇರಿದಂತೆ ತೋಟಗಾರಿಕೆ, ರೇಷ್ಮೆ ಹಾಗೂ ಕೃಷಿ ಇಲಾಖೆಯಲ್ಲಿಯೂ ಉದ್ಯೋಗವನ್ನು ನೀಡಿರುವುದನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆ.

    ಉಜ್ಜಿನಿಗೆ ಉತ್ತಮ ಗ್ರಾಮ ಪಂಚಾಯಿತಿ ಪ್ರಶಸ್ತಿ:

    ಕುಣಿಗಲ್ ತಾಲೂಕಿನ ಉಜ್ಜಿನಿ ಗ್ರಾಮ ಪಂಚಾಯಿತಿಗೆ 2025ರ ನರೇಗಾ ಹಬ್ಬದಲ್ಲಿ ಉತ್ತಮ ಗ್ರಾಮ ಪಂಚಾಯಿತಿ ಪ್ರಶಸ್ತಿ ದಕ್ಕಿದೆ. 2023-24ನೇ ಸಾಲಿನಲ್ಲಿ 75,000 ಮಾನವ ದಿನಗಳ ಸೃಜನೆ ಮತ್ತು ಸಮುದಾಯ ಆಸ್ತಿಗಳ ಸೃಜನೆಯಲ್ಲಿ ಮುಂಚೂಣಿಯಲ್ಲಿರುವ ಹಿನ್ನೆಲೆಯಲ್ಲಿ ಉಜ್ಜಿನಿ ಗ್ರಾಮ ಪಂಚಾಯಿತಿಗೆ ಈ ಪ್ರಶಸ್ತಿ ಸಿಕ್ಕಿದೆ.

    ಪಾವಗಡ ಗಂಗಮ್ಮಗೆ ಒಲಿದ ಮೇಟ್ ಪ್ರಶಸ್ತಿ :

    ಪಾವಗಡ ತಾಲೂಕಿನ ಸಿಕೆ ಪುರ ಗ್ರಾಮ ಪಂಚಾಯಿತಿಯ ಗಂಗಮ್ಮ ಅವರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 329 ಕುಟುಂಬಗಳಿಗೆ ಉದ್ಯೋಗ ಕೊಡಿಸಿದ್ದು, ಇದರಲ್ಲಿ 246 ಕುಟುಂಬಗಳು 100 ದಿನಗಳ ನರೇಗಾ ಕೂಲಿಯನ್ನು ಮುಗಿಸುವಲ್ಲಿ ಯಶಸ್ವಿಯಾಗಿವೆ. ಈ ಕಾರಣದಿಂದ ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ಪಡಿಸುವ ನಿಟ್ಟಿನಲ್ಲಿ ಸಾಧನೆ ಮಾಡಿದ ಗಂಗಮ್ಮನವರಿಗೆ ಮೇಟ್(ಕಾಯಕ ಬಂಧು) ಪ್ರಶಸ್ತಿ ಲಭಿಸಿದೆ.

    ಪ್ರಶಸ್ತಿ ಸ್ವೀಕರಿಸುವ ವೇಳೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಜಿ., ಉಪ ಕಾರ್ಯದರ್ಶಿ ಅಭಿವೃದ್ಧಿ ಸಂಜೀವಪ್ಪ ಕೆ.ಪಿ. ಸೇರಿದಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ನರೇಗಾ ತಾಂತ್ರಿಕ ಸಿಬ್ಬಂದಿ ಭಾಗಿಯಾಗಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತುಮಕೂರು: ರಾಗಿ ಖರೀದಿ ನೋಂದಣಿ ಆರಂಭ

    October 5, 2025

    ಬಸ್—ಕಾರಿನ ನಡುವೆ ಭೀಕರ ಅಪಘಾತ: ಮೂವರು ಸಾವು, ಇಬ್ಬರ ಸ್ಥಿತಿ ಗಂಭೀರ

    October 5, 2025

    ಕೆಆರ್ ಎಸ್ ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್: ಕೆ.ಎನ್.ರಾಜಣ್ಣ ಹೇಳಿಕೆ

    October 5, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ: ಬೀದರ್ ಪೊಲೀಸರಿಂದ ದಾಳಿ

    October 6, 2025

    ಬೀದರ್: ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಪ್ರಕರಣವನ್ನು ಪತ್ತೆ ಹಚ್ಚಿರುವ ಬೀದರ ಜಿಲ್ಲಾ ಪೊಲೀಸರು 10.50 ಲಕ್ಷ ರೂ. ಮೌಲ್ಯದ…

    ಸಮೀಕ್ಷೆಯಿಂದ ಹೊರಗುಳಿದಿದ್ದರೆ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಿ: ತಹಶೀಲ್ದಾರ್ ಕುಂ.ಞ.ಅಹಮದ್

    October 6, 2025

    ಖ್ಯಾತ ಸಾಹಿತಿ ಪ್ರೊ.ಮೊಗಳ್ಳಿ ಗಣೇಶ್ ನಿಧನ!

    October 5, 2025

    ಸರ್ವೇ ವೇಳೆ ಕುರಿ, ಕೋಳಿ, ಚಿನ್ನ, ವಾಚ್ ಎಷ್ಟಿವೆ ಅಂತ ಕೇಳ್ಬೇಡಿ: ಸರ್ವೇದಾರರಿಗೆ ಡಿ.ಕೆ.ಶಿವಕುಮಾರ್ ಸಲಹೆ

    October 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.