ಮಧುಗಿರಿ: ಪಟ್ಟಣದಲ್ಲಿ ಸ್ಮಾರ್ಟ್ ಸಿಟಿಯ ಹೆಸರಲ್ಲಿ ಯುಜಿಡಿ ಕಾಮಗಾರಿ ನಡೆಯುತ್ತಿದ್ದು, ಅಗೆದ ಗುಂಡಿಗಳನ್ನು ಕಾಮಗಾರಿ ಪೂರ್ಣಗೊಂಡ ನಂತರ ಸರಿಯಾಗಿ ಮುಚ್ಚದೆ ಹಾಗೆಯೇ ಬಿಡಲಾಗಿದೆ.
ರಸ್ತೆಯನ್ನು ಅಗೆದ ಗುಂಡಿಯಂದ ವಾಹನ ಸವಾರರಿಗೆ, ಪಾದಚಾರಿಗಳಿಗೆ ಕಿರಿಕಿರಿ ಉಂಟಾಗುತ್ತಿದ್ದು, ಮುಖ್ಯವಾಗಿ ಜನದಟ್ಟನೆ ಇರುವ ಟಿವಿವಿ ಸರ್ಕಲ್ ಬಳಿಯಲ್ಲಿಯೇ ರಸ್ತೆ ಬದಿಯಲ್ಲಿ ಅಲ್ಲಲ್ಲಿ ಗುಂಡಿಗಳಿದ್ದವು.
ಇದನ್ನು ಗಮನಿಸಿದ ಶಿಕ್ಷಕ ದಂಪತಿ ಫಣೀಂದ್ರನಾಥ್ ಮತ್ತು ಇಂದ್ರಮ್ಮ ರಜೆ ದಿನ ಭಾನುವಾರ ರಸ್ತೆ ಗುಂಡಿ ಸರಿಪಡಿಸಿ, ಸ್ವಚ್ಛತಾ ಕಾರ್ಯ ನಡೆಸಿದರು. ಇವರಿಗೆ ದಂಪತಿಗಳ ಮಕ್ಕಳಾದ ಸಿರಿ, ಕಲ್ಯಾಣ ಹಾಗೂ ಕಾಲೇಜು ವಿದ್ಯಾರ್ಥಿ ಪ್ರಸನ್ನ ಸಾಥ್ ನೀಡಿದರು.
ವರದಿ: ಅಬಿದ್ ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB