ಬೀದರ್: ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ನಿರ್ದೇಶನದಂತೆ ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಮೂಡಿಸಲು ಚಿಂತಾಕಿ ಪೊಲೀಸ್ ಠಾಣೆಯ ಪಿ.ಎಸ್.ಐ ಸಿದ್ಧಲಿಂಗ ಅವರು ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ವಿತರಿಸಿದರು.
ತಮ್ಮ ವ್ಯಾಪ್ತಿಯಲ್ಲಿ ಅಪಘಾತದ ಪ್ರಮಾಣ ಇಳಿಸುವ ನಿಟ್ಟಿನಲ್ಲಿ ಹೆಲ್ಮೆಟ್ ಧರಿಸದೇ ಬರುವ ದ್ವಿಚಕ್ರ ವಾಹನ ಸವಾರರಿಗೆ ದಂಡ ಹಾಕುವ ಬದಲು ಹೆಲ್ಮೆಟ್ ನೀಡುವ ಮೂಲಕ ಹೆಲ್ಮೆಟ್ ನ ಮಹತ್ವವನ್ನು ಬೈಕ್ ಸವಾರರಿಗೆ ತಿಳಿಸಿಕೊಡಲಾಯ್ತು.
ಜನ ಸಾಮಾನ್ಯರ ಪ್ರಾಣ ರಕ್ಷಣೆಯೇ ನಮ್ಮ ಮುಖ್ಯ ಗುರಿ ಎಂದಿರುವ ಪೊಲೀಸರು, ಸಾರ್ವಜನಿಕರ ಸುರಕ್ಷತೆಗಾಗಿ ಹಮ್ಮಿಕೊಂಡಿರುವ ಈ ವಿನೂತನ ಕಾರ್ಯಕ್ರಮ ಸಾರ್ವಜನಿಕರ ಶ್ಲಾಘನೆಗೆ ವ್ಯಕ್ತವಾಗಿದೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4