nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ

    August 6, 2026

    ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ

    August 6, 2026

    ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ

    August 6, 2026
    Facebook Twitter Instagram
    ಟ್ರೆಂಡಿಂಗ್
    • ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
    • ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
    • ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
    • ಹೊಳೆನರಸೀಪುರಕ್ಕೆ ನೂತನ ವಸತಿ ಸಚಿವ ಕೆ.ಎಂ.ಶಿವಲಿಂಗೇಗೌಡ ಭೇಟಿ: ಪಟಾಕಿ, ಸೇಬಿನ ಹಾರ ಹಾಕಿ ಭವ್ಯ ಸ್ವಾಗತ
    • ಸಚಿವ ಸಂಪುಟ ವಿಸ್ತರಣೆ: ಎಚ್.ಕೆ. ಪಾಟೀಲ್ ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಗದಗ–ಬೆಟಗೇರಿ ನಗರಸಭೆಯ 22 ಸದಸ್ಯರ ಸಾಮೂಹಿಕ ರಾಜೀನಾಮೆ
    • ತುಮಕೂರು ಕಾಂಗ್ರೆಸ್ ನಲ್ಲಿ ಆಕ್ರೋಶ ಸ್ಫೋಟ: ವಿಪಕ್ಷ ಸಾಲಿನಲ್ಲಿ ಆಸನ ಕೋರಿದ ಟಿ.ಬಿ. ಜಯಚಂದ್ರ, ಹೆಚ್ ಡಿಕೆಯನ್ನು ಹೊಗಳಿದ ಶಾಸಕ ಶ್ರೀನಿವಾಸ್
    • ಸಚಿವ ಸ್ಥಾನ ಸಿಗಲಿಲ್ಲವೆಂದು ಪಕ್ಷದ ವಿರುದ್ಧ ಮಾತಾಡುವುದು ಸರಿಯಲ್ಲ: ಪ್ರಿಯಾಂಕ್ ಖರ್ಗೆ
    • ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆ ಚುರುಕು: 105 ಅಡಿಗೆ ತಲುಪಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನವರಿ 31ರಂದು ವರಕವಿ ದ.ರಾ.ಬೇಂದ್ರೆಯವರ ಜನ್ಮದಿನ
    ಲೇಖನ February 1, 2022

    ಜನವರಿ 31ರಂದು ವರಕವಿ ದ.ರಾ.ಬೇಂದ್ರೆಯವರ ಜನ್ಮದಿನ

    By adminFebruary 1, 2022No Comments2 Mins Read
    dara bendre

    ಕನ್ನಡದ ವರಕವಿ ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಅವರು ರಾಮಚಂದ್ರ ಬೇಂದ್ರೆ-ಅಂಬವ್ವನವರ ಪುತ್ರರಾಗಿ ೩೧-೧-೧೮೯೬ರಲ್ಲಿ ಧಾರವಾಡದಲ್ಲಿ ಜನಿಸಿದರು. ಧಾರವಾಡದಲ್ಲಿ ೧೯೧೩ರಲ್ಲಿ ಮೆಟ್ರಿಕ್ ಮುಗಿಸಿದ ಮೇಲೆ ಪುಣೆಯ ಫರ್ಗ್ಯುಸನ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ೧೯೧೮ರಲ್ಲಿ ಬಿ.ಎ. ಮಾಡಿದರು. ಕೆಲವು ಕಾಲ ಅಧ್ಯಾಪಕ ವೃತ್ತಿ ಮಾಡಿದ ಮೇಲೆ ೧೯೩೫ರಲ್ಲಿ ಮುಂಬಯಿ ವಿಶ್ವವಿದ್ಯಾನಿಲಯದಿಂದ ಎಂ.ಎ. ಪದವಿ ಗಳಿಸಿದರು.

    ಗದುಗಿನ ವಿದ್ಯಾದಾನ ಸಮಿತಿ ಪ್ರೌಢಶಾಲೆಯಲ್ಲಿ ಹೆಡ್ ಮಾಸ್ಟರ್ ಆಗಿ ಆಮೇಲೆ ೧೯೪೨ರಲ್ಲಿ ಹುಬ್ಬಳ್ಳಿಯ ನ್ಯೂ ಇಂಗ್ಲಿಷ್ ಸ್ಕೂಲಿನಲ್ಲಿ ಒಪ್ಪೊತ್ತಿನ ಶಿಕ್ಷಕರಾದರು. ೧೯೪೪ರಲ್ಲಿ ಸೊಲ್ಲಾಪುರದ ಡಿಎವಿ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ೧೯೪೪ರಲ್ಲಿ ನೇಮಕಗೊಂಡರು. ೧೯೫೬ರಲ್ಲಿ ನಿವೃತ್ತರಾದ ಮೇಲೆ ಧಾರವಾಡದ ಆಕಾಶವಾಣಿ ಕೇಂದ್ರದಲ್ಲಿ ಸಲಹೆಗಾರರಾಗಿ ಕೆಲಸ ಮಾಡಿದರು.

    ಮುಂಬಯಿಯಲ್ಲಿ ನಡೆದ ೨೧ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಅಧ್ಯಕ್ಷರಾಗಿದ್ದರು. ೧೯೩೦ ರಲ್ಲಿ ಮೈಸೂರಿನಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಲೇಖಕ ಗೋಷ್ಠಿಯನ್ನು ನಿರ್ವಹಿಸಿದರು. ಕೆಲವು ಕಾಲ ಜೀವನ ಮಾಸಪತ್ರಿಕೆ ಮತ್ತು ಜಯಕರ್ನಾಟಕ ಪತ್ರಿಕೆ ಸಂಪಾದಕರಾಗಿ ಸೇವೆ ಸಲ್ಲಿಸಿದರು.

    ಬೇಂದ್ರೆ ಅವರಿಗೆ ೧೯೬೮ರಲ್ಲಿ ಕರ್ನಾಟಕ ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿತು. ೧೯೭೬ರಲ್ಲಿ ಕಾಶಿಯ ವಿದ್ಯಾಪೀಠವೂ ಗೌರವ ಡಾಕ್ಟರೇಟ್ ನೀಡಿತು. ಕೇಂದ್ರ ಸರ್ಕಾರ ೧೯೬೮ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿತು. ಕೇಂದ್ರದ ಸಾಹಿತ್ಯ ಅಕಾಡೆಮಿ ಫೆಲೋ ಗೌರವ ಇವರಿಗೆ ಸಂದಿದೆ. ಅದಮಾರು ಮಠದವರು ಕರ್ನಾಟಕ ಕವಿಕುಲತಿಲಕ ಬಿರುದನ್ನು ೧೯೭೨ರಲ್ಲಿ ನೀಡಿದರು. ೧೯೪೩ರಲ್ಲಿ ಶಿವಮೊಗ್ಗದಲ್ಲಿ ನಡೆದ ೨೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷಪಟ್ಟ ಇವರಿಗೆ ನೀಡಲಾಯಿತು. ೧೯೫೬ರಲ್ಲಿ ಅರಳು ಮರಳು ಕವನಸಂಗ್ರಹಕ್ಕೆ ಕೇಂದ್ರಸಾಹಿತ್ಯ ಅಕಾಡೆಮಿ ದೊರೆತರೆ ೧೯೭೪ರಲ್ಲಿ ನಾಕುತಂತಿಗೆ ಜ್ಞಾನಪೀಠ ಪ್ರಶಸ್ತಿ ದೊರಕಿತು. ೧೯೬೭ರಿಂದ ರಾಜ್ಯ ಸರ್ಕಾರ ಗೌರವ ಮಾಶಾಸನ ನೀಡಿತು.

    ಪ್ರತಿಭಾವಂತ ದ.ರಾ. ಬೇಂದ್ರೆಯವರ ಕವನಗಳು ಕನ್ನಡ ಜನತೆಯನ್ನು ಮುಗ್ಧಗೊಳಿಸಿದೆ. ಗಾಯಕರು ಹಾಡಿ  ತಣಿದಿದ್ದಾರೆ. ಜನತೆ ಪದೇ ಪದೇ ಕೇಳಿ ಆನಂದಿಸುತ್ತಿದೆ. ಇಂಥ ಬೇಂದ್ರೆಯವರ ಕೃತಿಗಳಲ್ಲಿ ಕೆಲವು ಹೀಗಿವೆ.

    ಕೃಷ್ಣಕುಮಾರಿ, ಸಖೀಗೀತ, ಉಯ್ಯಾಲೆ, ಗರಿ, ನಾದಲೀಲೆ, ಅರುಳು ಮರುಳು ಇತ್ಯಾದಿ ೨೫ ಕವನ ಸಂಕಲನಗಳು. ಸಾಹಿತ್ಯ ಮತ್ತು ವಿಮರ್ಶೆ, ಕಾವ್ಯೋದ್ಯೋಗ, ಸಾಹಿತ್ಯ ವಿರಾಟ ಸ್ವರೂಪ, ನಾಕುತಂತಿ, ನಿರಾಭರಣ ಸುಂದರಿ, ಶಾಂತಲಾ (ಅನುವಾದ) ಇತ್ಯಾದಿ.

    ಅಂಬಿಕಾತನಯದತ್ತ ಕಾವ್ಯನಾಮದ ದ.ರಾ. ಬೇಂದ್ರೆಯವರು ೨೬-೧೦-೧೯೮೨ರಲ್ಲಿ ಮುಂಬಯಿಯಲ್ಲಿ ನಿಧನರಾದರು.

    yathish kumar

      ●ಯತೀಶ್ ಕುಮಾರ್, ತುಮಕೂರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ

    August 6, 2026

    ಬಿಡುಗಡೆಗೂ ಮುನ್ನ ಭಾರಿ ನಿರೀಕ್ಷೆ ಮೂಡಿಸಿದ “ಓ ಮೈ ಡಾಗ್”  ಆಗಸ್ಟ್ 7ರಂದು  ಅದ್ದೂರಿ ರಿಲೀಸ್

    August 5, 2026

    ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು

    August 2, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ

    August 6, 2026

    ತಿಪಟೂರು: ತಿಪಟೂರು ಗ್ರಾಮಾಂತರ ತಾಲೂಕಿನ ಬಿಳಿಗೆರೆ ವಲಯದ ಕುಪ್ಪುರು ಕಾರ್ಯಕ್ಷೇತ್ರದ ಶೆಟ್ಟಿಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ…

    ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ

    August 6, 2026

    ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ

    August 6, 2026

    ಹೊಳೆನರಸೀಪುರಕ್ಕೆ ನೂತನ ವಸತಿ ಸಚಿವ ಕೆ.ಎಂ.ಶಿವಲಿಂಗೇಗೌಡ ಭೇಟಿ: ಪಟಾಕಿ, ಸೇಬಿನ ಹಾರ ಹಾಕಿ ಭವ್ಯ ಸ್ವಾಗತ

    August 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.