nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ

    July 31, 2026

    ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!

    July 31, 2026

    ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ

    July 31, 2026
    Facebook Twitter Instagram
    ಟ್ರೆಂಡಿಂಗ್
    • ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ
    • ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!
    • ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ
    • ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್
    • ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ
    • ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ
    • ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ
    • ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ: ಗ್ರಾಮ ಆಡಳಿತ ಅಧಿಕಾರಿಗಳಿಂದ 2ನೇ ಹಂತದ ಅನಿರ್ದಿಷ್ಟಾವಧಿಯ ಮುಷ್ಕರ
    ತುರುವೇಕೆರೆ February 11, 2025

    ತುರುವೇಕೆರೆ: ಗ್ರಾಮ ಆಡಳಿತ ಅಧಿಕಾರಿಗಳಿಂದ 2ನೇ ಹಂತದ ಅನಿರ್ದಿಷ್ಟಾವಧಿಯ ಮುಷ್ಕರ

    By adminFebruary 11, 2025No Comments2 Mins Read
    turuvekere

    ತುರುವೇಕೆರೆ: ಕರ್ನಾಟಕ ರಾಜ್ಯ ಗ್ರಾಮ ಆಡಳಿತಾಧಿಕಾರಿಗಳ ತುರುವೇಕೆರೆ ಶಾಖೆ, ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಸಮಸ್ಯೆಗಳು ಮತ್ತು ಬೇಡಿಕೆಗಳ ಈಡೇರಿಕೆಗಾಗಿ 2ನೇ ಹಂತದ ಅನಿರ್ಧಿಷ್ಟಾವಧಿ ಮುಷ್ಕರ  ತಾಲ್ಲೂಕು ಕಚೇರಿಯ ಮುಂಭಾಗ ನಡೆಯಿತು.

    ಪಟ್ಟಣದ ತಾಲ್ಲೂಕು ಕಚೇರಿಯ ಆವರಣದಲ್ಲಿ ಮುಷ್ಕರವನ್ನುದ್ದೇಶಿಸಿ ಮಾತನಾಡಿದ ತಾಲ್ಲೂಕು ಗೌರವಾಧ್ಯಕ್ಷ ಹೇಮತ್ ಕುಮಾರ್,  ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಕಾರ್ಯಕಾರಿ ಸಮಿತಿ ಸಭಾ ನಿರ್ಣಯದಂತೆ  ಹಿಂದೆ ರಾಜ್ಯಾದ್ಯಂತ ಮುಷ್ಕರ ನಡೆಸಿದ ಕಾರಣ, ದಿನಾಂಕ:03—10–2024 ರಂದು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಕಂದಾಯ ಇಲಾಖೆ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಭರವಸೆ ನೀಡಿದ್ದರು. ಆದರೆ  ಸರ್ಕಾರವು ಈ ವೃಂದದ ನೌಕರರ ಬೇಡಿಕೆಗಳ ವಿಚಾರವಾಗಿ ಯಾವುದೇ ತೃಪ್ತಿಕರ ಕ್ರಮಗಳನ್ನು ಕೈಗೊಂಡಿರುವುದಿಲ್ಲ ಮತ್ತು ಬೇಡಿಕೆಗಳನ್ನು ಈಡೇರಿಸಿರುವುದಿಲ್ಲ. ಬದಲಾಗಿ ಮುಷ್ಕರದ ಪೂರ್ವದ ಅವಧಿಗಿಂತಲೂ ಹೆಚ್ಚಿನ ಕಾರ್ಯದ ಒತ್ತಡ ಉಂಟಾಗಿರುತ್ತದೆ.  ಆದ್ದರಿಂದ ಉಲ್ಲೇಖದ ಸಭೆಯಲ್ಲಿ ಮೇಲ್ದಂಡ ಎಲ್ಲಾ ಕಾರಣಗಳಿಗಾಗಿ ಮುಷ್ಕರದ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯವ್ಯಾಪಿ ಅನಿರ್ಧಿಷ್ಟಾವಧಿಗೆ ಎಲ್ಲಾ  ಕೆಲಸಗಳನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸಲು ತೀರ್ಮಾನಿಸಲಾಗಿರುತ್ತದೆ ಅದರಂತೆ ಮುಷ್ಕರವನ್ನು ನಡೆಸುತಿದ್ದೇವೆ    ಎಂದು ತಿಳಿಸಿದರು.

    ನಮ್ಮ  ಕಚೇರಿಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು, ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡಿ ವೇತನ ಶ್ರೇಣಿ ನಿಗದಿಪಡಿಸಿ, ಕಳೆದ ನಾಲ್ಕು ವರ್ಷಗಳಿಂದ ಕಂದಾಯ ಇಲಾಖೆಯಲ್ಲಿ ಪದೋನ್ನತಿ ಹಾಗೂ ವರ್ಗಾವಣೆಗೆ ಸಂಬಂಧಿಸಿದಂತೆ ಕೆ.ಸಿ.ಎಸ್.ಆರ್. ನಿಯಮ 16ಎ ರ ಉಪಖಂಡ(2)ವನ್ನು ಹಿಂಪಡೆದಿರುವುದರಿಂದ ನೌಕರರ ಜೀವನದಲ್ಲಿ ಹಲವಾರು ಸಮಸ್ಯೆಗಳು ಉಂಟಾಗಿದೆ ಎಂದು ಅವರು ಹೇಳಿದರು.

    ಈ 15ಎ ಉಪಖಂಡ(2)ನ್ನು ಮರುಸ್ಥಾಪಿಸುವಂತೆ ಅಥವಾ ಕಂದಾಯ ಇಲಾಖೆಯಲ್ಲಿ ಇತರೆ ಎಲ್ಲಾ ಇಲಾಖೆಗಳಲ್ಲಿ ಮಾಡಿರುವಂತೆ ವರ್ಗಾವಣೆಯ ಮಾರ್ಗಸೂಚಿಯನ್ನು ರಚಿಸಿ ಎನ್ನುವುದು ಸಂಘದ ಪ್ರಮುಖ ಬೇಡಿಕೆಯಾಗಿದೆ. ಅನುಕಂಪದ ನೇಮಕಾತಿಯ ವೃಂದ ಮತ್ತು ನೇಮಕಾತಿ ನಿಯಮಾವಳಿಗಳ ತಿದ್ದುಪಡಿ ಆಗಬೇಕಾಗಿರುತ್ತದೆ ಎಂದು ಅವರು ಹೇಳಿದರು.

    ಹಾಲಿ ಇರುವ ಅನುಕಂಪದ ಆಧಾರದ ಮೇಲೆ ನೀಡುವ ಪ್ರ.ದ.ಸ. ಹುದ್ದೆಯ ನೇಮಕಾತಿಯನ್ನು ಯಾವುದೇ ಪದವಿ ವಿದ್ಯಾರ್ಹತೆ ಆಧಾರದ ಮೇಲೆ ನೀಡುವ ಬದಲಾಗಿ, ಪಿ.ಯು.ಸಿ ಅಥವಾ ಯಾವುದೇ ಪದವಿ ವಿದ್ಯಾರ್ಹತೆ ಆಧಾರದ ಮೇಲೆ ದ್ವಿತೀಯ ದರ್ಜೆ ಸಹಾಯಕರು ಅಥವಾ ತತ್ಸಮಾನ ಹುದ್ದೆಯ ನೇಮಕಾತಿ ಮಾಡುವಂತೆ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಮಾಡುವಂತೆ ಅವರು ಆಗ್ರಹಿಸಿದರು.

    ಈ ಎಲ್ಲಾ ಬೇಡಿಕೆಗಳು ಈಡೇರುವವರೆಗೆ ದಿನಾಂಕ:10–02–2025 ರಿಂದ ಎಲ್ಲಾ ಬಗೆಯ ಮೊಬೈಲ್ ಆಪ್ ಹಾಗೂ ವೆಬ್ ಅಪ್ಲಿಕೇಷನ್ ಅನ್ನು ಸ್ಥಗಿತಗೊಳಿಸಿ, ಲೇಖನಿ ಸ್ಥಗಿತಗೊಳಿಸುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರವನ್ನು ರಾಜ್ಯವ್ಯಾಪಿ ನಡೆಸುತ್ತಿದ್ದು, ಕೂಡಲೇ ನಮ್ಮ ಬೇಡಿಕೆಗಳನ್ನು ಈಡೇರಿಸಿ ಎಂದು ಅವರು ಸರ್ಕಾರಕ್ಕೆ ಮನವಿ ಮಾಡಿಕೊಂಡರು.

    ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷರಾದ ಜಗದೀಶ್, ಖಜಾಂಚಿ ಸೌಮ್ಯ, ಅಣ್ಣಪ್ಪ, ಪ್ರದಾನ ಕಾರ್ಯದರ್ಶಿ ಚೇತನ್, ಮಲ್ಲಿಕಾರ್ಜುನ್, ಮಂಜುನಾಥ್, ಭೂತೇಶ್, ರಮೇಶ್, ಸತೀಶ, ದಿಲೀಪ್, ಪ್ರಶಾಂತ್, ಬೀರಪ್ಪ ಮುಂತಾದವರಿದ್ದರು.

    ವರದಿ: ಸುರೇಶ್ ಬಾಬು ಎಂ.,  ತುರುವೇಕೆರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ

    July 10, 2026

    ಹಸಿರು ಶಾಲು ರೈತರಿಗೆ ನ್ಯಾಯ ಕೊಡಿಸುವ ಅಸ್ತ್ರ: ಇಂದುವಾಳು ಚಂದ್ರಶೇಖರ್

    July 7, 2026

    ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ

    June 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಸಿಎಂ ಕರ್ನಾಟಕ ಭೇಟಿ ಮುಂದೂಡಿಕೆ

    July 31, 2026

    ಬೆಂಗಳೂರು: ಕರ್ನಾಟಕದಲ್ಲಿ ಕಾವೇರಿ ನೀರು ಹಂಚಿಕೆ ವಿವಾದ ಮತ್ತು ತೀವ್ರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಆಗಸ್ಟ್ 3ರಂದು ಬೆಂಗಳೂರಿಗೆ ನಿಗದಿಯಾಗಿದ್ದ ತಮಿಳುನಾಡು…

    ಬೀದರ್: ಬಸವಕಲ್ಯಾಣದಲ್ಲಿ ಕೆರೆಯಂತಾದ ರಸ್ತೆಗಳು; ಗುಂಡಿಗಳಲ್ಲಿ ಈಜಾಡಿದ ಮಕ್ಕಳು!

    July 31, 2026

    ಸರಗೂರು: ತಾಯಿ ಚಿಕ್ಕದೇವಮ್ಮ ಬೆಟ್ಟದಲ್ಲಿ ಮೂರನೇ ಆಷಾಢ ಶುಕ್ರವಾರದ ಸಂಭ್ರಮ; ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ

    July 31, 2026

    ಸರಗೂರು: ಮಾನವ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ: ಅಹಮದ್ ಖಾನ್ ಸೆರ್

    July 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.