nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಪಾಲಿಕೆ ಆಯುಕ್ತರಿಂದ ಇಂದಿರಾ ಕ್ಯಾಂಟೀನ್ ಪರಿಶೀಲನೆ

    May 8, 2025

    ಪ.ಜಾತಿಗಳ ಸಮಗ್ರ ಸಮೀಕ್ಷೆ: ಪ್ರತೀ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲು ಡೀಸಿ ಸೂಚನೆ

    May 8, 2025

    ಮಳೆ ಹಾನಿ : 24 ಗಂಟೆಯೊಳಗೆ ಪರಿಹಾರ ನೀಡಲು ಕ್ರಮ : ಡೀಸಿ ಖಡಕ್ ಸೂಚನೆ

    May 8, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಪಾಲಿಕೆ ಆಯುಕ್ತರಿಂದ ಇಂದಿರಾ ಕ್ಯಾಂಟೀನ್ ಪರಿಶೀಲನೆ
    • ಪ.ಜಾತಿಗಳ ಸಮಗ್ರ ಸಮೀಕ್ಷೆ: ಪ್ರತೀ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲು ಡೀಸಿ ಸೂಚನೆ
    • ಮಳೆ ಹಾನಿ : 24 ಗಂಟೆಯೊಳಗೆ ಪರಿಹಾರ ನೀಡಲು ಕ್ರಮ : ಡೀಸಿ ಖಡಕ್ ಸೂಚನೆ
    • ಮಳೆಗಾಲದಲ್ಲಿ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಡೀಸಿ ಸೂಚನೆ
    • ಶಿಥಿಲಗೊಂಡಿರುವ ಕಟ್ಟಡಗಳನ್ನು ತೆರವಿಗಾಗಿ ನಿಯಮಾನುಸಾರ ಕ್ರಮ ಕೈಗೊಳ್ಳಬೇಕೆಂದು ಸೂಚನೆ
    • ಭೂಕಬಳಿಕೆದಾರರಿಂದ ಶೀಬಿ ಅರಣ್ಯ ಭೂಮಿ ರಕ್ಷಣೆಗೆ ಈಶ್ವರ ಖಂಡ್ರೆ ಸೂಚನೆ
    • ಉತ್ತರಾಖಂಡದ ಗಂಗೋತ್ರಿ ದೇಗುಲಕ್ಕೆ ತೆರಳುತ್ತಿದ್ದ ಹೆಲಿಕಾಫ್ಟರ್ ಪತನ: 6 ಮಂದಿ ಸಾವು
    • ಭಾರತೀಯ ಯೋಧರ ಹೆಸರಿನಲ್ಲಿ ವಿಶೇಷ ಪೂಜೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಫೆ.15ರಂದು ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿ ಪರೀಕ್ಷೆ: ಪಾರದರ್ಶಕವಾಗಿ ನಡೆಸಲು ಡಿಸಿ ಸೂಚನೆ
    ತುಮಕೂರು February 14, 2025

    ಫೆ.15ರಂದು ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿ ಪರೀಕ್ಷೆ: ಪಾರದರ್ಶಕವಾಗಿ ನಡೆಸಲು ಡಿಸಿ ಸೂಚನೆ

    By adminFebruary 14, 2025No Comments2 Mins Read
    exam

    ತುಮಕೂರು: ಜಿಲ್ಲೆಯ 18 ಕೇಂದ್ರಗಳಲ್ಲಿ ಫೆಬ್ರವರಿ 15ರಂದು ವಿವಿಧ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗೆ ನಡೆಯಲಿರುವ ಪ್ರವೇಶ ಪರೀಕ್ಷೆಯನ್ನು ಯಾವುದೇ ಲೋಪದೋ಼ಷವಿಲ್ಲದಂತೆ ಪಾರದರ್ಶಕವಾಗಿ ನಡೆಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

    ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿ ಪರೀಕ್ಷೆಯನ್ನು ಯಾವುದೇ ಲೋಪವಿಲ್ಲದಂತೆ ಹಾಗೂ ಅಹಿತಕರ ಘಟನೆ ಸಂಭವಿಸದಂತೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು ಎಂದು ತಿಳಿಸಿದರು.


    Provided by

    ಪರೀಕ್ಷೆಯು ಫೆಬ್ರವರಿ 15ರಂದು ಮಧ್ಯಾಹ್ನ 2:30 ರಿಂದ 4:30ರವರೆಗೆ ನಡೆಯಲಿದ್ದು, ವಿದ್ಯಾರ್ಥಿಗಳು ಪರೀಕ್ಷಾ ಸಮಯಕ್ಕೆ ಅರ್ಧ ಗಂಟೆ ಮುಂಚಿತವಾಗಿ ಕೇಂದ್ರದಲ್ಲಿ ಹಾಜರಿರಬೇಕು. ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯೊಳಗೆ ಯಾವುದೇ ಆಧುನಿಕ ಎಲೆಕ್ಟ್ರಾನಿಕ್ ಉಪಕರಣ, ಕ್ಯಾಲ್ಕುಲೇಟರ್, ಮೊಬೈಲ್ ಫೋನ್, ಬ್ಲೂಟೂತ್, ವೈರ್ ಲೆಸ್ ಸೆಟ್, ಮತ್ತಿತರ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವಂತಿಲ್ಲ ಎಂದು ತಿಳಿಸಿದರು.

    ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅನುವಾಗುವಂತೆ ಕೊಠಡಿಗೆ ಉತ್ತಮ ಬೆಳಕಿನ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರಲ್ಲದೆ, ಪರೀಕ್ಷಾ ಕೇಂದ್ರಗಳ ಬಳಿ 2 ಮಹಿಳಾ ಹಾಗೂ ಪುರುಷ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕೆಂದು ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು.

    ಪ್ರವೇಶಾತಿ ಪರೀಕ್ಷೆಗೆ ಸಂಬಂಧಿಸಿದಂತೆ ಪರೀಕ್ಷಾ ದಿನದಂದು ಪ್ರಶ್ನೆಪತ್ರಿಕೆ ಹಾಗೂ ಇತರೆ ಗೌಪ್ಯ ಸಾಮಗ್ರಿಗಳನ್ನು ಜಿಲ್ಲಾ ಖಜಾನೆಯಿಂದ ಪರೀಕ್ಷಾ ಕೇಂದ್ರಗಳಿಗೆ ವಿತರಿಸಲು ಹಾಗೂ ಪರೀಕ್ಷೆ ಮುಗಿದ ನಂತರ ಉತ್ತರ ಪತ್ರಿಕೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳಿಗೆ ಹಸ್ತಾಂತರಿಸಲು ತಾಲ್ಲೂಕುವಾರು ತ್ರಿಸದಸ್ಯ ತಂಡವನ್ನು ನೇಮಿಸಿದರಲ್ಲದೆ, ಯಾವುದೇ ಸಮಸ್ಯೆ ಎದುರಾಗದಂತೆ ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸಲು ತಂಡದ ಸದಸ್ಯರಿಗೆ ಸೂಚನೆ ನೀಡಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಾಲಗುರುಮೂರ್ತಿ, ಜಿಲ್ಲಾ ಖಜಾನೆ ಉಪನಿರ್ದೇಶಕ ಉಮಾ, ವಿವಿಧ ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿವಿಧ ಕಾಲೇಜುಗಳ ಪ್ರಾಂಶುಪಾಲರು ಸೇರಿದಂತೆ ಮತ್ತಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ತುಮಕೂರು: ಪಾಲಿಕೆ ಆಯುಕ್ತರಿಂದ ಇಂದಿರಾ ಕ್ಯಾಂಟೀನ್ ಪರಿಶೀಲನೆ

    May 8, 2025

    ಪ.ಜಾತಿಗಳ ಸಮಗ್ರ ಸಮೀಕ್ಷೆ: ಪ್ರತೀ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲು ಡೀಸಿ ಸೂಚನೆ

    May 8, 2025

    ಮಳೆ ಹಾನಿ : 24 ಗಂಟೆಯೊಳಗೆ ಪರಿಹಾರ ನೀಡಲು ಕ್ರಮ : ಡೀಸಿ ಖಡಕ್ ಸೂಚನೆ

    May 8, 2025
    Our Picks

    ಉತ್ತರಾಖಂಡದ ಗಂಗೋತ್ರಿ ದೇಗುಲಕ್ಕೆ ತೆರಳುತ್ತಿದ್ದ ಹೆಲಿಕಾಫ್ಟರ್ ಪತನ: 6 ಮಂದಿ ಸಾವು

    May 8, 2025

    ಪಾಕ್ ಸೇನೆಯಿಂದ ಅಪ್ರಚೋದಿತ ಗುಂಡಿನ ದಾಳಿ: 15 ಭಾರತೀಯ ನಾಗರಿಕರು ಸಾವು, ಹಲವರಿಗೆ ಗಾಯ

    May 8, 2025

    ಅಗತ್ಯ ಬಿದ್ದರೆ ಭಾರತದೊಂದಿಗೆ ನಾವು ನಿಲ್ಲುತ್ತೇವೆ: ಇಸ್ರೇಲ್

    April 25, 2025

    ನಾವಿಲ್ಲಿ ಕಷ್ಟದಲ್ಲಿದ್ದೇವೆ, ನೀವು ಹೇಗೆ ಸಂಭ್ರಮಿಸುತ್ತೀರಿ ಎಂದು ಗುಂಡು ಹಾರಿಸಿಯೇ ಬಿಟ್ಟ!

    April 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಪಾಲಿಕೆ ಆಯುಕ್ತರಿಂದ ಇಂದಿರಾ ಕ್ಯಾಂಟೀನ್ ಪರಿಶೀಲನೆ

    May 8, 2025

    ತುಮಕೂರು: ಮಹಾನಗರಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ಅವರು ಬುಧವಾರ ಪಾಲಿಕೆ ವ್ಯಾಪ್ತಿಯಲ್ಲಿರುವ 4 ಇಂದಿರಾ ಕ್ಯಾಂಟೀನ್ ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.…

    ಪ.ಜಾತಿಗಳ ಸಮಗ್ರ ಸಮೀಕ್ಷೆ: ಪ್ರತೀ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲು ಡೀಸಿ ಸೂಚನೆ

    May 8, 2025

    ಮಳೆ ಹಾನಿ : 24 ಗಂಟೆಯೊಳಗೆ ಪರಿಹಾರ ನೀಡಲು ಕ್ರಮ : ಡೀಸಿ ಖಡಕ್ ಸೂಚನೆ

    May 8, 2025

    ಮಳೆಗಾಲದಲ್ಲಿ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಡೀಸಿ ಸೂಚನೆ

    May 8, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.