ತುಮಕೂರು: ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ಹಾಗೂ ಸಂಸದ ವಿ.ಸೋಮಣ್ಣ ನವದೆಹಲಿಯಲ್ಲಿ ಘನವೆತ್ತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, ಪರಮಪೂಜ್ಯ ಲಿಂಗೈಕ್ಯ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಜಿಯವರ 118ನೇ ಜನ್ಮ ದಿನೋತ್ಸವದ ಅಂಗವಾಗಿ ಏಪ್ರಿಲ್ 1ರಂದು ನಡೆಯಲಿರುವ “ಗುರುವಂದನಾ ಸಂಭ್ರಮಾಚರಣೆಗೆ” ಆಗಮಿಸುವಂತೆ ಆಹ್ವಾನ ನೀಡಿದರು.
ಶ್ರೀ ಮಠದ ಪರಂಪರೆ ಹಾಗೂ ಪರಮಪೂಜ್ಯ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಬಗ್ಗೆ ಅಪಾರ ಗೌರವ ತೋರಿದ ಘನತವೆತ್ತ ರಾಷ್ಟ್ರಪತಿಗಳು ಆಹ್ವಾನವನ್ನು ಅತ್ಯಂತ ಭಕ್ತಿಭಾವದಿಂದ ಸ್ವೀಕರಿಸಿದ್ದಾರೆ.
ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತಾಗಿ ರಾಷ್ಟ್ರಪತಿ ಕಾರ್ಯಾಲಯದಿಂದ ಸೂಕ್ತ ದಿನಾಂಕವನ್ನು ಶೀಘ್ರವಾಗಿ ತಿಳಿಸಲಿದ್ದಾರೆ ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4