nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ

    May 11, 2026

    ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ

    May 11, 2026

    ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    May 11, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
    • ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
    • ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಎಸ್.ಅಪ್ಪೇನಹಳ್ಳಿ: ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನವಿಲು ನರ್ತನ; ಗ್ರಾಮಸ್ಥರಲ್ಲಿ ಕುತೂಹಲ
    • ನಾಲ್ಕು ದಶಕಗಳಿಂದ ರಸ್ತೆ ಅಭಿವೃದ್ಧಿ ಕಾಣದ ಬೆಟ್ಟಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಂಗನಾಥ್ ಚಾಲನೆ
    • ಕಳ್ಳಂಬೆಳ್ಳ ಪೊಲೀಸರಿಂದ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ
    • ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ
    • ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ‘ನಾಟಕ ಮನೆ ತುಮಕೂರು’: ಎರಡು ದಿನಗಳ ನಾಟಕೋತ್ಸವ, ರಂಗಸಂವಾದ, ರಂಗಗೌರವ, ರಂಗಾಭಿನಂದನೆ ಸಂಪನ್ನ
    ತುಮಕೂರು February 18, 2025

    ‘ನಾಟಕ ಮನೆ ತುಮಕೂರು’: ಎರಡು ದಿನಗಳ ನಾಟಕೋತ್ಸವ, ರಂಗಸಂವಾದ, ರಂಗಗೌರವ, ರಂಗಾಭಿನಂದನೆ ಸಂಪನ್ನ

    By adminFebruary 18, 2025No Comments1 Min Read
    mandya ramesh

    ತುಮಕೂರು: ನಗರದ ಡಾ.ಗುಬ್ಬಿ ವೀರಣ್ಣಕಲಾ ಕ್ಷೇತ್ರದಲ್ಲಿ ನಾಟಕ ಮನೆ ತುಮಕೂರು ಹಮ್ಮಿಕೊಂಡ ಎರಡು ದಿನಗಳ ನಾಟಕೋತ್ಸವದ ಸಮಾರೋಪ ಸಮಾರಂಭ ಯಶಸ್ವಿಯಾಗಿ ಮೂಡಿಬಂದಿತು.

    ನಟ, ನಿರ್ದೇಶಕರಾದ ಮಂಡ್ಯ ರಮೇಶ್ ರವರು ತುಮಕೂರಿನ ರಂಗಕರ್ಮಿಗಳು, ರಂಗಾಸಕ್ತ ಪ್ರೇಕ್ಷಕರ ಜೊತೆ ರಂಗಸಂವಾದವನ್ನು ನಡೆಸಿಕೊಟ್ಟರು.


    Provided by
    Provided by

    ರಂಗಸಂವಾದದಲ್ಲಿ ಪ್ರಜಾಪ್ರಗತಿ ಪತ್ರಿಕೆಯ ಸಂಪಾದಕರಾದ ಎಸ್.ನಾಗಣ್ಣ, ಕಲಾಶ್ರೀ ಡಾ.ಲಕ್ಷ್ಮಣದಾಸ್, ರಂಗ ನಿರ್ದೇಶಕರಾದ ಎಸ್.ಎ.ಖಾನ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸಿದ್ದಲಿಂಗಪ್ಪ, ನಿರ್ದೇಶಕರಾದ ನಟರಾಜ್ ಹೊನ್ನವಳ್ಳಿ, ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ತಿನ ಪೂರ್ವಾಧ್ಯಕ್ಷರಾದ ಬಾ.ಹ.ರಮಾಕುಮಾರಿ, ಡಮರುಗ ರಂಗಸಂಸ್ಥೆಯ ಮೆಳೇಹಳ್ಳಿ ದೇವರಾಜು, ನಾಟಕ ಮನೆ ಮಹಾಲಿಂಗು ಮತ್ತುಇನ್ನೂ ಹಲವಾರು ರಂಗಕರ್ಮಿ ಗೆಳೆಯರು ಭಾಗವಹಿಸಿ ಪ್ರಸ್ತುತ ರಂಗಭೂಮಿಯ ಸ್ಥಿತಿ–ಗತಿಗಳ ಬಗ್ಗೆ ಚರ್ಚೆ ನಡೆಸಿದರು.

    ವರ್ತಮಾನಕ್ಕೆರಂಗಭೂಮಿ ಹೇಗೆ ತೆರೆದುಕೊಳ್ಳಬೇಕು, ವರ್ತಮಾನದ ಸವಾಲುಗಳನ್ನು ಎದುರಿಸುವುದು ಹೇಗೆ ಮತ್ತು ರಂಗಭೂಮಿಯ ನಿರಂತರತೆಯನ್ನುಕಾಪಾಡಿಕೊಂಡು ಹೋಗುವುದು ಹೇಗೆ, ತುಮಕೂರಿನ ರಂಗಭೂಮಿಯ ಸವಾಲುಗಳು ಏನು, ಬಯಲುಸೀಮೆ ರಂಗಾಯಣದ ಅಗತ್ಯ, ಪ್ರಾಮುಖ್ಯತೆ ಎಂಬ ಹಲವಾರು ರಂಗವಿಷಯಗಳ ಬಗ್ಗೆ ವಿಸ್ತಾರವಾಗಿ ಚರ್ಚೆ ನಡೆಸಿದರು. ನಂತರ ನಾಟಕಮನೆ ಮಹಾಲಿಂಗುರವರು ಮಂಡ್ಯ ರಮೇಶ್ ರವರಿಗೆ ರಂಗಗೌರವವನ್ನು ನೀಡಿದರು.

    ನಟರಾಜ್ ಹೊನ್ನವಳ್ಳಿರವರು ಮಾತನಾಡಿ, ಬಯಲುಸೀಮೆ ರಂಗಾಯಣದ ಅಗತ್ಯ, ಅದರ ನಿರ್ವಹಣೆ ಮತ್ತು ಅದರ ವಿಸ್ತಾರತೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ನಂತರ ಕಾರ್ಯಕ್ರಮದ ಅಧ್ಯಕ್ಷರಾದಎಸ್.ನಾಗಣ್ಣ ಮಾತನಾಡಿ, ತುಮಕೂರಿನಲ್ಲಿ ರಂಗಭೂಮಿ ಅನುಭವಿಸುತ್ತಿರುವ ಹಿನ್ನಡೆಯ ಬಗ್ಗೆ ಮಾತನಾಡಿ, ಚೇತರಿಕೆಗೆ ಬೇಕಾದ ಅಂಶಗಳನ್ನು ಒತ್ತಿ ಹೇಳಿದರು.

    ಕೊನೆಯಲ್ಲಿ ಮಂಡ್ಯರಮೇಶ್ ಮಾತನಾಡಿ ನಾಟಕ ಮನೆ ಮಹಾಲಿಂಗು ಜೊತೆಗಿನ 25 ವರ್ಷಗಳ ಗೆಳೆತನದ ಬಗ್ಗೆ ಮಾತನಾಡಿ, ರಂಗಗೌರವ ನೀಡಿದ್ದಕ್ಕೆ ನಾಟಕ ಮನೆ ತುಮಕೂರು ಮತ್ತುತುಮಕೂರಿನ ರಂಗಕರ್ಮಿಗಳಿಗೆ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸಿದರು.

    ವೇದಿಕೆಯಲ್ಲಿ ಎಸ್.ನಾಗಣ್ಣ, ಸಿದ್ದಲಿಗಂಪ್ಪ, ನಾಟಕಮನೆ ಮಹಾಲಿಂಗು, ಬಾ.ಹ.ರಮಾಕುಮಾರಿ, ಸಿ.ವಿ.ಮಹದೇವಯ್ಯ, ಡಾ.ಬಸವರಾಜು, ನಟರಾಜ್ ಹೊನ್ನವಳ್ಳಿ, ಮೆಳೇಹಳ್ಳಿ ದೇವರಾಜು, ಪ್ರಕಾಶ್ಎನ್.ಆರ್. ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ

    May 11, 2026

    ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ

    May 11, 2026

    ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್

    May 11, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ

    May 11, 2026

    ಪಾವಗಡ: ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಬಾಬು ಜಗಜೀವನ ರಾಮ್ ಯುವಕ ಸಂಘದ ಕರೆಕ್ಯಾತನಹಳ್ಳಿ ವತಿಯಿಂದ ಅಂಬೇಡ್ಕರ್ ಅವರ 135ನೇ…

    ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ

    May 11, 2026

    ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    May 11, 2026

    ಎಸ್.ಅಪ್ಪೇನಹಳ್ಳಿ: ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನವಿಲು ನರ್ತನ; ಗ್ರಾಮಸ್ಥರಲ್ಲಿ ಕುತೂಹಲ

    May 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.