nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ

    June 17, 2026

    ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ

    June 17, 2026

    ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ

    June 17, 2026
    Facebook Twitter Instagram
    ಟ್ರೆಂಡಿಂಗ್
    • ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ
    • ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ
    • ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
    • ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
    • ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
    • ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
    • ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನವನ್ನು ಹೊಸದಾಗಿ ಪುನರ್ ಸ್ಥಾಪಿಸಲು ನೈಜ್ಯ ಹೋರಾಟಗಾರರ ವೇದಿಕೆ ಮನವಿ
    ಜಿಲ್ಲಾ ಸುದ್ದಿ February 21, 2025

    ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನವನ್ನು ಹೊಸದಾಗಿ ಪುನರ್ ಸ್ಥಾಪಿಸಲು ನೈಜ್ಯ ಹೋರಾಟಗಾರರ ವೇದಿಕೆ ಮನವಿ

    By adminFebruary 21, 2025No Comments3 Mins Read
    kuvempu

    Provided by
    Provided by

    ಬೆಂಗಳೂರು/ಶಿವಮೊಗ್ಗ: ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ, ಬೈಲಾವನ್ನು ರದ್ದುಪಡಿಸಿ ಅಧ್ಯಕ್ಷರು ಮತ್ತಿತರ ಸದಸ್ಯರನ್ನು ನೇಮಿಸಲು ಶೋಧನಾ ಸಮಿತಿಯನ್ನು ರಚಿಸಿ ಹೊಸದಾಗಿ ಪ್ರತಿಷ್ಠಾನವನ್ನು ಪುನರ್ ಸ್ಥಾಪಿಸಲು ನೈಜ್ಯ ಹೋರಾಟಗಾರರ ವೇದಿಕೆ ಬೆಂಗಳೂರು ಒತ್ತಾಯಿಸಿದ್ದು, ಈ ಸಂಬಂಧ ಸಿಎಂ ಸಿದ್ದರಾಮಯ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಕರ್ನಾಟಕ ಸರ್ಕಾರ ಮುಖ್ಯ ಕಾರ್ಯದರ್ಶಿ ಗಳು, ಕಾರ್ಯದರ್ಶಿ ಕುವೆಂಪು ಪ್ರತಿಷ್ಠಾನ ಮತ್ತು ಜಿಲ್ಲಾಧಿಕಾರಿ ಶಿವಮೊಗ್ಗ, ಪ್ರಧಾನ ಕಾರ್ಯದರ್ಶಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರಿಗೆ ಇ—ಮೇಲ್ ಮೂಲಕ ಮನವಿ ಸಲ್ಲಿಸಿದೆ.

    ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಕುಪ್ಪಳಿ ರಾಷ್ಟ್ರಕವಿ ಕುವೆಂಪು ಹೆಸರು ಹೇಳಿದ ತಕ್ಷಣ ಸಾಹಿತ್ಯ ಕ್ಷೇತ್ರ ಮಾತ್ರವಲ್ಲ ಕನ್ನಡಿಗರ ಮೈ ನವಿರೇಳಿಸುವ ಮತ್ತು ಕನ್ನಡ ಅಭಿಮಾನಿಗಳ ದೇಹದಲ್ಲಿ ವಿದ್ಯುತ್  ಸಂಚಾರವನ್ನುಂಟು ಮಾಡುವ ಅದ್ಭುತ ಶಕ್ತಿಯನ್ನು ಹೊಂದಿರುವ ನೆಚ್ಚಿನ ಕುವೆಂಪುರವರ ಹೆಸರಿನಲ್ಲಿ ಸ್ಥಾಪನೆಗೊಂಡ ಕುವೆಂಪು ಪ್ರತಿಷ್ಠಾನವು ಸಾಕಷ್ಟು ಒಳ್ಳೆಯ ಕೆಲಸಗಳನ್ನು ನಿರ್ವಹಿಸುತ್ತಿರುವುದು ಶ್ಲಾಘನೀಯ.

    ಆದರೆ ಇತ್ತೀಚಿನ ವರ್ಷಗಳಲ್ಲಿ ಪ್ರತಿಷ್ಠಾನವು ಸರ್ವ ಜನಾಂಗ ಪ್ರತಿನಿಧಿಸುವ ಪ್ರತಿಷ್ಠಾನವಾಗದೆ ಒಂದು ಜಾತಿಗೆ ಹಾಗೂ ಕೆಲವೇ ಕೆಲವು ಕುಟುಂಬಗಳಿಗೆ ಸೀಮಿತವಾಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.

    ಮುಖ್ಯವಾಗಿ ರಾಷ್ಟ್ರಕವಿ ಕುವೆಂಪುರವರ ಸಮಕಾಲಿನ ಚಿಂತನೆಗಳು, ವೈಚಾರಿಕತೆ, ಜಾತಿ ತಾರತಮ್ಯ, ಜಾತಿ ಶೋಷಣೆ, ಮನುಜ ಮತ ಜೊತೆಗೆ ಸರಳ ವಿವಾಹಕ್ಕೆ ಹೆಚ್ಚು ಒತ್ತುಕೊಟ್ಟು ಮಂತ್ರ ಮಾಂಗಲ್ಯ ವನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದ್ದರು. ಇಂತಹ ಮಹಾನ್ ಕವಿಯ ಆಶಯಗಳಿಗೆ ಧಕ್ಕೆ ಉಂಟು ಮಾಡುತ್ತಿರುವ ಪ್ರತಿಷ್ಠಾನದ ಆಡಳಿತ ಚುಕ್ಕಾಣಿ ಹಿಡಿದಿರುವ ಕುವೆಂಪು ಪ್ರತಿಷ್ಠಾನ  ಇತ್ತೀಚಿಗೆ ರೆಸಾರ್ಟ್ ಮಾದರಿಯಲ್ಲಿ ಮಂತ್ರ ಮಾಂಗಲ್ಯಮಾಡಿ ಕುವೆಂಪು ಆಶಯಗಳಿಗೆ ಕೊಳ್ಳಿಯನ್ನು ಇಟ್ಟಿದ್ದಾರೆ. ಈ ಹಿಂದೆ ಕುವೆಂಪುರವರು ತಮ್ಮ ಆಶಯದಂತೆ ಸರಳ ವಿವಾಹ ಮಂತ್ರ ಮಾಂಗಲ್ಯದಲ್ಲಿ ಐವತ್ತಕ್ಕೂ ಹೆಚ್ಚು ಜನರು ಭಾಗವಹಿಸಬಾರದು ಎಂದು ಹೇಳಿದ್ದರು.ಆದರೆ ಪರಿಸ್ಥಿತಿಗೆ ಅನುಗುಣವಾಗಿ ಮಾರ್ಪಾಡು ಮಾಡಿ  100-150 ಕುಟುಂಬ ಸದಸ್ಯರು ಮಾತ್ರ ಭಾಗವಹಿಸಿ ಮಂತ್ರ ಮಾಂಗಲ್ಯ ವಿವಾಹ ನೆರವೇರಿಸಬೇಕಾಗಿತ್ತು. ಆದರೆ ಈ ಹಿಂದೆ ಶಾಸಕರ  ಪುತ್ರನ ಮಂತ್ರ ಮಾಂಗಲ್ಯ ವಿವಾಹದಲ್ಲಿ 1500 ಜನಕ್ಕೂ ಹೆಚ್ಚು ಆಹ್ವಾನಿತರಾಗಿದ್ದು ಒಂದು ರೀತಿಯಲ್ಲಿ ಕುಪ್ಪಳ್ಳಿಯ ಕವಿ ಮನೆಯು ಮದುವೆ  ಛತ್ರದಂತೆ ಭಾಸವಾಗುತ್ತಿತ್ತು. ನಂತರದ ದಿನಗಳಲ್ಲಿ ಇದು ಮುಂದುವರೆದುಕೊಂಡು ಹೋಗುತ್ತಿರುವುದು ದುರಾದೃಷ್ಟಕರ ಸಂಗತಿಯಾಗಿದೆ. ಜೊತೆಗೆ ಕವಿ ಮನೆಯನ್ನು  ರಾಜಕೀಯ ಪಕ್ಷದ ಸಹ ಸಂಘಟನೆಗಳ ಕಾರ್ಯ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸುತ್ತಿರುವ ಬಗ್ಗೆಯೂ ಆರೋಪವಿದೆ.

    ಪ್ರತಿಷ್ಠಾನದ ಕೆಲಸದಸ್ಯರು (ಸರ್ಕಾರ, ಮತ್ತು ಸರ್ಕಾರಿ ಸೌಮ್ಯದ ನೇಮಿಸುವ ಸದಸ್ಯರನ್ನು ಹೊರತುಪಡಿಸಿ) ತಮ್ಮ ಸ್ವಂತ ಕೃಷಿ ಜಮೀನಿನ ಜೊತೆ ಅರಣ್ಯ ಒತ್ತುವರಿಯನ್ನು ಮಾಡಿಕೊಂಡಿರುವ ಆರೋಪಗಳು ಕೇಳಿ ಬರುತ್ತಿವೆ. ಹಾಗೂ ಕೆಲ ಸದಸ್ಯರ ವಿರುದ್ಧ ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆರೋಪವಿದೆ. ಮತ್ತು ಕೆಲವು ಸದಸ್ಯರು ಕುಪ್ಪಳ್ಳಿಯ ಸುತ್ತಮುತ್ತ ರೆಸಾರ್ಟ್ , ಹೋಂ ಸ್ಟೇ ಗಳನ್ನು  ಮಾಡಿಕೊಂಡು ಕುಪ್ಪಳ್ಳಿಗೆ ಬರುವ ಕುವೆಂಪು ಅಭಿಮಾನಿಗಳಿಗೆ ಉಳಿದುಕೊಳ್ಳಲು ಈ ಪ್ರತಿಷ್ಠಾನವನ್ನು ವ್ಯಾಪಾರಿಕರಣ ಗೊಳಿಸುತ್ತಿದ್ದಾರೆ ಎಂಬ ಆರೋಪ ಸಾರ್ವಜನಿಕರ ಬಾಯಿಗೆ ಆಹಾರವಾಗಿದೆ.

    ಆದುದರಿಂದ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಬೈಲಾವನ್ನು ಸಂಪೂರ್ಣವಾಗಿ ರದ್ದುಪಡಿಸಿ ಕುವೆಂಪು ಆಶಯಕ್ಕೆ ತಕ್ಕಂತೆ ಹೊಸ ನಿಯಮಾವಳಿಗಳನ್ನು ರೂಪಿಸುವ ಅಗತ್ಯವಿದೆ. ಪ್ರತಿಷ್ಠಾನಕ್ಕೆ ಟ್ರಸ್ಟಿಗಳನ್ನು ನೇಮಿಸುವ ವಿಚಾರದಲ್ಲಿ ಶೋಧನಾ ಸಮಿತಿಯನ್ನು ರಚಿಸಿ ಅರ್ಹರನ್ನು ಸದಸ್ಯರನ್ನಾಗಿ ನೇಮಿಸುವ ಗುರುತರ ಜವಾಬ್ದಾರಿಯನ್ನು ಈಗ ಸರ್ಕಾರ ವಹಿಸಿಕೊಳ್ಳಬೇಕಾಗಿದೆ. ಹಾಗೂ ಪ್ರತಿಷ್ಠಾನದಲ್ಲಿ ಕುವೆಂಪು ರವರ ರಕ್ತ ಸಂಬಂಧಿಗಳಲ್ಲಿ  ಅರ್ಹ ವ್ಯಕ್ತಿಯೊಬ್ಬರನ್ನು ಸದಸ್ಯರನ್ನಾಗಿ ಆಯ್ಕೆ ಮಾಡುವುದು  ಕಡ್ಡಾಯ ಮಾಡಬೇಕಾಗಿದೆ.

    ಕೆಲವೇ ಕೆಲವು ಸದಸ್ಯರು ಕುವೆಂಪು ಪ್ರತಿಷ್ಠಾನದಲ್ಲಿ 15 20 ವರ್ಷಗಳಿಂದ ತಳವೂರಿ ಇತರ ಅರ್ಹರು ಪ್ರತಿಷ್ಠಾನದ ಒಳಗೆ ಬಾರದಂತೆ  ಮನಸೋ ಇಚ್ಛೆ  ಆಡಳಿತ ನಡೆಸುತ್ತಿದ್ದು ಇದರಿಂದ ಮುಂದಿನ ದಿನಮಾನಗಳಲ್ಲಿ ರಾಷ್ಟ್ರಕವಿ ಕುವೆಂಪುರವರ ಹೆಸರು ನಶಿಸಿ ಹೋಗುವ ಸಂಭವವಿದೆ.

    ಆದುದರಿಂದ ಕುವೆಂಪು ಪ್ರತಿಷ್ಠಾನವನ್ನು ಪುನರ್ ಸ್ಥಾಪಿಸಿ, ಬೈಲಾ ಗಳನ್ನು ತಿದ್ದುಪಡಿ ಮಾಡಿ ರಾಷ್ಟ್ರಕವಿ ಕುವೆಂಪು ಅವರ ದೊಡ್ಡ ಅಭಿಮಾನಿ ವಲಯದಿಂದ ಹೊಸ ಮುಖಗಳನ್ನು ಪರಿಚಯಿಸಲು ಟ್ರಸ್ಟಿಗಳ ಆಯ್ಕೆಯಲ್ಲಿ ಸರ್ಕಾರವು ವಿಶ್ವವಿದ್ಯಾನಿಲಯಗಳ ಕುಲಪತಿ ಆಯ್ಕೆ ಪ್ರಕ್ರಿಯೆಯಲ್ಲಿ ಶೋಧನ ಸಮಿತಿಯನ್ನು  ರಚಿಸಿದಂತೆ ಕುವೆಂಪು ಪ್ರತಿಷ್ಠಾನದ  ಅಧ್ಯಕ್ಷ, ಕಾರ್ಯದರ್ಶಿ ಮತ್ತು ಸದಸ್ಯರುಗಳ ಆಯ್ಕೆಯಲ್ಲಿ ಕೂಡ ಶೋಧನಾ ಸಮಿತಿಯನ್ನು ರಚಿಸಿ  ಅಧ್ಯಕ್ಷರು ಸದಸ್ಯರುಗಳಿಗೆ ಒಂದು ಕಾಲಮಿತಿಯಲ್ಲಿ ಕಾರ್ಯನಿರ್ವಹಿಸುವಂತೆ ಪ್ರತಿಷ್ಠಾನವನ್ನು ಪುನರ್ ಸ್ಥಾಪಿಸಬೇಕಾಗಿದೆ.

    ಗೌರವಾನ್ವಿತ ಮುಖ್ಯಮಂತ್ರಿಗಳಾದ ತಾವು ಕುವೆಂಪು ಪ್ರತಿಷ್ಠಾನ ಉಳಿಸಿ ರಾಷ್ಟ್ರಮಟ್ಟ ದಲ್ಲಿ, ಅಂತರಾಷ್ಟ್ರೀಯ ಮಟ್ಟದಲ್ಲೂ ಕೂಡ ಕುವೆಂಪು ಅವರ ಹೆಸರು ಅಜರಾಮರವಾಗಿ ಉಳಿಯುವಂತೆ ಕುವೆಂಪು ಪ್ರತಿಷ್ಠಾನಕ್ಕೆ ನವ ಚೈತನ್ಯವನ್ನು ತರುವ ಗುರುತರ ಜವಾಬ್ದಾರಿಯನ್ನು ವಹಿಸಬೇಕೆಂದು ನೈಜ್ಯ ಹೋರಾಟಗಾರರ ವೇದಿಕೆಯು ತಮ್ಮೆಲ್ಲರಲ್ಲಿ ಸವಿನಯ ಪೂರ್ವಕವಾಗಿ ಪ್ರಾರ್ಥಿಸುತ್ತಿದೆ ಎಂದು ನೈಜ್ಯ ಹೋರಾಟಗಾರರ ವೇದಿಕೆಯ ಹಿರಿಯ ಸಾಮಾಜಿಕ ಹೋರಾಟಗಾರರಾದ ಹೆಚ್.ಎಂ.ವೆಂಕಟೇಶ್  ಹಾಗೂ  ಕೃಷಿಕರು ಮತ್ತು ಸಾಮಾಜಿಕ ಹೋರಾಟಗಾರರಾದ ಕೆ.ಜೆ.ಸುಭೋದ್  ಕುಪ್ಪಳಿ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಗ್ರಾಮೀಣ ಕುಡಿಯುವ ನೀರು ಪೂರೈಕೆ ವ್ಯತ್ಯಯವಾಗದಂತೆ ಕ್ರಮ: ಸಚಿವ ಈಶ್ವರ ಖಂಡ್ರೆ

    June 17, 2026

    ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಸರ್ಕಾರಕ್ಕೆ ಒತ್ತಾಯ

    June 16, 2026

    ಔರಾದ್ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ್ ಮೊಕ್ತೆದಾರ್ ಆಯ್ಕೆ

    June 16, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ

    June 17, 2026

    ಕೊರಟಗೆರೆ: ತಾಲ್ಲೂಕಿನ ತುಂಬಾಡಿ ಗ್ರಾಮ ಹಾಗೂ ಮಧುಗಿರಿ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಇ–ಪೌತಿ ಖಾತಾ ಆಂದೋಲನ–2…

    ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ

    June 17, 2026

    ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ

    June 17, 2026

    ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ

    June 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.