nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಡಾನೆ ಹಾವಳಿ ತಡೆಗೆ ‘ಎಐ’ ತಂತ್ರಜ್ಞಾನ: ಅರಣ್ಯ ಇಲಾಖೆಯಿಂದ ಹೊಸ ಪ್ರಯೋಗ

    December 25, 2025

    ಅರಣ್ಯ ಇಲಾಖೆ ಸಿಬ್ಬಂದಿಗೆ ಬಂಪರ್ ಕೊಡುಗೆ: 1 ಕೋಟಿ ರೂ. ಅಪಘಾತ ವಿಮೆ ಘೋಷಿಸಿದ ಸಚಿವ ಈಶ್ವರ ಖಂಡ್ರೆ

    December 25, 2025

    ಭಾರತದಲ್ಲಿ ಜಾತಿಭೇದ ಸೃಷ್ಟಿಸಿದ ಮನುಸ್ಮೃತಿಯನ್ನು ಅಂಬೇಡ್ಕರ್ ಸುಟ್ಟ ದಿನ: ಸರಗೂರಿನಲ್ಲಿ ಅರ್ಥಪೂರ್ಣ ಆಚರಣೆ

    December 25, 2025
    Facebook Twitter Instagram
    ಟ್ರೆಂಡಿಂಗ್
    • ಕಾಡಾನೆ ಹಾವಳಿ ತಡೆಗೆ ‘ಎಐ’ ತಂತ್ರಜ್ಞಾನ: ಅರಣ್ಯ ಇಲಾಖೆಯಿಂದ ಹೊಸ ಪ್ರಯೋಗ
    • ಅರಣ್ಯ ಇಲಾಖೆ ಸಿಬ್ಬಂದಿಗೆ ಬಂಪರ್ ಕೊಡುಗೆ: 1 ಕೋಟಿ ರೂ. ಅಪಘಾತ ವಿಮೆ ಘೋಷಿಸಿದ ಸಚಿವ ಈಶ್ವರ ಖಂಡ್ರೆ
    • ಭಾರತದಲ್ಲಿ ಜಾತಿಭೇದ ಸೃಷ್ಟಿಸಿದ ಮನುಸ್ಮೃತಿಯನ್ನು ಅಂಬೇಡ್ಕರ್ ಸುಟ್ಟ ದಿನ: ಸರಗೂರಿನಲ್ಲಿ ಅರ್ಥಪೂರ್ಣ ಆಚರಣೆ
    • ತಿಪಟೂರು | ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ
    • ಗುಬ್ಬಿ: SBI ಬ್ಯಾಂಕ್‌ ನ ಎಟಿಎಂನಿಂದ ಹಣ ದೋಚಿದ ಕಳ್ಳರು
    • ಚಿತ್ರದುರ್ಗ: ಲಾರಿ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್: 9ಕ್ಕೂ ಹೆಚ್ಚು ಪ್ರಯಾಣಿಕರ ಸಾವು
    • ಶ್ರವಣೂರು: ಪಿಡಿಒ ವಿರುದ್ಧ ಸೂಕ್ತ ಕಾನೂನು ಕ್ರಮದ ಭರವಸೆ ಹಿನ್ನೆಲೆ ಪ್ರತಿಭಟನೆ ಕೈಬಿಟ್ಟ ಸಂಘಟನೆಗಳು
    • ವಿಕಲಚೇತನರ ಹಿತರಕ್ಷಣೆಗಾಗಿ ಕಾನೂನು ಜಾಗೃತಿ ಮೂಡಿಸುವುದು ಅಗತ್ಯ: ವಕೀಲ ಮಣಿರಾಜು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಡ ಅನ್ನದ ಭಾಷೆಯಲ್ಲ ಎಂಬುದು ಕೇವಲ ಭ್ರಮೆ : ಎಲ್.ಎನ್.ಮುಕುಂದರಾಜ್
    ತುಮಕೂರು March 2, 2025

    ಕನ್ನಡ ಅನ್ನದ ಭಾಷೆಯಲ್ಲ ಎಂಬುದು ಕೇವಲ ಭ್ರಮೆ : ಎಲ್.ಎನ್.ಮುಕುಂದರಾಜ್

    By adminMarch 2, 2025No Comments2 Mins Read
    l n mukunda raj

    ತುಮಕೂರು: ಕನ್ನಡ ಮಧ್ಯಮದಲ್ಲಿ ಓದಿದವರಿಗೆ ಉದ್ಯೋಗ ದೊರಕುವುದಿಲ್ಲ ಎಂಬ ಭ್ರಮೆಯಲ್ಲಿ ನಾವಿಂದು ಇದ್ದೇವೆ. ಸಾವಿರಾರು ವರ್ಷಗಳಿಂದಲೂ ಕನ್ನಡ ಭಾಷಿಕರು ಉದ್ಯೋಗ ಮಾಡುತ್ತಲೇ ಬರುತ್ತಿದ್ದಾರೆ. ಕನ್ನಡ ಭಾಷೆ ಬರುವವನಿಗೆ ಅದು ಒಂದಲ್ಲಾ ಒಂದು ರೀತಿ ಶಕ್ತಿಯನ್ನು ತುಂಬುತ್ತಲೇ ಇದೆ. ನಮ್ಮ ಜನ ಯಾಕೆ ಈ ರೀತಿ ಚಿಂತಿಸುತ್ತಾರೋ. ಇಂತಹ ಮನೋಭಾವನೆಯನ್ನು ಕನ್ನಡಿಗರೆಲ್ಲ ಬಿಟ್ಟುಬಿಡಬೇಕು. 20ನೇ ಶತಮಾನದಲ್ಲಿ ಬದುಕಿ ಕನ್ನಡದಲ್ಲಿ ಸಾಹಿತ್ಯ ರಚನೆ ಮಾಡಿದ ವಿದ್ವಾಂಸರೆಲ್ಲ ಕನ್ನಡ ಮಾಧ್ಯಮದಲ್ಲಿಯೇ ಓದಿ ಬಂದವರು ಎಂಬುದನ್ನು ನಾವೆಲ್ಲಾ ನೆನಪಿನಲ್ಲಿಟ್ಟುಕೊಳ್ಳಬೇಕು. ಇಂತಹ ಕೀಳರಿಮೆಯ ಮನೊಭಾವವನ್ನು ಕನ್ನಡಿಗರು ಬಿಡಬೇಕು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಎಲ್.ಎನ್.ಮುಕುಂದರಾಜ್ ಅಭಿಪ್ರಾಯಪಟ್ಟರು.

    ಅವರು ತುಮಕೂರು ಬಳಿಯ ಕೋರಾ ಗ್ರಾಮದಲ್ಲಿ ಏರ್ಪಡಿಸಿದ್ದ ತುಮಕೂರು ತಾಲ್ಲೂಕು ಏಳನೆಯ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಇಂದಿನ ಬದಲಾದ ಪರಿಸ್ಥಿತಿಯಲ್ಲಿ ಲೇಖಕರು ಮುಕ್ತವಾಗಿ ಬರೆಯಲೂ, ಮಾತನಾಡಲೂ ಆಗದ ಭಯದ ವಾತಾವರಣದಲ್ಲಿ ಬದುಕುತ್ತಿದ್ದಾರೆ. ಇಂದು ತರುಣ ಬರಹಗಾರರಿಗೆ ನೈತಿಕ ಸ್ಥೈರ್ಯವನ್ನು ತುಂಬುವಂತಹ ಸಾಹಿತಿಗಳ ಕೊರತೆ ಕಂಡುಬರುತ್ತಿದೆ. ಆದ್ದರಿಂದಲೇ ತರುಣ ಬರಹಗಾರರು ಆತ್ಮವಿಶ್ವಾಸದಿಂದ ಸುರಕ್ಷಿತವಾಗಿ ಬರೆಯಲು ಸಾಧ್ಯವಾಗುತ್ತಿಲ್ಲ. ಸಾಹಿತಿಯಾದವನು ಯಾವುದಕ್ಕೂ ಅಂಜದೆ ಅಳುಕದೆ ತನ್ನ ಚಿಂತನೆಗಳನ್ನು ಮುಕ್ತವಾಗಿ ಅಕ್ಷರ ರೂಪದಲ್ಲಿ ದಾಖಲಿಸಿ ಎಂದು ಕರೆ ನೀಡಿದರು.

    ಸಮ್ಮೇಳನಾಧ್ಯಕ್ಷರಾದ ಎಂ.ನಂಜಯ್ಯನವರು ಮಾತನಾಡಿ, ತುಮಕೂರು ತಾಲ್ಲೂಕು ಸಾಹಿತ್ಯ ಮತ್ತು ಕಲೆಗಳ ತವರೂರಾಗಿದ್ದು ಇಲ್ಲಿನ ಪ್ರಾಚೀನ ಕಲೆಗಳೆಲ್ಲಾ ನಗರೀಕರಣದ ಪ್ರಭಾವಕ್ಕೆ ಒಳಗಾಗಿ ಆಧುನಿಕತೆಯ ಮೆರುಗನ್ನು ಪಡೆದುಕೊಂಡಿವೆ. ಈ ಭಾಗದ ಚಿಟ್ಟಿಮೇಳ, ವೀರಗಾಸೆ, ಮೆಳೇಹಳ್ಳಿಯ ನಾಟಕ ತಂಡಗಳು ಇನ್ನೂ ನಮ್ಮಲ್ಲಿ ಕಲೆಗಳು ಜೀವಂತವಾಗಿರುವುದನ್ನು ತೋರಿಸುತ್ತವೆ. ಕೋರಾ ಮಹಾನಾಡಪ್ರಭುಗಳ ಕೇಂದ್ರವಾಗಿ ಇತಿಹಾಸಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡಿದ್ದು, ಇಂದು ಈ ಊರಿನಲ್ಲಿ ಐತಿಹಾಸಿಕ ಕುರುಹುಗಳು ಒಂದೂ ಕಾಣುತ್ತಿಲ್ಲ. ಐತಿಹಾಸಿಕ ಕುರುಹುಗಳನ್ನು ಸಂಗ್ರಹಿಸಿ ಅದಕ್ಕೆ ಒಂದು ವಸ್ತುಸಂಗ್ರಹಾಲಯವನ್ನು ನಿರ್ಮಿಸಿದರೆ ಭವಿಷ್ಯದ ಜನಾಂಗಕ್ಕೆ ನಮ್ಮ ಕಲಾ ಪರಂಪರೆಯನ್ನು ಕೊಂಡೊಯ್ಯಬಹುದು ಎಂದರು.

    ತುಮಕೂರು ನಗರದ ಗಡಿಭಾಗದಲ್ಲಿ ಹಿಂದೆ ಗ್ರಾಮೀಣ ಜನ ಕನ್ನಡ ಮಾಧ್ಯಮ ಶಾಲೆಗಳಿಗೆ ವಿದ್ಯಾರ್ಥಿಗಳ ಕೊರತೆ ಉಂಟಾಗಿದ್ದು, ಗ್ರಾಮಾಂತರ ಪ್ರದೇಶದ ಮಕ್ಕಳೆಲ್ಲಾ ನಗರದ ಇಂಗ್ಲೀಷ್ ಮಾಧ್ಯಮ ಶಾಲೆಗಳ ವ್ಯಾಮೋಹಕ್ಕೆ ಒಳಗಾಗಿರುವುದಕ್ಕೆ ಆತಂಕ ವ್ಯಕ್ತಪಡಿಸಿದ ಅವರು ಹಳ್ಳಿಗಾಡಿನ ಕನ್ನಡ ಶಾಲೆಗಳನ್ನು ಸದೃಢಗೊಳಿಸಬೇಕಾಗಿದೆ. ಮೂಕ ಪ್ರಾಣಿಗಳಂತೆ ದೇಹ ದಂಡಿಸುತ್ತಾ ಬಂದಿರುವ ಕೃಷಿಕನ ಬೆವರಿಗೆ ಬೆಲೆಯೇ ಇಲ್ಲದಂತಾಗಿದೆ. ತೋಟಗಾರಿಕೆ ಬೆಳೆಗಳು ರೋಗಪೀಡಿತವಾಗಿವೆ. ಇದಕ್ಕಿಂತಲೂ ತಾನು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗದೆ ರೈತ ಕಂಗಲಾಗಿದ್ದಾನೆ ಎಂದರು.

    ನಿಕಟಪೂರ್ವ 6ನೇ ಸಮ್ಮೇಳನಾಧ್ಯಕ್ಷರಾದ ಪ್ರೊ.ಕೋ.ರಂ.ಬಸವರಾಜು ಧ್ವಜ ಹಸ್ತಾಂತರಿಸಿದರು. ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ ಆಶಯ ನುಡಿಗಳನ್ನಾಡಿದರು. ಬೆಳ್ಳಾವಿ ಕಾರದ ಮಠದ ಕಾರದ ವೀರಬಸವ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದರು. ವೇದಿಕೆಯಲ್ಲಿ ನಾಟಕ ಅಕಾಡೆಮಿ ಸದಸ್ಯ ರವೀಂದ್ರ ಸಿರಿವರ, ಅಪ್ಪಗೆರೆ ತಿಮ್ಮರಾಜು, ಕಾರ್ಯದರ್ಶಿ ಡಾ. ಡಿ.ಎನ್.ಯೋಗೀಶ್ವರಪ್ಪ, ಸ್ವಾಗತ ಸಮಿತಿ ಅಧ್ಯಕ್ಷರಾದ ಕೆ.ಸಿ.ನರಸಿಂಹಮೂರ್ತಿ, ಚಿಕ್ಕಬೆಳ್ಳಾವಿ ಶಿವಕುಮಾರ್ ಹಾಜರಿದ್ದರು.

    ಮಧ್ಯಾಹ್ನ ನಡೆದ ಗೋಷ್ಠಿಯಲ್ಲಿ ಕೋ.ರಂ.ಬಸವರಾಜು ಸಮ್ಮೇಳನಾಧ್ಯಕ್ಷರ ಸಾಹಿತ್ಯಾವಲೋಕನ, ಡಾ. ಬಿ.ನಂಜುಂಡಸ್ವಾಮಿ ಯವರು ಕೋರಾದ ಸ್ಥಳೀಯ ಸಂಸ್ಕೃತಿ, ಶ್ವೇತಾರಾಣಿ ಶಿಕ್ಷಣ ನಗರದಿಂದ ಕೈಗಾರಿಕಾ ನಗರದತ್ತ ತುಮಕೂರು. ಡಾ.ಶಿವಣ್ಣ ಬೆಳವಾಡಿ ಜಾನಪದ ಕಲೆ ಮತ್ತು ಸಾಹಿತ್ಯದ ಮೇಲೆ ನಗರದ ಪ್ರಭಾವ ಕುರಿತು ಪ್ರಬಂಧಗಳನ್ನು ಮಂಡಿಸಿದರು. ಡಾ. ಸಿದ್ಧಲಿಂಗಯ್ಯ ಅಧ್ಯಕ್ಷತೆ ವಹಿಸಿದ್ದರು. ಆನಂತರ ಡಾ. ಲಕ್ಷ್ಮಮಣದಾಸ್ ಅಧ್ಯಕ್ಷತೆಯಲ್ಲಿ ರಂಗಭೂಮಿ ಕುರಿತ ಗೋಷ್ಠಿ ನಡೆಯಿತು. ಎಂ.ವಿ.ನಾಗಣ್ಣ ಪ್ರಬಂಧ ಮಂಡಿಸಿದರು. ಸುಗುಣಾದೇವಿ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ನಡೆಯಿತು. ಕಮಲಾ ರಾಜೇಶ್ ಉದ್ಘಾಟಿಸಿದರು. 15 ಜನ ಕವಿಗಳು ಕವಿತೆ ವಾಚಿಸಿದರು. ಎಂ.ಜಿ.ಸಿದ್ಧರಾಮಯ್ಯನವರ ಗಮಕ ವ್ಯಾಖ್ಯಾನ ಕಾರ್ಯಕ್ರತಮ ನಡೆಸಿಕೊಟ್ಟರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟ: ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ, ಪರಿಶೀಲನೆ

    December 24, 2025

    ತುಮಕೂರು | ಕುದ್ಮಲ್ ರಂಗರಾವ್ ರಾಜ್ಯ ಪ್ರಶಸ್ತಿ ಪ್ರದಾನ–ಕವಿಗೋಷ್ಠಿ

    December 24, 2025

    ಡಿಸೆಂಬರ್ 31ರಂದು ಸಿರಿಧಾನ್ಯ ಪಾಕ ಸ್ಪರ್ಧೆಗೆ ಅರ್ಜಿ: ವಿಜೇತರಿಗೆ ನಗದು ಬಹುಮಾನ | ಯಾರೆಲ್ಲ ಭಾಗವಹಿಸಬಹುದು?

    December 22, 2025

    Comments are closed.

    Our Picks

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಾಡಾನೆ ಹಾವಳಿ ತಡೆಗೆ ‘ಎಐ’ ತಂತ್ರಜ್ಞಾನ: ಅರಣ್ಯ ಇಲಾಖೆಯಿಂದ ಹೊಸ ಪ್ರಯೋಗ

    December 25, 2025

    ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಕಾಡಾನೆಗಳು ರೈತರ ಜಮೀನುಗಳಿಗೆ ನುಗ್ಗಿ ಬೆಳೆ ನಾಶಪಡಿಸುವುದನ್ನು ತಡೆಯಲು ಅರಣ್ಯ ಇಲಾಖೆಯು ಕೃತಕ…

    ಅರಣ್ಯ ಇಲಾಖೆ ಸಿಬ್ಬಂದಿಗೆ ಬಂಪರ್ ಕೊಡುಗೆ: 1 ಕೋಟಿ ರೂ. ಅಪಘಾತ ವಿಮೆ ಘೋಷಿಸಿದ ಸಚಿವ ಈಶ್ವರ ಖಂಡ್ರೆ

    December 25, 2025

    ಭಾರತದಲ್ಲಿ ಜಾತಿಭೇದ ಸೃಷ್ಟಿಸಿದ ಮನುಸ್ಮೃತಿಯನ್ನು ಅಂಬೇಡ್ಕರ್ ಸುಟ್ಟ ದಿನ: ಸರಗೂರಿನಲ್ಲಿ ಅರ್ಥಪೂರ್ಣ ಆಚರಣೆ

    December 25, 2025

    ತಿಪಟೂರು | ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

    December 25, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.