ಬೀದರ್: ಭಾಲ್ಕಿ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದ ಜನರಿಗೆ ಸುಗಮ ಸಂಚಾರ ಒದಗಿಸುವ ನಿಟ್ಟಿನಲ್ಲಿ ವಳಂಡಿ–ಹೈದ್ರಾಬಾದ್ (ಆಳವಾಯಿ, ಮೆಹಕರ್, ಸಾಯಿಗಾವ್) ಹಾಗೂ ಭಾಲ್ಕಿ–ಉದಗೀರ್ (ಸೋಂಪುರ, ಅತನೂರ್, ಲಖನಗಾವ್) ಮಾರ್ಗದ ಹೊಸ ಬಸ್ ಸೇವೆಗೆ ಬೀದರ ಲೋಕಸಭಾ ಕ್ಷೇತ್ರದ ಸಂಸದ ಸಾಗರ್ ಖಂಡ್ರೆ ಹಸಿರು ನಿಶಾನೆ ತೋರಿದ್ದಾರೆ.
ಈ ಸೇವೆಯಿಂದ ಪ್ರಯಾಣ, ಉದ್ಯೋಗ, ಶಿಕ್ಷಣ ಹಾಗೂ ಆರೋಗ್ಯ ಸಂಬಂಧಿತ ಸಂಚಾರ ಸುಗಮಗೊಳ್ಳಲಿದೆ. ಸಾರ್ವಜನಿಕರು ಇದರ ಸಂಪೂರ್ಣ ಪ್ರಯೋಜನ ಪಡೆಯುವಂತೆ ಸಾಗರ್ ಖಂಡ್ರೆ ವಿನಂತಿಸಿದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4