ಕೊಪ್ಪಳ: ಜಿಲ್ಲೆಯ ಸಾಣಾಪುರ ಗ್ರಾಮದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಮತ್ತು ಅತ್ಯಾಚಾರ ಪ್ರಕರಣದ ನಂತರ ಹಂಪಿಗೆ ಆಗಮಿಸುವ ಪ್ರವಾಸಿಗರ ಸಂಖ್ಯೆಯಲ್ಲಿ ಕುಸಿತ ಕಂಡಿದೆ.
ಕೊಪ್ಪಳ ಘಟನೆಯು ಅಂತರರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ. ಒಬ್ಬರು ಸಂತ್ರಸ್ತೆ ಇಸ್ರೆಲ್ ನವರಾಗಿರುವ ಹಿನ್ನೆಲೆ ಹಲವಾರು ರಾಯಭಾರ ಕಚೇರಿಗಳು ತಮ್ಮ ದೇಶಗಳ ಪ್ರವಾಸಿಗರ ಸ್ಥಿತಿಯನ್ನು ತಿಳಿದುಕೊಳ್ಳಲು ಮುಖ್ಯಮಂತ್ರಿ ಕಚೇರಿ ಮತ್ತು ಕೊಪ್ಪಳ ಆಡಳಿತದೊಂದಿಗೆ ಸಂಪರ್ಕದಲ್ಲಿವೆ ಎಂದು ವರದಿಗಳಿಂದ ತಿಳಿದು ಬಂದಿದೆ.
ಹಂಪಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಿಗೆ ಇಸ್ರೇಲ್ನಿಂದ ಸುಮಾರು ಶೇ. 60 ರಷ್ಟು ವಿದೇಶಿ ಪ್ರವಾಸಿಗರು ಆಗಮಿಸುತ್ತಿರುತ್ತಾರೆ. ಕಳೆದ ಎರಡು ದಿನಗಳಲ್ಲಿ, ಹಂಪಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ 25 ಕ್ಕೂ ಹೆಚ್ಚು ಹೋಂಸ್ಟೇಗಳಿಂದ ತಮ್ಮ ಏಜೆನ್ಸಿಗಳ ಮೂಲಕ ಬುಕಿಂಗ್ ರದ್ದು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಇತರ ರಾಜ್ಯಗಳ ಪ್ರವಾಸಿಗರು ಸಹ ಹಂಪಿಗೆ ತಮ್ಮ ಭೇಟಿಯನ್ನು ರದ್ದುಗೊಳಿಸುತ್ತಿದ್ದಾರೆ ಇಲ್ಲವೇ ಮುಂದೂಡುತ್ತಿದ್ದಾರೆ. ಇಡೀ ರಾಷ್ಟ್ರವು ಸಣಾಪುರ ಅತ್ಯಾಚಾರ ಘಟನೆಯನ್ನು ಖಂಡಿಸಿದೆ. ಹಂಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸರು ಗಸ್ತು ಹೆಚ್ಚಿಸಬೇಕು ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4