nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ

    August 28, 2026

    ಬರಪೀಡಿತ ಪ್ರದೇಶ ಘೋಷಣೆ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆಗೆ ಚೇತನ್ ಸೊರಳ್ಳಿ ಅಭಿನಂದನೆ

    August 28, 2026

    ಹೇಮಾವತಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆ: ರೈತರ ಹಿತ ಹಾಗೂ ನೀರಿನ ಸಮರ್ಪಕ ನಿರ್ವಹಣೆಗೆ ಒತ್ತು

    August 28, 2026
    Facebook Twitter Instagram
    ಟ್ರೆಂಡಿಂಗ್
    • ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ
    • ಬರಪೀಡಿತ ಪ್ರದೇಶ ಘೋಷಣೆ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆಗೆ ಚೇತನ್ ಸೊರಳ್ಳಿ ಅಭಿನಂದನೆ
    • ಹೇಮಾವತಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆ: ರೈತರ ಹಿತ ಹಾಗೂ ನೀರಿನ ಸಮರ್ಪಕ ನಿರ್ವಹಣೆಗೆ ಒತ್ತು
    • ಹಳ್ಳಿಮೈಸೂರು ಆಸ್ಪತ್ರೆ, ಬಸ್ ನಿಲ್ದಾಣಕ್ಕೆ ಸಂಸದ ಶ್ರೇಯಸ್ ಎಂ. ಪಟೇಲ್ ದಿಢೀರ್ ಭೇಟಿ: ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸ್ಥಳದಲ್ಲೇ ಖಡಕ್ ಸೂಚನೆ
    • ಬಡಾವಣೆಯೋ.. ಕುಡುಕರ ಬಯಲಾಟವೋ?: ಕಸದ ಗಾಡಿಯಲ್ಲೇ ಎಣ್ಣೆ ಬಾಟಲಿಗಳ ಸಾಗಾಟ, ಪೊಲೀಸರೇ ಎಲ್ಲಿದ್ದೀರಿ?
    • ನೇಪಾಳ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಮುಂದು, ಮಾಹಿತಿ ಸಂಗ್ರಹ ಆರಂಭ
    • ಕಬ್ಬಿನ ಗದ್ದೆಯಲ್ಲಿ ಪ್ರತ್ಯಕ್ಷವಾದ 4 ಚಿರತೆ ಮರಿಗಳು, ಗ್ರಾಮಸ್ಥರಲ್ಲಿ ಆತಂಕ
    • ತುಮಕೂರು: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೆಡಿಎಸ್ ಭದ್ರಕೋಟೆಯ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಅನಿರೀಕ್ಷಿತ ಸೋಲು : ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್
    ಕೊರಟಗೆರೆ March 13, 2025

    ಜೆಡಿಎಸ್ ಭದ್ರಕೋಟೆಯ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಅನಿರೀಕ್ಷಿತ ಸೋಲು : ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್

    By adminMarch 13, 2025No Comments2 Mins Read
    koratagere

    ಕೊರಟಗೆರೆ : ಸ್ವಾತಂತ್ರ್ಯದ ನಂತರ ನಿರಂತರವಾಗಿ ಸುಮಾರು 35 ವರ್ಷ ಜೆಡಿಎಸ್ ಭದ್ರಕೋಟೆ ಎಂದೇ ಖ್ಯಾತಿ ಪಡೆದಿರುವ ಈ ಕ್ಷೇತ್ರದಲ್ಲಿ ಅನಿರೀಕ್ಷಿತ ಕಳೆದ ಚುನಾವಣೆಯಲ್ಲಿ ಸೋಲಾಗಿದೆ. ಮಾಜಿ ಸಚಿವ ದಿವಂಗತ ಚೆನ್ನಿಗಪ್ಪ ಹಾಗೂ ವೀರಣ್ಣನವರ ಕಾಲದಿಂದಲೂ ಇದು ಜೆಡಿಎಸ್ ಭದ್ರಕೋಟೆ ಎಂದು ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ತಿಳಿಸಿದರು.

    ಪಟ್ಟಣದ ಸುವರ್ಣ ಮುಖಿ ಶ್ರೀಲಕ್ಷ್ಮೀನರಸಿಂಹ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಜಾತ್ಯಾತೀತ ಜನತಾದಳ ಪಕ್ಷದಿಂದ ಆಯೋಜಿಸಲಾದ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಈಗಲೂ ಕಾಲ ಮಿಂಚಿಲ್ಲ ಮುಂದಿನ ದಿನಗಳಲ್ಲಿ ನಾವು ಜೊತೆ ಜೊತೆಯಾಗಿ ಕೆಲಸ ಮಾಡಿದರೆ ಜೆಡಿಎಸ್ ಗೆಲುವು ಸಾಧಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

    ಕಾರ್ಯಕರ್ತರು ಮತ್ತು ಮುಖಂಡರೇ ಜೆಡಿಎಸ್ ಪಕ್ಷದ ಬಹುದೊಡ್ಡ ಶಕ್ತಿ. ಆಯ್ಕೆಯಾದ ಪದಾಧಿಕಾರಿಗಳು ಮಾಜಿ ಪ್ರಧಾನಿ ದೇವಗೌಡ ಅಪ್ಪಾಜಿ ಮತ್ತು ಕೇಂದ್ರ ಸಚಿವ ಕುಮಾರಣ್ಣನವರ ಆಶಯದಂತೆ ಹಿಂದಿನಂತೆ ಮುಂದೆಯೂ ಪಕ್ಷದಲ್ಲಿ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿ ಆಯ್ಕೆಯಾದ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

    ಕೊರಟಗೆರೆ ವಿ.ಸ. ಕ್ಷೇತ್ರದ ನೂತನ ಅಧ್ಯಕ್ಷ ಕಾಮರಾಜು ಮಾತನಾಡಿ, ಇತರೆ ಪಕ್ಷದ ಕಾರ್ಯಕರ್ತರಿಗೆ ಹೋಲಿಸಿದರೆ ಜೆಡಿಎಸ್ ಪಕ್ಷದ ಕಾರ್ಯಕರ್ತರು ಪ್ರಮಾಣಿಕರು. ಮಂಬರುವ ದಿನಗಳಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ಎದುರಿಸಲು ಸಜ್ಜಾಗಿದೆ. ನಾನು ಸಹ ಪಕ್ಷದ ಸಂಘಟನೆ ಬಲಗೊಳಿಸುವ ಮುಖೇನಾ ಮುಂದಿನ ತಾ.ಪಂ ಮತ್ತು ಜಿ.ಪಂ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಹೊಸ ಅಧ್ಯಾಯ ಸೃಷ್ಟಿಸೋಣ ಎಂದು ಹೇಳಿದರು.

    ಕಾರ್ಯಾಧ್ಯಕ್ಷ ತುಂಬಾಡಿ ಲಕ್ಷ್ಮೀಶ್ ಮಾತನಾಡಿ ಇಂದು ಎಂದೆಂದಿಗೂ ಕೊರಟಗೆರೆ ಜೆಡಿಎಸ್ ಭದ್ರಕೋಟೆ. ಕಳೆದ ಚುನಾವಣೆಯ ಅನಿರೀಕ್ಷಿತ ಸೋಲು ಟೀಕಿಸುವವರಿಗೆ ಆಹಾರವಾಗಿದೆ. ಮತ್ತೆಂದು ಇಂತಹ ಸನ್ನಿವೇಶಗಳು ಮರುಸೃಷ್ಠಿಸದ ರೀತಿಯಲ್ಲಿ ಕಾರ್ಯಕರ್ತರು, ಮುಖಂಡರು ಹೋಬಳಿವಾರುಗಳಲ್ಲಿ ಪಕ್ಷವನ್ನು ಬಲಪಡಿಸಿ ಮುಂಬರುವ ಎಲ್ಲಾ ಚುನಾವಣೆಗಳಲ್ಲೂ ಜೆಡಿಎಸ್ ಬಾವುಟ ಹಾರುವಂತೆ ಶ್ರಮವಹಿಸಿ ನಿಷ್ಠೆಯಿಂದ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

    ನೇಮಕಾತಿ ಆದೇಶ ಪ್ರತಿ ವಿತರಣೆ:

    ಜೆಡಿಎಸ್ ಪಕ್ಷದ ವರಿಷ್ಠರ ಆದೇಶದಂತೆ ಕೊರಟಗೆರೆ ವಿಧಾನ ಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಕಾಮರಾಜು, ಕಾರ್ಯಾಧ್ಯಕ್ಷರಾಗಿ ಲಕ್ಷ್ಮೀಶ್, ಪ್ರಧಾನ ಕಾರ್ಯದರ್ಶಿಯಾಗಿ ಲಕ್ಷ್ಮಣ್ ಕೆ.ಆರ್, ಯುವ ಅಧ್ಯಕ್ಷ ವೆಂಕಟೇಶ್, ಕೊರಟಗೆರೆ ನಗರ ಅಧ್ಯಕ್ಷ ರಮೇಶ್ ಕೆ.ಜಿ, ಎಸ್ಸಿ ಘಟಕದ ಅಧ್ಯಕ್ಷ ಲಕ್ಷ್ಮೀನರಸಯ್ಯ, ಎಸ್ಟಿ ಘಟಕದ ಅಧ್ಯಕ್ಷ ಲಕ್ಷ್ಮೀನಾರಾಯಣ್ ಕೆ.ಎನ್, ಪ್ರಚಾರ ಸಮಿತಿ ಅಧ್ಯಕ್ಷ ಸಿದ್ದಮಲ್ಲಪ್ಪ, ಹಿಂದುಳಿದ ವರ್ಗಗಳ ಅಧ್ಯಕ್ಷ ರಂಗಯ್ಯ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಹಯತ್ ಖಾನ್ ಸೇರಿ ಒಟ್ಟು 30 ಮಂದಿ ಪದಾಧಿಕಾರಿಗಳು ವಿವಿಧ ಘಟಕಗಳ ಸ್ಥಾನಕ್ಕೆ ಆಯ್ಕೆಯಾಗಿದ್ದು ಮಾಜಿ ಶಾಸಕ ಸುಧಾಕರ್ ಲಾಲ್ ಸಮಾರಂಭದಲ್ಲಿ ನೇಮಕಾತಿ ಆದೇಶ ಪ್ರತಿಯನ್ನು ವಿತರಿಸಿ ಶುಭಹಾರೈಸಿದರು.

    ಈ ಸಮಾರಂಭದಲ್ಲಿ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಚಿಕ್ಕರಂಗಯ್ಯ, ಹಾಲು ಒಕ್ಕೂಟದ ನಿರ್ದೇಶಕ ಸಿದ್ದಗಂಗಯ್ಯ, ಕೊರಟಗೆರೆ ವಿ.ಸ ಕ್ಷೇತ್ರದ ನೂತನ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ್, ಯುವ ಅಧ್ಯಕ್ಷ ವೆಂಕಟೇಶ್, ಎಸ್ಸಿ ಘಟಕದ ಅಧ್ಯಕ್ಷ ಲಕ್ಷ್ಮೀನರಸಯ್ಯ, ಕೊರಟಗೆರೆ ನಗರಾಧ್ಯಕ್ಷ ರಮೇಶ್ ಕೆ.ಜಿ, ಎಸ್ಟಿ ಘಟಕದ ಅಧ್ಯಕ್ಷ ಲಕ್ಷ್ಮೀನಾರಾಯಣ್, ಪ್ರಚಾರ ಸಮಿತಿ ಅಧ್ಯಕ್ಷ ಸಿದ್ದಮಲ್ಲಪ್ಪ, ವಕ್ತಾರ ಮಂಜುನಾಥ್, ಹಿಂದುಳಿದ ವರ್ಗಗಳ ಅಧ್ಯಕ್ಷ ರಂಗಯ್ಯ, ಸಂಘಟನಾ ಕಾರ್ಯದರ್ಶಿ ಜ್ಯೋತಿ ಪ್ರಕಾಶ್, ಅಲ್ಪಸಂಖ್ಯಾತರ ಘಟಕ ಅಧ್ಯಕ್ಷ ಹಯತ್ ಖಾನ್, ಯುವ ಘಟಕ ಅಧ್ಯಕ್ಷ ಕೌಶಿಕ್, ಕಾರ್ಮಿಕ ಘಟಕ ಅಧ್ಯಕ್ಷ ಪಾಂಡು, ನಗರ ಅಲ್ಪಾಸಂಖ್ಯಾತರ ಘಟಕ ಅಧ್ಯಕ್ಷ ಫಾರುಕ್, ಸಂಚಾಲಕ ಎಲ್.ವಿ ಪ್ರಕಾಶ್ ಸೇರಿದಂತೆ ಇತರರು ಇದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026

    ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಗೊರವನಹಳ್ಳಿ ಮಹಾಲಕ್ಷ್ಮಿ ಅಮ್ಮನ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

    August 22, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ತಂದೆ—ತಾಯಿ, ಅಕ್ಕ—ಭಾವನ ಸ್ಮರಣಾರ್ಥ ಸಮುದಾಯ ಆರೋಗ್ಯ ಕೇಂದ್ರಕ್ಕೆ ನೂತನ ವಾರ್ಡ್ ನಿರ್ಮಿಸಿದ ಉದ್ಯಮಿ

    August 28, 2026

    ಹಳೇಬೀಡು: ತಂದೆ-ತಾಯಿ ಹಾಗೂ ಅಕ್ಕ–ಭಾವನ ಸವಿ ನೆನಪಿಗಾಗಿ ಉದ್ಯಮಿಯೊಬ್ಬರು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ₹20 ಲಕ್ಷ ವೆಚ್ಚದಲ್ಲಿ ನೂತನ…

    ಬರಪೀಡಿತ ಪ್ರದೇಶ ಘೋಷಣೆ: ಶಾಸಕ ಡಾ. ಶೈಲೇಂದ್ರ ಬೆಲ್ದಾಳೆಗೆ ಚೇತನ್ ಸೊರಳ್ಳಿ ಅಭಿನಂದನೆ

    August 28, 2026

    ಹೇಮಾವತಿ ಜಲಾಶಯ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆ: ರೈತರ ಹಿತ ಹಾಗೂ ನೀರಿನ ಸಮರ್ಪಕ ನಿರ್ವಹಣೆಗೆ ಒತ್ತು

    August 28, 2026

    ಹಳ್ಳಿಮೈಸೂರು ಆಸ್ಪತ್ರೆ, ಬಸ್ ನಿಲ್ದಾಣಕ್ಕೆ ಸಂಸದ ಶ್ರೇಯಸ್ ಎಂ. ಪಟೇಲ್ ದಿಢೀರ್ ಭೇಟಿ: ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸ್ಥಳದಲ್ಲೇ ಖಡಕ್ ಸೂಚನೆ

    August 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.