nammatumakuru

    Subscribe to Updates

    Get the latest creative news from FooBar about art, design and business.

    What's Hot

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025
    Facebook Twitter Instagram
    ಟ್ರೆಂಡಿಂಗ್
    • ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ
    • ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೆಡಿಎಸ್ ಭದ್ರಕೋಟೆಯ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಅನಿರೀಕ್ಷಿತ ಸೋಲು : ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್
    ಕೊರಟಗೆರೆ March 13, 2025

    ಜೆಡಿಎಸ್ ಭದ್ರಕೋಟೆಯ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಅನಿರೀಕ್ಷಿತ ಸೋಲು : ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್

    By adminMarch 13, 2025No Comments2 Mins Read
    koratagere

    ಕೊರಟಗೆರೆ : ಸ್ವಾತಂತ್ರ್ಯದ ನಂತರ ನಿರಂತರವಾಗಿ ಸುಮಾರು 35 ವರ್ಷ ಜೆಡಿಎಸ್ ಭದ್ರಕೋಟೆ ಎಂದೇ ಖ್ಯಾತಿ ಪಡೆದಿರುವ ಈ ಕ್ಷೇತ್ರದಲ್ಲಿ ಅನಿರೀಕ್ಷಿತ ಕಳೆದ ಚುನಾವಣೆಯಲ್ಲಿ ಸೋಲಾಗಿದೆ. ಮಾಜಿ ಸಚಿವ ದಿವಂಗತ ಚೆನ್ನಿಗಪ್ಪ ಹಾಗೂ ವೀರಣ್ಣನವರ ಕಾಲದಿಂದಲೂ ಇದು ಜೆಡಿಎಸ್ ಭದ್ರಕೋಟೆ ಎಂದು ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ತಿಳಿಸಿದರು.

    ಪಟ್ಟಣದ ಸುವರ್ಣ ಮುಖಿ ಶ್ರೀಲಕ್ಷ್ಮೀನರಸಿಂಹ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಜಾತ್ಯಾತೀತ ಜನತಾದಳ ಪಕ್ಷದಿಂದ ಆಯೋಜಿಸಲಾದ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಈಗಲೂ ಕಾಲ ಮಿಂಚಿಲ್ಲ ಮುಂದಿನ ದಿನಗಳಲ್ಲಿ ನಾವು ಜೊತೆ ಜೊತೆಯಾಗಿ ಕೆಲಸ ಮಾಡಿದರೆ ಜೆಡಿಎಸ್ ಗೆಲುವು ಸಾಧಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು.


    Provided by

    ಕಾರ್ಯಕರ್ತರು ಮತ್ತು ಮುಖಂಡರೇ ಜೆಡಿಎಸ್ ಪಕ್ಷದ ಬಹುದೊಡ್ಡ ಶಕ್ತಿ. ಆಯ್ಕೆಯಾದ ಪದಾಧಿಕಾರಿಗಳು ಮಾಜಿ ಪ್ರಧಾನಿ ದೇವಗೌಡ ಅಪ್ಪಾಜಿ ಮತ್ತು ಕೇಂದ್ರ ಸಚಿವ ಕುಮಾರಣ್ಣನವರ ಆಶಯದಂತೆ ಹಿಂದಿನಂತೆ ಮುಂದೆಯೂ ಪಕ್ಷದಲ್ಲಿ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿ ಆಯ್ಕೆಯಾದ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.

    ಕೊರಟಗೆರೆ ವಿ.ಸ. ಕ್ಷೇತ್ರದ ನೂತನ ಅಧ್ಯಕ್ಷ ಕಾಮರಾಜು ಮಾತನಾಡಿ, ಇತರೆ ಪಕ್ಷದ ಕಾರ್ಯಕರ್ತರಿಗೆ ಹೋಲಿಸಿದರೆ ಜೆಡಿಎಸ್ ಪಕ್ಷದ ಕಾರ್ಯಕರ್ತರು ಪ್ರಮಾಣಿಕರು. ಮಂಬರುವ ದಿನಗಳಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ ಎದುರಿಸಲು ಸಜ್ಜಾಗಿದೆ. ನಾನು ಸಹ ಪಕ್ಷದ ಸಂಘಟನೆ ಬಲಗೊಳಿಸುವ ಮುಖೇನಾ ಮುಂದಿನ ತಾ.ಪಂ ಮತ್ತು ಜಿ.ಪಂ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಹೊಸ ಅಧ್ಯಾಯ ಸೃಷ್ಟಿಸೋಣ ಎಂದು ಹೇಳಿದರು.

    ಕಾರ್ಯಾಧ್ಯಕ್ಷ ತುಂಬಾಡಿ ಲಕ್ಷ್ಮೀಶ್ ಮಾತನಾಡಿ ಇಂದು ಎಂದೆಂದಿಗೂ ಕೊರಟಗೆರೆ ಜೆಡಿಎಸ್ ಭದ್ರಕೋಟೆ. ಕಳೆದ ಚುನಾವಣೆಯ ಅನಿರೀಕ್ಷಿತ ಸೋಲು ಟೀಕಿಸುವವರಿಗೆ ಆಹಾರವಾಗಿದೆ. ಮತ್ತೆಂದು ಇಂತಹ ಸನ್ನಿವೇಶಗಳು ಮರುಸೃಷ್ಠಿಸದ ರೀತಿಯಲ್ಲಿ ಕಾರ್ಯಕರ್ತರು, ಮುಖಂಡರು ಹೋಬಳಿವಾರುಗಳಲ್ಲಿ ಪಕ್ಷವನ್ನು ಬಲಪಡಿಸಿ ಮುಂಬರುವ ಎಲ್ಲಾ ಚುನಾವಣೆಗಳಲ್ಲೂ ಜೆಡಿಎಸ್ ಬಾವುಟ ಹಾರುವಂತೆ ಶ್ರಮವಹಿಸಿ ನಿಷ್ಠೆಯಿಂದ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

    ನೇಮಕಾತಿ ಆದೇಶ ಪ್ರತಿ ವಿತರಣೆ:

    ಜೆಡಿಎಸ್ ಪಕ್ಷದ ವರಿಷ್ಠರ ಆದೇಶದಂತೆ ಕೊರಟಗೆರೆ ವಿಧಾನ ಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಕಾಮರಾಜು, ಕಾರ್ಯಾಧ್ಯಕ್ಷರಾಗಿ ಲಕ್ಷ್ಮೀಶ್, ಪ್ರಧಾನ ಕಾರ್ಯದರ್ಶಿಯಾಗಿ ಲಕ್ಷ್ಮಣ್ ಕೆ.ಆರ್, ಯುವ ಅಧ್ಯಕ್ಷ ವೆಂಕಟೇಶ್, ಕೊರಟಗೆರೆ ನಗರ ಅಧ್ಯಕ್ಷ ರಮೇಶ್ ಕೆ.ಜಿ, ಎಸ್ಸಿ ಘಟಕದ ಅಧ್ಯಕ್ಷ ಲಕ್ಷ್ಮೀನರಸಯ್ಯ, ಎಸ್ಟಿ ಘಟಕದ ಅಧ್ಯಕ್ಷ ಲಕ್ಷ್ಮೀನಾರಾಯಣ್ ಕೆ.ಎನ್, ಪ್ರಚಾರ ಸಮಿತಿ ಅಧ್ಯಕ್ಷ ಸಿದ್ದಮಲ್ಲಪ್ಪ, ಹಿಂದುಳಿದ ವರ್ಗಗಳ ಅಧ್ಯಕ್ಷ ರಂಗಯ್ಯ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಹಯತ್ ಖಾನ್ ಸೇರಿ ಒಟ್ಟು 30 ಮಂದಿ ಪದಾಧಿಕಾರಿಗಳು ವಿವಿಧ ಘಟಕಗಳ ಸ್ಥಾನಕ್ಕೆ ಆಯ್ಕೆಯಾಗಿದ್ದು ಮಾಜಿ ಶಾಸಕ ಸುಧಾಕರ್ ಲಾಲ್ ಸಮಾರಂಭದಲ್ಲಿ ನೇಮಕಾತಿ ಆದೇಶ ಪ್ರತಿಯನ್ನು ವಿತರಿಸಿ ಶುಭಹಾರೈಸಿದರು.

    ಈ ಸಮಾರಂಭದಲ್ಲಿ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಚಿಕ್ಕರಂಗಯ್ಯ, ಹಾಲು ಒಕ್ಕೂಟದ ನಿರ್ದೇಶಕ ಸಿದ್ದಗಂಗಯ್ಯ, ಕೊರಟಗೆರೆ ವಿ.ಸ ಕ್ಷೇತ್ರದ ನೂತನ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ್, ಯುವ ಅಧ್ಯಕ್ಷ ವೆಂಕಟೇಶ್, ಎಸ್ಸಿ ಘಟಕದ ಅಧ್ಯಕ್ಷ ಲಕ್ಷ್ಮೀನರಸಯ್ಯ, ಕೊರಟಗೆರೆ ನಗರಾಧ್ಯಕ್ಷ ರಮೇಶ್ ಕೆ.ಜಿ, ಎಸ್ಟಿ ಘಟಕದ ಅಧ್ಯಕ್ಷ ಲಕ್ಷ್ಮೀನಾರಾಯಣ್, ಪ್ರಚಾರ ಸಮಿತಿ ಅಧ್ಯಕ್ಷ ಸಿದ್ದಮಲ್ಲಪ್ಪ, ವಕ್ತಾರ ಮಂಜುನಾಥ್, ಹಿಂದುಳಿದ ವರ್ಗಗಳ ಅಧ್ಯಕ್ಷ ರಂಗಯ್ಯ, ಸಂಘಟನಾ ಕಾರ್ಯದರ್ಶಿ ಜ್ಯೋತಿ ಪ್ರಕಾಶ್, ಅಲ್ಪಸಂಖ್ಯಾತರ ಘಟಕ ಅಧ್ಯಕ್ಷ ಹಯತ್ ಖಾನ್, ಯುವ ಘಟಕ ಅಧ್ಯಕ್ಷ ಕೌಶಿಕ್, ಕಾರ್ಮಿಕ ಘಟಕ ಅಧ್ಯಕ್ಷ ಪಾಂಡು, ನಗರ ಅಲ್ಪಾಸಂಖ್ಯಾತರ ಘಟಕ ಅಧ್ಯಕ್ಷ ಫಾರುಕ್, ಸಂಚಾಲಕ ಎಲ್.ವಿ ಪ್ರಕಾಶ್ ಸೇರಿದಂತೆ ಇತರರು ಇದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    30 ಲಕ್ಷ ವೆಚ್ಚದ ಡಯಾಲಿಸಿಸ್ ಯಂತ್ರ ಲೋಕಾರ್ಪಣೆಗೊಳಿಸಿದ ಜಪಾನಂದ ಸ್ವಾಮೀಜಿ

    June 28, 2025

    ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ಜಾಗೃತರಾಗಿರಬೇಕು: ತಹಶೀಲ್ದಾರ್ ಮಂಜುನಾಥ್ ಕೆ.

    June 27, 2025

    ಜೆಡಿಎಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಇದು ಕಾರ್ಯಕರ್ತರ ಪಕ್ಷ: ನಿಖಿಲ್ ಕುಮಾರಸ್ವಾಮಿ

    June 19, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ತುಮಕೂರು :  ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಕೆ ಎಸ್ ಆರ್ ಟಿ ಸಿ ಬಸ್ ರಸ್ತೆ ಪಕ್ಕದ…

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.